Homeಕರ್ನಾಟಕಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗ ಬುಧವಾರವಷ್ಟೇ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು, ಈ ಬೆನ್ನಲ್ಲೇ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ.

ಕರ್ನಾಟಕ ವಿಧಾನಸಭೆಯ 224 ಸ್ಥಾನಗಳಿಗೆ ಚುನಾವಣೆ
ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ ಪಕ್ಷ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

ರಾಜ್ಯದಲ್ಲಿ ಯಾರು ಸಿಎಂ ಆಗಬೇಕು? ಎನ್ನುವ ಪ್ರಶ್ನೆಗೆ ಮತದಾರರ ಒಲವು ಹೀಗಿದೆ- ರಾಜ್ಯದಲ್ಲಿ ಈ ಹಿಂದೆ 5 ವರ್ಷಗಳ ಕಾಲ ಸಂಪೂರ್ಣ ಅವಧಿಯ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಪರ ಶೇ 39.1 ಜನರು ಒಲವು ತೋರಿದ್ದಾರೆ. ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಶೇ 31.1 ಜನರು ಒಲವು ಹೊಂದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಪರ ಶೇ 21.4 ಹಾಗೂ ಕಾಂಗ್ರೆಸ್‌ ಪಕ್ಷದಿಂದ ಸಿಎಂ ರೇಸ್‌ನಲ್ಲಿರುವ ಡಿ.ಕೆ.ಶಿವಕುಮಾರ್ ಪರ ಕೇವಲ ಶೇ 3.2 ಜನರು ಒಲವು ಹೊಂದಿದ್ದಾರೆ.

ಇದನ್ನೂ ಓದಿ: ವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಜನರು ಅಭಿಪ್ರಾಯ ಹೇಗಿದೆ? ಎನ್ನುವ ಪ್ರಶ್ನೆಗೆ, ಶೇ 50ರಷ್ಟು ಜನರು ಬಿಜೆಪಿ ಸರ್ಕಾರ ಕಳಪೆ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ. ಶೇ 47ರಷ್ಟು ಮಂದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳಪೆ ಸಾಧನೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಉಳಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಶೇ. 47 ರಷ್ಟು ಜನರು ಉತ್ತಮ ಆಡಳಿತ ಎಂದು ರೇಟಿಂಗ್‌ ನೀಡಿದ್ದಾರೆಂದು ಎಬಿಪಿ ಸಿ –ವೋಟರ್ ಸಮೀಕ್ಷೆ ಹೇಳಿದೆ.

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ಗೆ ಶೇ 36 ಮತ್ತು ಬಿಜೆಪಿಗೆ ಶೇ 20 ಮತ ಹಂಚಿಕೆಯಾಗಲಿದೆ. ಈ ಭಾಗದ 55 ಸ್ಥಾನಗಳಲ್ಲಿ ಜೆಡಿಎಸ್‌ಗೆ 26-27 ಸ್ಥಾನಗಳನ್ನು ಮತ್ತು ಕಾಂಗ್ರೆಸ್‌ಗೆ 24-28 ಸ್ಥಾನಗಳು ಸಿಗಬಹುದು ಎಂದು ಅಂದಾಜಿಸಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಡಬಹುದು ಎಂದು ಸಮೀಕ್ಷಯಲ್ಲಿ ಹೇಳಲಾಗಿದೆ.

ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಶೇ 44 ಮತ್ತು ಬಿಜೆಪಿಗೆ ಶೇ 37ರಷ್ಟು ಮತ ಹಂಚಿಕೆಯಾಗಲಿದೆ. ಈ ಪ್ರದೇಶದಲ್ಲಿ ಕಾಂಗ್ರೆಸ್ 19-23 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಇನ್ನು ಬಿಜೆಪಿ 8-12 ಕ್ಷೇತ್ರಗಳಿಗೆ ಸೀಮಿತವಾಗಬಹುದು ಎಂದು ಅಂದಾಜಿಸಲಾಗಿದೆ.

ಮುಂಬೈ-ಕರ್ನಾಟಕ ಭಾಗದ 50 ಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಶೇ 43 ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ಇದು ಲಿಂಗಾಯತ ಮತಗಳು ಪ್ರಾಬಲ್ಯ ಹೊಂದಿವೆ. ಇಲ್ಲಿಯೂ ಕೂಡ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಕಾಂಗ್ರೆಸ್ 25-29 ಸ್ಥಾನಗಳನ್ನು ಗೆಲ್ಲಲಿದೆ, ಬಿಜೆಪಿ 21-25 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆ ಹೇಳಿದೆ.

ಮಧ್ಯಕರ್ನಾಟಕ ಕೇಸರಿ ಪಕ್ಷದ ಭದ್ರಕೋಟೆ ಎಂದೇ ಹೇಳಲಾಗುತ್ತದೆ ಆದರೆ, ಮತದಾರರು ಮಾತ್ರ ಈ ಬಾರಿ ಕೇಸರಿ ಬಿಟ್ಟು ‘ಕೈ’ನತ್ತು ಒಲವು ತೋರುತ್ತಿದ್ದಾರೆ. ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಶೇ 38ರಷ್ಟು ಮತ, ಕಾಂಗ್ರೆಸ್ ಶೇ 41 ಮತಗಳನ್ನು ಗಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಭಾಗದ 35 ಸ್ಥಾನಗಳಲ್ಲಿ ಬಿಜೆಪಿ 12-16 ಸ್ಥಾನಗಳನ್ನು ಗೆಲ್ಲುತ್ತದೆ. ಆದರೆ ಕಾಂಗ್ರೆಸ್ 18-22 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಇನ್ನು ಜೆಡಿಎಸ್‌ಗೆ 2ಕ್ಕಿಂತ ಹೆಚ್ಚು ಸ್ಥಾನ ಸಿಗುವುದಿಲ್ಲ ಎಂದು ಹೇಳಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಸಾಂಪ್ರದಾಯಕವಾಗಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಲಾಗಿದೆ. ಈ ಭಾಗದಲ್ಲಿ ಬಿಜೆಪಿ ಶೇ 46 ರಷ್ಟು ಮತಗಳನ್ನು ಗಳಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಶೇ 41ರಷ್ಟು ಮತದಾರರ ಬೆಂಬಲವನ್ನು ಪಡೆಯುತ್ತದೆ. ಜೆಡಿಎಸ್ ಒಟ್ಟು ಮತಗಳ ಶೇ 6ಕ್ಕಿಂತ ಕಡಿಮೆ ಮತ ಪಡೆಯಲಿದೆ. ಕೇವಲ 21 ಸ್ಥಾನಗಳನ್ನು ಕರಾವಳಿ ಹೊಂದಿದ್ದು, ಬಿಜೆಪಿಯು ಕಾಂಗ್ರೆಸ್‌ ಪ್ರಬಲ ಪೈಪೋಟಿ ಬೀಳಲಿದೆ. ಬಿಜೆಪಿ 9-13 ಸ್ಥಾನಗಳು, ಕಾಂಗ್ರೆಸ್‌ 8 ರಿಂದ 12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...