Homeಕರ್ನಾಟಕಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ಶಾಸ್ತ್ರೀಯ ಭಾಷಾ ಸಂಸ್ಥೆ- ಕನ್ನಡಕ್ಕೆ ಅನ್ಯಾಯ: ಸಾಹಿತಿಗಳಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಪತ್ರ ಬರೆದಿದ್ದಾರೆ.

- Advertisement -
- Advertisement -

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿ ಕನ್ನಡದ 25 ಸಾಹಿತಿಗಳು ಬಹಿರಂಗ ಪತ್ರ ಬರೆದಿದಿದ್ದಾರೆ.

ದೇವನೂರು ಮಹಾದೇವ, ಡಾ.ತಾರಿಣಿ ಶುಭದಾಯಿನಿ, ಎಸ್.ಎಲ್.ಭೈರಪ್ಪ, ಡಾ.ಸಬಿತಾ ಬನ್ನಾಡಿ ಸೇರಿದಂತೆ ಹಲವಾರು ಸಾಹಿತಿಗಳು ದೂರವಾಣಿ ಮತ್ತು ವಾಟ್ಸಾಪ್‌ನಲ್ಲಿ ಚರ್ಚಿಸಿಕೊಂಡು ಮುಖ್ಯಮಂತ್ರಿಗಳಿಗೆ ಕಳಿಸಿರುವ ಬಹಿರಂಗ ಪತ್ರವನ್ನು ಪತ್ರಿಕಾ ಹೇಳಿಕೆಯಾಗಿ ನೀಡಿದ್ದಾರೆ.

ಕರ್ನಾಟಕದ ಜನರ ಒತ್ತಾಸೆ, ಹೋರಾಟ ಮತ್ತು ಕನ್ನಡದ ಹಲವಾರು ಹಿರಿಯ ಸಾಹಿತಿಗಳೂ, ಕನ್ನಡಪರ ಹೋರಾಟಗಾರರೂ ದನಿಯೆತ್ತಿದ್ದರಿಂದ ಮೈಸೂರಿನಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಪ್ರಾರಂಭಗೊಂಡು ಸುಮಾರು ಹತ್ತು ವರ್ಷಗಳಾಗಿವೆ. ಆದರೆ ತಮಿಳು ಮತ್ತು ತೆಲುಗು ಶಾಸ್ತ್ರೀಯ ಅಧ್ಯಯನ ವಿಭಾಗಗಳು ಬೆಳವಣಿಗೆ ಹೊಂದಿದ್ದಷ್ಟು ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ಬೆಳೆಯದಿರುವುದಕ್ಕೆ ಕನ್ನಡದ ಸಾಹಿತಿಗಳು ವಿಷಾಧ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಿಳಂಬವಾಗಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಳ್ಳುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸಿ.ಟಿ.ರವಿ ಅವರು ಪ್ರಯತ್ನಶೀಲರಾಗಿದ್ದರೂ ಅದಕ್ಕೆ ಭಾರತೀಯ ಭಾಷಾ ಸಂಸ್ಥಾನದ ಪ್ರಭಾರ ನಿರ್ದೇಶಕರಾದ ಪ್ರೊ.ಡಿ.ಜಿ.ರಾವ್ ಅವರು ಸ್ಪಂದಿಸುತ್ತಿಲ್ಲ ಎಂದು ಸಾಹಿತಿಗಳು ಹೇಳಿಕೆಯಲ್ಲಿ ದೂರಿದ್ದಾರೆ.

ಅಲ್ಲದೇ ನಿರ್ದೇಶಕರು ಶಾಸ್ತ್ರೀಯ ಕನ್ನಡವು ಸ್ವಾಯತ್ತತೆ ಪಡೆಯುವಷ್ಟು ಬೆಳವಣಿಗೆ ಆಗಿಲ್ಲವೆಂದು ಕೇಂದ್ರಕ್ಕೆ ತಪ್ಪು ಮಾಹಿತಿಯನ್ನು ನೀಡಿರುವುದು ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಭಾರತೀಯ ಭಾಷಾಜ್ಞಾನವುಳ್ಳ ಯಾರೂ ಕೂಡ ಹೀಗೆ ಬರೆಯಲು ಸಾಧ್ಯವಿಲ್ಲ. ಹೀಗೆ ಬರೆಯುವುದರ ಮೂಲಕ ಡಿ.ಜಿ.ರಾವ್ ಅವರು ಭಾರತೀಯ ಭಾಷಾ ಸಂಸ್ಥಾನಕ್ಕೂ, ಭಾಷಾ ವಿಜ್ಞಾನಕ್ಕೂ ಅವಮಾನ ಮಾಡಿದ್ದಾರೆ. ಮಾತ್ರವಲ್ಲದೆ, ಸ್ವಾಯತ್ತತೆಗೆ ಸಂಬಂಧಿಸಿದಂತೆ ಕೇಂದ್ರದ ಸಂಶೋಧನ ಕಾರ್ಯಗಳ ಪ್ರಗತಿಯನ್ನು ಹಿನ್ನಡೆಗೊಳಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ನಿಯಮಗಳಿಗೆ ವಿರುದ್ಧವಾಗಿ ಈಚೆಗೆ ಹಾಲಿ ಸಂಶೋಧನ ಸಿಬ್ಬಂದಿಯನ್ನು ಬದಲಿಸುವ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮಧ್ಯಪ್ರವೇಶಿಸಿ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ಸ್ಥಾನಮಾನ ದೊರಕಿಸಿಕೊಳ್ಳಲು ತುರ್ತಾಗಿ ಕ್ರಮಕೈಗೊಳ್ಳುವುದು. ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಚಟುವಟಿಕೆಗಳಿಗೆ ಹಿನ್ನೆಡೆಯುಂಟು ಮಾಡುವ ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್) ಪ್ರಭಾರಿ ನಿರ್ದೇಶಕರು ಹೊರಡಿಸಿದ ಕಾನೂನುಬಾಹಿರವಾದ ಹೊಸ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆಯಲು ಸಂಬಂಧಪಟ್ಟವರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರೊ. ನಂಜರಾಜೇ ಅರಸ್, ಜಿ.ಎಸ್.ಜಯದೇವ, ಪ್ರೊ. ಕೃಷ್ಣಮೂರ್ತಿ ಹನೂರು, ಡಾ.ಬಸವರಾಜ ಕಲ್ಗುಡಿ, ಪ.ಮಲ್ಲೇಶ್, ಡಾ.ಓ.ಎಲ್.ನಾಗಭೂಷಣಸ್ವಾಮಿ, ಡಾ.ಚಂದ್ರಶೇಖರ ನಂಗಲಿ, ಪ್ರೊ.ಎನ್.ಬೋರಲಿಂಗಯ್ಯ,
ಡಾ.ರಾಜಪ್ಪ ದಳವಾಯಿ, ಡಾ.ಕಾಳೇಗೌಡ ನಾಗವಾರ, ಜಿ.ಪಿ.ಬಸವರಾಜ, ಡಾ.ಅರವಿಂದ ಮಾಲಗತ್ತಿ, ಡಾ.ನಟರಾಜ್ ಬೂದಾಳು, ನಾ.ದಿವಾಕರ, ಡಾ.ವೀರಣ್ಣ ರಾಜೂರ, ವೆಂಕಟೇಶ ಮಾಚಕನೂರು, ಡಾ.ಬಸವರಾಜ್ ಮೈಸೂರು, ಡಾ.ಬಸವರಾಜ ಸಾದರ, ಡಾ.ದೇವರ ಕೊಂಡಾರೆಡ್ಡಿ, ಡಾ.ಕೇಶವ ಶರ್ಮ, ಪ್ರೊ. ಪಂಡಿತಾರಾಧ್ಯ ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ ಇತರರಾಗಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಸಂಗೀತ, ಕನ್ನಡ ಮತ್ತು ಕನ್ನಡಿಗರು: ಹತ್ತೊಂಬತ್ತನೇ ಶತಮಾನದ ಮೈಸೂರು ಸಂಸ್ಥಾನದ ಕೆಲವು ನೋಟಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡ ವಿರೋಧಿ ಡಿ.ಜಿ.ರಾವ್ ಮೊದಲು ಸಿಐಐಎಲ್ ನಿಂದ ತೊಲಗಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...