Homeಕರ್ನಾಟಕಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

- Advertisement -
- Advertisement -

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ ಘಟನೆ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿಯ ಹುಸೇನ್ ನಗರದ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ (28) ಎಂದು ಗುರುತಿಸಲಾಗಿದೆ.

ಗಲಾಟೆ ಪ್ರಕರಣ ಸಂಬಂಧ ಬಳ್ಳಾರಿ ನಗರದ ಬ್ರೂಸ್ ಪೇಟೆ ಠಾಣೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ 11 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚಾನಳ್ ಶೇಖರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರಿಂಗ್ ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

ಜ.3ರಂದು ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ಅವರ ಮನೆಯ ಮುಂಭಾಗ ಬ್ಯಾನರ್ ಅಳವಡಿಸಲು ಮುಂದಾಗಿದ್ದರು. ಇದಕ್ಕೆ ಜನಾರ್ದನ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬ್ಯಾನರ್ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಎರಡು ತಂಡಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅವಂಬಾವಿ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ವಹಿಸಲಾಗಿದೆ.

ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜನಾರ್ದನ ರೆಡ್ಡಿ, “ಭರತ್ ರೆಡ್ಡಿ ಮತ್ತು ಅವರ ಅಪ್ಪ ಕ್ರಿಮಿನಲ್‌ಗಳು. ಅವರಿಗೆ ಜನಪ್ರಿಯತೆ ಕಡಿಮೆಯಾಗಿದೆ, ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಸೋಲುವ ಭೀತಿ ಶುರುವಾಗಿದೆ. ನಾವು ವಾಲ್ಮೀಕಿ ಪುತ್ಥಳಿ ಸ್ಥಾಪಿಸಿದ ಸ್ಥಳದಲ್ಲೇ ಮತ್ತೆ ಪುತ್ಥಳಿ ಸ್ಥಾಪನೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ಮನೆಗೆ ಅಡ್ಡಲಾಗಿದೆ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ನಾನು ಗಂಗಾವತಿಯಲ್ಲಿದ್ದೆ. ಮನೆ ಮುಂದೆ ಗನ್ ಹಿಡಿದುಕೊಂಡು ಒಂದಷ್ಟು ಜನರು ಗುಂಪು ಸೇರಿದ್ದಾರೆ ಎಂಬ ವಿಷಯ ತಿಳಿದು, ನಾನು ಶ್ರೀರಾಮುಲು ಅವರಿಗೆ ಕರೆ ಮಾಡಿದೆ. ಅವರು ಸ್ಥಳಕ್ಕೆ ಬಂದರು. ನಂತರ ನಾನು ಗಂಗಾವತಿಯಿಂದ ಬಂದೆ. ನಾನು ಬಂದ ತಕ್ಷಣ ಕಲ್ಲು ತೂರಾಟ ಮಾಡಿದರು. ನನ್ನ ಮೇಲೆ ಗುಂಡು ಹಾರಿಸಲು ಯತ್ನಿಸಿದರು. ಅದು ತಪ್ಪಿ ವಾಹನದ ಮೇಲೆ ಬಿತ್ತು, ಅವರು ನನ್ನ ಕೊಲೆಗೆ ಸಂಚು ರೂಪಿಸಿದ್ದರು” ಎಂದು ಆರೋಪಿಸಿದ್ದಾರೆ.

“ಬ್ಯಾನರ್ ನೆಪ ಮಾತ್ರ. ಅವರು ಕ್ರಿಮಿನಲ್ ಸಂಚು ರೂಪಿಸಿದ್ದರು. ನನ್ನ ಮನೆಯ ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಮೊದಲೇ ಕಲ್ಲು, ಬಾಟಲಿ ಸಂಗ್ರಹಿಸಿಟ್ಟಿದ್ದರು. ಸಂಜೆ ಆಗುವಾಗ ದಾಳಿ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದಿದ್ದಾರೆ.

ಶಾಸಕ ಭರತ್ ರೆಡ್ಡಿ ಮಾತನಾಡಿ, “ಜನಾರ್ದನ ರೆಡ್ಡಿಗೆ ಬಳ್ಳಾರಿ ಅಭಿವೃದ್ದಿ ಆಗಬೇಕು ಎನ್ನುವ ಉದ್ದೇಶ ಇಲ್ಲ. ಅವರು ತನ್ನ ಸ್ವಂತ ಬೆಳವಣಿಗೆ ಮಾಡಿಕೊಳ್ಳುತ್ತಿದ್ದಾರೆ. ನಾನು ಶಾಂತವಾಗಿ ಇದ್ದೇನೆ, ನಾನು ಮಾತನಾಡಿದರೆ ಬಳ್ಳಾರಿ ಭಸ್ಮ ಆಗುತ್ತೆ. ನಾನು ಮನಸ್ಸು ಮಾಡಿದ್ದರೆ ಅಂದುಕೊಂಡಿದ್ದನ್ನು 5 ನಿಮಿಷದಲ್ಲಿ ಮಾಡಿ ಮುಗಿಸುತ್ತಿದ್ದೆ. ಆದರೆ, ನಾನು ಓದಿದವನು, ಲಂಡನ್‌ನಲ್ಲಿ ಓದಿ ಬಂದವನು. ನಾನು ಹುಟ್ಟು ಶ್ರೀಮಂತ, ಜನಾರ್ದನ ರೆಡ್ಡಿ ಜನರನ್ನು ಲೂಟಿ ಮಾಡಿ ಶ್ರೀಮಂತರಾದವರು” ಎಂದಿದ್ದಾರೆ.

“ನಾನು ಶಾಸಕನಾದ ಬಳಿಕ ಬಳ್ಳಾರಿಯಲ್ಲಿ ಯಾವುದೇ ಅಹಿತರ ಘಟನೆ ಅಗಿಲ್ಲ. ಜನಾರ್ದನ ಕಡೆಯವರು ಈಗ ಮತ್ತೆ ಶುರು ಮಾಡಿಕೊಂಡಿದ್ದಾರೆ. ನಮ್ಮ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹಾಗಾಗಿ, ಜನಾರ್ದನ ರೆಡ್ಡಿ ಮತ್ತು ಅವರ ಬೆಂಬಲಿಗರ ವಿರುದ್ದ ದಲಿತ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು” ಎಂದು ಆಗಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...