Homeಮುಖಪುಟ'ಶುದ್ದ ಗಾಳಿ ಮೂಲಭೂತ ಹಕ್ಕು' : ದೆಹಲಿಯಲ್ಲಿ ವಾಯುಮಾಲಿನ್ಯದ ವಿರುದ್ಧ ಬೀದಿಗಿಳಿದ ಜನ

‘ಶುದ್ದ ಗಾಳಿ ಮೂಲಭೂತ ಹಕ್ಕು’ : ದೆಹಲಿಯಲ್ಲಿ ವಾಯುಮಾಲಿನ್ಯದ ವಿರುದ್ಧ ಬೀದಿಗಿಳಿದ ಜನ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ವಿರುದ್ದ ಭಾನುವಾರ (ನ.9) ಬೃಹತ್ ಪ್ರತಿಭಟನೆ ನಡೆದಿದೆ. ಪೋಷಕರು, ಮಕ್ಕಳು, ಪರಿಸರ ಹೋರಾಟಗಾರರು ಮತ್ತು ಕೆಲ ರಾಜಕೀಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇಂಡಿಯಾ ಗೇಟ್‌ ಬಳಿ ಪ್ರತಿಭಟನೆ ನಡೆಸಿದ ನಾಗರಿಕರು, “ಸ್ವಚ್ಚ ಗಾಳಿ ನಮ್ಮೆಲ್ಲರ ಹಕ್ಕು” ಎಂದು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುದ್ದ ಗಾಳಿ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಲಾದ ಮೂಲಭೂತ ಹಕ್ಕಾಗಿದೆ (ಜೀವಿಸುವ ಹಕ್ಕು) ಎಂದು ಹೇಳಿದ್ದಾರೆ.

ವಿಷ ಗಾಳಿಯಿಂದ ಈಗಾಗಲೇ ಜನರು ಅನಾರೋಗ್ಯಕ್ಕೀಡಾಗಿದ್ದಾರೆ. ಮೂವರಲ್ಲಿ ಒಬ್ಬ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸರ್ಕಾರ ಅಸಲಿ ದತ್ತಾಂಶಗಳನ್ನು ಮುಚ್ಚಿಟ್ಟು ರಾಜಕೀಯ ಮಾಡುತ್ತಿದೆ. ವಸ್ತುಸ್ಥಿತಿ ತಿಳಿಯಬೇಕೆಂದರೆ ಜನಪ್ರತಿನಿಧಿಗಳು ಬೀದಿಗಿಳಿಯಬೇಕು ಎಂದು ಪ್ರತಿಭಟನಾ ನಿರತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಸಂಸ್ಥೆಗಳು ಸುಳ್ಳು ದತ್ತಾಂಶಗಳನ್ನು ಒದಗಿಸಿ ರಾಜಕೀಯ ನಾಯಕರ ಹಿತ ಕಾಯುತ್ತಿವೆ. ವಾಯುಮಾಲಿನ್ಯ ರಾಜಕೀಯ ಮಾಡಬೇಕಾದ ವಿಷಯವಲ್ಲ. ಇಡೀ ನಗರ ವಿಷಗಾಳಿಯಿಂದ ತುಂಬಿಕೊಂಡಿದೆ. ಜನರು ಸಾಯುತ್ತಿದ್ದಾರೆ. ಹಾಗಾಗಿ, ಸ್ವಾಯತ್ತ ಸಂಸ್ಥೆಗಳಿಂದ ವಾಯು ಗುಣಮಟ್ಟವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ದೆಹಲಿಯ ವಾಯುಮಾಲಿನ್ಯದ ಬಗ್ಗೆ ಧ್ವನಿ ಎತ್ತದ, ಅದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಇರುವ ಜನರ ವಿರುದ್ದವೂ ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರತಿಕ್ಷಣ ಉಸಿರಾಡುವ ಗಾಳಿಯ ಗಾಳಿಯ ಬಗ್ಗೆಯೂ ತಲೆ ಕೆಡಿಸಿಕೊಳ್ಳದ ಜನರು, ಇನ್ಯಾವುದನ್ನು ಪ್ರಶ್ನಿಸಿಯಾರು?” ಎಂದು ಕೆಲ ಪ್ರತಿಭಟನಾಕಾರರು ಪ್ರಶ್ನಿಸಿದ್ದಾಗಿ ವರದಿಯಾಗಿದೆ.

ಪೂರ್ವಾನುಮತಿ ಪಡೆಯದೆ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದಕ್ಕೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ದೆಹಲಿಯ ವಾಯುಮಾಲಿನ್ಯದ ವಿರುದ್ದ ನವೆಂಬರ್ 6ರಂದು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಅದರಲ್ಲಿ ವಿಜ್ಞಾನಿಗಳು, ಪರಿಸರ ಹೋರಾಟಗಾರರು, ವಿವಿಧ ವಲಯಗಳ ಪ್ರಮುಖರು ಮತ್ತು ಸಾಮಾನ್ಯ ನಾಗರಿಕರು ಸೇರಿ ಸುಮಾರು 80 ಮಂದಿ ಪಾಲ್ಗೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಪ್ರತಿಭಟನೆಯನ್ನು ಬೆಂಬಲಿಸಿದ್ದರು.

ಶುದ್ಧ ಗಾಳಿ ಪಡೆಯುವುದು ಮೂಲಭೂತ ಹಕ್ಕು ರಾಹುಲ್ ಗಾಂಧಿ ಹೇಳಿದ್ದರು. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿದ ಪೊಲೀಸರ ಕ್ರಮವನ್ನು ಅವರು ಟೀಕಿಸಿದ್ದರು.

ಬಹುಪತ್ನಿತ್ವ ನಿಷೇಧ ಮಸೂದೆಗೆ ಅಸ್ಸಾಂ ಸಂಪುಟ ಅಸ್ತು : ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...