Homeಮುಖಪುಟಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಪಿತೂರಿ ನಡೆದಿದ್ದ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದ್ದು, ಲೈಂಗಿಕ ಕಿರುಕುಳದ ಆರೋಪದ ನಂತರ ಆರಂಭಿಸಲಾಗಿದ್ದ ತನಿಖೆಯನ್ನು ಮುಕ್ತಾಯಗೊಳಿಸಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತ ಅವರ ಅಭಿಪ್ರಾಯಗಳು ಮತ್ತು ಸುಪ್ರೀಂ ಕೋರ್ಟ್ ನೋಂದಾವಣೆಯನ್ನು ಸುವ್ಯವಸ್ಥಿತಗೊಳಿಸುವ ಅವರ ಪ್ರಯತ್ನಗಳು ಸೇರಿದಂತೆ ನ್ಯಾಯಮೂರ್ತಿ ಗೊಗೊಯ್ ಅವರ ಕಠಿಣ ನಿರ್ಧಾರಗಳ ಕಾರಣದಿಂದ ಇಂತಹ ಪಿತೂರಿ ಸಂಭವಿಸಿರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾಜಿ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ಅವರ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ವಕೀಲ ಉತ್ಸವ್ ಬೈನ್ಸ್ ಅವರು 2019 ರಲ್ಲಿ ಹೊರಬಂದ ಲೈಂಗಿಕ ಕಿರುಕುಳ ಆರೋಪದ ಹಿಂದೆ ಪಿತೂರಿಯ ಸಾಧ್ಯತೆಯನ್ನು ಎತ್ತಿದ ನಂತರ ಮಾಜಿ ನ್ಯಾಯಮೂರ್ತಿ ಪಟ್ನಾಯಕ್ ಅವರಿಗೆ ಈ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.

“ಅಸಮಾಧಾನಗೊಂಡ ನ್ಯಾಯಾಲಯದ ಅಧಿಕಾರಿಗಳೊಂದಿಗೆ ಕೆಲಸ ಮಾಡುವ ಮಧ್ಯವರ್ತಿಗಳು ಮತ್ತು ಫಿಕ್ಸರ್‌ಗಳು ಗೊಗೊಯ್ ವಿರುದ್ಧ ಪಿತೂರಿ ಮಾಡಿದ್ದರೆ’ ಎಂಬುದರ ಕುರಿತು ಪಟ್ನಾಯಕ್ ತನಿಖೆ ಮಾಡಿ ಸಲ್ಲಿಸಿದ ವರದಿಯ ಆಧಾರದಲ್ಲಿ ಸುಪ್ರೀಂಕೋರ್ಟ್ ಇಂದಿನ ತೀರ್ಪು ನೀಡಿದೆ.

“ನ್ಯಾಯಮೂರ್ತಿ ಪಟ್ನಾಯಕ್ ವರದಿಯು ಮಾಜಿ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಪಿತೂರಿ ಅಸ್ತಿತ್ವದಲ್ಲಿತ್ತು ಎಂದು ಒಪ್ಪಿಕೊಂಡಿದೆ ಮತ್ತು ಅದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಈ ಸಮಿತಿಯು ಎಲೆಕ್ಟ್ರಾನಿಕ್ ದಾಖಲೆಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಕೋರ್ಟ್ ಹೇಳಿದೆ.

“ನೋಂದಾವಣೆ (ರಿಜಿಸ್ಟ್ರಿ)ಯಲ್ಲಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೆಲವು ಕಠಿಣ ಆಡಳಿತಾತ್ಮಕ ನಿರ್ಧಾರಗಳನ್ನು ಗೊಗೊಯ್ ತೆಗೆದುಕೊಂಡಿದ್ದರು’ ಎಂದು ಸುಪ್ರೀಂ ಹೇಳಿದೆ.
ಎನ್‌ಆರ್‌ಸಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಮೂರ್ತಿ ಗೊಗೊಯ್ ಗಂಭೀರ ದೃಷ್ಟಿಕೋನವನ್ನು ತೆಗೆದುಕೊಂಡಿದ್ದಾರೆ ಮತ್ತು “ಕೆಲವರು ಈ ನಿರ್ಧಾರದಿಂದ ಅಸಮಾಧಾನ ಹೊಂದಿದ್ದಾರೆಂದು ನಂಬಲು ಬಲವಾದ ಕಾರಣಗಳಿವೆ” ಎಂದು ಗುಪ್ತಚರ ಬ್ಯೂರೋ ನಿರ್ದೇಶಕರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವನ್ನು ಮುಕ್ತಾಯಗೊಳಿಸಿದ ನ್ಯಾಯಾಲಯವು ಹೀಗೆ ಹೇಳಿದೆ: “ಇದರಿಂದ ಯಾವುದೇ ನಿಜವಾದ ಉದ್ದೇಶವನ್ನು ಪೂರೈಸಲಾಗುವುದಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ವಾದಗಳನ್ನು ಇಲ್ಲಿಗೆ ನಿಲ್ಲಿಸಲಾಗಿದೆ ಮತ್ತು ಸು-ಮೊಟೊ ಅನ್ನು ವಿಲೇವಾರಿ ಮಾಡಲಾಗಿದೆ. ವರದಿಯನ್ನು ಮೊಹರು ಮಾಡಿ ಕವರ್‌ನಲ್ಲಿ ಇಡಲಾಗಿದೆ.”

ಮುಖ್ಯ ನ್ಯಾಯಾಧೀಶರ ವಿರುದ್ಧದ ಆರೋಪಗಳನ್ನು ವಿಚಾರಿಸಲು ಸಮಿತಿಯನ್ನು ರಚಿಸಲಾಗಿರಲಿಲ್ಲ. ಆದರೆ ನ್ಯಾಯಾಧೀಶರನ್ನು ಸಿಕ್ಕಿಸುವ ದೊಡ್ಡ ಪಿತೂರಿಯ ಬಗ್ಗೆ ಮಾತ್ರ ತನಿಖೆ ನಡೆಸಲು ಸೂಚಿಸಲಾಗಿತ್ತು ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದರು.

ದಾಖಲೆಗಳಿಗೆ ಸೀಮಿತ ಲಭ್ಯತೆ ಮತ್ತು ಸಾಕ್ಷ್ಯಗಳು ಮತ್ತು ವಸ್ತುಗಳ ಆಧಾರದ ಮೇಲೆ, ಆರೋಪಗಳಿಗೆ ದೃಢೀಕರಣ ಕಂಡುಹಿಡಿಯಲು ಸಹ ಸಾಧ್ಯವಾಗಲಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಆದಾಗ್ಯೂ, ಸುಪ್ರೀಂ ಕೋರ್ಟಿನ 2019 ರ ಆದೇಶವನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಂಗದ ಕುರಿತ ಮುಖ್ಯ ನ್ಯಾಯಾಧೀಶರ ತೀರ್ಪುಗಳು ಅವರ ವಿರುದ್ಧದ ಪಿತೂರಿಯನ್ನು ನಿಜವಾಗಿಯೂ ಪ್ರಚೋದಿಸಿದೆಯೇ ಎಂದು ನಿರೂಪಿಸಲು ಸಾಧ್ಯವಾಗಿಲ್ಲ ಎಂದು ವರದಿ ಹೇಳುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ

ಏಪ್ರಿಲ್ 19, 2019 ರಂದು ಕಿರಿಯ ನ್ಯಾಯಾಲಯದ ಮಾಜಿ ಅಧಿಕಾರಿಣಿಯೊಬ್ಬರು ಭಾರತದ (ಅಂದಿನ) ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅವರು ತಮ್ಮ ಅಪಾದನೆಗಳನ್ನು ದೃಢಿಕರಿಸುವ ದಾಖಲೆಗಳನ್ನು ಸಲ್ಲಿಸಿ, ಏ. 22 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ; ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...