Homeಕರ್ನಾಟಕಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗ ಬುಧವಾರವಷ್ಟೇ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು, ಈ ಬೆನ್ನಲ್ಲೇ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ.

ಕರ್ನಾಟಕ ವಿಧಾನಸಭೆಯ 224 ಸ್ಥಾನಗಳಿಗೆ ಚುನಾವಣೆ
ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ ಪಕ್ಷ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

ರಾಜ್ಯದಲ್ಲಿ ಯಾರು ಸಿಎಂ ಆಗಬೇಕು? ಎನ್ನುವ ಪ್ರಶ್ನೆಗೆ ಮತದಾರರ ಒಲವು ಹೀಗಿದೆ- ರಾಜ್ಯದಲ್ಲಿ ಈ ಹಿಂದೆ 5 ವರ್ಷಗಳ ಕಾಲ ಸಂಪೂರ್ಣ ಅವಧಿಯ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಪರ ಶೇ 39.1 ಜನರು ಒಲವು ತೋರಿದ್ದಾರೆ. ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಶೇ 31.1 ಜನರು ಒಲವು ಹೊಂದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಪರ ಶೇ 21.4 ಹಾಗೂ ಕಾಂಗ್ರೆಸ್‌ ಪಕ್ಷದಿಂದ ಸಿಎಂ ರೇಸ್‌ನಲ್ಲಿರುವ ಡಿ.ಕೆ.ಶಿವಕುಮಾರ್ ಪರ ಕೇವಲ ಶೇ 3.2 ಜನರು ಒಲವು ಹೊಂದಿದ್ದಾರೆ.

ಇದನ್ನೂ ಓದಿ: ವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜನರು ಅಭಿಪ್ರಾಯ ಹೇಗಿದೆ? ಎನ್ನುವ ಪ್ರಶ್ನೆಗೆ, ಶೇ 50ರಷ್ಟು ಜನರು ಬಿಜೆಪಿ ಸರ್ಕಾರ ಕಳಪೆ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ. ಶೇ 47ರಷ್ಟು ಮಂದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳಪೆ ಸಾಧನೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಉಳಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಶೇ. 47 ರಷ್ಟು ಜನರು ಉತ್ತಮ ಆಡಳಿತ ಎಂದು ರೇಟಿಂಗ್‌ ನೀಡಿದ್ದಾರೆಂದು ಎಬಿಪಿ ಸಿ –ವೋಟರ್ ಸಮೀಕ್ಷೆ ಹೇಳಿದೆ.

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ಗೆ ಶೇ 36 ಮತ್ತು ಬಿಜೆಪಿಗೆ ಶೇ 20 ಮತ ಹಂಚಿಕೆಯಾಗಲಿದೆ. ಈ ಭಾಗದ 55 ಸ್ಥಾನಗಳಲ್ಲಿ ಜೆಡಿಎಸ್‌ಗೆ 26-27 ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ 24-28 ಸ್ಥಾನಗಳು ಸಿಗಬಹುದು ಎಂದು ಅಂದಾಜಿಸಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಡಬಹುದು ಎಂದು ಸಮೀಕ್ಷಯಲ್ಲಿ ಹೇಳಲಾಗಿದೆ.

ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಶೇ 44 ಮತ್ತು ಬಿಜೆಪಿಗೆ ಶೇ 37ರಷ್ಟು ಮತ ಹಂಚಿಕೆಯಾಗಲಿದೆ. ಈ ಪ್ರದೇಶದಲ್ಲಿ ಕಾಂಗ್ರೆಸ್ 19-23 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಇನ್ನು ಬಿಜೆಪಿ 8-12 ಕ್ಷೇತ್ರಗಳಿಗೆ ಸೀಮಿತವಾಗಬಹುದು ಎಂದು ಅಂದಾಜಿಸಲಾಗಿದೆ.

ಮುಂಬೈ-ಕರ್ನಾಟಕ ಭಾಗದ 50 ಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಶೇ 43 ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ಇದು ಲಿಂಗಾಯತ ಮತಗಳು ಪ್ರಾಬಲ್ಯ ಹೊಂದಿವೆ. ಇಲ್ಲಿಯೂ ಕೂಡ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಕಾಂಗ್ರೆಸ್ 25-29 ಸ್ಥಾನಗಳನ್ನು ಗೆಲ್ಲಲಿದೆ, ಬಿಜೆಪಿ 21-25 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆ ಹೇಳಿದೆ.

ಮಧ್ಯಕರ್ನಾಟಕ ಕೇಸರಿ ಪಕ್ಷದ ಭದ್ರಕೋಟೆ ಎಂದೇ ಹೇಳಲಾಗುತ್ತದೆ ಆದರೆ, ಮತದಾರರು ಮಾತ್ರ ಈ ಬಾರಿ ಕೇಸರಿ ಬಿಟ್ಟು ‘ಕೈ’ನತ್ತು ಒಲವು ತೋರುತ್ತಿದ್ದಾರೆ. ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಶೇ 38ರಷ್ಟು ಮತ, ಕಾಂಗ್ರೆಸ್ ಶೇ 41 ಮತಗಳನ್ನು ಗಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಭಾಗದ 35 ಸ್ಥಾನಗಳಲ್ಲಿ ಬಿಜೆಪಿ 12-16 ಸ್ಥಾನಗಳನ್ನು ಗೆಲ್ಲುತ್ತದೆ. ಆದರೆ ಕಾಂಗ್ರೆಸ್ 18-22 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಇನ್ನು ಜೆಡಿಎಸ್‌ಗೆ 2ಕ್ಕಿಂತ ಹೆಚ್ಚು ಸ್ಥಾನ ಸಿಗುವುದಿಲ್ಲ ಎಂದು ಹೇಳಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಸಾಂಪ್ರದಾಯಕವಾಗಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಲಾಗಿದೆ. ಈ ಭಾಗದಲ್ಲಿ ಬಿಜೆಪಿ ಶೇ 46 ರಷ್ಟು ಮತಗಳನ್ನು ಗಳಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಶೇ 41ರಷ್ಟು ಮತದಾರರ ಬೆಂಬಲವನ್ನು ಪಡೆಯುತ್ತದೆ. ಜೆಡಿಎಸ್ ಒಟ್ಟು ಮತಗಳ ಶೇ 6ಕ್ಕಿಂತ ಕಡಿಮೆ ಮತ ಪಡೆಯಲಿದೆ. ಕೇವಲ 21 ಸ್ಥಾನಗಳನ್ನು ಕರಾವಳಿ ಹೊಂದಿದ್ದು, ಬಿಜೆಪಿಯು ಕಾಂಗ್ರೆಸ್‌ ಪ್ರಬಲ ಪೈಪೋಟಿ ಬೀಳಲಿದೆ. ಬಿಜೆಪಿ 9-13 ಸ್ಥಾನಗಳು, ಕಾಂಗ್ರೆಸ್‌ 8 ರಿಂದ 12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...