Homeಮುಖಪುಟಜುಲೈ 31ಕ್ಕೆ 12 ನೇ ತರಗತಿ ಫಲಿತಾಂಶ ಪ್ರಕಟಗೊಳಿಸಲಿರುವ ಸಿಬಿಎಸ್‌ಇ

ಜುಲೈ 31ಕ್ಕೆ 12 ನೇ ತರಗತಿ ಫಲಿತಾಂಶ ಪ್ರಕಟಗೊಳಿಸಲಿರುವ ಸಿಬಿಎಸ್‌ಇ

- Advertisement -
- Advertisement -

ದೇಶದಲ್ಲಿ ಕೊರೊನಾ ಬಿಕ್ಕಟ್ಟಿನಿಂದ ರದ್ದಾಗಿದ್ದ ಸಿಬಿಎಸ್‌ಇ 12 ನೇ ತರಗತಿ ಫಲಿತಾಂಶಗಳನ್ನು ಜುಲೈ 31 ರೊಳಗೆ ಪ್ರಕಟಿಸಲಾಗುವುದು ಎಂದು ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 10 ನೇ ತರಗತಿಯಿಂದ ವಿದ್ಯಾರ್ಥಿಗಳ ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ.

12 ನೇ ತರಗತಿ ಪರೀಕ್ಷೆಯಲ್ಲಿ ನೀಡಲಾಗುವ ಒಟ್ಟು ಅಂಕಗಳು ಹಿಂದಿನ 19, 11 ನೇ ತರಗತಿಯ ಅಂಕಗಳನ್ನು ಆಧರಿಸಲಿದೆ ಎಂದು ಸಿಬಿಎಸ್‌ಇ ಹೇಳಿದೆ.  ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಉದಾರವಾಗಿ ಅಂಕಗಳನ್ನು ನೀಡುವ ಶಾಲೆಗಳ ಮೇಲೆ ನಿಗ ಇಡಲು “ಮಾಡರೇಶನ್ ಕಮಿಟಿ” ಯನ್ನು ರಚಿಸಲಾಗುವುದು ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಲಯಕ್ಕೆ ತಿಳಿಸಿದರು. 

“ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಸಮಿತಿಯು ಶಾಲೆಯ ಹಿರಿಯ ಶಿಕ್ಷಕರನ್ನು ಒಳಗೊಂಡಿರುತ್ತದೆ. ಅಗತ್ಯವಿದ್ದರೆ, ಮೂರನೇ ಶಿಕ್ಷಣ ತಜ್ಞರನ್ನು ನೇಮಿಸಲಾಗುವುದು. ಇದು  ಮಾಡರೇಶನ್ ಕಮಿಟಿ ಆಗಿರುತ್ತದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಮಂಡ್ಯದಲ್ಲಿ ಈಡುಗಾಯಿ ಸೇವೆ

12ನೇ ತರಗತಿಯ ಫಲಿತಾಂಶವನ್ನು 10 ನೇ ತರಗತಿಯ ಮತ್ತು 11ನೇ ತರಗತಿಯ ಅಂಕಗಳಿಂದ ತಲಾ ಶೇಕಡಾ 30 ರಷ್ಟು ಮತ್ತು 12 ತರಗತಿಯ ಆಂತರಿಕ ಪರೀಕ್ಷಗಳಲ್ಲಿ ಗಣಿಸಿರುವ ಅಂಕಗಳಿಂದ ಶೇಕಡಾ 40 ರಷ್ಟು ತೆಗೆದುಕೊಂಡು ಒಟ್ಟು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಿಬಿಎಸ್‌ಇ ನ್ಯಾಯಪೀಠಕ್ಕೆ ತಿಳಿಸಿದೆ.

ಪ್ರಾಯೋಗಿಕ ಪರೀಕ್ಷಾಯ 100 ಅಂಕಗಳಿಗೆ ಶಾಲೆಗಳು ಸಲ್ಲಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ ಎಂದು ಸಿಬಿಎಸ್‌ಇ ರಚಿಸಿರುವ 12 ಸದಸ್ಯರ ಸಮಿತಿ ನ್ಯಾಯಾಲಯಕ್ಕೆ ತಿಳಿಸಿದೆ.

ಸಿಬಿಎಸ್‌ಇ 12 ನೇ ತರಗತಿಯ ಫಲಿತಾಂಶದ ಬಗ್ಗೆ ಅಸಮಾಧಾನ ಇರುವ ವಿದ್ಯಾರ್ಥಿಗಳು ಕೊರೊನಾ ಸಾಂಕ್ರಾಮಿಕದ ಬಳಿಕ ನಡೆಸಲಾಗುವ ಪರೀಕ್ಷೆಯಲ್ಲಿ ಬರೆಯಬಹುದು ಎಂದು ವೇಣುಗೋಪಾಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೇಶಾದ್ಯಂತ ಸಾಂಕ್ರಾಮಿಕ ರೋಗದ ತೀವ್ರತೆ ನಡುವೆ ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆಯನ್ನು ಸರ್ಕಾರ ಜೂನ್ 1 ರಂದು ರದ್ದುಗೊಳಿಸಿತು.


ಇದನ್ನೂ ಓದಿ: ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...