Homeಮುಖಪುಟಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು - ಪ್ರಶಾಂತ್ ಭೂಷಣ್

ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ಕೊನೆಯ ನಾಲ್ವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನಡವಳಿಕೆಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನೆತ್ತಿರುವ ಪ್ರಶಾಂತ್ ಭೂಷಣ್

- Advertisement -
- Advertisement -

ನ್ಯಾಯಾಂಗದ ಸಮಗ್ರತೆಯ ಕುರಿತು ಪ್ರಶ್ನಿಸುವ ಎರಡು ಟ್ವೀಟ್‌ಗಳಿಗಾಗಿ ತನಗೆ ನೀಡಲಾದ ನ್ಯಾಯಾಂಗ ನಿಂದನೆಯ ಸುಪ್ರೀಂಕೋರ್ಟ್ ನೋಟೀಸಿಗೆ ಸ್ಫೋಟಕ ಉತ್ತರ ನೀಡಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಅಲ್ಲಿಗೇ ವಿಷಯ ಕೊನೆಗೊಳಿಸಿಲ್ಲ. ಅವರು ಅದೇ ಉತ್ತರದಲ್ಲಿ ಸುಪ್ರೀಂಕೋರ್ಟಿನ ಕೊನೆಯ ನಾಲ್ವರು ಮುಖ್ಯ ನ್ಯಾಯಾಧೀಶರ ನಡವಳಿಕೆಗಳ ಬಗ್ಗೆ ಗಂಭೀರವಾದ ಪ್ರಶ್ನೆಗಳನ್ನು ಎತ್ತಿದ್ದಾರೆ. ನ್ಯಾಯಾಂಗದ ಸಮಗ್ರತೆ ಮತ್ತು ಪಾವಿತ್ರ್ಯ ಉಳಿಯಬೇಕೆಂದಿದ್ದರೆ ಪ್ರಜೆಗಳು ಈ ಕುರಿತು ತಿಳಿದುಕೊಂಡು ಚಿಂತಿಸುವುದು ಅಗತ್ಯ.
…..

ನ್ಯಾಯಾಂಗ ನಿಂದನೆಯ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ಮುಖ್ಯ ನ್ಯಾಯಾಧೀಶರಾಗಿದ್ದ ನ್ಯಾ. ಜೆ.ಎಸ್. ಖೆಹರ್‌ರಿಂದ ಹಿಡಿದು, ಕೊನೆಯ ನಾಲ್ವರು ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಕರಿ ನೆರಳು ಚೆಲ್ಲಿದ ಪ್ರಮುಖ ಪ್ರಕರಣಗಳನ್ನು ತನಗೆ ನೀಡಲಾದ ನೋಟೀಸಿಗೆ ತಾನು ನೀಡಿರುವ ಉತ್ತರದಲ್ಲಿ ಪಟ್ಟಿ ಮಾಡಿದ್ದಾರೆ. ನ್ಯಾ. ಖೆಹರ್ ಅವರ ಅವಧಿಯಲ್ಲಿನ ಸಹಾರ ಬಿರ್ಲಾ ಪ್ರಕರಣ, ಕಾಲಿಖೋ ಪೌಲ್ ಆತ್ಮಹತ್ಯಾ ಚೀಟಿ ಪ್ರಕರಣಗಳನ್ನು ಉಲ್ಲೇಖಿಸಿರುವ ಅವರು, ಈ ಕುರಿತು ಸರಿಯಾದ ತನಿಖೆ ನಡೆಯದೆ ಸಾರ್ವಜನಿಕರ ಸಂಶಯ ದೂರವಾಗುವುದಿಲ್ಲ ಎಂದು ವಿವರಿಸಿದ್ದಾರೆ.

ಮಾಜಿ ಮುಖ್ಯ ನ್ಯಾಯಮೂರ್ತಿ ಖೆಹರ್

ನ್ಯಾ. ದೀಪಕ್ ಮಿಶ್ರಾ ಅವಧಿ

ಮುಖ್ಯ ನ್ಯಾಯಾಧೀಶ ನ್ಯಾ. ದೀಪಕ್ ಮಿಶ್ರಾ ಅವರ ಅವಧಿಯು “ಅನೇಕ ವಿಷಯಗಳಲ್ಲಿ ವಿವಾದಾಸ್ಪದವಾಗಿತ್ತು” ಎಂದು ಹೇಳಿರುವ ಭೂಷಣ್, ಸುಪ್ರೀಂಕೋರ್ಟಿನ ಘನತೆಯು ಇಳಿಮುಖವಾಗುವುದರಲ್ಲಿ ಅವರು ಪಾಲು ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೆಡಿಕಲ್ ಕಾಲೇಜು ಲಂಚ ಪ್ರಕರಣ ಮತ್ತು ಪಿಐಎಂಎಸ್ ಹಗರಣದಲ್ಲಿ ಆರೋಪಿಯಾಗಿದ್ದು, ಇತ್ತೀಚೆಗೆ ನಿವೃತ್ತರಾದ ಅಲಹಾಬಾದ್ ಹೈಕೋರ್ಟಿನ ನ್ಯಾಯಾಧೀಶ ನಾರಾಯಣ್ ಶುಕ್ಲಾ ವಿರುದ್ಧ ಸಿಬಿಐಗೆ ಎಫ್‌ಐಆರ್ ದಾಖಲಿಸಲು ಅನುಮತಿ ನಿರಾಕರಣೆ ಪ್ರಕರಣಗಳನ್ನು ಭೂಷಣ್ ವಿವರವಾಗಿ ತನ್ನ ಉತ್ತರದಲ್ಲಿ ನೆನಪಿಸಿದ್ದಾರೆ.

ನಂತರ ಭೂಷಣ್ ಅವರು, ಮುಖ್ಯ ನ್ಯಾಯಾಧೀಶರಾಗಿದ್ದ ದೀಪಕ್ ಮಿಶ್ರಾ ಪ್ರಕರಣಗಳನ್ನು “ಮನಬಂದಂತೆ” ಹಂಚುವುದನ್ನು ವಿರೋಧಿಸಿ ಸುಪ್ರೀಂಕೋರ್ಟಿನ ನಾಲ್ವರು ಅತ್ಯಂತ ಹಿರಿಯ ನ್ಯಾಯಾಧೀಶರು ಮೊತ್ತಮೊದಲ ಬಾರಿಗೆ ಜನವರಿ 2018ರಲ್ಲಿ ನಡೆಸಿದ ಪ್ರಖ್ಯಾತ ಜಂಟಿ ಪತ್ರಿಕಾಗೋಷ್ಟಿಯನ್ನೂ ನೆನಪಿಸಿದ್ದಾರೆ. ಮುಖ್ಯ ನ್ಯಾಯಾಧೀಶರು ಪ್ರಕರಣಗಳನ್ನು ಇತರ ನ್ಯಾಯಾಧೀಶರಿಗೆ ವಹಿಸುವ ಅಧಿಕಾರ ಉಳ್ಳವರಾಗಿ ಅಸಮರ್ಪಕವಾಗಿ ಪ್ರಕರಣಗಳನ್ನು ಹಂಚಿದ ಹಲವಾರು ಉದಾಹರಣೆಗಳನ್ನು ಭೂಷಣ್ ನೀಡಿದ್ದಾರೆ. ಭೂಷಣ್ ಅವರ ಪ್ರಕಾರ, ರಾಜಕೀಯವಾಗಿ ಸೂಕ್ಷ್ಮವಾದ ಮತ್ತು ಆಳುವ ಪಕ್ಷದ ನಾಯಕರು ಮತ್ತು/ ಅಥವಾ ವಿರೋಧ ಪಕ್ಷಗಳ ನಾಯಕರಿಗೆ ಸಂಬಂಧಿಸಿದ ಪ್ರಕರಣಗಳನ್ನು ಕೆಲವು ನಿರ್ದಿಷ್ಟ ಪೀಠಗಳಿಗೆ ಮಾತ್ರ ಕೊಡಲಾಗಿತ್ತು.

ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ

ಮುಖ್ಯ ನ್ಯಾಯಾಧೀಶರಾಗಿದ್ದ ಮಿಶ್ರಾ, ನ್ಯಾಯಾಂಗದ ಆಡಳಿತಾತ್ಮಕ ವಿಷಯಗಳಲ್ಲಿ ಕಾರ್ಯಾಂಗವು ಹಾಕುತ್ತಿದ್ದ ಅನುಚಿತ ಒತ್ತಡಗಳನ್ನು ಸಮರ್ಥವಾಗಿ ಎದುರಿಸುತ್ತಿರಲಿಲ್ಲ ಎಂದು ಭೂಷಣ್ ಆರೋಪಿಸಿದ್ದಾರೆ. ಅವರ ಅವಧಿಯಲ್ಲಿ ಸುಪ್ರೀಂಕೋರ್ಟಿನ ಕೊಲೇಜಿಯಂನ ಶಿಫಾರಸುಗಳನ್ನು ಕೇಂದ್ರ ಸರಕಾರವು ಮತ್ತೆಮತ್ತೆ ಬುಡಮೇಲು ಮಾಡುವುದು ಸಾಮಾನ್ಯ ವಿಷಯವಾಗಿತ್ತು ಮತ್ತು ಇಂತಹ ಲಜ್ಜೆಗೇಡಿತನದ ಎದುರು ಕೂಡಾ ಅವರು ಮಣಿಯುತ್ತಿದ್ದರು ಎಂದು ಭೂಷಣ್ ಅವರು ತನ್ನ ಉತ್ತರದಲ್ಲಿ ಆರೋಪಿಸಿದ್ದಾರೆ.

ನ್ಯಾ. ಲೋಯಾ ಮತ್ತು ಭೀಮಾ ಕೋರೆಗಾಂವ್ ಪ್ರಕರಣಗಳನ್ನು ಎತ್ತಿರುವ ಭೂಷಣ್, ಸುಪ್ರೀಂಕೋರ್ಟ್ ಇಂದಿನ ದಿನಗಳಲ್ಲಿ ನಾಗರಿಕರ ಸ್ವಾತಂತ್ರ್ಯವು ಆದ್ಯತೆಯ ವಿಷಯವೆಂದಾಗಲೀ, ತೀರಾ ಆತಂಕಕಾರಿ ವಿಷಯವೆಂದಾಗಲೀ ಪರಿಗಣಿಸುತ್ತಲೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

“ದುರದೃಷ್ಟವಶಾತ್ ಇದು ಸುಪ್ರೀಂಕೋರ್ಟ್ ಹೆಚ್ಚುಹೆಚ್ಚಾಗಿ ಕಾರ್ಯಾಂಗಕ್ಕಿಂತಲೂ ಹೆಚ್ಚು ಕಾರ್ಯಾಂಗ ಮನೋಭಾವದ್ದಾಗುತ್ತಿದೆ ಎಂಬ ನಂಬಿಕೆ ಭಾರತೀಯ ನ್ಯಾಯಾಂಗದ ಹಿತಚಿಂತಕರ ನಡುವೆ ಬೆಳೆಯುತ್ತಾ ಹೋಗುವುದಕ್ಕೆ ಕಾರಣವಾಗಿದೆ” ಎಂದು ಅವರು ಬರೆದಿದ್ದಾರೆ.

ನ್ಯಾ. ರಂಜನ್ ಗೊಗೊಯ್ ಅವಧಿ

ಮುಖ್ಯ ನ್ಯಾಯಾಧೀಶರಾಗಿ ರಂಜನ್ ಗೊಗೊಯ್ ಅವರ ಅವಧಿಯು ಭೂಷಣ್ ಅವರ ತೀವ್ರತರ ಟೀಕೆಗೆ ಗುರಿಯಾಗಿದೆ. ಕಾರ್ಯಾಂಗದ ಜೊತೆ “ಕಸಿವಿಸಿ ಉಂಟುಮಾಡುವಷ್ಟು” ನಿಕಟತೆ ಮತ್ತು ನಾಗರಿಕರ ಮೂಲಭೂತ ಹಕ್ಕುಗಳ ಅವಗಣನೆ ಅದರ ಗುಣಲಕ್ಷಣಗಳಾಗಿದ್ದವು ಎಂದು ಅವರು ಬರೆದಿದ್ದಾರೆ. ಕಾರ್ಯಕ್ರಮ ಪಟ್ಟಿ ರೂಪಿಸುವ ಅಧಿಕಾರ ಹೊಂದಿದವರಾಗಿ ಅವರ ಆದ್ಯತೆಗಳನ್ನು ಪ್ರಶ್ನಿಸಿರುವ ಭೂಷಣ್,  ಬಿಜೆಪಿಗೆ ಭಾರೀ ಲಾಭ ತಂದುಕೊಟ್ಟಿರುವ ಚುನಾವಣಾ ಬಾಂಡ್, ಸಂವಿಧಾನದ ವಿಧಿ 370ರ ರದ್ದತಿ, ಆಗಸ್ಟ್ 5, 2019ರ ದಿಗ್ಬಂಧನದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ನಿರಂಕುಶ ಬಂಧನ ಸರಣಿ, ಸಿಬಿಐ ನಿರ್ದೇಶಕ ಆಲೋಕ್ ವರ್ಮಾರ ಸೇವಾವಧಿಯ ಕಡಿತ ಇತ್ಯಾದಿಗಳನ್ನು ಪ್ರಶ್ನಿಸುವ ಪ್ರಕರಣಗಳ ವಿಚಾರಣೆಯನ್ನೇ ನಡೆಸದಿರುವುದು ಮುಂತಾದ ಪ್ರಶ್ನೆಗಳನ್ನು ಭೂಷಣ್ ಎತ್ತಿತೋರಿಸಿದ್ದಾರೆ. ಅದೇ ಹೊತ್ತಿಗೆ, ಗೊಗೋಯ್ ಅವಧಿಯಲ್ಲಿ ಅಯೋಧ್ಯಾ ಪ್ರಕರಣದ ತ್ವರಿತಗತಿಯ ವಿಚಾರಣೆಯ ವಿಷಯವನ್ನು ಎತ್ತಿರುವ ಅವರು, ಆ ಪ್ರಕರಣದ ಅಂತಿಮ ಪರಿಣಾಮವು ಆಳುವ ಪಕ್ಷದ ಚುನಾವಣಾ ಭವಿಷ್ಯವನ್ನು ಬಲಪಡಿಸಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ಅವರನ್ನು ಅಯೋಧ್ಯೆಗೆ ಆಹ್ವಾನಿಸದಿರುವುದು ಅನ್ಯಾಯ: ಯಶ್ವಂತ್ ಸಿನ್ಹಾ
ಮಾಜಿ ಸಿಜೆಐ ರಂಜನ್ ಗೊಗೊಯ್

ಮುಖ್ಯ ನ್ಯಾಯಾಧೀಶರಾಗಿದ್ದ ರಂಜನ್ ಗೊಗೋಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಆರೋಪವನ್ನು ಮಾಡಿರುವ ಭೂಷಣ್, ದೂರುದಾರರನ್ನೇ ಬಲಿಪಶು ಮಾಡಲು ಸುಪ್ರೀಂಕೋರ್ಟ್ ಮತ್ತು ಕೇಂದ್ರ ಸರಕಾರ ಸಮನ್ವಯದಿಂದ ಕೆಲಸ ಮಾಡಿರುವ ಸಾಧ್ಯತೆಯ ಪ್ರಶ್ನೆಯನ್ನು ಎತ್ತಿದ್ದಾರೆ. ಪ್ರಮುಖವಾದ ಪ್ರಕರಣಗಳನ್ನು ನಿರ್ಧರಿಸುವಾಗ ಕಾರ್ಯಾಂಗದಿಂದ ಗೊಗೋಯ್ ಅವರಿಗಿದ್ದ ಸ್ವಾತಂತ್ರ್ಯವನ್ನು ಅವರು ಪ್ರಶ್ನಿಸಿದ್ದಾರೆ. ಆ ಮಹಿಳೆಯು ತಾನು ಲೈಂಗಿಕ ಕಿರುಕುಳದ ಪ್ರಕರಣವನ್ನು ಮುಂದುವರಿಸುವುದಿಲ್ಲ ಎಂದು ಲಿಖಿತವಾಗಿ ಭರವಸೆ ನೀಡಿದ ನಂತರ ಆಕೆಯನ್ನು ಮರಳಿ ಸುಪ್ರೀಂಕೋರ್ಟಿನ ಕೆಲಸಕ್ಕೆ ಸೇರಿಸಿಕೊಳ್ಳಲಾಯಿತು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಭರವಸೆಯನ್ನು “ಸರಕಾರದ ಉನ್ನತ ಸ್ಥಾನದಲ್ಲಿರುವ” ವ್ಯಕ್ತಿಯ ಒತ್ತಡದ ಬಳಿಕ ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ.

ಮಾಜಿ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿರುವುದು, ಅವರು ಮತ್ತು ಕೇಂದ್ರ ಸರಕಾರದ ನಡುವೆ ಹಲವಾರು ಪ್ರಮುಖ ಪ್ರಕರಣಗಳಲ್ಲಿ ಕೊಡುಕೊಳ್ಳುವಿಕೆಯ ಕುರಿತು ಗಂಭೀರವಾದ ಆತಂಕವನ್ನೆಬ್ಬಿಸುತ್ತದೆ ಎಂದು ಭೂಷಣ್ ಆರೋಪಿಸಿದ್ದಾರೆ.


ಇದನ್ನೂ ಓದಿ: ಸರ್ಕಾರದ ಪರವಾಗಿ ರಫೇಲ್, ಅಯೋಧ್ಯಾ, ಸಿಬಿಐ ತೀರ್ಪು ನೀಡಿದ ನಂತರ ನಿಮಗೆ ರಾಜ್ಯಸಭಾ ಸ್ಥಾನ ಮತ್ತು ಝಡ್ ಶ್ರೇಣಿಯ ಭದ್ರತೆ ಸಿಗುತ್ತದೆ: ಇದರ ಅರ್ಥವೇನು? 


ನ್ಯಾ. ಎ.ಎಸ್. ಬೋಬ್ಡೆ ಅವಧಿ

ಪೌರತ್ವ (ತಿದ್ದುಪಡಿ) ಕಾಯಿದೆ (ಸಿಎಎ)ಯ ಸಂವಿಧಾನಬದ್ಧತೆಯನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ಅವುಗಳನ್ನು ಸಲ್ಲಿಸಿ ತಿಂಗಳುಗಳಾದರೂ ನಡೆಸದೇ ಇರುವುದು, ದಿಲ್ಲಿ ಗಲಭೆಗೆ ಸಂಬಂಧಿಸಿದಂತೆ ದ್ವೇಷ ಕಾರುವ ಭಾಷಣದ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಂಡ ತಕ್ಷಣ ನ್ಯಾ. ಎಸ್. ಮುರಳೀಧರ್ ಅವರನ್ನು ದಿಲ್ಲಿ ಹೈಕೋರ್ಟಿನಿಂದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟಿಗೆ ವರ್ಗಾವಣೆ ಮಾಡಿರುವುದು, ಜಮ್ಮು ಮತ್ತು ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ನಿರ್ಬಂಧವನ್ನು ಮುಂದುವರಿಸಿರುವುದು “ಪ್ರಜಾಪ್ರಭುತ್ವದ ಅವಗಣನೆ”ಯಲ್ಲಿ ನ್ಯಾಯಾಲಯದ ಪಾತ್ರದ ಬಗ್ಗೆ ತನ್ನ ಅಭಿಪ್ರಾಯವನ್ನು ರೂಪಿಸಲು ಸಾಕು ಎಂದು ಭೂಷಣ್ ತನ್ನ ಉತ್ತರದಲ್ಲಿ ಬರೆದಿದ್ದಾರೆ.

 

 

ಸಂವಿಧಾನದ ವಿಧಿ 19 (1)(ಎ) ಅನ್ವಯ ಅಂತಹ ನಿಷ್ಕಪಟ ಅಭಿಪ್ರಾಯವನ್ನು ರೂಪಿಸಿಕೊಳ್ಳಲು, ಹೊಂದಿರಲು ಮತ್ತು ಅಭಿವ್ಯಕ್ತಿಪಡಿಸಲು ತಾನು ಸ್ವತಂತ್ರನಿದ್ದೇನೆ ಎಂದು ಭೂಷಣ್ ವಾದಿಸಿದ್ದಾರೆ.

ಹಾಲಿ ಮುಖ್ಯನ್ಯಾಯಮೂರ್ತಿ ಎ.ಎಸ್‌ ಬಾಬ್ಡೆ

ಅದಕ್ಕಿಂತಲೂ ಮುಖ್ಯವಾಗಿ, ಕೊನೆಯ ನಾಲ್ಕು ಮುಖ್ಯ ನ್ಯಾಯಾಧೀಶರ ಅಧಿಕಾರಾವಧಿಯ ಕುರಿತು ತನಗಿರುವ ಆತಂಕವು ತನ್ನ ವಿರುದ್ಧ ವಿಚಾರಣೆ ಆರಂಭಿಸಲು ನೆಲೆಗಟ್ಟು ಒದಗಿಸುವುದಿಲ್ಲ; ಏಕೆಂದರೆ, ಸುಪ್ರೀಂಕೋರ್ಟ್ ಎಂಬುದನ್ನು ಒಂದು ಸಂಸ್ಥೆಯಾಗಿ- ಮುಖ್ಯ ನ್ಯಾಯಾಧೀಶರ ಅವಧಿ ಬಿಡಿ, ಸ್ವತಃ ಮುಖ್ಯ ನ್ಯಾಯಾಧೀಶರ ಜೊತೆಯೂ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದು ತನ್ನ ಉತ್ತರದಲ್ಲಿ ಬರೆದಿರುವ ಪ್ರಶಾಂತ್ ಭೂಷಣ್, ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು ಎಂಬ ಬಡಿದೆಬ್ಬಿಸುವ ವಾದವನ್ನು ಮುಂದಿಟ್ಟಿದ್ದಾರೆ.

ಸುಪ್ರೀಂಕೋರ್ಟ್ ತನಗೆ ನೀಡಿದ ನ್ಯಾಯಾಂಗ ನಿಂದನೆ ನೋಟೀಸಿಗೆ ಪ್ರಶಾಂತ್ ಭೂಷಣ್ ಅವರು ನೀಡಿರುವ ಅಂಶ ಅಂಶಗಳ ಖಚಿತ ಉತ್ತರದಿಂದಾಗಿ, ಎರಡು ನಿರುಪದ್ರವಿ ಟ್ವೀಟ್‌ಗಳಿಗಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆಯ ಅಧಿಕಾರದ ಅಸ್ತ್ರವನ್ನು ಬಳಸುವುದರ ಮೂಲಕ ಸುಪ್ರೀಂಕೋರ್ಟ್- ಇತ್ತೀಚಿನ ವರ್ಷಗಳಲ್ಲಿ ತಾನು ಮಾಡಿದ ತಪ್ಪುಗಳು ಮತ್ತು ಲೋಪಗಳ ಕುರಿತು ಹೊಸದಾಗಿ ಜನರ ಪರಿಶೀಲನೆಗೆ ಒಳಗಾಗುವ ಇರಿಸುಮುರುಸನ್ನು ತಾನೇ ಮೈಮೇಲೆ ಎಳೆದುಕೊಂಡಿದೆಯೇ ಎಂದು ಎಲ್ಲರೂ ಯೋಚಿಸುವಂತಾಗಿದೆ.

ವಿ. ವೆಂಕಟೇಸನ್

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...