Homeಮುಖಪುಟಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

ಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

- Advertisement -
- Advertisement -

ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಆತ ಬರೆದಿರುವ ಡೆತ್‌ ನೋಟ್‌ನಲ್ಲಿ ಶಿಕ್ಷಕರಿಂದ ದೌರ್ಜನ್ಯದ ಆರೋಪ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ವಿದ್ಯಾರ್ಥಿಯ ತಂದೆ ನೀಡಿರುವ ದೂರಿನಲ್ಲಿ, ತನ್ನ ಮಗ ಹಲವು ಶಿಕ್ಷಕರ ನಿರಂತರ ಕಿರುಕುಳದಿಂದಾಗಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮೃತ ಬಾಲಕ ಶಿಕ್ಷಕರ ದೌರ್ಜನ್ಯದ ಬಗ್ಗೆ ತನ್ನ ಪೋಷಕರಿಗೆ ಹಲವು ಬಾರಿ ಹೇಳಿಕೊಂಡಿದ್ದ. ಪೋಷಕರು ಕೂಡ
ಶಾಲಾ ಸಿಬ್ಬಂದಿ ಮತ್ತು ಪ್ರಾಂಶುಪಾಲರಿಗೆ ಮೌಖಿಕ ದೂರುಗಳನ್ನು ನೀಡಿದ್ದರು. ಆದರೂ, ಶಿಕ್ಷಕರ ಕಿರುಕುಳ ಮುಂದುವರೆದಿತ್ತು ಎಂದು ಹೇಳಲಾಗ್ತಿದೆ.

ಬಾಲಕ ಸಾವನ್ನಪ್ಪಿದ ಬಳಿಕ ಆತನ ಶಾಲಾ ಬ್ಯಾಗ್‌ನಲ್ಲಿ ಡೆತ್ ನೋಟ್‌ ಸಿಕ್ಕಿದೆ. ಅದರಲ್ಲಿ ಆತ ತನ್ನ ಕುಟುಂಬಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಿ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾನೆ. “ನಾನು ಹೀಗೆ ಮಾಡಿದ್ದಕ್ಕೆ ನನಗೆ ತುಂಬಾ ವಿಷಾದವಿದೆ, ಆದರೆ ಶಾಲಾ ಸಿಬ್ಬಂದಿ ನಾನು ಹೀಗೆ ಮಾಡಿಕೊಳ್ಳುವಂತೆ ಮಾಡಿದರು. ನನಗೆ ಆಗಿರುವುದು ಬೇರೆ ಯಾವ ವಿದ್ಯಾರ್ಥಿಗೂ ಆಗಬಾರದು. ಆ ರೀತಿ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳಬೇಕು. ಇದೇ ನನ್ನ ಕೊನೆಯಾಸೆ. ನನ್ನ ಅಂಗಾಂಗಗಳನ್ನು ದಾನ ಮಾಡಿ. ನನ್ನಿಂದ ಉಂಟಾದ ನೋವಿಗೆ ಪೋಷಕರು ಮತ್ತು ಸಹೋದರನಲ್ಲಿ ಕ್ಷಮೆಯಾಚಿಸುತ್ತೇನೆ” ಎಂದು ಬರೆದಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಣ್ಣಪುಟ್ಟ ವಿಷಯಗಳಿಗೂ ಶಿಕ್ಷಕರು ತನ್ನನ್ನು ಬೈಯುತ್ತಿದ್ದರು, ಅವಮಾನಿಸುತ್ತಿದ್ದರು ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಮಗ ಆಗಾಗ ಹೇಳಿಕೊಳ್ಳುತ್ತಿದ್ದ ಎಂದು ಮೃತನ ಪೋಷಕರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ನವೆಂಬರ್ 18ರಂದು, ತಂದೆ ಹೊರಗೆ ಹೋದಾಗ ಬಾಲಕ ಶಾಲೆಗೆ ಹೊರಟು ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಹಳಿಗೆ ಹಾರಿದ್ದಾನೆ ಎಂದು ವರದಿ ಹೇಳಿದೆ.

ಘಟನೆಯ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿಯು ಈ ಸಾವಿನ ಹೊಣೆ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೇರೆ ಯಾವುದೇ ಮಗುವೂ ಈ ರೀತಿಯ ಕಿರುಕುಳ ಎದುರಿಸದಂತೆ ನೋಡಿಕೊಳ್ಳಲು, ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಾಲಕನ ಕುಟುಂಬವು ಅಧಿಕಾರಿಗಳನ್ನು ಒತ್ತಾಯಿಸಿದೆ.

ವಿದ್ಯಾರ್ಥಿಯ ಸಾವಿಗೆ ಕಾರಣವಾದ ಕಿರುಕುಳ ಮತ್ತು ಸಂದರ್ಭಗಳ ಮೇಲೆ ಕೇಂದ್ರೀಕರಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...