Homeಕರೋನಾ ತಲ್ಲಣಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ - ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

ಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ – ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

- Advertisement -
- Advertisement -

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಆರಂಭವಾಗಿವೆ. ವಾರದಲ್ಲಿ ಮೂರು ದಿನ ಶಾಲೆಯ ಆವರಣದಲ್ಲಿ ತರಗತಿಗಳು ನಡೆಸುತ್ತಿವೆ.

ದೈಹಿಕ ಅಂತರ ಕಾಪಾಡಿಕೊಂಡು ಶಿಕ್ಷಕರು ಮಕ್ಕಳಿಗೆ ಪಾಠ ಹೇಳುತ್ತಿದ್ದಾರೆ. ತರಗತಿ ನಡೆಸದಂತೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದರೂ ಶಿಕ್ಷಕರು ಇದಕ್ಕಿ ಕಿವಿಗೊಡುತ್ತಿಲ್ಲ. ‘ಬಿಇಒ ಹೇಳಿದ್ದಾರೆ. ಅವರ ಆದೇಶ ಪಾಲಿಸುವುದಷ್ಟೇ ನಮ್ಮ ಕೆಲಸ’ ಎಂದು ಶಿಕ್ಷಕರು ಪೋಷಕರಿಗೆ ಹೇಳಿಕಳಿಸುತ್ತಿರುವ ಉದಾಹರಣೆ ಗಳು ಕಂಡುಬಂದಿವೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೆಪ್ಟೆಂಬರ್ ತಿಂಗಳಲ್ಲೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ. ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ ಗ್ರಾಮೀಣ ಭಾಗದ ಒಂದೊಂದು ಗ್ರಾಮದ ಶಾಲೆಗಳು ಪ್ರಾರಂಭವಾಗಿದ್ದು ಸಚಿವರು ಹೇಳುತ್ತಿರುವುದು ಸುಳ್ಳು ಎಂಬುದು ಸಾಬೀತಾಗಿದೆ.

ಪಿಯು ಕಾಲೇಜುಗಳು ಆರಂಭವಾಗಿಲ್ಲ. ಆದರೆ ಗ್ರಾಮೀಣ ಪ್ರದೇಶದ ಎಲ್ಲಾ ಶಾಲೆಗಳಲ್ಲಿ ಪಾಠ ಭೋಧನೆ ಮಾಡಲಾಗುತ್ತಿದೆ. ಏಕೋಪಾಧ್ಯಾಯ ಶಾಲೆಗಳಲ್ಲಿ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಹೇಳಿಕೊಡುತ್ತಿದ್ದಾರೆ. ವಾರದಲ್ಲಿ ಮೂರು ದಿನ ಅಂದರೆ ಸೋಮವಾರ, ಗುರುವಾರ ಮತ್ತು ಶನಿವಾರ ಮಾತ್ರ ಶಾಲೆಯ ಹೊರಾಂಗಣದಲ್ಲಿ ತರಗತಿಗಳು ನಡೆಯುತ್ತಿವೆ.

ಮೂರು-ನಾಲ್ಕು ಶಿಕ್ಷಕರು ಇರುವ ಶಾಲೆಗಳಲ್ಲಿ 1-7 ನೇ ತರಗತಿವರೆಗಿನ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆಯ ಆವರಣದ ಜೊತೆಗೆ ದೇವಾಲಯ, ಸಮುದಾಯ ಭವನಗಳಲ್ಲೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವ ನಿದರ್ಶನಗಳು ಇದೆ. ವಿದ್ಯಾರ್ಥಿಗಳು ಹೆಚ್ಚು ವಾಸಿಸುವ ಕಡೆಗಳಲ್ಲಿ ದೊಡ್ಡ ಮನೆಯ ಅಂಗಳದಲ್ಲಿ ಮಕ್ಕಳನ್ನು ದೈಹಿಕ ಅಂತರದಲ್ಲಿ ಕೂರಿಸಿ ಬೋಧನೆ ಮಾಡಲಾಗುತ್ತಿದೆ.

ಕಳೆದ ಓಂದು ವಾರದಿಂದಲೂ ತರಗತಿಗಳು ಆರಂಭವಾಗಿವೆ. ಗ್ರಾಮಾಂತರ ಪ್ರದೇಶದಲ್ಲಿ ಶಾಲೆಯ ಆವರಣ ದೇವಾಲಯದ ಆವರಣ, ಸಮುದಾಯ ಭವನ, ಮನೆಯ ಅಂಗಳದಲ್ಲಿ ಪಾಠ ಹೇಳಿಕೊಡಲಾಗುತ್ತಿದೆ. ಕೆಲವು ಕಡೆ ವಾರದಲ್ಲಿ ಮೂರು ದಿನ ನಡೆದರೆ, ಮತ್ತೆ ಕೆಲವು ಕಡೆ ವಾರದ ಏಳು ದಿನಗಳು ತರಗತಿ ನಡೆಯುತ್ತಿದೆ ಹೆಸರು ಹೇಳಲು ಇಚ್ಚಿಸದ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಶಿಕ್ಷಕರು ಪ್ರತಿನಿತ್ಯ ಶಾಲೆಗೆ ಹಾಜರಾಗಬೇಕು. ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಬೇಕು. ಪೋಷಕರ ಸಭೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಆಯಾ ತಾಲೂಕು ಕೇಂದ್ರದ ಬಿಇಒಗಳು ಇಂತಹ ಸೂಚನೆ ನೀಡಿದ್ದು ಶಿಕ್ಷಕರು ವಾಹನ ವ್ಯವಸ್ಥೆ ಮಾಡಿಕೊಂಡು ತಾವು ಕೆಲಸ ಮಾಡುವ ಜಾಗಗಳಿಗೆ ತೆರಳಬೇಕಾದಂಥ ಅನಿವಾರ್ಯತೆ ಇದೆ. ಶಾಲೆಗೆ, ದೇವಸ್ಥಾನಕ್ಕೆ ಬರುವಷ್ಟು ಮಕ್ಕಳಿಗೆ ಪಾಠ ಹೇಳಿಕೊಡಬೇಕಾದ ಸ್ಥಿತಿ ಬಂದಿದೆ. ಎಲ್ಲಾ ಮಕ್ಕಳು ಶಾಲೆಗೆ ಬರುವುದು ಕಡ್ಡಾಯವಲ್ಲವಾದರೂ ಗೈರು ಆಗುವ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.

ಸಚಿವ ಸುರೇಶ್ ಕುಮಾರ್ ಶಾಲೆಗಳು ಪ್ರಾರಂಭವಾಗಿಲ್ಲವೆಂದು ಮೇಲ್ನೋಟಕ್ಕೆ ಹೇಳುತ್ತಿದ್ದರೂ ಅದಕ್ಕೆ ವಿರುದ್ದ ದಿಕ್ಕಿನಲ್ಲಿ ಹಳ್ಳಿಗಳಲ್ಲಿ ತರಗತಿಗಳು ನಡೆಯುವಂತೆ ನೋಡಿಕೊಳ್ಳಲಾಗಿದೆ. ಇದು ಸಚಿವರ ದ್ವಂದ್ವ ನಡೆಗೆ ಹಿಡಿದ ಕನ್ನಡಿಯಾಗಿದೆ ಎಂದು ದೂರಲಾಗಿದೆ.

ಶಾಲೆಗೆ ಹೋಗದೆ ಇರುವ ಮಕ್ಕಳು ಪಾಠ ಕೇಳಲು ಸಾಧ್ಯವಾಗದೆ ಶಿಕ್ಷಣದಲ್ಲಿ ಹಿಂದೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆಯೇ ಎಂಬ ಬಗ್ಗೆ ಸಚಿವರು ಮತ್ತು ಸರ್ಕಾರದಿಂದ ಯಾವುದೇ ಸ್ಪಷ್ಟೀಕರಣ ಬಂದಿಲ್ಲ.

ನಗರದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಆರಂಭವಾಗಿಲ್ಲ. ಆದರೆ ಖಾಸಗಿ ಶಾಲೆಗಳಲ್ಲಿ ಅನ್‌ಲೈನ್ ತರಗತಿಗಳು ನಡೆಯುತ್ತಿವೆ. ಕೆಲವು ಶಾಲೆಗಳು ಆನ್‌ಲೈನ್ ತರಗತಿಗಳನ್ನು ತೆಗೆದುಕೊಂಡರೆ ಮತ್ತೆ ಕೆಲವು ಶಾಲೆಗಳಲ್ಲಿ ಆನ್ಲೈನ್‌ನಲ್ಲಿ ವಿಡಿಯೋ ಮಾಢಿ ಪೋಷಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತಿದೆ. ಹೋಂ ವರ್ಕ್ ಕೂಡ ಮೊಬೈಲ್‌ನಲ್ಲೇ ಫೋಟೋ ತೆಗೆದು ಸಂಬಂಧಪಟ್ಟ ಶಾಲೆಗಳಿಗೆ ಕಳಿಸುವಂತಹ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ಕೊರೊನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಗ್ರಾಮೀಣ ಪ್ರದೇಶದಲ್ಲೂ ಹರಡುತ್ತಿದೆ. ಆದರೆ ಮಕ್ಕಳ ಜೀವ ರಕ್ಷಣೆ ಕಡೆ ಸರ್ಕಾರ ಗಮನಹರಿದಂತೆ ಕಾಣುತ್ತಿಲ್ಲ. ಆನ್‌ಲೈನ್ ಶಿಕ್ಷಣ ಇಲ್ಲ, ಆಫ್‌ಲೈನ್ ಶಿಕ್ಷಣವೂ ಇಲ್ಲ. ಕೋವಿಡ್-19 ರಿಂದ ಜೀವಗಳನ್ನು ರಕ್ಷಿಸುವುದು ಮುಖ್ಯ ಎಂದು ಹೇಳಿದ ಸರ್ಕಾರ ತನ್ನ ಮಾತಿನಂತೆ ತಾನೆ ನಡೆದುಕೊಳ್ಳದಿರುವುದು ಸೋಜಿಗದ ಸಂಗತಿಯಾಗಿದೆ.

ವಿದ್ಯಾಗಮದಡಿ ಎಲ್ಲಾ ಕಡೆ ಶಾಲೆ

ಶಿಕ್ಷಕರು ಪ್ರತಿಯೊಂದು ಹಳ್ಳಿಗಳಿಗೂ ಹೋಗಿ ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಹೇಳುತ್ತಾರೆ. ಯಾವ ಮಕ್ಕಳನ್ನು ಕೈಬಿಡುವುದಿಲ್ಲ. ಖಾಸಗಿ ಶಾಲೆಗೆ ಹೋಗುತ್ತಿದ್ದರೂ ಆ ಮಕ್ಕಳನ್ನು ಸೇರಿಸಿಕೊಂಡೇ ಪಾಠ ಹೇಳಿಕೊಡಲಾಗುತ್ತಿದೆ. ಉದಾಹರಣೆಗೆ ಒಂದು ಶಾಲೆಗೆ ಮೂರು ಹಳ್ಳಿಗಳಿಂದ ಮಕ್ಕಳು ಬರುತ್ತಿದ್ದರೆ ಆ ಮೂರು ಹಳ್ಳಿಗಳಿಗೇ ಹೋಗಿ ಸೂಕ್ತ ಜಾಗವನ್ನು ನೋಡಿ ಅಲ್ಲಿ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಹೆಸರು ಹೇಳಲಿಚ್ಚಿಸದ ಸಿಆರ್‌ಪಿ ಒಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.


ಓದಿ: ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...