Homeಕರ್ನಾಟಕರಾಜಕಾಲುವೆ ಒತ್ತುವರಿ ಎಷ್ಟೆ ಪ್ರಭಾವಿಗಳು ಮಾಡಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜಕಾಲುವೆ ಒತ್ತುವರಿ ಎಷ್ಟೆ ಪ್ರಭಾವಿಗಳು ಮಾಡಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

- Advertisement -
- Advertisement -

ಬೆಂಗಳೂರಿನ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ. ಅವರು ನಗರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ರಾಜಕಾಲುವೆ ಒತ್ತುವರಿ ಎಷ್ಟೆ

“ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ. 125 ಕಿಮೀ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು” ಎಂದು ಹೇಳಿದ್ದಾರೆ.

ಇನ್ನುಳಿದ 173 ಕಿಮೀ ರಾಜಕಾಲುವೆ ಅಭಿವೃದ್ಧಿಗೆ ವಿಶ್ವಬ್ಯಾಂಕ್‌ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು ಕಾಮಗಾರಿಗೆ ಕೈಗೊಂಡಿದ್ದೇವೆ. ಇದರ ಟೆಂಡರ್ ಮುಗಿದಿದ್ದು, ಮೂರು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲಾಗುವುದು. ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ. ತಗ್ಗು ಪ್ರದೇಶಗಳ ಬೇಸ್ಮೆಂಟ್‌ಗಳಲ್ಲಿ ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ. 166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಾನ್ಯತಾ ಟೆಕ್‌ಪಾರ್ಕ್‌ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್‌ಪಾರ್ಕ್‌ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90 ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಹೆಚ್‌ಬಿಆರ್‌ ಬಡಾವಣೆಯ ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದ್ದೇವೆ. ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಸೂಚನೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸಾಯಿ ಲೇಔಟ್ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್‌ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಬಿಬಿಎಂಪಿ ಇದಕ್ಕಾಗಿ ಒಟ್ಟು 13 ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ 6ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, 3ಕೋಟಿ ಪಾವತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಹಾದೇವಪುರದ ಪಣತ್ತೂರು ಗಾರ್ಡನ್‌ನಲ್ಲಿ ನೀರು ಸರಾಗವಾಗಿ ಹರಿದು ಹೋಗದೆ ಪ್ರತಿ ವರ್ಷ ಸಮಸ್ಯೆಯಾಗುತ್ತಿದೆ. ರೈಲ್ವೇ ಲೈನ್ ಕೆಳಗಡೆ ಅಗಲ ಬಹಳ ಕಡಿಮೆಯಿದೆ. ಇದನ್ನು ವಿಸ್ತರಿಸಲು ಹಾಗೂ ರಸ್ತೆ ಅಗಲೀಕರಣ ಕಾರ್ಯ ಈಗಾಗಲೇ ನಡೆಯುತ್ತಿದ್ದು, ಶೇ.20ರಷ್ಟು ಕಾಮಗಾರಿ ಬಾಕಿಯಿದೆ. ಇಲ್ಲಿ ಟ್ರೆಂಚ್ಲೆಸ್ ತಾಂತ್ರಿಕತೆ ಬಳಸಿ ಕೆಲಸ ಮಾಡುತ್ತಿದ್ದು, 45ದಿನಗಳ ಒಳಗಾಗಿ ಉಳಿದಿರುವ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಾಲ್ಕು ಕಡೆಗಳಿಂದ ನೀರು ಬರುತ್ತಿದ್ದು, ಅಲ್ಲಿಂದ ಎಲ್ಲಾ ನೀರು ಹೆಚ್ಎಸ್ಆರ್ ಲೇಔಟ್ ಕಡೆ ಹರಿದು ಬರುತ್ತದೆ. ಮೆಟ್ರೋ, ಬಿಬಿಎಂಪಿ ಮತ್ತು ರಾಷ್ಟ್ರೀಯ ಹೆದ್ದಾರಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಈ ಮೂರು ವಿಭಾಗಗಳು ಈ ಕುರಿತು ಯೋಜನೆ ರೂಪಿಸಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 2022ರಲ್ಲಿ 299ಮಿಮೀ ಮಳೆಯಾಗಿತ್ತು. 10 ವರ್ಷಗಳಲ್ಲಿ ಇದು ಎರಡನೇ ಬಾರಿ ಹೆಚ್ಚಿನ ಮಳೆಯಾಗಿದೆ. ಮೇ 19ರ ಮಧ್ಯರಾತ್ರಿ 132 ಮಿಮೀ ಮಳೆ ದಾಖಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ ಎಷ್ಟೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುರ್ಷಿದಾಬಾದ್ ಹಿಂಸಾಚಾರದ ವೇಳೆ ಪೊಲೀಸರು ನಿಷ್ಕ್ರಿಯ: ಹೈಕೋರ್ಟ್ ನೇಮಿಸಿದ ಸಮಿತಿ

ಮುರ್ಷಿದಾಬಾದ್ ಹಿಂಸಾಚಾರದ ವೇಳೆ ಪೊಲೀಸರು ನಿಷ್ಕ್ರಿಯ: ಹೈಕೋರ್ಟ್ ನೇಮಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...