Homeಮುಖಪುಟನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ...

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿ ಹೊಂದಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರಿಗೆ ಸಾಂಪ್ರದಾಯಿಕ ವಿದಾಯ ಸಮಾರಂಭವನ್ನು ಆಯೋಜಿಸದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅನ್ನು ಶುಕ್ರವಾರ (ಮೇ.16) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಬಹಿರಂಗವಾಗಿ ಟೀಕಿಸಿದ್ದಾರೆ. “ಈ ನಿರ್ಧಾರವು ವಿಷಾದನೀಯ ಮತ್ತು ಸಂಪ್ರದಾಯವನ್ನು ಕೈ ಬಿಟ್ಟಂತೆ” ಎಂದು ಹೇಳಿದ್ದಾರೆ.

“ಬಾರ್ ಅಸೋಸಿಯೇಷನ್‌ನ ಈ ನಡೆಯನ್ನು ನಾನು ಬಹಿರಂಗವಾಗಿ ಖಂಡಿಸಬೇಕು, ಏಕೆಂದರೆ ನಾನು ಸ್ಪಷ್ಟವಾಗಿ ಮಾತನಾಡುವುದರಲ್ಲಿ ನಂಬಿಕೆ ಇಡುತ್ತೇನೆ… ಅಸೋಸಿಯೇಷನ್ ಇಂತಹ ನಿಲುವನ್ನು ತೆಗೆದುಕೊಳ್ಳಬಾರದಿತ್ತು” ಎಂದು ತ್ರಿವೇದಿ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ನಡೆದ ನ್ಯಾಯಮೂರ್ತಿಗಳಾದ ತ್ರಿವೇದಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ವಿಧ್ಯುಕ್ತ ಪೀಠದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಾರ್ ಅಸೋಸಿಯೇಷನ್ ನಿರ್ಧಾರದ ಹೊರತಾಗಿಯೂ ಅದರ ಅಧ್ಯಕ್ಷ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಉಪಾಧ್ಯಕ್ಷೆ ರಚನಾ ಶ್ರೀವಾಸ್ತವ ಅವರು ವಿಚಾರಣೆಗೆ ಹಾಜರಾಗಿದಕ್ಕಾಗಿ ಸಿಜೆಐ ಗವಾಯಿ ಶ್ಲಾಘಿಸಿದ್ದಾರೆ. “ಕಪಿಲ್ ಸಿಬಲ್ ಮತ್ತು ರಚನಾ ಶ್ರೀವಾಸ್ತವ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರ ಸಂಘದ ನಿರ್ಣಯದ ಹೊರತಾಗಿಯೂ, ಅವರು ಇಲ್ಲಿದ್ದಾರೆ. ಅವರ ಉಪಸ್ಥಿತಿಯನ್ನು ನಾನು ಬಹಿರಂಗವಾಗಿ ಪ್ರಶಂಸಿಸುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ಮುಂದುವರೆದು, “ಕೋರ್ಟ್‌ ಹಾಲ್ ತುಂಬುವ ರೀತಿಯಲ್ಲಿ ಎಲ್ಲರೂ ನೆರೆದಿರುವುದನ್ನು ನೋಡಿದರೆ ಬೇಲಾ ತ್ರಿವೇದಿ ಅವರು ತುಂಬಾ ಉತ್ತಮ ನ್ಯಾಯಮೂರ್ತಿಗಳು ಎನ್ನುವುದು ವಿಧಿತವಾಗುತ್ತದೆ. ವಿಭಿನ್ನ ರೀತಿಯ ನ್ಯಾಯಮೂರ್ತಿಗಳಿರುತ್ತಾರೆ. ಆದರೆ, ಆ ಆಂಶವು ಇಂದು ಸಂಜೆ 4:30ಕ್ಕೆ ಮಾಡಬೇಕಾದ ಕೆಲಸವನ್ನು (ವಿದಾಯ ಸಮಾರಂಭ) ಮಾಡದೆ ಇರಲು ಒಂದು ಕಾರಣವಾಗಬಾರದು” ಎಂದು ಸಿಜೆಐ ಗವಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಮಸೀಹ್ ಅವರು ಕೂಡ ಸಿಜೆಐ ಹೇಳಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಾಂಸ್ಥಿಕ ಸಂಪ್ರದಾಯಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಹೇಳಿದಂತೆ, ಈ ವಿಚಾರದಲ್ಲಿ ನನಗೂ ವಿಷಾದವಿದೆ. ನಾವು ಸಂಪ್ರದಾಯಗಳನ್ನು ಅನುಸರಿಸಬೇಕು ಮತ್ತು ಗೌರವಿಸಬೇಕು. ಒಳ್ಳೆಯ ಸಂಪ್ರದಾಯಗಳು ಯಾವಾಗಲೂ ಮುಂದುವರಿಯಬೇಕು” ಎಂದಿದ್ದಾರೆ.

ತಮ್ಮ ವಿದಾಯ ಹೇಳಿಕೆಯಲ್ಲಿ ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ತ್ರಿವೇದಿ ಅವರ ಜಿಲ್ಲಾ ನ್ಯಾಯಾಲಯಗಳಿಂದ ಸುಪ್ರೀಂ ಕೋರ್ಟ್‌ವರೆಗಿನ ನ್ಯಾಯಾಂಗದ ಪ್ರಯಾಣವನ್ನು ಶ್ಲಾಘಿಸಿದ್ದು, “ಅವರು ಯಾವಾಗಲೂ ನ್ಯಾಯಸಮ್ಮತತೆ, ದೃಢತೆ, ಜಾಗರೂಕತೆ, ಕಠಿಣ ಪರಿಶ್ರಮ, ಭಕ್ತಿ, ಸಮರ್ಪಣೆಗೆ ಹೆಸರು ವಾಸಿಯಾದವರು. ನ್ಯಾಯಾಂಗಕ್ಕೆ ಅಮೂಲ್ಯವಾದ ಆಸ್ತಿ” ಎಂದಿದ್ದಾರೆ.

ತುಂಬಿದ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ಹಿರಿ, ಕಿರಿಯ ನ್ಯಾಯವಾದಿಗಳು ತಮ್ಮ ಬಗ್ಗೆ ಸೂಚಿಸಿದ ಮೆಚ್ಚುಗೆಯಿಂದ ಭಾವುಕರಾದ ನ್ಯಾ. ತ್ರಿವೇದಿಯವರು ವಿಧ್ಯುಕ್ತ ಪೀಠದ ಕೊನೆಯಲ್ಲಿ ಅಭಿನಂದನೆಗಳನ್ನು ಸ್ವೀಕರಿಸಿ ವಿದಾಯದ ಮಾತುಗಳನ್ನು ಆಡಿದ್ದಾರೆ.

“ನನ್ನ ಮೂವತ್ತು ವರ್ಷಗಳ ಕರ್ತವ್ಯದಲ್ಲಿ ನಾನು ಯಾವಾಗಲೂ ನನ್ನ ತೀರ್ಪುಗಳ ಮೂಲಕವೇ ಮಾತನಾಡಿದ್ದೇನೆ. ಇದು ನನ್ನ ಸೇವೆಯ ಕೊನೆಯ ದಿನವಾಗಿದೆ. ನಾನು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ… ನಾನು ಯಾವಾಗಲೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿಯೇ ನಡೆದುಕೊಂಡಿದ್ದೇನೆ. ನಾನು ಕಠಿಣವಾಗಿ ಕಾರ್ಯನಿರ್ವಹಿಸಿದ್ದೇನೆ, ಆದರೆ ಇದರ ಹಿಂದಿನ ಆತ್ಯಂತಿಕ ಉದ್ದೇಶ ಸಂಸ್ಥೆಯ ಘನತೆಯಾಗಿತ್ತೇ ಹೊರತು ಮತ್ತೇನೂ ಅಲ್ಲ… ನಾನು ಈ ಸಂಸ್ಥೆಯ ಭಾಗವಾಗಿರುವುದಕ್ಕೆ, ಈ ಪಯಣದ ಭಾಗವಾಗಿರುವುದಕ್ಕೆ ಕೃತಜ್ಞಳಾಗಿದ್ದೇನೆ,” ಎಂದಿದ್ದಾರೆ.

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...