Homeಮುಖಪುಟಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಪಿತೂರಿ ನಡೆದಿದ್ದ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದ್ದು, ಲೈಂಗಿಕ ಕಿರುಕುಳದ ಆರೋಪದ ನಂತರ ಆರಂಭಿಸಲಾಗಿದ್ದ ತನಿಖೆಯನ್ನು ಮುಕ್ತಾಯಗೊಳಿಸಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತ ಅವರ ಅಭಿಪ್ರಾಯಗಳು ಮತ್ತು ಸುಪ್ರೀಂ ಕೋರ್ಟ್ ನೋಂದಾವಣೆಯನ್ನು ಸುವ್ಯವಸ್ಥಿತಗೊಳಿಸುವ ಅವರ ಪ್ರಯತ್ನಗಳು ಸೇರಿದಂತೆ ನ್ಯಾಯಮೂರ್ತಿ ಗೊಗೊಯ್ ಅವರ ಕಠಿಣ ನಿರ್ಧಾರಗಳ ಕಾರಣದಿಂದ ಇಂತಹ ಪಿತೂರಿ ಸಂಭವಿಸಿರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಾಜಿ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ಅವರ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ವಕೀಲ ಉತ್ಸವ್ ಬೈನ್ಸ್ ಅವರು 2019 ರಲ್ಲಿ ಹೊರಬಂದ ಲೈಂಗಿಕ ಕಿರುಕುಳ ಆರೋಪದ ಹಿಂದೆ ಪಿತೂರಿಯ ಸಾಧ್ಯತೆಯನ್ನು ಎತ್ತಿದ ನಂತರ ಮಾಜಿ ನ್ಯಾಯಮೂರ್ತಿ ಪಟ್ನಾಯಕ್ ಅವರಿಗೆ ಈ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿತ್ತು.

“ಅಸಮಾಧಾನಗೊಂಡ ನ್ಯಾಯಾಲಯದ ಅಧಿಕಾರಿಗಳೊಂದಿಗೆ ಕೆಲಸ ಮಾಡುವ ಮಧ್ಯವರ್ತಿಗಳು ಮತ್ತು ಫಿಕ್ಸರ್‌ಗಳು ಗೊಗೊಯ್ ವಿರುದ್ಧ ಪಿತೂರಿ ಮಾಡಿದ್ದರೆ’ ಎಂಬುದರ ಕುರಿತು ಪಟ್ನಾಯಕ್ ತನಿಖೆ ಮಾಡಿ ಸಲ್ಲಿಸಿದ ವರದಿಯ ಆಧಾರದಲ್ಲಿ ಸುಪ್ರೀಂಕೋರ್ಟ್ ಇಂದಿನ ತೀರ್ಪು ನೀಡಿದೆ.

“ನ್ಯಾಯಮೂರ್ತಿ ಪಟ್ನಾಯಕ್ ವರದಿಯು ಮಾಜಿ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಪಿತೂರಿ ಅಸ್ತಿತ್ವದಲ್ಲಿತ್ತು ಎಂದು ಒಪ್ಪಿಕೊಂಡಿದೆ ಮತ್ತು ಅದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಈ ಸಮಿತಿಯು ಎಲೆಕ್ಟ್ರಾನಿಕ್ ದಾಖಲೆಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಕೋರ್ಟ್ ಹೇಳಿದೆ.

“ನೋಂದಾವಣೆ (ರಿಜಿಸ್ಟ್ರಿ)ಯಲ್ಲಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೆಲವು ಕಠಿಣ ಆಡಳಿತಾತ್ಮಕ ನಿರ್ಧಾರಗಳನ್ನು ಗೊಗೊಯ್ ತೆಗೆದುಕೊಂಡಿದ್ದರು’ ಎಂದು ಸುಪ್ರೀಂ ಹೇಳಿದೆ.
ಎನ್‌ಆರ್‌ಸಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಮೂರ್ತಿ ಗೊಗೊಯ್ ಗಂಭೀರ ದೃಷ್ಟಿಕೋನವನ್ನು ತೆಗೆದುಕೊಂಡಿದ್ದಾರೆ ಮತ್ತು “ಕೆಲವರು ಈ ನಿರ್ಧಾರದಿಂದ ಅಸಮಾಧಾನ ಹೊಂದಿದ್ದಾರೆಂದು ನಂಬಲು ಬಲವಾದ ಕಾರಣಗಳಿವೆ” ಎಂದು ಗುಪ್ತಚರ ಬ್ಯೂರೋ ನಿರ್ದೇಶಕರು ವರದಿಯಲ್ಲಿ ಹೇಳಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವನ್ನು ಮುಕ್ತಾಯಗೊಳಿಸಿದ ನ್ಯಾಯಾಲಯವು ಹೀಗೆ ಹೇಳಿದೆ: “ಇದರಿಂದ ಯಾವುದೇ ನಿಜವಾದ ಉದ್ದೇಶವನ್ನು ಪೂರೈಸಲಾಗುವುದಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ವಾದಗಳನ್ನು ಇಲ್ಲಿಗೆ ನಿಲ್ಲಿಸಲಾಗಿದೆ ಮತ್ತು ಸು-ಮೊಟೊ ಅನ್ನು ವಿಲೇವಾರಿ ಮಾಡಲಾಗಿದೆ. ವರದಿಯನ್ನು ಮೊಹರು ಮಾಡಿ ಕವರ್‌ನಲ್ಲಿ ಇಡಲಾಗಿದೆ.”

ಮುಖ್ಯ ನ್ಯಾಯಾಧೀಶರ ವಿರುದ್ಧದ ಆರೋಪಗಳನ್ನು ವಿಚಾರಿಸಲು ಸಮಿತಿಯನ್ನು ರಚಿಸಲಾಗಿರಲಿಲ್ಲ. ಆದರೆ ನ್ಯಾಯಾಧೀಶರನ್ನು ಸಿಕ್ಕಿಸುವ ದೊಡ್ಡ ಪಿತೂರಿಯ ಬಗ್ಗೆ ಮಾತ್ರ ತನಿಖೆ ನಡೆಸಲು ಸೂಚಿಸಲಾಗಿತ್ತು ಎಂದು ನ್ಯಾಯಾಧೀಶರು ಸ್ಪಷ್ಟಪಡಿಸಿದರು.

ದಾಖಲೆಗಳಿಗೆ ಸೀಮಿತ ಲಭ್ಯತೆ ಮತ್ತು ಸಾಕ್ಷ್ಯಗಳು ಮತ್ತು ವಸ್ತುಗಳ ಆಧಾರದ ಮೇಲೆ, ಆರೋಪಗಳಿಗೆ ದೃಢೀಕರಣ ಕಂಡುಹಿಡಿಯಲು ಸಹ ಸಾಧ್ಯವಾಗಲಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ಆದಾಗ್ಯೂ, ಸುಪ್ರೀಂ ಕೋರ್ಟಿನ 2019 ರ ಆದೇಶವನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಂಗದ ಕುರಿತ ಮುಖ್ಯ ನ್ಯಾಯಾಧೀಶರ ತೀರ್ಪುಗಳು ಅವರ ವಿರುದ್ಧದ ಪಿತೂರಿಯನ್ನು ನಿಜವಾಗಿಯೂ ಪ್ರಚೋದಿಸಿದೆಯೇ ಎಂದು ನಿರೂಪಿಸಲು ಸಾಧ್ಯವಾಗಿಲ್ಲ ಎಂದು ವರದಿ ಹೇಳುತ್ತದೆ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ

ಏಪ್ರಿಲ್ 19, 2019 ರಂದು ಕಿರಿಯ ನ್ಯಾಯಾಲಯದ ಮಾಜಿ ಅಧಿಕಾರಿಣಿಯೊಬ್ಬರು ಭಾರತದ (ಅಂದಿನ) ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅವರು ತಮ್ಮ ಅಪಾದನೆಗಳನ್ನು ದೃಢಿಕರಿಸುವ ದಾಖಲೆಗಳನ್ನು ಸಲ್ಲಿಸಿ, ಏ. 22 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ; ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...