Homeಮುಖಪುಟಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್‌ ಗವಾಯಿ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್‌ ಗವಾಯಿ ಹೆಸರು ಶಿಫಾರಸು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್‌ ಗವಾಯಿ) ಅವರ ಹೆಸರನ್ನು ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಬುಧವಾರ (ಏಪ್ರಿಲ್.16) ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಮೇ 13ರಂದು ಹಾಲಿ ಸಿಜೆಐ ಖನ್ನಾ ಅವರ ನಿವೃತ್ತಿಯ ನಂತರ, ಮೇ 14ರಂದು ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ಗವಾಯಿ, ಹಾಲಿ ಸಿಜೆಐ ಖನ್ನಾ ನಂತರ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.

ಕಳೆದ ವರ್ಷದ ನವೆಂಬರ್ 11 ರಂದು 51ನೇ ಸಿಜೆಐ ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕರಿಸಿದ್ದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನಿವೃತ್ತಿ ವಯಸ್ಸು 65 ವರ್ಷ ಆಗಿದೆ.

ಮೇ 24, 2019ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಗವಾಯಿ ಅವರು ಆರು ತಿಂಗಳಿಗಿಂತ ಹೆಚ್ಚು ಕಾಲ ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದಾರೆ. ಅವರು ನವೆಂಬರ್ 23, 2025 ರಂದು ನಿವೃತ್ತರಾಗಲಿದ್ದಾರೆ.

ನವೆಂಬರ್ 24, 1960ರಂದು ಅಮರಾವತಿಯಲ್ಲಿ ಜನಿಸಿದ ನ್ಯಾಯಮೂರ್ತಿ ಗವಾಯಿ ಅವರು, ನವೆಂಬರ್ 14, 2003ರಂದು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅವರು ನವೆಂಬರ್ 12, 2005ರಂದು ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾದರು.

ನ್ಯಾಯಮೂರ್ತಿ ಗವಾಯಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಸಾಂವಿಧಾನಿಕ ಪೀಠಗಳ ಭಾಗವಾಗಿದ್ದರು, ಅವುಗಳು ಮಹತ್ವದ ತೀರ್ಪುಗಳನ್ನು ನೀಡಿವೆ.

ಡಿಸೆಂಬರ್ 2023ರಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸರ್ವಾನುಮತದಿಂದ ಎತ್ತಿಹಿಡಿದ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು.

ರಾಜಕೀಯ ನಿಧಿ ಸಂಗ್ರಹಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಇದ್ದರು.

4:1 ಬಹುಮತದಿಂದ, 2016ರಲ್ಲಿ 1,000 ಮತ್ತು 500 ರೂಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಭಾಗವಾಗಿದ್ದರು.

6:1 ಬಹುಮತದಿಂದ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳು ಸಾಂವಿಧಾನಿಕ ಅಧಿಕಾರ ಹೊಂದಿವೆ ಎಂದು ಮಹತ್ವದ ತೀರ್ಪು ನೀಡಿದ ಏಳು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಗವಾಯಿ ಇದ್ದರು.

ನ್ಯಾಯಮೂರ್ತಿ ಗವಾಯಿ ಅವರನ್ನೊಳಗೊಂಡ ಏಳು ನ್ಯಾಯಾಧೀಶರ ಸಂವಿಧಾನ ಪೀಠವು, ಪಕ್ಷಗಳ ನಡುವಿನ ಮುದ್ರೆಯಿಲ್ಲದ ಅಥವಾ ಸರಿಯಾದ ಮುದ್ರೆಯಿಲ್ಲದ ಒಪ್ಪಂದದಲ್ಲಿನ ಮಧ್ಯಸ್ಥಿಕೆ ಷರತ್ತು ಜಾರಿಗೊಳಿಸಬಹುದಾಗಿದೆ. ಏಕೆಂದರೆ, ಅಂತಹ ದೋಷವನ್ನು ಸರಿಪಡಿಸಬಹುದು ಮತ್ತು ಒಪ್ಪಂದವನ್ನು ಅಮಾನ್ಯಗೊಳಿಸುವುದಿಲ್ಲ ಎಂದು ತೀರ್ಪು ನೀಡಿತ್ತು.

ಕಾರಣ ಕೇಳಿ ನೋಟಿಸ್ ನೀಡದೆ ಯಾವುದೇ ಕಟ್ಟಡಗಳನ್ನು ಕೆಡವಬಾರದು, ನೋಟಿಸ್ ನೀಡಿದ ಬಳಿಕ ಅದಕ್ಕೆ ಪ್ರತಿಕ್ರಿಯಿಸಲು ಕಟ್ಟಡ ಮಾಲೀಕರಿಗೆ 15 ದಿನಗಳ ಸಮಯವಕಾಶ ನೀಡಬೇಕು ಎಂಬುವುದು ಸೇರಿದಂತೆ ಕಟ್ಟಡಗಳ ತೆರವು ಕಾರ್ಯಾಚರಣೆ ಇಡೀ ದೇಶಕ್ಕೆ ಮಾರ್ಗಸೂಚಿಗಳನ್ನು ರೂಪಿಸಿ ನೀಡಿದ ಮಹತ್ವದ ತೀರ್ಪು ನೀಡಿದ ಪೀಠದ ನೇತೃತ್ವವನ್ನು ನ್ಯಾಯಮೂರ್ತಿ ಗವಾಯಿ ವಹಿಸಿದ್ದರು.

ಇದಲ್ಲದೆ, ನ್ಯಾಯಮೂರ್ತಿ ಗವಾಯಿ ಅವರು ಅರಣ್ಯಗಳು, ವನ್ಯಜೀವಿಗಳು ಮತ್ತು ಮರಗಳ ರಕ್ಷಣೆಗೆ ಸಂಬಂಧಿಸಿದ ವಿಷಯಗಳನ್ನು ಆಲಿಸುವ ಪೀಠದ ಮುಖ್ಯಸ್ಥರಾಗಿದ್ದಾರೆ.

ಮಾರ್ಚ್ 16, 1985ರಂದು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ ನ್ಯಾಯಮೂರ್ತಿ ಗವಾಯಿ ಅವರು, ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್, ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಮರಾವತಿ ವಿಶ್ವವಿದ್ಯಾಲಯದ ಸ್ಥಾಯಿ ಸಲಹೆಗಾರರಾಗಿದ್ದರು.

ಆಗಸ್ಟ್ 1992ರಿಂದ ಜುಲೈ 1993ರವರೆಗೆ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಸಹಾಯಕ ಸರ್ಕಾರಿ ವಕೀಲ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ನ್ಯಾಯಮೂರ್ತಿ ಗವಾಯಿ ನೇಮಕಗೊಂಡಿದ್ದರು.

ಜನವರಿ 17, 2000ದಂದು ನಾಗಪುರ ಪೀಠಕ್ಕೆ ಸರ್ಕಾರಿ ಪ್ಲೀಡರ್ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯಮೂರ್ತಿ ಗವಾಯಿ ಅವರನ್ನು ನೇಮಿಸಲಾಗಿತ್ತು.

ಲಡ್ಕಿ ಬಹಿನ್ ಯೋಜನೆಯ ಫಲಾನುಭವಿ 8 ಲಕ್ಷ ಮಹಿಳೆಯರಿಗೆ 1500 ರಿಂದ 500 ಗೆ ಕಡಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...