Homeಮುಖಪುಟಕಾಂಗ್ರೆಸ್ ಇರುವವರೆಗೆ ಯಾವ ಶಕ್ತಿಗೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಬಿಡುವುದಿಲ್ಲ: ರಾಹುಲ್‌ ಗಾಂಧಿ

ಕಾಂಗ್ರೆಸ್ ಇರುವವರೆಗೆ ಯಾವ ಶಕ್ತಿಗೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಬಿಡುವುದಿಲ್ಲ: ರಾಹುಲ್‌ ಗಾಂಧಿ

- Advertisement -
- Advertisement -

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಕಿತ್ತುಕೊಳ್ಳುವುದು ಅವರ ಉದ್ದೇಶ ಎಂಬುದು ಬಿಜೆಪಿ ನಾಯಕರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಕಾಂಗ್ರೆಸ್ ಇರುವವರೆಗೆ ಜಗತ್ತಿನ ಯಾವ ಶಕ್ತಿಯೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಹೇಳಿದ್ದಾರೆ.

ಈ ಕುರಿತು ರಾಹುಲ್‌ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಬಿಜೆಪಿ ನಾಯಕರು ಮತ್ತು ನರೇಂದ್ರ ಮೋದಿಯವರಿಗೆ ಆಪ್ತರ ಹೇಳಿಕೆಗಳಿಂದ ಈಗ ಸ್ಪಷ್ಟವಾಗಿದೆ. ಅವರ ಉದ್ದೇಶ ಸಂವಿಧಾನವನ್ನು ಬದಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು. ದಲಿತರು, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಕಸಿದುಕೊಳ್ಳುವುದು ಮತ್ತು ದೇಶವನ್ನು ಮುನ್ನಡೆಸುವಲ್ಲಿ ಈ ಸಮುದಾಯಗಳ ಭಾಗವಹಿಸುವಿಕೆಯನ್ನೂ ತಡೆಯುವುದು ಬಿಜೆಪಿಯ ಗುರಿಯಾಗಿದೆ ಎಂದು ಹೇಳಿದ್ದಾರೆ.

ಸಂವಿಧಾನ ಮತ್ತು ಮೀಸಲಾತಿಯನ್ನು ರಕ್ಷಿಸಲು ಬಿಜೆಪಿಯ ಹಾದಿಯಲ್ಲಿ ಕಾಂಗ್ರೆಸ್ ಬಂಡೆಯಂತೆ ನಿಂತಿದೆ.  ಕಾಂಗ್ರೆಸ್ ಇರುವವರೆಗೆ ಜಗತ್ತಿನ ಯಾವ ಶಕ್ತಿಯೂ ವಂಚಿತ ಜನರ ಮೀಸಲಾತಿಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೋಟಾ ಕಿತ್ತುಕೊಳ್ಳುವ ಹೇಳಿಕೆಗಳನ್ನು ‘ಸುಳ್ಳು ಪ್ರಚಾರ’ ಎಂದು ಶನಿವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್,  ಬಿಜೆಪಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಗೆ ವಿರುದ್ಧವಾಗಿದೆ ಎಂದು ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಮಾತನಾಡಿ, ವಾಸ್ತವವೆಂದರೆ 1950 ರಿಂದ ಕಾಂಗ್ರೆಸ್ ಪ್ರಧಾನ ಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಲು ಮತ್ತು ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ನೀಡಿರುವ ಹಕ್ಕನ್ನು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಬಯಸಿದೆ ಎಂದು ಆರೋಪಿಸಿದ್ದರು. ಇದನ್ನು ಸುಳ್ಳು ಪ್ರಚಾರ ಎಂದು ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಆಕ್ರೋಶವನ್ನು ವ್ಯಕ್ತಪಡಿಸಿತ್ತು.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...