Homeಕರೋನಾ ತಲ್ಲಣಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ - ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

ಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ – ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

- Advertisement -
- Advertisement -

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಆರಂಭವಾಗಿವೆ. ವಾರದಲ್ಲಿ ಮೂರು ದಿನ ಶಾಲೆಯ ಆವರಣದಲ್ಲಿ ತರಗತಿಗಳು ನಡೆಸುತ್ತಿವೆ.

ದೈಹಿಕ ಅಂತರ ಕಾಪಾಡಿಕೊಂಡು ಶಿಕ್ಷಕರು ಮಕ್ಕಳಿಗೆ ಪಾಠ ಹೇಳುತ್ತಿದ್ದಾರೆ. ತರಗತಿ ನಡೆಸದಂತೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದರೂ ಶಿಕ್ಷಕರು ಇದಕ್ಕಿ ಕಿವಿಗೊಡುತ್ತಿಲ್ಲ. ‘ಬಿಇಒ ಹೇಳಿದ್ದಾರೆ. ಅವರ ಆದೇಶ ಪಾಲಿಸುವುದಷ್ಟೇ ನಮ್ಮ ಕೆಲಸ’ ಎಂದು ಶಿಕ್ಷಕರು ಪೋಷಕರಿಗೆ ಹೇಳಿಕಳಿಸುತ್ತಿರುವ ಉದಾಹರಣೆ ಗಳು ಕಂಡುಬಂದಿವೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೆಪ್ಟೆಂಬರ್ ತಿಂಗಳಲ್ಲೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ. ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ ಗ್ರಾಮೀಣ ಭಾಗದ ಒಂದೊಂದು ಗ್ರಾಮದ ಶಾಲೆಗಳು ಪ್ರಾರಂಭವಾಗಿದ್ದು ಸಚಿವರು ಹೇಳುತ್ತಿರುವುದು ಸುಳ್ಳು ಎಂಬುದು ಸಾಬೀತಾಗಿದೆ.

ಪಿಯು ಕಾಲೇಜುಗಳು ಆರಂಭವಾಗಿಲ್ಲ. ಆದರೆ ಗ್ರಾಮೀಣ ಪ್ರದೇಶದ ಎಲ್ಲಾ ಶಾಲೆಗಳಲ್ಲಿ ಪಾಠ ಭೋಧನೆ ಮಾಡಲಾಗುತ್ತಿದೆ. ಏಕೋಪಾಧ್ಯಾಯ ಶಾಲೆಗಳಲ್ಲಿ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಹೇಳಿಕೊಡುತ್ತಿದ್ದಾರೆ. ವಾರದಲ್ಲಿ ಮೂರು ದಿನ ಅಂದರೆ ಸೋಮವಾರ, ಗುರುವಾರ ಮತ್ತು ಶನಿವಾರ ಮಾತ್ರ ಶಾಲೆಯ ಹೊರಾಂಗಣದಲ್ಲಿ ತರಗತಿಗಳು ನಡೆಯುತ್ತಿವೆ.

ಮೂರು-ನಾಲ್ಕು ಶಿಕ್ಷಕರು ಇರುವ ಶಾಲೆಗಳಲ್ಲಿ 1-7 ನೇ ತರಗತಿವರೆಗಿನ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆಯ ಆವರಣದ ಜೊತೆಗೆ ದೇವಾಲಯ, ಸಮುದಾಯ ಭವನಗಳಲ್ಲೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವ ನಿದರ್ಶನಗಳು ಇದೆ. ವಿದ್ಯಾರ್ಥಿಗಳು ಹೆಚ್ಚು ವಾಸಿಸುವ ಕಡೆಗಳಲ್ಲಿ ದೊಡ್ಡ ಮನೆಯ ಅಂಗಳದಲ್ಲಿ ಮಕ್ಕಳನ್ನು ದೈಹಿಕ ಅಂತರದಲ್ಲಿ ಕೂರಿಸಿ ಬೋಧನೆ ಮಾಡಲಾಗುತ್ತಿದೆ.

ಕಳೆದ ಓಂದು ವಾರದಿಂದಲೂ ತರಗತಿಗಳು ಆರಂಭವಾಗಿವೆ. ಗ್ರಾಮಾಂತರ ಪ್ರದೇಶದಲ್ಲಿ ಶಾಲೆಯ ಆವರಣ ದೇವಾಲಯದ ಆವರಣ, ಸಮುದಾಯ ಭವನ, ಮನೆಯ ಅಂಗಳದಲ್ಲಿ ಪಾಠ ಹೇಳಿಕೊಡಲಾಗುತ್ತಿದೆ. ಕೆಲವು ಕಡೆ ವಾರದಲ್ಲಿ ಮೂರು ದಿನ ನಡೆದರೆ, ಮತ್ತೆ ಕೆಲವು ಕಡೆ ವಾರದ ಏಳು ದಿನಗಳು ತರಗತಿ ನಡೆಯುತ್ತಿದೆ ಹೆಸರು ಹೇಳಲು ಇಚ್ಚಿಸದ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಶಿಕ್ಷಕರು ಪ್ರತಿನಿತ್ಯ ಶಾಲೆಗೆ ಹಾಜರಾಗಬೇಕು. ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಬೇಕು. ಪೋಷಕರ ಸಭೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಆಯಾ ತಾಲೂಕು ಕೇಂದ್ರದ ಬಿಇಒಗಳು ಇಂತಹ ಸೂಚನೆ ನೀಡಿದ್ದು ಶಿಕ್ಷಕರು ವಾಹನ ವ್ಯವಸ್ಥೆ ಮಾಡಿಕೊಂಡು ತಾವು ಕೆಲಸ ಮಾಡುವ ಜಾಗಗಳಿಗೆ ತೆರಳಬೇಕಾದಂಥ ಅನಿವಾರ್ಯತೆ ಇದೆ. ಶಾಲೆಗೆ, ದೇವಸ್ಥಾನಕ್ಕೆ ಬರುವಷ್ಟು ಮಕ್ಕಳಿಗೆ ಪಾಠ ಹೇಳಿಕೊಡಬೇಕಾದ ಸ್ಥಿತಿ ಬಂದಿದೆ. ಎಲ್ಲಾ ಮಕ್ಕಳು ಶಾಲೆಗೆ ಬರುವುದು ಕಡ್ಡಾಯವಲ್ಲವಾದರೂ ಗೈರು ಆಗುವ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.

ಸಚಿವ ಸುರೇಶ್ ಕುಮಾರ್ ಶಾಲೆಗಳು ಪ್ರಾರಂಭವಾಗಿಲ್ಲವೆಂದು ಮೇಲ್ನೋಟಕ್ಕೆ ಹೇಳುತ್ತಿದ್ದರೂ ಅದಕ್ಕೆ ವಿರುದ್ದ ದಿಕ್ಕಿನಲ್ಲಿ ಹಳ್ಳಿಗಳಲ್ಲಿ ತರಗತಿಗಳು ನಡೆಯುವಂತೆ ನೋಡಿಕೊಳ್ಳಲಾಗಿದೆ. ಇದು ಸಚಿವರ ದ್ವಂದ್ವ ನಡೆಗೆ ಹಿಡಿದ ಕನ್ನಡಿಯಾಗಿದೆ ಎಂದು ದೂರಲಾಗಿದೆ.

ಶಾಲೆಗೆ ಹೋಗದೆ ಇರುವ ಮಕ್ಕಳು ಪಾಠ ಕೇಳಲು ಸಾಧ್ಯವಾಗದೆ ಶಿಕ್ಷಣದಲ್ಲಿ ಹಿಂದೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆಯೇ ಎಂಬ ಬಗ್ಗೆ ಸಚಿವರು ಮತ್ತು ಸರ್ಕಾರದಿಂದ ಯಾವುದೇ ಸ್ಪಷ್ಟೀಕರಣ ಬಂದಿಲ್ಲ.

ನಗರದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಆರಂಭವಾಗಿಲ್ಲ. ಆದರೆ ಖಾಸಗಿ ಶಾಲೆಗಳಲ್ಲಿ ಅನ್‌ಲೈನ್ ತರಗತಿಗಳು ನಡೆಯುತ್ತಿವೆ. ಕೆಲವು ಶಾಲೆಗಳು ಆನ್‌ಲೈನ್ ತರಗತಿಗಳನ್ನು ತೆಗೆದುಕೊಂಡರೆ ಮತ್ತೆ ಕೆಲವು ಶಾಲೆಗಳಲ್ಲಿ ಆನ್ಲೈನ್‌ನಲ್ಲಿ ವಿಡಿಯೋ ಮಾಢಿ ಪೋಷಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತಿದೆ. ಹೋಂ ವರ್ಕ್ ಕೂಡ ಮೊಬೈಲ್‌ನಲ್ಲೇ ಫೋಟೋ ತೆಗೆದು ಸಂಬಂಧಪಟ್ಟ ಶಾಲೆಗಳಿಗೆ ಕಳಿಸುವಂತಹ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ಕೊರೊನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಗ್ರಾಮೀಣ ಪ್ರದೇಶದಲ್ಲೂ ಹರಡುತ್ತಿದೆ. ಆದರೆ ಮಕ್ಕಳ ಜೀವ ರಕ್ಷಣೆ ಕಡೆ ಸರ್ಕಾರ ಗಮನಹರಿದಂತೆ ಕಾಣುತ್ತಿಲ್ಲ. ಆನ್‌ಲೈನ್ ಶಿಕ್ಷಣ ಇಲ್ಲ, ಆಫ್‌ಲೈನ್ ಶಿಕ್ಷಣವೂ ಇಲ್ಲ. ಕೋವಿಡ್-19 ರಿಂದ ಜೀವಗಳನ್ನು ರಕ್ಷಿಸುವುದು ಮುಖ್ಯ ಎಂದು ಹೇಳಿದ ಸರ್ಕಾರ ತನ್ನ ಮಾತಿನಂತೆ ತಾನೆ ನಡೆದುಕೊಳ್ಳದಿರುವುದು ಸೋಜಿಗದ ಸಂಗತಿಯಾಗಿದೆ.

ವಿದ್ಯಾಗಮದಡಿ ಎಲ್ಲಾ ಕಡೆ ಶಾಲೆ

ಶಿಕ್ಷಕರು ಪ್ರತಿಯೊಂದು ಹಳ್ಳಿಗಳಿಗೂ ಹೋಗಿ ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಹೇಳುತ್ತಾರೆ. ಯಾವ ಮಕ್ಕಳನ್ನು ಕೈಬಿಡುವುದಿಲ್ಲ. ಖಾಸಗಿ ಶಾಲೆಗೆ ಹೋಗುತ್ತಿದ್ದರೂ ಆ ಮಕ್ಕಳನ್ನು ಸೇರಿಸಿಕೊಂಡೇ ಪಾಠ ಹೇಳಿಕೊಡಲಾಗುತ್ತಿದೆ. ಉದಾಹರಣೆಗೆ ಒಂದು ಶಾಲೆಗೆ ಮೂರು ಹಳ್ಳಿಗಳಿಂದ ಮಕ್ಕಳು ಬರುತ್ತಿದ್ದರೆ ಆ ಮೂರು ಹಳ್ಳಿಗಳಿಗೇ ಹೋಗಿ ಸೂಕ್ತ ಜಾಗವನ್ನು ನೋಡಿ ಅಲ್ಲಿ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಹೆಸರು ಹೇಳಲಿಚ್ಚಿಸದ ಸಿಆರ್‌ಪಿ ಒಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.


ಓದಿ: ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...