Homeಮುಖಪುಟಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

ಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

- Advertisement -
- Advertisement -

ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಆತ ಬರೆದಿರುವ ಡೆತ್‌ ನೋಟ್‌ನಲ್ಲಿ ಶಿಕ್ಷಕರಿಂದ ದೌರ್ಜನ್ಯದ ಆರೋಪ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ವಿದ್ಯಾರ್ಥಿಯ ತಂದೆ ನೀಡಿರುವ ದೂರಿನಲ್ಲಿ, ತನ್ನ ಮಗ ಹಲವು ಶಿಕ್ಷಕರ ನಿರಂತರ ಕಿರುಕುಳದಿಂದಾಗಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮೃತ ಬಾಲಕ ಶಿಕ್ಷಕರ ದೌರ್ಜನ್ಯದ ಬಗ್ಗೆ ತನ್ನ ಪೋಷಕರಿಗೆ ಹಲವು ಬಾರಿ ಹೇಳಿಕೊಂಡಿದ್ದ. ಪೋಷಕರು ಕೂಡ
ಶಾಲಾ ಸಿಬ್ಬಂದಿ ಮತ್ತು ಪ್ರಾಂಶುಪಾಲರಿಗೆ ಮೌಖಿಕ ದೂರುಗಳನ್ನು ನೀಡಿದ್ದರು. ಆದರೂ, ಶಿಕ್ಷಕರ ಕಿರುಕುಳ ಮುಂದುವರೆದಿತ್ತು ಎಂದು ಹೇಳಲಾಗ್ತಿದೆ.

ಬಾಲಕ ಸಾವನ್ನಪ್ಪಿದ ಬಳಿಕ ಆತನ ಶಾಲಾ ಬ್ಯಾಗ್‌ನಲ್ಲಿ ಡೆತ್ ನೋಟ್‌ ಸಿಕ್ಕಿದೆ. ಅದರಲ್ಲಿ ಆತ ತನ್ನ ಕುಟುಂಬಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಿ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾನೆ. “ನಾನು ಹೀಗೆ ಮಾಡಿದ್ದಕ್ಕೆ ನನಗೆ ತುಂಬಾ ವಿಷಾದವಿದೆ, ಆದರೆ ಶಾಲಾ ಸಿಬ್ಬಂದಿ ನಾನು ಹೀಗೆ ಮಾಡಿಕೊಳ್ಳುವಂತೆ ಮಾಡಿದರು. ನನಗೆ ಆಗಿರುವುದು ಬೇರೆ ಯಾವ ವಿದ್ಯಾರ್ಥಿಗೂ ಆಗಬಾರದು. ಆ ರೀತಿ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳಬೇಕು. ಇದೇ ನನ್ನ ಕೊನೆಯಾಸೆ. ನನ್ನ ಅಂಗಾಂಗಗಳನ್ನು ದಾನ ಮಾಡಿ. ನನ್ನಿಂದ ಉಂಟಾದ ನೋವಿಗೆ ಪೋಷಕರು ಮತ್ತು ಸಹೋದರನಲ್ಲಿ ಕ್ಷಮೆಯಾಚಿಸುತ್ತೇನೆ” ಎಂದು ಬರೆದಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಣ್ಣಪುಟ್ಟ ವಿಷಯಗಳಿಗೂ ಶಿಕ್ಷಕರು ತನ್ನನ್ನು ಬೈಯುತ್ತಿದ್ದರು, ಅವಮಾನಿಸುತ್ತಿದ್ದರು ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಮಗ ಆಗಾಗ ಹೇಳಿಕೊಳ್ಳುತ್ತಿದ್ದ ಎಂದು ಮೃತನ ಪೋಷಕರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ನವೆಂಬರ್ 18ರಂದು, ತಂದೆ ಹೊರಗೆ ಹೋದಾಗ ಬಾಲಕ ಶಾಲೆಗೆ ಹೊರಟು ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಹಳಿಗೆ ಹಾರಿದ್ದಾನೆ ಎಂದು ವರದಿ ಹೇಳಿದೆ.

ಘಟನೆಯ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿಯು ಈ ಸಾವಿನ ಹೊಣೆ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೇರೆ ಯಾವುದೇ ಮಗುವೂ ಈ ರೀತಿಯ ಕಿರುಕುಳ ಎದುರಿಸದಂತೆ ನೋಡಿಕೊಳ್ಳಲು, ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಾಲಕನ ಕುಟುಂಬವು ಅಧಿಕಾರಿಗಳನ್ನು ಒತ್ತಾಯಿಸಿದೆ.

ವಿದ್ಯಾರ್ಥಿಯ ಸಾವಿಗೆ ಕಾರಣವಾದ ಕಿರುಕುಳ ಮತ್ತು ಸಂದರ್ಭಗಳ ಮೇಲೆ ಕೇಂದ್ರೀಕರಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...