Homeಮುಖಪುಟಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

ಹೋಳಿ ಹಬ್ಬದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ; ಸಂಭಾಲ್ ವೃತ್ತ ನಿರೀಕ್ಷಕರಿಗೆ ಕ್ಲೀನ್ ಚಿಟ್

- Advertisement -
- Advertisement -

ಇತ್ತೀಚೆಗೆ ಹೋಳಿ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಭಾಲ್ ವೃತ್ತ ನಿರೀಕ್ಷಕ ಅನುಜ್ ಚೌಧರಿ ಅವರಿಗೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಕ್ಲೀನ್ ಚಿಟ್ ನೀಡಿದೆ.

ಈ ವರ್ಷದ ಹೋಳಿ ಶುಕ್ರವಾರದ ಪ್ರಾರ್ಥನೆಯಂದೇ ಬಂದಿತ್ತು. ಈ ಪ್ರದೇಶದಲ್ಲಿ ಕೋಮು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಲು, ಶಾಂತಿ ಸಮಿತಿ ಸಭೆ ನಡೆಸಲಾಯಿತು. ಅಲ್ಲಿ ಮಾತನಾಡಿದ್ದ ಸಿಒ ಚೌಧರಿ, “ಹೋಳಿ ಹಬ್ಬದ ಸಮಯದಲ್ಲಿ ಮುಸ್ಲಿಮರು ಬಣ್ಣ ಬಳಿಯುವುದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ, ಅವರು ಮನೆಯಲ್ಲಿಯೇ ಇರಬೇಕು” ಎಂದು ಹೇಳಿದರು.

ಅವರ ಹೇಳಿಕೆಗಳು ವ್ಯಾಪಕ ಖಂಡನೆಗೆ ಕಾರಣವಾದವು, ಅದರ ನಂತರ ನಿವೃತ್ತ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರು ಚೌಧರಿ ಅವರು ಸೇವಾ ಮತ್ತು ಸಮವಸ್ತ್ರ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಪೊಲೀಸ್ ವರಿಷ್ಠಾಧಿಕಾರಿ (ಕಾನೂನು ಮತ್ತು ಸುವ್ಯವಸ್ಥೆ) ಮನೋಜ್ ಕುಮಾರ್ ಅವಸ್ಥಿ ನೇತೃತ್ವದ ತನಿಖಾ ತಂಡವು ಸಂಭಾಲ್ ವೃತ್ತ ನಿರೀಕ್ಷಕರನ್ನು ತಪ್ಪಿತಸ್ಥರೆಂದು ಪರಿಗಣಿಸಿಲ್ಲ. ಅವಸ್ಥಿ ಅವರ ವರದಿಯು, “ದೂರುದಾರರ ಆರೋಪಗಳನ್ನು ಬೆಂಬಲಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳು ಕಂಡುಬಂದಿಲ್ಲ” ಎಂದು ಸೂಚಿಸಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ತನಿಖಾ ತಂಡವು ಜನ್ ಕಲ್ಯಾಣ್ ಸಮಿತಿಯ ಅಧ್ಯಕ್ಷ ಜಿತೇಂದ್ರ ವರ್ಮಾ ಮತ್ತು ಅಸ್ಮೋಲಿ ಗ್ರಾಮದ ಯಾಸೀನ್ ಎಂಬ ವ್ಯಕ್ತಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಕುತೂಹಲಕಾರಿಯಾಗಿ, ಇಬ್ಬರೂ ಸಂಭಾಲ್ ವೃತ್ತ ನಿರೀಕ್ಷಕರ ಹೇಳಿಕೆಯನ್ನು ಬಲವಾಗಿ ಬೆಂಬಲಿಸಿದ್ದಾರೆ.

ಸಂಭಾಲ್ ವೃತ್ತ ನಿರೀಕ್ಷಕರಿಗೆ ವಿವಾದ ಹೊಸದಲ್ಲ. ಈ ವರ್ಷದ ಜನವರಿಯಲ್ಲಿ, ಚೌಧರಿ ಸಮವಸ್ತ್ರದಲ್ಲಿ ಹಿಂದೂ ಯಾತ್ರೆಯಲ್ಲಿ (ಮೆರವಣಿಗೆ) ಭಾಗವಹಿಸಿದ ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿಯೊ ಕಾಣಿಸಿಕೊಂಡಿತು. ಈ ದೃಶ್ಯಾವಳಿಗಳು ಅವರು ಕೇಸರಿ ವಸ್ತ್ರ ಧರಿಸಿದ ಪುರೋಹಿತರ ಜೊತೆಗೆ ನಡೆದುಕೊಂಡು ಹೋಗುವಾಗ ಗದೆಯನ್ನು ಹಿಡಿದುಕೊಂಡು ಸ್ತುತಿಗೀತೆಗಳನ್ನು ಹಾಡುತ್ತಿರುವುದನ್ನು ದಾಅಖಲಾಗಿದೆ. ಅವರು ದೇವಾಲಯಗಳಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಸಹ ಮಾಡಿದರು.

ಕಳೆದ ವರ್ಷ, ನವೆಂಬರ್ 24 ರಂದು ಮೊಘಲ್ ಯುಗದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯ ಸಂದರ್ಭದಲ್ಲಿ ಸಂಭಾಲ್‌ನಲ್ಲಿ ಹಿಂಸಾತ್ಮಕ ಘರ್ಷಣೆಗಳ ನಂತರ, ಸರ್ಕಲ್ ಇನ್ಸ್‌ಪೆಕ್ಟರ್, ಪೊಲೀಸ್ ಗುಂಡಿನ ದಾಳಿಯಲ್ಲಿ ನಾಗರಿಕ ಹತ್ಯೆಗಳ ಬಗ್ಗೆ ಕೇಳಿದಾಗ, “ಇಂತಹ ಅಸಂಸ್ಕೃತ ಜನರಿಂದ ವಿದ್ಯಾವಂತ ವ್ಯಕ್ತಿ ಸಾಯುತ್ತಾನೆಯೇ? ನಾವು ಈ ರೀತಿ ಸಾಯಲು ಪೊಲೀಸ್ ಪಡೆಗೆ ಸೇರಲಿಲ್ಲ” ಎಂದು ಹೇಳಿದ್ದರು.

ಬ್ರಾಹ್ಮಣರ ಕುರಿತ ಹೇಳಿಕೆ ವಿವಾದ: ಅನುರಾಗ್ ಕಶ್ಯಪ್ ಕುಟುಂಬಕ್ಕೆ ಕೊಲೆ, ಅತ್ಯಾಚಾರ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...