Homeಮುಖಪುಟಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

ಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

- Advertisement -
- Advertisement -

ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಆತ ಬರೆದಿರುವ ಡೆತ್‌ ನೋಟ್‌ನಲ್ಲಿ ಶಿಕ್ಷಕರಿಂದ ದೌರ್ಜನ್ಯದ ಆರೋಪ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ವಿದ್ಯಾರ್ಥಿಯ ತಂದೆ ನೀಡಿರುವ ದೂರಿನಲ್ಲಿ, ತನ್ನ ಮಗ ಹಲವು ಶಿಕ್ಷಕರ ನಿರಂತರ ಕಿರುಕುಳದಿಂದಾಗಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮೃತ ಬಾಲಕ ಶಿಕ್ಷಕರ ದೌರ್ಜನ್ಯದ ಬಗ್ಗೆ ತನ್ನ ಪೋಷಕರಿಗೆ ಹಲವು ಬಾರಿ ಹೇಳಿಕೊಂಡಿದ್ದ. ಪೋಷಕರು ಕೂಡ
ಶಾಲಾ ಸಿಬ್ಬಂದಿ ಮತ್ತು ಪ್ರಾಂಶುಪಾಲರಿಗೆ ಮೌಖಿಕ ದೂರುಗಳನ್ನು ನೀಡಿದ್ದರು. ಆದರೂ, ಶಿಕ್ಷಕರ ಕಿರುಕುಳ ಮುಂದುವರೆದಿತ್ತು ಎಂದು ಹೇಳಲಾಗ್ತಿದೆ.

ಬಾಲಕ ಸಾವನ್ನಪ್ಪಿದ ಬಳಿಕ ಆತನ ಶಾಲಾ ಬ್ಯಾಗ್‌ನಲ್ಲಿ ಡೆತ್ ನೋಟ್‌ ಸಿಕ್ಕಿದೆ. ಅದರಲ್ಲಿ ಆತ ತನ್ನ ಕುಟುಂಬಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಿ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾನೆ. “ನಾನು ಹೀಗೆ ಮಾಡಿದ್ದಕ್ಕೆ ನನಗೆ ತುಂಬಾ ವಿಷಾದವಿದೆ, ಆದರೆ ಶಾಲಾ ಸಿಬ್ಬಂದಿ ನಾನು ಹೀಗೆ ಮಾಡಿಕೊಳ್ಳುವಂತೆ ಮಾಡಿದರು. ನನಗೆ ಆಗಿರುವುದು ಬೇರೆ ಯಾವ ವಿದ್ಯಾರ್ಥಿಗೂ ಆಗಬಾರದು. ಆ ರೀತಿ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳಬೇಕು. ಇದೇ ನನ್ನ ಕೊನೆಯಾಸೆ. ನನ್ನ ಅಂಗಾಂಗಗಳನ್ನು ದಾನ ಮಾಡಿ. ನನ್ನಿಂದ ಉಂಟಾದ ನೋವಿಗೆ ಪೋಷಕರು ಮತ್ತು ಸಹೋದರನಲ್ಲಿ ಕ್ಷಮೆಯಾಚಿಸುತ್ತೇನೆ” ಎಂದು ಬರೆದಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಣ್ಣಪುಟ್ಟ ವಿಷಯಗಳಿಗೂ ಶಿಕ್ಷಕರು ತನ್ನನ್ನು ಬೈಯುತ್ತಿದ್ದರು, ಅವಮಾನಿಸುತ್ತಿದ್ದರು ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಮಗ ಆಗಾಗ ಹೇಳಿಕೊಳ್ಳುತ್ತಿದ್ದ ಎಂದು ಮೃತನ ಪೋಷಕರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ನವೆಂಬರ್ 18ರಂದು, ತಂದೆ ಹೊರಗೆ ಹೋದಾಗ ಬಾಲಕ ಶಾಲೆಗೆ ಹೊರಟು ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಹಳಿಗೆ ಹಾರಿದ್ದಾನೆ ಎಂದು ವರದಿ ಹೇಳಿದೆ.

ಘಟನೆಯ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿಯು ಈ ಸಾವಿನ ಹೊಣೆ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೇರೆ ಯಾವುದೇ ಮಗುವೂ ಈ ರೀತಿಯ ಕಿರುಕುಳ ಎದುರಿಸದಂತೆ ನೋಡಿಕೊಳ್ಳಲು, ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಾಲಕನ ಕುಟುಂಬವು ಅಧಿಕಾರಿಗಳನ್ನು ಒತ್ತಾಯಿಸಿದೆ.

ವಿದ್ಯಾರ್ಥಿಯ ಸಾವಿಗೆ ಕಾರಣವಾದ ಕಿರುಕುಳ ಮತ್ತು ಸಂದರ್ಭಗಳ ಮೇಲೆ ಕೇಂದ್ರೀಕರಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ...

ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

'ಉಳುವವರಿಗೆ ಭೂಮಿ' ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ...

ದುಬೈ ಏರ್‌ಶೋನಲ್ಲಿ ಭಾರತದ ತೇಜಸ್‌ ಯುದ್ಧವಿಮಾನ ಪತನ ; ಪೈಲಟ್‌ ಸಾವು

ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಶುಕ್ರವಾರ (ನವೆಂಬರ್ 21) ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುರ್ಘಟನೆ ನಡೆದಿದೆ. ದೊಡ್ಡ ಜನಸಮೂಹದ ಮುಂದೆ ವೈಮಾನಿಕ ಪ್ರದರ್ಶನ ನೀಡುತ್ತಿದ್ದಾಗ...

ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿ.ಕೆ. ಶಿವಕುಮಾರ್

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಎಲ್ಲ 140 ಮಂದಿ ಶಾಸಕರೂ ನನ್ನವರೇ. ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ'...

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 6 ಸಾವು

ಶುಕ್ರವಾರ (ನವೆಂಬರ್ 21) ಬೆಳಿಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 26 ಸೆಕೆಂಡುಗಳ ಕಾಲ ಕಂಪನ ಸಂಭವಿಸಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲೂ...

ರಾಜ್ಯಪಾಲರು ಮಸೂದೆಗಳನ್ನು ಅಂಗೀಕರಿಸಲು ಸಮಯ ಮಿತಿ ನಿಗದಿ ಮಾಡುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ: ಸ್ಟಾಲಿನ್ 

ರಾಜ್ಯ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲರಿಗೆ ಸಮಯ ಮಿತಿಯನ್ನು ನಿಗದಿಪಡಿಸಲು ಸಂವಿಧಾನದ 200ನೇ ವಿಧಿಗೆ ತಿದ್ದುಪಡಿ ತರಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಆಗ್ರಹಿಸಿದ್ದಾರೆ.  ರಾಷ್ಟ್ರಪತಿಗಳ ಉಲ್ಲೇಖಕ್ಕೆ ಉತ್ತರಿಸುವಾಗ ಸುಪ್ರೀಂ ಕೋರ್ಟ್‌ನ...

ಕೊಲೆಯತ್ನ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಕೊಲೆಯತ್ನ ಆರೋಪದ ಮೇಲೆ ಕಲಬುರಗಿಯ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅನ್ನು ಅಫಜಲಪುರ ತಾಲೂಕಿನ ಶಿರವಾಳ ಸಮೀಪ ಗುರುವಾರ (ನವೆಂಬರ್ 20) ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ನಾಟಿ ಔಷಧಿ...

ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ : ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ; ವರದಿ

ಮುಂಬೈ ಉಪನಗರ ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದು, ಇದರಿಂದ ಮನನೊಂದು ಕಲ್ಯಾಣ್ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮುಳುಂದ್‌ನ ಕೇಳ್ಕರ್ ಕಾಲೇಜಿನ ವಿದ್ಯಾರ್ಥಿ...

ಟ್ರಂಪ್ ಬೆದರಿಕೆ ಬೆನ್ನಲ್ಲೇ ರಷ್ಯಾದಿಂದ ತೈಲ ಆಮದು ನಿಲ್ಲಿಸಿದ ರಿಲಯನ್ಸ್ ಇಂಡಸ್ಟ್ರೀಸ್

ಗುಜರಾತ್‌ನ ಜಾಮ್‌ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ...