Homeಮುಖಪುಟನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ...

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿ ಹೊಂದಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರಿಗೆ ಸಾಂಪ್ರದಾಯಿಕ ವಿದಾಯ ಸಮಾರಂಭವನ್ನು ಆಯೋಜಿಸದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅನ್ನು ಶುಕ್ರವಾರ (ಮೇ.16) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಬಹಿರಂಗವಾಗಿ ಟೀಕಿಸಿದ್ದಾರೆ. “ಈ ನಿರ್ಧಾರವು ವಿಷಾದನೀಯ ಮತ್ತು ಸಂಪ್ರದಾಯವನ್ನು ಕೈ ಬಿಟ್ಟಂತೆ” ಎಂದು ಹೇಳಿದ್ದಾರೆ.

“ಬಾರ್ ಅಸೋಸಿಯೇಷನ್‌ನ ಈ ನಡೆಯನ್ನು ನಾನು ಬಹಿರಂಗವಾಗಿ ಖಂಡಿಸಬೇಕು, ಏಕೆಂದರೆ ನಾನು ಸ್ಪಷ್ಟವಾಗಿ ಮಾತನಾಡುವುದರಲ್ಲಿ ನಂಬಿಕೆ ಇಡುತ್ತೇನೆ… ಅಸೋಸಿಯೇಷನ್ ಇಂತಹ ನಿಲುವನ್ನು ತೆಗೆದುಕೊಳ್ಳಬಾರದಿತ್ತು” ಎಂದು ತ್ರಿವೇದಿ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ನಡೆದ ನ್ಯಾಯಮೂರ್ತಿಗಳಾದ ತ್ರಿವೇದಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ವಿಧ್ಯುಕ್ತ ಪೀಠದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಾರ್ ಅಸೋಸಿಯೇಷನ್ ನಿರ್ಧಾರದ ಹೊರತಾಗಿಯೂ ಅದರ ಅಧ್ಯಕ್ಷ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಉಪಾಧ್ಯಕ್ಷೆ ರಚನಾ ಶ್ರೀವಾಸ್ತವ ಅವರು ವಿಚಾರಣೆಗೆ ಹಾಜರಾಗಿದಕ್ಕಾಗಿ ಸಿಜೆಐ ಗವಾಯಿ ಶ್ಲಾಘಿಸಿದ್ದಾರೆ. “ಕಪಿಲ್ ಸಿಬಲ್ ಮತ್ತು ರಚನಾ ಶ್ರೀವಾಸ್ತವ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರ ಸಂಘದ ನಿರ್ಣಯದ ಹೊರತಾಗಿಯೂ, ಅವರು ಇಲ್ಲಿದ್ದಾರೆ. ಅವರ ಉಪಸ್ಥಿತಿಯನ್ನು ನಾನು ಬಹಿರಂಗವಾಗಿ ಪ್ರಶಂಸಿಸುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ಮುಂದುವರೆದು, “ಕೋರ್ಟ್‌ ಹಾಲ್ ತುಂಬುವ ರೀತಿಯಲ್ಲಿ ಎಲ್ಲರೂ ನೆರೆದಿರುವುದನ್ನು ನೋಡಿದರೆ ಬೇಲಾ ತ್ರಿವೇದಿ ಅವರು ತುಂಬಾ ಉತ್ತಮ ನ್ಯಾಯಮೂರ್ತಿಗಳು ಎನ್ನುವುದು ವಿಧಿತವಾಗುತ್ತದೆ. ವಿಭಿನ್ನ ರೀತಿಯ ನ್ಯಾಯಮೂರ್ತಿಗಳಿರುತ್ತಾರೆ. ಆದರೆ, ಆ ಆಂಶವು ಇಂದು ಸಂಜೆ 4:30ಕ್ಕೆ ಮಾಡಬೇಕಾದ ಕೆಲಸವನ್ನು (ವಿದಾಯ ಸಮಾರಂಭ) ಮಾಡದೆ ಇರಲು ಒಂದು ಕಾರಣವಾಗಬಾರದು” ಎಂದು ಸಿಜೆಐ ಗವಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಮಸೀಹ್ ಅವರು ಕೂಡ ಸಿಜೆಐ ಹೇಳಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಾಂಸ್ಥಿಕ ಸಂಪ್ರದಾಯಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಹೇಳಿದಂತೆ, ಈ ವಿಚಾರದಲ್ಲಿ ನನಗೂ ವಿಷಾದವಿದೆ. ನಾವು ಸಂಪ್ರದಾಯಗಳನ್ನು ಅನುಸರಿಸಬೇಕು ಮತ್ತು ಗೌರವಿಸಬೇಕು. ಒಳ್ಳೆಯ ಸಂಪ್ರದಾಯಗಳು ಯಾವಾಗಲೂ ಮುಂದುವರಿಯಬೇಕು” ಎಂದಿದ್ದಾರೆ.

ತಮ್ಮ ವಿದಾಯ ಹೇಳಿಕೆಯಲ್ಲಿ ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ತ್ರಿವೇದಿ ಅವರ ಜಿಲ್ಲಾ ನ್ಯಾಯಾಲಯಗಳಿಂದ ಸುಪ್ರೀಂ ಕೋರ್ಟ್‌ವರೆಗಿನ ನ್ಯಾಯಾಂಗದ ಪ್ರಯಾಣವನ್ನು ಶ್ಲಾಘಿಸಿದ್ದು, “ಅವರು ಯಾವಾಗಲೂ ನ್ಯಾಯಸಮ್ಮತತೆ, ದೃಢತೆ, ಜಾಗರೂಕತೆ, ಕಠಿಣ ಪರಿಶ್ರಮ, ಭಕ್ತಿ, ಸಮರ್ಪಣೆಗೆ ಹೆಸರು ವಾಸಿಯಾದವರು. ನ್ಯಾಯಾಂಗಕ್ಕೆ ಅಮೂಲ್ಯವಾದ ಆಸ್ತಿ” ಎಂದಿದ್ದಾರೆ.

ತುಂಬಿದ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ಹಿರಿ, ಕಿರಿಯ ನ್ಯಾಯವಾದಿಗಳು ತಮ್ಮ ಬಗ್ಗೆ ಸೂಚಿಸಿದ ಮೆಚ್ಚುಗೆಯಿಂದ ಭಾವುಕರಾದ ನ್ಯಾ. ತ್ರಿವೇದಿಯವರು ವಿಧ್ಯುಕ್ತ ಪೀಠದ ಕೊನೆಯಲ್ಲಿ ಅಭಿನಂದನೆಗಳನ್ನು ಸ್ವೀಕರಿಸಿ ವಿದಾಯದ ಮಾತುಗಳನ್ನು ಆಡಿದ್ದಾರೆ.

“ನನ್ನ ಮೂವತ್ತು ವರ್ಷಗಳ ಕರ್ತವ್ಯದಲ್ಲಿ ನಾನು ಯಾವಾಗಲೂ ನನ್ನ ತೀರ್ಪುಗಳ ಮೂಲಕವೇ ಮಾತನಾಡಿದ್ದೇನೆ. ಇದು ನನ್ನ ಸೇವೆಯ ಕೊನೆಯ ದಿನವಾಗಿದೆ. ನಾನು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ… ನಾನು ಯಾವಾಗಲೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿಯೇ ನಡೆದುಕೊಂಡಿದ್ದೇನೆ. ನಾನು ಕಠಿಣವಾಗಿ ಕಾರ್ಯನಿರ್ವಹಿಸಿದ್ದೇನೆ, ಆದರೆ ಇದರ ಹಿಂದಿನ ಆತ್ಯಂತಿಕ ಉದ್ದೇಶ ಸಂಸ್ಥೆಯ ಘನತೆಯಾಗಿತ್ತೇ ಹೊರತು ಮತ್ತೇನೂ ಅಲ್ಲ… ನಾನು ಈ ಸಂಸ್ಥೆಯ ಭಾಗವಾಗಿರುವುದಕ್ಕೆ, ಈ ಪಯಣದ ಭಾಗವಾಗಿರುವುದಕ್ಕೆ ಕೃತಜ್ಞಳಾಗಿದ್ದೇನೆ,” ಎಂದಿದ್ದಾರೆ.

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...