Homeಕರ್ನಾಟಕರಾಜಕಾಲುವೆ ಒತ್ತುವರಿ ಎಷ್ಟೆ ಪ್ರಭಾವಿಗಳು ಮಾಡಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜಕಾಲುವೆ ಒತ್ತುವರಿ ಎಷ್ಟೆ ಪ್ರಭಾವಿಗಳು ಮಾಡಿದ್ದರೂ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

- Advertisement -
- Advertisement -

ಬೆಂಗಳೂರಿನ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತಿಳಿಸಿದ್ದಾರೆ. ಅವರು ನಗರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ರಾಜಕಾಲುವೆ ಒತ್ತುವರಿ ಎಷ್ಟೆ

“ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ. 125 ಕಿಮೀ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು” ಎಂದು ಹೇಳಿದ್ದಾರೆ.

ಇನ್ನುಳಿದ 173 ಕಿಮೀ ರಾಜಕಾಲುವೆ ಅಭಿವೃದ್ಧಿಗೆ ವಿಶ್ವಬ್ಯಾಂಕ್‌ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು ಕಾಮಗಾರಿಗೆ ಕೈಗೊಂಡಿದ್ದೇವೆ. ಇದರ ಟೆಂಡರ್ ಮುಗಿದಿದ್ದು, ಮೂರು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲಾಗುವುದು. ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ. ತಗ್ಗು ಪ್ರದೇಶಗಳ ಬೇಸ್ಮೆಂಟ್‌ಗಳಲ್ಲಿ ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ. 166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಾನ್ಯತಾ ಟೆಕ್‌ಪಾರ್ಕ್‌ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್‌ಪಾರ್ಕ್‌ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90 ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಹೆಚ್‌ಬಿಆರ್‌ ಬಡಾವಣೆಯ ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದ್ದೇವೆ. ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಸೂಚನೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸಾಯಿ ಲೇಔಟ್ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್‌ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಬಿಬಿಎಂಪಿ ಇದಕ್ಕಾಗಿ ಒಟ್ಟು 13 ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ 6ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, 3ಕೋಟಿ ಪಾವತಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಹಾದೇವಪುರದ ಪಣತ್ತೂರು ಗಾರ್ಡನ್‌ನಲ್ಲಿ ನೀರು ಸರಾಗವಾಗಿ ಹರಿದು ಹೋಗದೆ ಪ್ರತಿ ವರ್ಷ ಸಮಸ್ಯೆಯಾಗುತ್ತಿದೆ. ರೈಲ್ವೇ ಲೈನ್ ಕೆಳಗಡೆ ಅಗಲ ಬಹಳ ಕಡಿಮೆಯಿದೆ. ಇದನ್ನು ವಿಸ್ತರಿಸಲು ಹಾಗೂ ರಸ್ತೆ ಅಗಲೀಕರಣ ಕಾರ್ಯ ಈಗಾಗಲೇ ನಡೆಯುತ್ತಿದ್ದು, ಶೇ.20ರಷ್ಟು ಕಾಮಗಾರಿ ಬಾಕಿಯಿದೆ. ಇಲ್ಲಿ ಟ್ರೆಂಚ್ಲೆಸ್ ತಾಂತ್ರಿಕತೆ ಬಳಸಿ ಕೆಲಸ ಮಾಡುತ್ತಿದ್ದು, 45ದಿನಗಳ ಒಳಗಾಗಿ ಉಳಿದಿರುವ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಾಲ್ಕು ಕಡೆಗಳಿಂದ ನೀರು ಬರುತ್ತಿದ್ದು, ಅಲ್ಲಿಂದ ಎಲ್ಲಾ ನೀರು ಹೆಚ್ಎಸ್ಆರ್ ಲೇಔಟ್ ಕಡೆ ಹರಿದು ಬರುತ್ತದೆ. ಮೆಟ್ರೋ, ಬಿಬಿಎಂಪಿ ಮತ್ತು ರಾಷ್ಟ್ರೀಯ ಹೆದ್ದಾರಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಈ ಮೂರು ವಿಭಾಗಗಳು ಈ ಕುರಿತು ಯೋಜನೆ ರೂಪಿಸಲು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 2022ರಲ್ಲಿ 299ಮಿಮೀ ಮಳೆಯಾಗಿತ್ತು. 10 ವರ್ಷಗಳಲ್ಲಿ ಇದು ಎರಡನೇ ಬಾರಿ ಹೆಚ್ಚಿನ ಮಳೆಯಾಗಿದೆ. ಮೇ 19ರ ಮಧ್ಯರಾತ್ರಿ 132 ಮಿಮೀ ಮಳೆ ದಾಖಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ ಎಷ್ಟೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುರ್ಷಿದಾಬಾದ್ ಹಿಂಸಾಚಾರದ ವೇಳೆ ಪೊಲೀಸರು ನಿಷ್ಕ್ರಿಯ: ಹೈಕೋರ್ಟ್ ನೇಮಿಸಿದ ಸಮಿತಿ

ಮುರ್ಷಿದಾಬಾದ್ ಹಿಂಸಾಚಾರದ ವೇಳೆ ಪೊಲೀಸರು ನಿಷ್ಕ್ರಿಯ: ಹೈಕೋರ್ಟ್ ನೇಮಿಸಿದ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...