Homeಮುಖಪುಟಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

ಮೆಟ್ರೋ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ : ಶಿಕ್ಷಕರ ದೌರ್ಜನ್ಯ ಆರೋಪ

- Advertisement -
- Advertisement -

ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಆತ ಬರೆದಿರುವ ಡೆತ್‌ ನೋಟ್‌ನಲ್ಲಿ ಶಿಕ್ಷಕರಿಂದ ದೌರ್ಜನ್ಯದ ಆರೋಪ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ವಿದ್ಯಾರ್ಥಿಯ ತಂದೆ ನೀಡಿರುವ ದೂರಿನಲ್ಲಿ, ತನ್ನ ಮಗ ಹಲವು ಶಿಕ್ಷಕರ ನಿರಂತರ ಕಿರುಕುಳದಿಂದಾಗಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಮೃತ ಬಾಲಕ ಶಿಕ್ಷಕರ ದೌರ್ಜನ್ಯದ ಬಗ್ಗೆ ತನ್ನ ಪೋಷಕರಿಗೆ ಹಲವು ಬಾರಿ ಹೇಳಿಕೊಂಡಿದ್ದ. ಪೋಷಕರು ಕೂಡ
ಶಾಲಾ ಸಿಬ್ಬಂದಿ ಮತ್ತು ಪ್ರಾಂಶುಪಾಲರಿಗೆ ಮೌಖಿಕ ದೂರುಗಳನ್ನು ನೀಡಿದ್ದರು. ಆದರೂ, ಶಿಕ್ಷಕರ ಕಿರುಕುಳ ಮುಂದುವರೆದಿತ್ತು ಎಂದು ಹೇಳಲಾಗ್ತಿದೆ.

ಬಾಲಕ ಸಾವನ್ನಪ್ಪಿದ ಬಳಿಕ ಆತನ ಶಾಲಾ ಬ್ಯಾಗ್‌ನಲ್ಲಿ ಡೆತ್ ನೋಟ್‌ ಸಿಕ್ಕಿದೆ. ಅದರಲ್ಲಿ ಆತ ತನ್ನ ಕುಟುಂಬಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಿ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾನೆ. “ನಾನು ಹೀಗೆ ಮಾಡಿದ್ದಕ್ಕೆ ನನಗೆ ತುಂಬಾ ವಿಷಾದವಿದೆ, ಆದರೆ ಶಾಲಾ ಸಿಬ್ಬಂದಿ ನಾನು ಹೀಗೆ ಮಾಡಿಕೊಳ್ಳುವಂತೆ ಮಾಡಿದರು. ನನಗೆ ಆಗಿರುವುದು ಬೇರೆ ಯಾವ ವಿದ್ಯಾರ್ಥಿಗೂ ಆಗಬಾರದು. ಆ ರೀತಿ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳಬೇಕು. ಇದೇ ನನ್ನ ಕೊನೆಯಾಸೆ. ನನ್ನ ಅಂಗಾಂಗಗಳನ್ನು ದಾನ ಮಾಡಿ. ನನ್ನಿಂದ ಉಂಟಾದ ನೋವಿಗೆ ಪೋಷಕರು ಮತ್ತು ಸಹೋದರನಲ್ಲಿ ಕ್ಷಮೆಯಾಚಿಸುತ್ತೇನೆ” ಎಂದು ಬರೆದಿದ್ದಾನೆ ಎಂದು ವರದಿಗಳು ವಿವರಿಸಿವೆ.

ಸಣ್ಣಪುಟ್ಟ ವಿಷಯಗಳಿಗೂ ಶಿಕ್ಷಕರು ತನ್ನನ್ನು ಬೈಯುತ್ತಿದ್ದರು, ಅವಮಾನಿಸುತ್ತಿದ್ದರು ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಮಗ ಆಗಾಗ ಹೇಳಿಕೊಳ್ಳುತ್ತಿದ್ದ ಎಂದು ಮೃತನ ಪೋಷಕರು ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ನವೆಂಬರ್ 18ರಂದು, ತಂದೆ ಹೊರಗೆ ಹೋದಾಗ ಬಾಲಕ ಶಾಲೆಗೆ ಹೊರಟು ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಹಳಿಗೆ ಹಾರಿದ್ದಾನೆ ಎಂದು ವರದಿ ಹೇಳಿದೆ.

ಘಟನೆಯ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿ, ಆಡಳಿತ ಮಂಡಳಿಯು ಈ ಸಾವಿನ ಹೊಣೆ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೇರೆ ಯಾವುದೇ ಮಗುವೂ ಈ ರೀತಿಯ ಕಿರುಕುಳ ಎದುರಿಸದಂತೆ ನೋಡಿಕೊಳ್ಳಲು, ತಪ್ಪಿತಸ್ಥರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಾಲಕನ ಕುಟುಂಬವು ಅಧಿಕಾರಿಗಳನ್ನು ಒತ್ತಾಯಿಸಿದೆ.

ವಿದ್ಯಾರ್ಥಿಯ ಸಾವಿಗೆ ಕಾರಣವಾದ ಕಿರುಕುಳ ಮತ್ತು ಸಂದರ್ಭಗಳ ಮೇಲೆ ಕೇಂದ್ರೀಕರಿಸಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...