Homeಕರೋನಾ ತಲ್ಲಣಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ - ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

ಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ – ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

- Advertisement -
- Advertisement -

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಆರಂಭವಾಗಿವೆ. ವಾರದಲ್ಲಿ ಮೂರು ದಿನ ಶಾಲೆಯ ಆವರಣದಲ್ಲಿ ತರಗತಿಗಳು ನಡೆಸುತ್ತಿವೆ.

ದೈಹಿಕ ಅಂತರ ಕಾಪಾಡಿಕೊಂಡು ಶಿಕ್ಷಕರು ಮಕ್ಕಳಿಗೆ ಪಾಠ ಹೇಳುತ್ತಿದ್ದಾರೆ. ತರಗತಿ ನಡೆಸದಂತೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದರೂ ಶಿಕ್ಷಕರು ಇದಕ್ಕಿ ಕಿವಿಗೊಡುತ್ತಿಲ್ಲ. ‘ಬಿಇಒ ಹೇಳಿದ್ದಾರೆ. ಅವರ ಆದೇಶ ಪಾಲಿಸುವುದಷ್ಟೇ ನಮ್ಮ ಕೆಲಸ’ ಎಂದು ಶಿಕ್ಷಕರು ಪೋಷಕರಿಗೆ ಹೇಳಿಕಳಿಸುತ್ತಿರುವ ಉದಾಹರಣೆ ಗಳು ಕಂಡುಬಂದಿವೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೆಪ್ಟೆಂಬರ್ ತಿಂಗಳಲ್ಲೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ. ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ ಗ್ರಾಮೀಣ ಭಾಗದ ಒಂದೊಂದು ಗ್ರಾಮದ ಶಾಲೆಗಳು ಪ್ರಾರಂಭವಾಗಿದ್ದು ಸಚಿವರು ಹೇಳುತ್ತಿರುವುದು ಸುಳ್ಳು ಎಂಬುದು ಸಾಬೀತಾಗಿದೆ.

ಪಿಯು ಕಾಲೇಜುಗಳು ಆರಂಭವಾಗಿಲ್ಲ. ಆದರೆ ಗ್ರಾಮೀಣ ಪ್ರದೇಶದ ಎಲ್ಲಾ ಶಾಲೆಗಳಲ್ಲಿ ಪಾಠ ಭೋಧನೆ ಮಾಡಲಾಗುತ್ತಿದೆ. ಏಕೋಪಾಧ್ಯಾಯ ಶಾಲೆಗಳಲ್ಲಿ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಹೇಳಿಕೊಡುತ್ತಿದ್ದಾರೆ. ವಾರದಲ್ಲಿ ಮೂರು ದಿನ ಅಂದರೆ ಸೋಮವಾರ, ಗುರುವಾರ ಮತ್ತು ಶನಿವಾರ ಮಾತ್ರ ಶಾಲೆಯ ಹೊರಾಂಗಣದಲ್ಲಿ ತರಗತಿಗಳು ನಡೆಯುತ್ತಿವೆ.

ಮೂರು-ನಾಲ್ಕು ಶಿಕ್ಷಕರು ಇರುವ ಶಾಲೆಗಳಲ್ಲಿ 1-7 ನೇ ತರಗತಿವರೆಗಿನ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆಯ ಆವರಣದ ಜೊತೆಗೆ ದೇವಾಲಯ, ಸಮುದಾಯ ಭವನಗಳಲ್ಲೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವ ನಿದರ್ಶನಗಳು ಇದೆ. ವಿದ್ಯಾರ್ಥಿಗಳು ಹೆಚ್ಚು ವಾಸಿಸುವ ಕಡೆಗಳಲ್ಲಿ ದೊಡ್ಡ ಮನೆಯ ಅಂಗಳದಲ್ಲಿ ಮಕ್ಕಳನ್ನು ದೈಹಿಕ ಅಂತರದಲ್ಲಿ ಕೂರಿಸಿ ಬೋಧನೆ ಮಾಡಲಾಗುತ್ತಿದೆ.

ಕಳೆದ ಓಂದು ವಾರದಿಂದಲೂ ತರಗತಿಗಳು ಆರಂಭವಾಗಿವೆ. ಗ್ರಾಮಾಂತರ ಪ್ರದೇಶದಲ್ಲಿ ಶಾಲೆಯ ಆವರಣ ದೇವಾಲಯದ ಆವರಣ, ಸಮುದಾಯ ಭವನ, ಮನೆಯ ಅಂಗಳದಲ್ಲಿ ಪಾಠ ಹೇಳಿಕೊಡಲಾಗುತ್ತಿದೆ. ಕೆಲವು ಕಡೆ ವಾರದಲ್ಲಿ ಮೂರು ದಿನ ನಡೆದರೆ, ಮತ್ತೆ ಕೆಲವು ಕಡೆ ವಾರದ ಏಳು ದಿನಗಳು ತರಗತಿ ನಡೆಯುತ್ತಿದೆ ಹೆಸರು ಹೇಳಲು ಇಚ್ಚಿಸದ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಶಿಕ್ಷಕರು ಪ್ರತಿನಿತ್ಯ ಶಾಲೆಗೆ ಹಾಜರಾಗಬೇಕು. ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಬೇಕು. ಪೋಷಕರ ಸಭೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಆಯಾ ತಾಲೂಕು ಕೇಂದ್ರದ ಬಿಇಒಗಳು ಇಂತಹ ಸೂಚನೆ ನೀಡಿದ್ದು ಶಿಕ್ಷಕರು ವಾಹನ ವ್ಯವಸ್ಥೆ ಮಾಡಿಕೊಂಡು ತಾವು ಕೆಲಸ ಮಾಡುವ ಜಾಗಗಳಿಗೆ ತೆರಳಬೇಕಾದಂಥ ಅನಿವಾರ್ಯತೆ ಇದೆ. ಶಾಲೆಗೆ, ದೇವಸ್ಥಾನಕ್ಕೆ ಬರುವಷ್ಟು ಮಕ್ಕಳಿಗೆ ಪಾಠ ಹೇಳಿಕೊಡಬೇಕಾದ ಸ್ಥಿತಿ ಬಂದಿದೆ. ಎಲ್ಲಾ ಮಕ್ಕಳು ಶಾಲೆಗೆ ಬರುವುದು ಕಡ್ಡಾಯವಲ್ಲವಾದರೂ ಗೈರು ಆಗುವ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.

ಸಚಿವ ಸುರೇಶ್ ಕುಮಾರ್ ಶಾಲೆಗಳು ಪ್ರಾರಂಭವಾಗಿಲ್ಲವೆಂದು ಮೇಲ್ನೋಟಕ್ಕೆ ಹೇಳುತ್ತಿದ್ದರೂ ಅದಕ್ಕೆ ವಿರುದ್ದ ದಿಕ್ಕಿನಲ್ಲಿ ಹಳ್ಳಿಗಳಲ್ಲಿ ತರಗತಿಗಳು ನಡೆಯುವಂತೆ ನೋಡಿಕೊಳ್ಳಲಾಗಿದೆ. ಇದು ಸಚಿವರ ದ್ವಂದ್ವ ನಡೆಗೆ ಹಿಡಿದ ಕನ್ನಡಿಯಾಗಿದೆ ಎಂದು ದೂರಲಾಗಿದೆ.

ಶಾಲೆಗೆ ಹೋಗದೆ ಇರುವ ಮಕ್ಕಳು ಪಾಠ ಕೇಳಲು ಸಾಧ್ಯವಾಗದೆ ಶಿಕ್ಷಣದಲ್ಲಿ ಹಿಂದೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆಯೇ ಎಂಬ ಬಗ್ಗೆ ಸಚಿವರು ಮತ್ತು ಸರ್ಕಾರದಿಂದ ಯಾವುದೇ ಸ್ಪಷ್ಟೀಕರಣ ಬಂದಿಲ್ಲ.

ನಗರದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಆರಂಭವಾಗಿಲ್ಲ. ಆದರೆ ಖಾಸಗಿ ಶಾಲೆಗಳಲ್ಲಿ ಅನ್‌ಲೈನ್ ತರಗತಿಗಳು ನಡೆಯುತ್ತಿವೆ. ಕೆಲವು ಶಾಲೆಗಳು ಆನ್‌ಲೈನ್ ತರಗತಿಗಳನ್ನು ತೆಗೆದುಕೊಂಡರೆ ಮತ್ತೆ ಕೆಲವು ಶಾಲೆಗಳಲ್ಲಿ ಆನ್ಲೈನ್‌ನಲ್ಲಿ ವಿಡಿಯೋ ಮಾಢಿ ಪೋಷಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತಿದೆ. ಹೋಂ ವರ್ಕ್ ಕೂಡ ಮೊಬೈಲ್‌ನಲ್ಲೇ ಫೋಟೋ ತೆಗೆದು ಸಂಬಂಧಪಟ್ಟ ಶಾಲೆಗಳಿಗೆ ಕಳಿಸುವಂತಹ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ಕೊರೊನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಗ್ರಾಮೀಣ ಪ್ರದೇಶದಲ್ಲೂ ಹರಡುತ್ತಿದೆ. ಆದರೆ ಮಕ್ಕಳ ಜೀವ ರಕ್ಷಣೆ ಕಡೆ ಸರ್ಕಾರ ಗಮನಹರಿದಂತೆ ಕಾಣುತ್ತಿಲ್ಲ. ಆನ್‌ಲೈನ್ ಶಿಕ್ಷಣ ಇಲ್ಲ, ಆಫ್‌ಲೈನ್ ಶಿಕ್ಷಣವೂ ಇಲ್ಲ. ಕೋವಿಡ್-19 ರಿಂದ ಜೀವಗಳನ್ನು ರಕ್ಷಿಸುವುದು ಮುಖ್ಯ ಎಂದು ಹೇಳಿದ ಸರ್ಕಾರ ತನ್ನ ಮಾತಿನಂತೆ ತಾನೆ ನಡೆದುಕೊಳ್ಳದಿರುವುದು ಸೋಜಿಗದ ಸಂಗತಿಯಾಗಿದೆ.

ವಿದ್ಯಾಗಮದಡಿ ಎಲ್ಲಾ ಕಡೆ ಶಾಲೆ

ಶಿಕ್ಷಕರು ಪ್ರತಿಯೊಂದು ಹಳ್ಳಿಗಳಿಗೂ ಹೋಗಿ ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಹೇಳುತ್ತಾರೆ. ಯಾವ ಮಕ್ಕಳನ್ನು ಕೈಬಿಡುವುದಿಲ್ಲ. ಖಾಸಗಿ ಶಾಲೆಗೆ ಹೋಗುತ್ತಿದ್ದರೂ ಆ ಮಕ್ಕಳನ್ನು ಸೇರಿಸಿಕೊಂಡೇ ಪಾಠ ಹೇಳಿಕೊಡಲಾಗುತ್ತಿದೆ. ಉದಾಹರಣೆಗೆ ಒಂದು ಶಾಲೆಗೆ ಮೂರು ಹಳ್ಳಿಗಳಿಂದ ಮಕ್ಕಳು ಬರುತ್ತಿದ್ದರೆ ಆ ಮೂರು ಹಳ್ಳಿಗಳಿಗೇ ಹೋಗಿ ಸೂಕ್ತ ಜಾಗವನ್ನು ನೋಡಿ ಅಲ್ಲಿ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಹೆಸರು ಹೇಳಲಿಚ್ಚಿಸದ ಸಿಆರ್‌ಪಿ ಒಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.


ಓದಿ: ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...