Homeಕರೋನಾ ತಲ್ಲಣಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ - ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

ಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ – ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

- Advertisement -
- Advertisement -

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಆರಂಭವಾಗಿವೆ. ವಾರದಲ್ಲಿ ಮೂರು ದಿನ ಶಾಲೆಯ ಆವರಣದಲ್ಲಿ ತರಗತಿಗಳು ನಡೆಸುತ್ತಿವೆ.

ದೈಹಿಕ ಅಂತರ ಕಾಪಾಡಿಕೊಂಡು ಶಿಕ್ಷಕರು ಮಕ್ಕಳಿಗೆ ಪಾಠ ಹೇಳುತ್ತಿದ್ದಾರೆ. ತರಗತಿ ನಡೆಸದಂತೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದರೂ ಶಿಕ್ಷಕರು ಇದಕ್ಕಿ ಕಿವಿಗೊಡುತ್ತಿಲ್ಲ. ‘ಬಿಇಒ ಹೇಳಿದ್ದಾರೆ. ಅವರ ಆದೇಶ ಪಾಲಿಸುವುದಷ್ಟೇ ನಮ್ಮ ಕೆಲಸ’ ಎಂದು ಶಿಕ್ಷಕರು ಪೋಷಕರಿಗೆ ಹೇಳಿಕಳಿಸುತ್ತಿರುವ ಉದಾಹರಣೆ ಗಳು ಕಂಡುಬಂದಿವೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೆಪ್ಟೆಂಬರ್ ತಿಂಗಳಲ್ಲೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ. ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ ಗ್ರಾಮೀಣ ಭಾಗದ ಒಂದೊಂದು ಗ್ರಾಮದ ಶಾಲೆಗಳು ಪ್ರಾರಂಭವಾಗಿದ್ದು ಸಚಿವರು ಹೇಳುತ್ತಿರುವುದು ಸುಳ್ಳು ಎಂಬುದು ಸಾಬೀತಾಗಿದೆ.

ಪಿಯು ಕಾಲೇಜುಗಳು ಆರಂಭವಾಗಿಲ್ಲ. ಆದರೆ ಗ್ರಾಮೀಣ ಪ್ರದೇಶದ ಎಲ್ಲಾ ಶಾಲೆಗಳಲ್ಲಿ ಪಾಠ ಭೋಧನೆ ಮಾಡಲಾಗುತ್ತಿದೆ. ಏಕೋಪಾಧ್ಯಾಯ ಶಾಲೆಗಳಲ್ಲಿ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಹೇಳಿಕೊಡುತ್ತಿದ್ದಾರೆ. ವಾರದಲ್ಲಿ ಮೂರು ದಿನ ಅಂದರೆ ಸೋಮವಾರ, ಗುರುವಾರ ಮತ್ತು ಶನಿವಾರ ಮಾತ್ರ ಶಾಲೆಯ ಹೊರಾಂಗಣದಲ್ಲಿ ತರಗತಿಗಳು ನಡೆಯುತ್ತಿವೆ.

ಮೂರು-ನಾಲ್ಕು ಶಿಕ್ಷಕರು ಇರುವ ಶಾಲೆಗಳಲ್ಲಿ 1-7 ನೇ ತರಗತಿವರೆಗಿನ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆಯ ಆವರಣದ ಜೊತೆಗೆ ದೇವಾಲಯ, ಸಮುದಾಯ ಭವನಗಳಲ್ಲೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವ ನಿದರ್ಶನಗಳು ಇದೆ. ವಿದ್ಯಾರ್ಥಿಗಳು ಹೆಚ್ಚು ವಾಸಿಸುವ ಕಡೆಗಳಲ್ಲಿ ದೊಡ್ಡ ಮನೆಯ ಅಂಗಳದಲ್ಲಿ ಮಕ್ಕಳನ್ನು ದೈಹಿಕ ಅಂತರದಲ್ಲಿ ಕೂರಿಸಿ ಬೋಧನೆ ಮಾಡಲಾಗುತ್ತಿದೆ.

ಕಳೆದ ಓಂದು ವಾರದಿಂದಲೂ ತರಗತಿಗಳು ಆರಂಭವಾಗಿವೆ. ಗ್ರಾಮಾಂತರ ಪ್ರದೇಶದಲ್ಲಿ ಶಾಲೆಯ ಆವರಣ ದೇವಾಲಯದ ಆವರಣ, ಸಮುದಾಯ ಭವನ, ಮನೆಯ ಅಂಗಳದಲ್ಲಿ ಪಾಠ ಹೇಳಿಕೊಡಲಾಗುತ್ತಿದೆ. ಕೆಲವು ಕಡೆ ವಾರದಲ್ಲಿ ಮೂರು ದಿನ ನಡೆದರೆ, ಮತ್ತೆ ಕೆಲವು ಕಡೆ ವಾರದ ಏಳು ದಿನಗಳು ತರಗತಿ ನಡೆಯುತ್ತಿದೆ ಹೆಸರು ಹೇಳಲು ಇಚ್ಚಿಸದ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಶಿಕ್ಷಕರು ಪ್ರತಿನಿತ್ಯ ಶಾಲೆಗೆ ಹಾಜರಾಗಬೇಕು. ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಬೇಕು. ಪೋಷಕರ ಸಭೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಆಯಾ ತಾಲೂಕು ಕೇಂದ್ರದ ಬಿಇಒಗಳು ಇಂತಹ ಸೂಚನೆ ನೀಡಿದ್ದು ಶಿಕ್ಷಕರು ವಾಹನ ವ್ಯವಸ್ಥೆ ಮಾಡಿಕೊಂಡು ತಾವು ಕೆಲಸ ಮಾಡುವ ಜಾಗಗಳಿಗೆ ತೆರಳಬೇಕಾದಂಥ ಅನಿವಾರ್ಯತೆ ಇದೆ. ಶಾಲೆಗೆ, ದೇವಸ್ಥಾನಕ್ಕೆ ಬರುವಷ್ಟು ಮಕ್ಕಳಿಗೆ ಪಾಠ ಹೇಳಿಕೊಡಬೇಕಾದ ಸ್ಥಿತಿ ಬಂದಿದೆ. ಎಲ್ಲಾ ಮಕ್ಕಳು ಶಾಲೆಗೆ ಬರುವುದು ಕಡ್ಡಾಯವಲ್ಲವಾದರೂ ಗೈರು ಆಗುವ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.

ಸಚಿವ ಸುರೇಶ್ ಕುಮಾರ್ ಶಾಲೆಗಳು ಪ್ರಾರಂಭವಾಗಿಲ್ಲವೆಂದು ಮೇಲ್ನೋಟಕ್ಕೆ ಹೇಳುತ್ತಿದ್ದರೂ ಅದಕ್ಕೆ ವಿರುದ್ದ ದಿಕ್ಕಿನಲ್ಲಿ ಹಳ್ಳಿಗಳಲ್ಲಿ ತರಗತಿಗಳು ನಡೆಯುವಂತೆ ನೋಡಿಕೊಳ್ಳಲಾಗಿದೆ. ಇದು ಸಚಿವರ ದ್ವಂದ್ವ ನಡೆಗೆ ಹಿಡಿದ ಕನ್ನಡಿಯಾಗಿದೆ ಎಂದು ದೂರಲಾಗಿದೆ.

ಶಾಲೆಗೆ ಹೋಗದೆ ಇರುವ ಮಕ್ಕಳು ಪಾಠ ಕೇಳಲು ಸಾಧ್ಯವಾಗದೆ ಶಿಕ್ಷಣದಲ್ಲಿ ಹಿಂದೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆಯೇ ಎಂಬ ಬಗ್ಗೆ ಸಚಿವರು ಮತ್ತು ಸರ್ಕಾರದಿಂದ ಯಾವುದೇ ಸ್ಪಷ್ಟೀಕರಣ ಬಂದಿಲ್ಲ.

ನಗರದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಆರಂಭವಾಗಿಲ್ಲ. ಆದರೆ ಖಾಸಗಿ ಶಾಲೆಗಳಲ್ಲಿ ಅನ್‌ಲೈನ್ ತರಗತಿಗಳು ನಡೆಯುತ್ತಿವೆ. ಕೆಲವು ಶಾಲೆಗಳು ಆನ್‌ಲೈನ್ ತರಗತಿಗಳನ್ನು ತೆಗೆದುಕೊಂಡರೆ ಮತ್ತೆ ಕೆಲವು ಶಾಲೆಗಳಲ್ಲಿ ಆನ್ಲೈನ್‌ನಲ್ಲಿ ವಿಡಿಯೋ ಮಾಢಿ ಪೋಷಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತಿದೆ. ಹೋಂ ವರ್ಕ್ ಕೂಡ ಮೊಬೈಲ್‌ನಲ್ಲೇ ಫೋಟೋ ತೆಗೆದು ಸಂಬಂಧಪಟ್ಟ ಶಾಲೆಗಳಿಗೆ ಕಳಿಸುವಂತಹ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ಕೊರೊನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಗ್ರಾಮೀಣ ಪ್ರದೇಶದಲ್ಲೂ ಹರಡುತ್ತಿದೆ. ಆದರೆ ಮಕ್ಕಳ ಜೀವ ರಕ್ಷಣೆ ಕಡೆ ಸರ್ಕಾರ ಗಮನಹರಿದಂತೆ ಕಾಣುತ್ತಿಲ್ಲ. ಆನ್‌ಲೈನ್ ಶಿಕ್ಷಣ ಇಲ್ಲ, ಆಫ್‌ಲೈನ್ ಶಿಕ್ಷಣವೂ ಇಲ್ಲ. ಕೋವಿಡ್-19 ರಿಂದ ಜೀವಗಳನ್ನು ರಕ್ಷಿಸುವುದು ಮುಖ್ಯ ಎಂದು ಹೇಳಿದ ಸರ್ಕಾರ ತನ್ನ ಮಾತಿನಂತೆ ತಾನೆ ನಡೆದುಕೊಳ್ಳದಿರುವುದು ಸೋಜಿಗದ ಸಂಗತಿಯಾಗಿದೆ.

ವಿದ್ಯಾಗಮದಡಿ ಎಲ್ಲಾ ಕಡೆ ಶಾಲೆ

ಶಿಕ್ಷಕರು ಪ್ರತಿಯೊಂದು ಹಳ್ಳಿಗಳಿಗೂ ಹೋಗಿ ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಹೇಳುತ್ತಾರೆ. ಯಾವ ಮಕ್ಕಳನ್ನು ಕೈಬಿಡುವುದಿಲ್ಲ. ಖಾಸಗಿ ಶಾಲೆಗೆ ಹೋಗುತ್ತಿದ್ದರೂ ಆ ಮಕ್ಕಳನ್ನು ಸೇರಿಸಿಕೊಂಡೇ ಪಾಠ ಹೇಳಿಕೊಡಲಾಗುತ್ತಿದೆ. ಉದಾಹರಣೆಗೆ ಒಂದು ಶಾಲೆಗೆ ಮೂರು ಹಳ್ಳಿಗಳಿಂದ ಮಕ್ಕಳು ಬರುತ್ತಿದ್ದರೆ ಆ ಮೂರು ಹಳ್ಳಿಗಳಿಗೇ ಹೋಗಿ ಸೂಕ್ತ ಜಾಗವನ್ನು ನೋಡಿ ಅಲ್ಲಿ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಹೆಸರು ಹೇಳಲಿಚ್ಚಿಸದ ಸಿಆರ್‌ಪಿ ಒಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.


ಓದಿ: ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...