Homeಕರ್ನಾಟಕಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

- Advertisement -
- Advertisement -

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ ಘಟನೆ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿಯ ಹುಸೇನ್ ನಗರದ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ (28) ಎಂದು ಗುರುತಿಸಲಾಗಿದೆ.

ಗಲಾಟೆ ಪ್ರಕರಣ ಸಂಬಂಧ ಬಳ್ಳಾರಿ ನಗರದ ಬ್ರೂಸ್ ಪೇಟೆ ಠಾಣೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ 11 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚಾನಳ್ ಶೇಖರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರಿಂಗ್ ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

ಜ.3ರಂದು ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ಅವರ ಮನೆಯ ಮುಂಭಾಗ ಬ್ಯಾನರ್ ಅಳವಡಿಸಲು ಮುಂದಾಗಿದ್ದರು. ಇದಕ್ಕೆ ಜನಾರ್ದನ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬ್ಯಾನರ್ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಎರಡು ತಂಡಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅವಂಬಾವಿ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ವಹಿಸಲಾಗಿದೆ.

ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜನಾರ್ದನ ರೆಡ್ಡಿ, “ಭರತ್ ರೆಡ್ಡಿ ಮತ್ತು ಅವರ ಅಪ್ಪ ಕ್ರಿಮಿನಲ್‌ಗಳು. ಅವರಿಗೆ ಜನಪ್ರಿಯತೆ ಕಡಿಮೆಯಾಗಿದೆ, ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಸೋಲುವ ಭೀತಿ ಶುರುವಾಗಿದೆ. ನಾವು ವಾಲ್ಮೀಕಿ ಪುತ್ಥಳಿ ಸ್ಥಾಪಿಸಿದ ಸ್ಥಳದಲ್ಲೇ ಮತ್ತೆ ಪುತ್ಥಳಿ ಸ್ಥಾಪನೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ಮನೆಗೆ ಅಡ್ಡಲಾಗಿದೆ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ನಾನು ಗಂಗಾವತಿಯಲ್ಲಿದ್ದೆ. ಮನೆ ಮುಂದೆ ಗನ್ ಹಿಡಿದುಕೊಂಡು ಒಂದಷ್ಟು ಜನರು ಗುಂಪು ಸೇರಿದ್ದಾರೆ ಎಂಬ ವಿಷಯ ತಿಳಿದು, ನಾನು ಶ್ರೀರಾಮುಲು ಅವರಿಗೆ ಕರೆ ಮಾಡಿದೆ. ಅವರು ಸ್ಥಳಕ್ಕೆ ಬಂದರು. ನಂತರ ನಾನು ಗಂಗಾವತಿಯಿಂದ ಬಂದೆ. ನಾನು ಬಂದ ತಕ್ಷಣ ಕಲ್ಲು ತೂರಾಟ ಮಾಡಿದರು. ನನ್ನ ಮೇಲೆ ಗುಂಡು ಹಾರಿಸಲು ಯತ್ನಿಸಿದರು. ಅದು ತಪ್ಪಿ ವಾಹನದ ಮೇಲೆ ಬಿತ್ತು, ಅವರು ನನ್ನ ಕೊಲೆಗೆ ಸಂಚು ರೂಪಿಸಿದ್ದರು” ಎಂದು ಆರೋಪಿಸಿದ್ದಾರೆ.

“ಬ್ಯಾನರ್ ನೆಪ ಮಾತ್ರ. ಅವರು ಕ್ರಿಮಿನಲ್ ಸಂಚು ರೂಪಿಸಿದ್ದರು. ನನ್ನ ಮನೆಯ ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಮೊದಲೇ ಕಲ್ಲು, ಬಾಟಲಿ ಸಂಗ್ರಹಿಸಿಟ್ಟಿದ್ದರು. ಸಂಜೆ ಆಗುವಾಗ ದಾಳಿ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದಿದ್ದಾರೆ.

ಶಾಸಕ ಭರತ್ ರೆಡ್ಡಿ ಮಾತನಾಡಿ, “ಜನಾರ್ದನ ರೆಡ್ಡಿಗೆ ಬಳ್ಳಾರಿ ಅಭಿವೃದ್ದಿ ಆಗಬೇಕು ಎನ್ನುವ ಉದ್ದೇಶ ಇಲ್ಲ. ಅವರು ತನ್ನ ಸ್ವಂತ ಬೆಳವಣಿಗೆ ಮಾಡಿಕೊಳ್ಳುತ್ತಿದ್ದಾರೆ. ನಾನು ಶಾಂತವಾಗಿ ಇದ್ದೇನೆ, ನಾನು ಮಾತನಾಡಿದರೆ ಬಳ್ಳಾರಿ ಭಸ್ಮ ಆಗುತ್ತೆ. ನಾನು ಮನಸ್ಸು ಮಾಡಿದ್ದರೆ ಅಂದುಕೊಂಡಿದ್ದನ್ನು 5 ನಿಮಿಷದಲ್ಲಿ ಮಾಡಿ ಮುಗಿಸುತ್ತಿದ್ದೆ. ಆದರೆ, ನಾನು ಓದಿದವನು, ಲಂಡನ್‌ನಲ್ಲಿ ಓದಿ ಬಂದವನು. ನಾನು ಹುಟ್ಟು ಶ್ರೀಮಂತ, ಜನಾರ್ದನ ರೆಡ್ಡಿ ಜನರನ್ನು ಲೂಟಿ ಮಾಡಿ ಶ್ರೀಮಂತರಾದವರು” ಎಂದಿದ್ದಾರೆ.

“ನಾನು ಶಾಸಕನಾದ ಬಳಿಕ ಬಳ್ಳಾರಿಯಲ್ಲಿ ಯಾವುದೇ ಅಹಿತರ ಘಟನೆ ಅಗಿಲ್ಲ. ಜನಾರ್ದನ ಕಡೆಯವರು ಈಗ ಮತ್ತೆ ಶುರು ಮಾಡಿಕೊಂಡಿದ್ದಾರೆ. ನಮ್ಮ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹಾಗಾಗಿ, ಜನಾರ್ದನ ರೆಡ್ಡಿ ಮತ್ತು ಅವರ ಬೆಂಬಲಿಗರ ವಿರುದ್ದ ದಲಿತ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು” ಎಂದು ಆಗಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...