Homeಮುಖಪುಟನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ...

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿ ಹೊಂದಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರಿಗೆ ಸಾಂಪ್ರದಾಯಿಕ ವಿದಾಯ ಸಮಾರಂಭವನ್ನು ಆಯೋಜಿಸದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅನ್ನು ಶುಕ್ರವಾರ (ಮೇ.16) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಬಹಿರಂಗವಾಗಿ ಟೀಕಿಸಿದ್ದಾರೆ. “ಈ ನಿರ್ಧಾರವು ವಿಷಾದನೀಯ ಮತ್ತು ಸಂಪ್ರದಾಯವನ್ನು ಕೈ ಬಿಟ್ಟಂತೆ” ಎಂದು ಹೇಳಿದ್ದಾರೆ.

“ಬಾರ್ ಅಸೋಸಿಯೇಷನ್‌ನ ಈ ನಡೆಯನ್ನು ನಾನು ಬಹಿರಂಗವಾಗಿ ಖಂಡಿಸಬೇಕು, ಏಕೆಂದರೆ ನಾನು ಸ್ಪಷ್ಟವಾಗಿ ಮಾತನಾಡುವುದರಲ್ಲಿ ನಂಬಿಕೆ ಇಡುತ್ತೇನೆ… ಅಸೋಸಿಯೇಷನ್ ಇಂತಹ ನಿಲುವನ್ನು ತೆಗೆದುಕೊಳ್ಳಬಾರದಿತ್ತು” ಎಂದು ತ್ರಿವೇದಿ ಅವರ ಕೊನೆಯ ಕೆಲಸದ ದಿನದಂದು ಅವರನ್ನು ಗೌರವಿಸಲು ನಡೆದ ನ್ಯಾಯಮೂರ್ತಿಗಳಾದ ತ್ರಿವೇದಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ವಿಧ್ಯುಕ್ತ ಪೀಠದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಬಾರ್ ಅಸೋಸಿಯೇಷನ್ ನಿರ್ಧಾರದ ಹೊರತಾಗಿಯೂ ಅದರ ಅಧ್ಯಕ್ಷ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಉಪಾಧ್ಯಕ್ಷೆ ರಚನಾ ಶ್ರೀವಾಸ್ತವ ಅವರು ವಿಚಾರಣೆಗೆ ಹಾಜರಾಗಿದಕ್ಕಾಗಿ ಸಿಜೆಐ ಗವಾಯಿ ಶ್ಲಾಘಿಸಿದ್ದಾರೆ. “ಕಪಿಲ್ ಸಿಬಲ್ ಮತ್ತು ರಚನಾ ಶ್ರೀವಾಸ್ತವ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಅವರ ಸಂಘದ ನಿರ್ಣಯದ ಹೊರತಾಗಿಯೂ, ಅವರು ಇಲ್ಲಿದ್ದಾರೆ. ಅವರ ಉಪಸ್ಥಿತಿಯನ್ನು ನಾನು ಬಹಿರಂಗವಾಗಿ ಪ್ರಶಂಸಿಸುತ್ತೇನೆ” ಎಂದು ಸಿಜೆಐ ಹೇಳಿದ್ದಾರೆ.

ಮುಂದುವರೆದು, “ಕೋರ್ಟ್‌ ಹಾಲ್ ತುಂಬುವ ರೀತಿಯಲ್ಲಿ ಎಲ್ಲರೂ ನೆರೆದಿರುವುದನ್ನು ನೋಡಿದರೆ ಬೇಲಾ ತ್ರಿವೇದಿ ಅವರು ತುಂಬಾ ಉತ್ತಮ ನ್ಯಾಯಮೂರ್ತಿಗಳು ಎನ್ನುವುದು ವಿಧಿತವಾಗುತ್ತದೆ. ವಿಭಿನ್ನ ರೀತಿಯ ನ್ಯಾಯಮೂರ್ತಿಗಳಿರುತ್ತಾರೆ. ಆದರೆ, ಆ ಆಂಶವು ಇಂದು ಸಂಜೆ 4:30ಕ್ಕೆ ಮಾಡಬೇಕಾದ ಕೆಲಸವನ್ನು (ವಿದಾಯ ಸಮಾರಂಭ) ಮಾಡದೆ ಇರಲು ಒಂದು ಕಾರಣವಾಗಬಾರದು” ಎಂದು ಸಿಜೆಐ ಗವಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಮಸೀಹ್ ಅವರು ಕೂಡ ಸಿಜೆಐ ಹೇಳಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಾಂಸ್ಥಿಕ ಸಂಪ್ರದಾಯಗಳನ್ನು ಸಂರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಹೇಳಿದಂತೆ, ಈ ವಿಚಾರದಲ್ಲಿ ನನಗೂ ವಿಷಾದವಿದೆ. ನಾವು ಸಂಪ್ರದಾಯಗಳನ್ನು ಅನುಸರಿಸಬೇಕು ಮತ್ತು ಗೌರವಿಸಬೇಕು. ಒಳ್ಳೆಯ ಸಂಪ್ರದಾಯಗಳು ಯಾವಾಗಲೂ ಮುಂದುವರಿಯಬೇಕು” ಎಂದಿದ್ದಾರೆ.

ತಮ್ಮ ವಿದಾಯ ಹೇಳಿಕೆಯಲ್ಲಿ ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ತ್ರಿವೇದಿ ಅವರ ಜಿಲ್ಲಾ ನ್ಯಾಯಾಲಯಗಳಿಂದ ಸುಪ್ರೀಂ ಕೋರ್ಟ್‌ವರೆಗಿನ ನ್ಯಾಯಾಂಗದ ಪ್ರಯಾಣವನ್ನು ಶ್ಲಾಘಿಸಿದ್ದು, “ಅವರು ಯಾವಾಗಲೂ ನ್ಯಾಯಸಮ್ಮತತೆ, ದೃಢತೆ, ಜಾಗರೂಕತೆ, ಕಠಿಣ ಪರಿಶ್ರಮ, ಭಕ್ತಿ, ಸಮರ್ಪಣೆಗೆ ಹೆಸರು ವಾಸಿಯಾದವರು. ನ್ಯಾಯಾಂಗಕ್ಕೆ ಅಮೂಲ್ಯವಾದ ಆಸ್ತಿ” ಎಂದಿದ್ದಾರೆ.

ತುಂಬಿದ ಕೋರ್ಟ್‌ ಹಾಲ್‌ನಲ್ಲಿ ನೆರೆದಿದ್ದ ಹಿರಿ, ಕಿರಿಯ ನ್ಯಾಯವಾದಿಗಳು ತಮ್ಮ ಬಗ್ಗೆ ಸೂಚಿಸಿದ ಮೆಚ್ಚುಗೆಯಿಂದ ಭಾವುಕರಾದ ನ್ಯಾ. ತ್ರಿವೇದಿಯವರು ವಿಧ್ಯುಕ್ತ ಪೀಠದ ಕೊನೆಯಲ್ಲಿ ಅಭಿನಂದನೆಗಳನ್ನು ಸ್ವೀಕರಿಸಿ ವಿದಾಯದ ಮಾತುಗಳನ್ನು ಆಡಿದ್ದಾರೆ.

“ನನ್ನ ಮೂವತ್ತು ವರ್ಷಗಳ ಕರ್ತವ್ಯದಲ್ಲಿ ನಾನು ಯಾವಾಗಲೂ ನನ್ನ ತೀರ್ಪುಗಳ ಮೂಲಕವೇ ಮಾತನಾಡಿದ್ದೇನೆ. ಇದು ನನ್ನ ಸೇವೆಯ ಕೊನೆಯ ದಿನವಾಗಿದೆ. ನಾನು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ… ನಾನು ಯಾವಾಗಲೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿಯೇ ನಡೆದುಕೊಂಡಿದ್ದೇನೆ. ನಾನು ಕಠಿಣವಾಗಿ ಕಾರ್ಯನಿರ್ವಹಿಸಿದ್ದೇನೆ, ಆದರೆ ಇದರ ಹಿಂದಿನ ಆತ್ಯಂತಿಕ ಉದ್ದೇಶ ಸಂಸ್ಥೆಯ ಘನತೆಯಾಗಿತ್ತೇ ಹೊರತು ಮತ್ತೇನೂ ಅಲ್ಲ… ನಾನು ಈ ಸಂಸ್ಥೆಯ ಭಾಗವಾಗಿರುವುದಕ್ಕೆ, ಈ ಪಯಣದ ಭಾಗವಾಗಿರುವುದಕ್ಕೆ ಕೃತಜ್ಞಳಾಗಿದ್ದೇನೆ,” ಎಂದಿದ್ದಾರೆ.

ಕಾಂಚ ಗಚಿಬೌಲಿ ಅರಣ್ಯ ನಾಶ ಪ್ರಕರಣ | ‘ಮತ್ತೆ ಅರಣ್ಯ ಬೆಳೆಸಿ, ಇಲ್ಲ ಜೈಲಿಗೆ ಹೋಗಲು ಸಿದ್ದರಾಗಿ’; ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...