Homeಮುಖಪುಟರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

- Advertisement -
- Advertisement -

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಭಾನುವಾರ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಮೂರು ಪ್ರಕರಣಗಳನ್ನು ದಾಖಲಿಸಿದ ನಂತರ, ಕನಿಷ್ಠ 40 ಜನರನ್ನು ಬಂಧಿಸಲಾಗಿದೆ. ಕೊಲೆ, ಗಲಭೆ, ಅಗ್ನಿಸ್ಪರ್ಶ ಮತ್ತು ಇತರ ಪಿತೂರಿ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ಹಣ ಸಂಗ್ರಹಿಸುವ ಮೆರವಣಿಗೆಯಲ್ಲಿ ಭಾನುವಾರ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಲಪಂಥೀಯ ಗುಂಪು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ರ‍್ಯಾಲಿಯಲ್ಲಿ, “ಜೋರಾಗಿ ಧಾರ್ಮಿಕ ಘೋಷಣೆಗಳನ್ನು’ ಕೂಗಿದರು.. ಅದು ಮತ್ತೊಂದು ಸಮುದಾಯವನ್ನು ಕೆರಳಿಸಿತು” ಎಂದು ತಿಳಿಸಿರುವ ಪೊಲೀಸರು. “ಕತ್ತಿಗಳು, ರಾಡ್‌ಗಳು ಮತ್ತು ಬೆಂಕಿ ಹಚ್ಚುವಿಕೆಯ ಘಟನೆಗಳಿಗೆ ಇದು ಕಾರಣವಾಯಿತು’ ಒಂದು ದೂರಿನಲ್ಲಿ ದಾಖಲಾಗಿದೆ ಎಂದು ಗಾಯಗೊಂಡ ಪೋಲೀಸ್ ಒಬ್ಬರು ವಿವರಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಉಪಯೋಗಿಸುವುದು ಅನಿವಾರ್ಯವಾಯಿತು ಎಂದು ಕಚ್ (ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಪಾಟೀಲ್ ತಿಳಿಸಿದ್ದಾರೆ.

ರ‍್ಯಾಲಿಯ ನಂತರ, ಕಿಡಾನಾ ಗ್ರಾಮದಲ್ಲಿ ಘರ್ಷಣೆಯ ಸ್ಥಳದಿಂದ 200 ಮೀಟರ್ ದೂರದಲ್ಲಿ ಜಾರ್ಖಂಡ್‌ನ ವಲಸೆ ಕಾರ್ಮಿಕನ ಶವ ಪತ್ತೆಯಾಗಿದೆ, ಮತ್ತು ಆ ಹಿಂಸಾಚಾರದ ಭಾಗವಾಗಿ ಅವನು ಕೊಲ್ಲಲ್ಪಟ್ಟಿದ್ದಾನೆಯೇ ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ” ಎಂದು ಪಾಟೀಲ್ ಹೇಳಿದರು.

ಭಾನುವಾರ “ರಥಯಾತ್ರೆ” ನಡೆಸಲು ಈ ಗುಂಪಿಗೆ ಅಗತ್ಯವಾದ ಅನುಮತಿ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶದ ಇಂದೋರ್, ಉಜ್ಜಯಿನಿ ಮತ್ತು ಮಾಂಡ್ಸೌರ್ ಜಿಲ್ಲೆಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರಾಮ್ ದೇವಾಲಯದ ನಿಧಿ ಸಂಗ್ರಹ ರ‍್ಯಾಲಿಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ.
ಅಯೋಧ್ಯ ರಾಮ್ ದೇವಾಲಯ ನಿರ್ಮಾಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 1.11 ಲಕ್ಷ ರೂ. ಚೆಕ್ ಕಳಿಸುವುದರ ಜೊತೆಗೆ, ಪತ್ರವೊಂದನ್ನು ಬರೆದ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರು ಇತ್ತೀಚೆಗೆ ಈ ಸಮಸ್ಯೆಯನ್ನು ಎತ್ತಿ ತೋರಿಸಿದ್ದರು.

“ಲಾಠಿ ಮತ್ತು ಕತ್ತಿಗಳನ್ನು ಹೊತ್ತುಕೊಂಡು ಸಮುದಾಯವನ್ನು ಪ್ರಚೋದಿಸಲು ಘೋಷಣೆಗಳನ್ನು ಎತ್ತುವುದು ಯಾವುದೇ ಧಾರ್ಮಿಕ ಸಮಾರಂಭದ ಒಂದು ಭಾಗವಾಗಲು ಸಾಧ್ಯವಿಲ್ಲ. ಇಂತಹ ಬೆಳವಣಿಗೆಗಳು ಹಿಂದೂ ಧರ್ಮದ ಭಾಗವಾಗಲು ಸಾಧ್ಯವಿಲ್ಲ … ಇಂತಹ ಬೆಳವಣಿಗೆಗಳು ಸಾಮಾಜಿಕ ಸಾಮರಸ್ಯವನ್ನು ಹಾನಿಗೊಳಿಸುತ್ತವೆ. ಇತರ ಧಾರ್ಮಿಕ ಸಮುದಾಯಗಳು ದೇವಾಲಯ ನಿರ್ಮಾಣಕ್ಕೆ ವಿರುದ್ಧವಾಗಿಲ್ಲ. ಆದ್ದರಿಂದ, ದೇಶದ ಪ್ರಧಾನ ಮಂತ್ರಿಯಾಗಿ, ಶಸ್ತ್ರಾಸ್ತ್ರಗಳನ್ನು ಹೊತ್ತ ಜನರು ಇತರ ಸಮುದಾಯಗಳನ್ನು ಪ್ರಚೋದಿಸುವ ನಿಧಿಸಂಗ್ರಹ ಮೆರವಣಿಗೆಗಳನ್ನು ನಿಲ್ಲಿಸುವಂತೆ ನೀವು ರಾಜ್ಯಗಳಿಗೆ ನಿರ್ದೇಶಿಸಬೇಕು’ ಎಂದು ದಿಗ್ವಿಜಯ ಸಿಂಗ್ ಮತ್ತು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ‘ರಿಪಬ್ಲಿಕ್ ಟಿವಿಯನ್ನು ಸಸ್ಪೆಂಡ್ ಮಾಡಿ’- ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಶನ್‌ಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...