Homeಮುಖಪುಟನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ...

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿ ಹೊಂದಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರಿಗೆ ಸಾಂಪ್ರದಾಯಿಕ ವಿದಾಯ ಸಮಾರಂಭವನ್ನು ಆಯೋಜಿಸದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅನ್ನು ಶುಕ್ರವಾರ (ಮೇ.16) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಬಹಿರಂಗವಾಗಿ ಟೀಕಿಸಿದ್ದಾರೆ. “ಈ ನಿರ್ಧಾರವು ವಿಷಾದನೀಯ ಮತ್ತು ಸಂಪ್ರದಾಯವನ್ನು ಕೈ ಬಿಟ್ಟಂತೆ” ಎಂದು ಹೇಳಿದ್ದಾರೆ.

“ಬಾರ್ ಅಸೋಸಿಯೇಷನ್‌ನ ಈ ನಡೆಯನ್ನು ನಾನು ಬಹಿರಂಗವಾಗಿ ಖಂಡಿಸಬೇಕು, ಏಕೆಂದರೆ ನಾನು ಸ್ಪಷ್ಟವಾಗಿ ಮಾತನಾಡುವುದರಲ್ಲಿ ನಂಬಿಕೆ ಇಡುತ್ತೇನೆ… ಅಸೋಸಿಯೇಷನ್ ಇಂತಹ ನಿಲುವನ್ನು ತೆಗೆದುಕೊಳ್ಳಬಾರದಿತ್ತು” ಎಂದು ತ್ರಿವೇದಿ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ನಡೆದ ನ್ಯಾಯಮೂರ್ತಿಗಳಾದ ತ್ರಿವೇದಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ವಿಧ್ಯುಕ್ತ ಪೀಠದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಾರ್ ಅಸೋಸಿಯೇಷನ್ ನಿರ್ಧಾರದ ಹೊರತಾಗಿಯೂ ಅದರ ಅಧ್ಯಕ್ಷ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಉಪಾಧ್ಯಕ್ಷೆ ರಚನಾ ಶ್ರೀವಾಸ್ತವ ಅವರು ವಿಚಾರಣೆಗೆ ಹಾಜರಾಗಿದಕ್ಕಾಗಿ ಸಿಜೆಐ ಗವಾಯಿ ಶ್ಲಾಘಿಸಿದ್ದಾರೆ. “ಕಪಿಲ್ ಸಿಬಲ್ ಮತ್ತು ರಚನಾ ಶ್ರೀವಾಸ್ತವ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರ ಸಂಘದ ನಿರ್ಣಯದ ಹೊರತಾಗಿಯೂ, ಅವರು ಇಲ್ಲಿದ್ದಾರೆ. ಅವರ ಉಪಸ್ಥಿತಿಯನ್ನು ನಾನು ಬಹಿರಂಗವಾಗಿ ಪ್ರಶಂಸಿಸುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ಮುಂದುವರೆದು, “ಕೋರ್ಟ್‌ ಹಾಲ್ ತುಂಬುವ ರೀತಿಯಲ್ಲಿ ಎಲ್ಲರೂ ನೆರೆದಿರುವುದನ್ನು ನೋಡಿದರೆ ಬೇಲಾ ತ್ರಿವೇದಿ ಅವರು ತುಂಬಾ ಉತ್ತಮ ನ್ಯಾಯಮೂರ್ತಿಗಳು ಎನ್ನುವುದು ವಿಧಿತವಾಗುತ್ತದೆ. ವಿಭಿನ್ನ ರೀತಿಯ ನ್ಯಾಯಮೂರ್ತಿಗಳಿರುತ್ತಾರೆ. ಆದರೆ, ಆ ಆಂಶವು ಇಂದು ಸಂಜೆ 4:30ಕ್ಕೆ ಮಾಡಬೇಕಾದ ಕೆಲಸವನ್ನು (ವಿದಾಯ ಸಮಾರಂಭ) ಮಾಡದೆ ಇರಲು ಒಂದು ಕಾರಣವಾಗಬಾರದು” ಎಂದು ಸಿಜೆಐ ಗವಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಮಸೀಹ್ ಅವರು ಕೂಡ ಸಿಜೆಐ ಹೇಳಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಾಂಸ್ಥಿಕ ಸಂಪ್ರದಾಯಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಹೇಳಿದಂತೆ, ಈ ವಿಚಾರದಲ್ಲಿ ನನಗೂ ವಿಷಾದವಿದೆ. ನಾವು ಸಂಪ್ರದಾಯಗಳನ್ನು ಅನುಸರಿಸಬೇಕು ಮತ್ತು ಗೌರವಿಸಬೇಕು. ಒಳ್ಳೆಯ ಸಂಪ್ರದಾಯಗಳು ಯಾವಾಗಲೂ ಮುಂದುವರಿಯಬೇಕು” ಎಂದಿದ್ದಾರೆ.

ತಮ್ಮ ವಿದಾಯ ಹೇಳಿಕೆಯಲ್ಲಿ ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ತ್ರಿವೇದಿ ಅವರ ಜಿಲ್ಲಾ ನ್ಯಾಯಾಲಯಗಳಿಂದ ಸುಪ್ರೀಂ ಕೋರ್ಟ್‌ವರೆಗಿನ ನ್ಯಾಯಾಂಗದ ಪ್ರಯಾಣವನ್ನು ಶ್ಲಾಘಿಸಿದ್ದು, “ಅವರು ಯಾವಾಗಲೂ ನ್ಯಾಯಸಮ್ಮತತೆ, ದೃಢತೆ, ಜಾಗರೂಕತೆ, ಕಠಿಣ ಪರಿಶ್ರಮ, ಭಕ್ತಿ, ಸಮರ್ಪಣೆಗೆ ಹೆಸರು ವಾಸಿಯಾದವರು. ನ್ಯಾಯಾಂಗಕ್ಕೆ ಅಮೂಲ್ಯವಾದ ಆಸ್ತಿ” ಎಂದಿದ್ದಾರೆ.

ತುಂಬಿದ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ಹಿರಿ, ಕಿರಿಯ ನ್ಯಾಯವಾದಿಗಳು ತಮ್ಮ ಬಗ್ಗೆ ಸೂಚಿಸಿದ ಮೆಚ್ಚುಗೆಯಿಂದ ಭಾವುಕರಾದ ನ್ಯಾ. ತ್ರಿವೇದಿಯವರು ವಿಧ್ಯುಕ್ತ ಪೀಠದ ಕೊನೆಯಲ್ಲಿ ಅಭಿನಂದನೆಗಳನ್ನು ಸ್ವೀಕರಿಸಿ ವಿದಾಯದ ಮಾತುಗಳನ್ನು ಆಡಿದ್ದಾರೆ.

“ನನ್ನ ಮೂವತ್ತು ವರ್ಷಗಳ ಕರ್ತವ್ಯದಲ್ಲಿ ನಾನು ಯಾವಾಗಲೂ ನನ್ನ ತೀರ್ಪುಗಳ ಮೂಲಕವೇ ಮಾತನಾಡಿದ್ದೇನೆ. ಇದು ನನ್ನ ಸೇವೆಯ ಕೊನೆಯ ದಿನವಾಗಿದೆ. ನಾನು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ… ನಾನು ಯಾವಾಗಲೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿಯೇ ನಡೆದುಕೊಂಡಿದ್ದೇನೆ. ನಾನು ಕಠಿಣವಾಗಿ ಕಾರ್ಯನಿರ್ವಹಿಸಿದ್ದೇನೆ, ಆದರೆ ಇದರ ಹಿಂದಿನ ಆತ್ಯಂತಿಕ ಉದ್ದೇಶ ಸಂಸ್ಥೆಯ ಘನತೆಯಾಗಿತ್ತೇ ಹೊರತು ಮತ್ತೇನೂ ಅಲ್ಲ… ನಾನು ಈ ಸಂಸ್ಥೆಯ ಭಾಗವಾಗಿರುವುದಕ್ಕೆ, ಈ ಪಯಣದ ಭಾಗವಾಗಿರುವುದಕ್ಕೆ ಕೃತಜ್ಞಳಾಗಿದ್ದೇನೆ,” ಎಂದಿದ್ದಾರೆ.

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...