Homeಅಂತರಾಷ್ಟ್ರೀಯಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಗುಂಪು ಘರ್ಷಣೆ: 100ಕ್ಕೂ ಹೆಚ್ಚು ಜನರು ಸಾವು

ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಗುಂಪು ಘರ್ಷಣೆ: 100ಕ್ಕೂ ಹೆಚ್ಚು ಜನರು ಸಾವು

- Advertisement -
- Advertisement -

ಕೊನಕ್ರಿ, ಗಿನಿಯಾ: ಪಶ್ಚಿಮ ಆಫ್ರಿಕಾದ  ಗಿನಿಯಾದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳು ನಡುವೆ  ಗುಂಪು ಘರ್ಷಣೆ ನಡೆದ ಪರಿಣಾಮ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಭಾನುವಾರ  ವರದಿಯಾಗಿದೆ.

ಗಿನಿಯಾದ ಎರಡನೇ ಅತಿದೊಡ್ಡ ನಗರವಾದ ಎನ್’ಜೆರೆಕೋರ್‌ನಲ್ಲಿ ನಡೆದ ಫುಟ್‌ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವಿನ ಘರ್ಷಣೆಯಲ್ಲಿ ಡಜನ್ ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಅನಾಮಧೇಯ ವೈದ್ಯರೊಬ್ಬರು ಮಾಧ್ಯಮವೊಂದಕ್ಕೆ ಮಾತನಾಡಿ, ಆಸ್ಪತ್ರೆಯಲ್ಲಿ ಕಣ್ಣು ಹಾಯಿಸಿದಷ್ಟು ದೂರದಲ್ಲಿ ಶವಗಳ ಸಾಲುಗಳಿವೆ. ಇತರ ದೇಹಗಳು ಹಜಾರದಲ್ಲಿ ನೆಲದ ಮೇಲೆ ಬಿದ್ದಿವೆ, ಶವಾಗಾರ ತುಂಬಿದೆ. ಸುಮಾರು 100ಕ್ಕೂ ಮಂದಿ ಸತ್ತಿದ್ದಾರೆ  ಎಂದು ಹೇಳಿದ್ದಾರೆ.

ಇದೆಲ್ಲವೂ ರೆಫರಿಯವರ ವಿವಾದಾತ್ಮಕ ನಿರ್ಧಾರದಿಂದ ಪ್ರಾರಂಭವಾಯಿತು. ನಂತರ ಅಭಿಮಾನಿಗಳು ಕ್ರೀಡಾಂಗಣವನ್ನು ಆಕ್ರಮಿಸಿದರು  ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವೀಡಿಯೋಗಳನ್ನು ತಕ್ಷಣವೇ ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ. ಪಂದ್ಯದ ಹೊರಗೆ ಬೀದಿಯಲ್ಲಿ ಅವ್ಯವಸ್ಥೆಯ ದೃಶ್ಯಗಳು ಮತ್ತು ಹಲವಾರು ಮೃತ ದೇಹಗಳು ನೆಲದ ಮೇಲೆ ಬಿದ್ದಿರುವುದು ಕಾಣುತ್ತಿವೆ.

ಉದ್ರಿಕ್ತ ಫುಟ್ಬಾಲ್  ಪ್ರೇಕ್ಷಕರು ಎನ್ ಜೆರೆಕೋರ್‌ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದರೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

2021ರ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ಅವರ ಗೌರವಾರ್ಥವಾಗಿ ಆಯೋಜಿಸಲಾದ ಪಂದ್ಯಾವಳಿ ಇದಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಇಂತಹ ಪಂದ್ಯಾವಳಿಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿವೆ. ಡೌಂಬೌಯಾ ಮುಂದಿನ ವರ್ಷ ನಡೆಯಲಿರುವ ನಿರೀಕ್ಷಿತ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಮೈತ್ರಿಗಳನ್ನು ರೂಪುಗೊಳ್ಳಿಸುವುದಕ್ಕೆ ಈ ಪಂದ್ಯಾವಳಿಯನ್ನು ಅಯೋಜಿಸಲಾಗಿತ್ತು ಎನ್ನಲಾಗಿದೆ.

2020 ರ ಸೆಪ್ಟೆಂಬರ್‌ನಲ್ಲಿ ಅಧ್ಯಕ್ಷ ಆಲ್ಫಾ ಕಾಂಡೆ ಅವರನ್ನು ಪದಚ್ಯುತಗೊಳಿಸುವ ಮೂಲಕ ಡೌಂಬೌಯಾ ಗಿನಿಯಾದ ಅಧಿಕಾರವನ್ನು ವಶಪಡಿಸಿಕೊಂಡರು. ಅಂತರರಾಷ್ಟ್ರೀಯ ಒತ್ತಡದ ಅಡಿಯಲ್ಲಿ, ಅವರು 2024 ರ ಅಂತ್ಯದ ವೇಳೆಗೆ ಅಧಿಕಾರವನ್ನು ನಾಗರಿಕ ಸರ್ಕಾರಕ್ಕೆ ಮರಳಿ ಹಸ್ತಾಂತರಿಸುವುದಾಗಿ ವಾಗ್ದಾನ ಮಾಡಿದರು. ಆದರೆ ನಂತರ ಅವರು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಡೌಂಬೌಯಾ ಅವರು ಭಿನ್ನಾಭಿಪ್ರಾಯ ವ್ಯಕ್ತಪಡಿಸುವವರ ಮೇಲೆ ಇಂದಿಗೂ ದಮನ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ ಅನೇಕ ವಿರೋಧ ಪಕ್ಷದ ನಾಯಕರನ್ನು ಬಂಧಿಸಿ, ಅವರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗಿದೆ ಅಥವಾ ಗಡಿಪಾರು ಮಾಡಲು ಒತ್ತಾಯಿಸಲಾಗಿದೆ.

ಡೌಂಬೌಯಾ ಅವರ ಬೆಂಬಲಿಗರು ಮುಂದಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಅವರ ಉಮೇದುವಾರಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.ಈ ಚುನಾವಣೆಯನ್ನು 2025ರಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಸಾಕಷ್ಟು ನೈಸರ್ಗಿಕ ಸಂಪನ್ಮೂಲಗಳ ಹೊರತಾಗಿಯೂ, ಗಿನಿಯಾ ಬಡ ರಾಷ್ಟ್ರವಾಗಿ ಉಳಿದಿದೆ. ಇದು ದಶಕಗಳಿಂದ ನಿರಂಕುಶ ಸರ್ಕಾರಗಳಿಂದ ಆಳಲ್ಪಟ್ಟಿದೆ.

ಮಾಲಿ, ಬುರ್ಕಿನಾ ಫಾಸೊ ಮತ್ತು ನೈಜರ್‌ನಲ್ಲಿ ಮಿಲಿಟರಿ ಸಹಾಯದಿಂದ 2020 ರಿಂದ ಪಶ್ಚಿಮ ಆಫ್ರಿಕಾದ ಅಧಿಕಾರವನ್ನು ವಶಪಡಿಸಿಕೊಂಡ ಹಲವಾರು ಅಧಿಕಾರಿಗಳಲ್ಲಿ ಡೌಂಬೌಯಾ ಒಬ್ಬರಾಗಿದ್ದಾರೆ.

ಗಿನಿಯಾದ ಆಗ್ನೇಯದ ಎನ್’ಜೆರೆಕೋರ್‌ ನಲ್ಲಿ ನಡೆದ ಈ ಘರ್ಷಣೆಯ ಪ್ರದೇಶವು ಸುಮಾರು 200,000 ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂ ಓದಿ…ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...