Homeಮುಖಪುಟನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ...

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿ ಹೊಂದಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರಿಗೆ ಸಾಂಪ್ರದಾಯಿಕ ವಿದಾಯ ಸಮಾರಂಭವನ್ನು ಆಯೋಜಿಸದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅನ್ನು ಶುಕ್ರವಾರ (ಮೇ.16) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಬಹಿರಂಗವಾಗಿ ಟೀಕಿಸಿದ್ದಾರೆ. “ಈ ನಿರ್ಧಾರವು ವಿಷಾದನೀಯ ಮತ್ತು ಸಂಪ್ರದಾಯವನ್ನು ಕೈ ಬಿಟ್ಟಂತೆ” ಎಂದು ಹೇಳಿದ್ದಾರೆ.

“ಬಾರ್ ಅಸೋಸಿಯೇಷನ್‌ನ ಈ ನಡೆಯನ್ನು ನಾನು ಬಹಿರಂಗವಾಗಿ ಖಂಡಿಸಬೇಕು, ಏಕೆಂದರೆ ನಾನು ಸ್ಪಷ್ಟವಾಗಿ ಮಾತನಾಡುವುದರಲ್ಲಿ ನಂಬಿಕೆ ಇಡುತ್ತೇನೆ… ಅಸೋಸಿಯೇಷನ್ ಇಂತಹ ನಿಲುವನ್ನು ತೆಗೆದುಕೊಳ್ಳಬಾರದಿತ್ತು” ಎಂದು ತ್ರಿವೇದಿ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ನಡೆದ ನ್ಯಾಯಮೂರ್ತಿಗಳಾದ ತ್ರಿವೇದಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ವಿಧ್ಯುಕ್ತ ಪೀಠದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಾರ್ ಅಸೋಸಿಯೇಷನ್ ನಿರ್ಧಾರದ ಹೊರತಾಗಿಯೂ ಅದರ ಅಧ್ಯಕ್ಷ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಉಪಾಧ್ಯಕ್ಷೆ ರಚನಾ ಶ್ರೀವಾಸ್ತವ ಅವರು ವಿಚಾರಣೆಗೆ ಹಾಜರಾಗಿದಕ್ಕಾಗಿ ಸಿಜೆಐ ಗವಾಯಿ ಶ್ಲಾಘಿಸಿದ್ದಾರೆ. “ಕಪಿಲ್ ಸಿಬಲ್ ಮತ್ತು ರಚನಾ ಶ್ರೀವಾಸ್ತವ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರ ಸಂಘದ ನಿರ್ಣಯದ ಹೊರತಾಗಿಯೂ, ಅವರು ಇಲ್ಲಿದ್ದಾರೆ. ಅವರ ಉಪಸ್ಥಿತಿಯನ್ನು ನಾನು ಬಹಿರಂಗವಾಗಿ ಪ್ರಶಂಸಿಸುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ಮುಂದುವರೆದು, “ಕೋರ್ಟ್‌ ಹಾಲ್ ತುಂಬುವ ರೀತಿಯಲ್ಲಿ ಎಲ್ಲರೂ ನೆರೆದಿರುವುದನ್ನು ನೋಡಿದರೆ ಬೇಲಾ ತ್ರಿವೇದಿ ಅವರು ತುಂಬಾ ಉತ್ತಮ ನ್ಯಾಯಮೂರ್ತಿಗಳು ಎನ್ನುವುದು ವಿಧಿತವಾಗುತ್ತದೆ. ವಿಭಿನ್ನ ರೀತಿಯ ನ್ಯಾಯಮೂರ್ತಿಗಳಿರುತ್ತಾರೆ. ಆದರೆ, ಆ ಆಂಶವು ಇಂದು ಸಂಜೆ 4:30ಕ್ಕೆ ಮಾಡಬೇಕಾದ ಕೆಲಸವನ್ನು (ವಿದಾಯ ಸಮಾರಂಭ) ಮಾಡದೆ ಇರಲು ಒಂದು ಕಾರಣವಾಗಬಾರದು” ಎಂದು ಸಿಜೆಐ ಗವಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಮಸೀಹ್ ಅವರು ಕೂಡ ಸಿಜೆಐ ಹೇಳಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಾಂಸ್ಥಿಕ ಸಂಪ್ರದಾಯಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಹೇಳಿದಂತೆ, ಈ ವಿಚಾರದಲ್ಲಿ ನನಗೂ ವಿಷಾದವಿದೆ. ನಾವು ಸಂಪ್ರದಾಯಗಳನ್ನು ಅನುಸರಿಸಬೇಕು ಮತ್ತು ಗೌರವಿಸಬೇಕು. ಒಳ್ಳೆಯ ಸಂಪ್ರದಾಯಗಳು ಯಾವಾಗಲೂ ಮುಂದುವರಿಯಬೇಕು” ಎಂದಿದ್ದಾರೆ.

ತಮ್ಮ ವಿದಾಯ ಹೇಳಿಕೆಯಲ್ಲಿ ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ತ್ರಿವೇದಿ ಅವರ ಜಿಲ್ಲಾ ನ್ಯಾಯಾಲಯಗಳಿಂದ ಸುಪ್ರೀಂ ಕೋರ್ಟ್‌ವರೆಗಿನ ನ್ಯಾಯಾಂಗದ ಪ್ರಯಾಣವನ್ನು ಶ್ಲಾಘಿಸಿದ್ದು, “ಅವರು ಯಾವಾಗಲೂ ನ್ಯಾಯಸಮ್ಮತತೆ, ದೃಢತೆ, ಜಾಗರೂಕತೆ, ಕಠಿಣ ಪರಿಶ್ರಮ, ಭಕ್ತಿ, ಸಮರ್ಪಣೆಗೆ ಹೆಸರು ವಾಸಿಯಾದವರು. ನ್ಯಾಯಾಂಗಕ್ಕೆ ಅಮೂಲ್ಯವಾದ ಆಸ್ತಿ” ಎಂದಿದ್ದಾರೆ.

ತುಂಬಿದ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ಹಿರಿ, ಕಿರಿಯ ನ್ಯಾಯವಾದಿಗಳು ತಮ್ಮ ಬಗ್ಗೆ ಸೂಚಿಸಿದ ಮೆಚ್ಚುಗೆಯಿಂದ ಭಾವುಕರಾದ ನ್ಯಾ. ತ್ರಿವೇದಿಯವರು ವಿಧ್ಯುಕ್ತ ಪೀಠದ ಕೊನೆಯಲ್ಲಿ ಅಭಿನಂದನೆಗಳನ್ನು ಸ್ವೀಕರಿಸಿ ವಿದಾಯದ ಮಾತುಗಳನ್ನು ಆಡಿದ್ದಾರೆ.

“ನನ್ನ ಮೂವತ್ತು ವರ್ಷಗಳ ಕರ್ತವ್ಯದಲ್ಲಿ ನಾನು ಯಾವಾಗಲೂ ನನ್ನ ತೀರ್ಪುಗಳ ಮೂಲಕವೇ ಮಾತನಾಡಿದ್ದೇನೆ. ಇದು ನನ್ನ ಸೇವೆಯ ಕೊನೆಯ ದಿನವಾಗಿದೆ. ನಾನು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ… ನಾನು ಯಾವಾಗಲೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿಯೇ ನಡೆದುಕೊಂಡಿದ್ದೇನೆ. ನಾನು ಕಠಿಣವಾಗಿ ಕಾರ್ಯನಿರ್ವಹಿಸಿದ್ದೇನೆ, ಆದರೆ ಇದರ ಹಿಂದಿನ ಆತ್ಯಂತಿಕ ಉದ್ದೇಶ ಸಂಸ್ಥೆಯ ಘನತೆಯಾಗಿತ್ತೇ ಹೊರತು ಮತ್ತೇನೂ ಅಲ್ಲ… ನಾನು ಈ ಸಂಸ್ಥೆಯ ಭಾಗವಾಗಿರುವುದಕ್ಕೆ, ಈ ಪಯಣದ ಭಾಗವಾಗಿರುವುದಕ್ಕೆ ಕೃತಜ್ಞಳಾಗಿದ್ದೇನೆ,” ಎಂದಿದ್ದಾರೆ.

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...