Homeಕರ್ನಾಟಕಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

- Advertisement -
- Advertisement -

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ ಘಟನೆ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿಯ ಹುಸೇನ್ ನಗರದ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ (28) ಎಂದು ಗುರುತಿಸಲಾಗಿದೆ.

ಗಲಾಟೆ ಪ್ರಕರಣ ಸಂಬಂಧ ಬಳ್ಳಾರಿ ನಗರದ ಬ್ರೂಸ್ ಪೇಟೆ ಠಾಣೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ 11 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚಾನಳ್ ಶೇಖರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರಿಂಗ್ ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ.

ಜ.3ರಂದು ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ಅವರ ಮನೆಯ ಮುಂಭಾಗ ಬ್ಯಾನರ್ ಅಳವಡಿಸಲು ಮುಂದಾಗಿದ್ದರು. ಇದಕ್ಕೆ ಜನಾರ್ದನ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬ್ಯಾನರ್ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಎರಡು ತಂಡಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅವಂಬಾವಿ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಭದ್ರತೆ ವಹಿಸಲಾಗಿದೆ.

ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜನಾರ್ದನ ರೆಡ್ಡಿ, “ಭರತ್ ರೆಡ್ಡಿ ಮತ್ತು ಅವರ ಅಪ್ಪ ಕ್ರಿಮಿನಲ್‌ಗಳು. ಅವರಿಗೆ ಜನಪ್ರಿಯತೆ ಕಡಿಮೆಯಾಗಿದೆ, ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಸೋಲುವ ಭೀತಿ ಶುರುವಾಗಿದೆ. ನಾವು ವಾಲ್ಮೀಕಿ ಪುತ್ಥಳಿ ಸ್ಥಾಪಿಸಿದ ಸ್ಥಳದಲ್ಲೇ ಮತ್ತೆ ಪುತ್ಥಳಿ ಸ್ಥಾಪನೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“ನಮ್ಮ ಮನೆಗೆ ಅಡ್ಡಲಾಗಿದೆ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ನಾನು ಗಂಗಾವತಿಯಲ್ಲಿದ್ದೆ. ಮನೆ ಮುಂದೆ ಗನ್ ಹಿಡಿದುಕೊಂಡು ಒಂದಷ್ಟು ಜನರು ಗುಂಪು ಸೇರಿದ್ದಾರೆ ಎಂಬ ವಿಷಯ ತಿಳಿದು, ನಾನು ಶ್ರೀರಾಮುಲು ಅವರಿಗೆ ಕರೆ ಮಾಡಿದೆ. ಅವರು ಸ್ಥಳಕ್ಕೆ ಬಂದರು. ನಂತರ ನಾನು ಗಂಗಾವತಿಯಿಂದ ಬಂದೆ. ನಾನು ಬಂದ ತಕ್ಷಣ ಕಲ್ಲು ತೂರಾಟ ಮಾಡಿದರು. ನನ್ನ ಮೇಲೆ ಗುಂಡು ಹಾರಿಸಲು ಯತ್ನಿಸಿದರು. ಅದು ತಪ್ಪಿ ವಾಹನದ ಮೇಲೆ ಬಿತ್ತು, ಅವರು ನನ್ನ ಕೊಲೆಗೆ ಸಂಚು ರೂಪಿಸಿದ್ದರು” ಎಂದು ಆರೋಪಿಸಿದ್ದಾರೆ.

“ಬ್ಯಾನರ್ ನೆಪ ಮಾತ್ರ. ಅವರು ಕ್ರಿಮಿನಲ್ ಸಂಚು ರೂಪಿಸಿದ್ದರು. ನನ್ನ ಮನೆಯ ಸುತ್ತಮುತ್ತಲಿನ ಕಟ್ಟಡಗಳ ಮೇಲೆ ಮೊದಲೇ ಕಲ್ಲು, ಬಾಟಲಿ ಸಂಗ್ರಹಿಸಿಟ್ಟಿದ್ದರು. ಸಂಜೆ ಆಗುವಾಗ ದಾಳಿ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದಿದ್ದಾರೆ.

ಶಾಸಕ ಭರತ್ ರೆಡ್ಡಿ ಮಾತನಾಡಿ, “ಜನಾರ್ದನ ರೆಡ್ಡಿಗೆ ಬಳ್ಳಾರಿ ಅಭಿವೃದ್ದಿ ಆಗಬೇಕು ಎನ್ನುವ ಉದ್ದೇಶ ಇಲ್ಲ. ಅವರು ತನ್ನ ಸ್ವಂತ ಬೆಳವಣಿಗೆ ಮಾಡಿಕೊಳ್ಳುತ್ತಿದ್ದಾರೆ. ನಾನು ಶಾಂತವಾಗಿ ಇದ್ದೇನೆ, ನಾನು ಮಾತನಾಡಿದರೆ ಬಳ್ಳಾರಿ ಭಸ್ಮ ಆಗುತ್ತೆ. ನಾನು ಮನಸ್ಸು ಮಾಡಿದ್ದರೆ ಅಂದುಕೊಂಡಿದ್ದನ್ನು 5 ನಿಮಿಷದಲ್ಲಿ ಮಾಡಿ ಮುಗಿಸುತ್ತಿದ್ದೆ. ಆದರೆ, ನಾನು ಓದಿದವನು, ಲಂಡನ್‌ನಲ್ಲಿ ಓದಿ ಬಂದವನು. ನಾನು ಹುಟ್ಟು ಶ್ರೀಮಂತ, ಜನಾರ್ದನ ರೆಡ್ಡಿ ಜನರನ್ನು ಲೂಟಿ ಮಾಡಿ ಶ್ರೀಮಂತರಾದವರು” ಎಂದಿದ್ದಾರೆ.

“ನಾನು ಶಾಸಕನಾದ ಬಳಿಕ ಬಳ್ಳಾರಿಯಲ್ಲಿ ಯಾವುದೇ ಅಹಿತರ ಘಟನೆ ಅಗಿಲ್ಲ. ಜನಾರ್ದನ ಕಡೆಯವರು ಈಗ ಮತ್ತೆ ಶುರು ಮಾಡಿಕೊಂಡಿದ್ದಾರೆ. ನಮ್ಮ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಹಾಗಾಗಿ, ಜನಾರ್ದನ ರೆಡ್ಡಿ ಮತ್ತು ಅವರ ಬೆಂಬಲಿಗರ ವಿರುದ್ದ ದಲಿತ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸಬೇಕು” ಎಂದು ಆಗಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...