Homeಅಂಕಣಗಳುಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

ಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

- Advertisement -
- Advertisement -

| ಗೌರಿ ಲಂಕೇಶ್ |
30 ಸೆಪ್ಟೆಂಬರ್, 2009 (ಸಂಪಾದಕೀಯದಿಂದ) |

ಸುಪ್ರೀಂಕೋರ್ಟ್ ಮತ್ತು ಇತರೆ ಹೈಕೋರ್ಟುಗಳ ನ್ಯಾಯಾಧೀಶರೆಲ್ಲರೂ ಇನ್ನು ಮುಂದೆ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಒಪ್ಪಿಕೊಂಡ ಬೆನ್ನ ಹಿಂದೆಯೇ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಿ.ವಿ.ದಿನಕರನ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಈ ಆರೋಪಗಳು ನಿಜವೋ, ಸುಳ್ಳೋ ಎಂಬುದು ಸಾಬೀತಾಗಬೇಕಿದೆಯಾದರೂ ಅದರ ಸುತ್ತ ಈಗ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದು ನ್ಯಾಯಾಧೀಶರ ನೇಮಕಾತಿ ಪದ್ಧತಿಯಿಂದ ಹಿಡಿದು ಭ್ರಷ್ಟ ನ್ಯಾಯಮೂರ್ತಿಗಳ ವಿರುದ್ಧ ಕ್ರಮ ಜರುಗಿಸುವ ರೀತಿಯ ತನಕ ಹಬ್ಬಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ ಮತ್ತು ಆಡಳಿತಾಂಗ ಇವತ್ತು ಜನದ್ರೋಹಿಗಳಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಜನರೆಲ್ಲ ಭರವಸೆ ಇಟ್ಟಿರುವುದು ನ್ಯಾಯಾಂಗದ ಮೇಲೆ. ಆದರೆ ಇತ್ತೀಚೆಗೆ ಟ್ರಾನ್ಸ್‍ಪರೆನ್ಸಿ ಇಂಟರ್‍ನ್ಯಾಷನಲ್ ಎಂಬ ಸಂಘಟನೆ ನಡೆಸಿದ ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ನ್ಯಾಯಾಂಗ ಕೂಡ ಈಗ ಭ್ರಷ್ಟಗೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸುಪ್ರೀಕೋರ್ಟಿನ ಮಾಜಿ ಮುಖ್ಯನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಅವರು 2002ರಲ್ಲೇ ‘ಭಾರತದ ನ್ಯಾಯಾಂಗದ ಉನ್ನತ ವಲಯದಲ್ಲೂ ಪ್ರತಿ ಐವರು ನ್ಯಾಯಾಧೀಶರಲ್ಲಿ ಓರ್ವ ಭ್ರಷ್ಟಗೊಂಡಿದ್ದಾನೆ.’ ಎಂದೇ ಘೋಷಿಸಿದ್ದರು.

ಪರಿಸ್ಥಿತಿ ಆತಂಕ ಹುಟ್ಟಿಸುವಂತಿದ್ದರೂ ನಮ್ಮ ನ್ಯಾಯಮೂರ್ತಿಗಳು ಅದನ್ನೆಲ್ಲ ಸರಿಪಡಿಸಲು ಸ್ವಯಂಪ್ರೇರಿತರಾಗಿ ಮುಂದೆ ಬರಲಿಲ್ಲ. ನ್ಯಾಯಾಂಗದಲ್ಲಿ ಭ್ರಷ್ಟಚಾರ, ದುರಾಡಳಿತ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ನರ್ಮದಾ ಡ್ಯಾಂಅನ್ನು ನಿರ್ಮಿಸಲು ಸುಪ್ರೀಂಕೋರ್ಟ್ ನೀಡಿದ ಅನುಮತಿಯನ್ನು ವಿರೋಧಿಸಿ ಅದರ ಗೇಟ್ ಮುಂದೆ ಪ್ರತಿಭಟಿಸಿದ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರಿಗೆ ಒಂದು ದಿನದ ಜೈಲು ಶಿಕ್ಷೆಯನ್ನು, ಎರಡು ಸಾವಿರ ರೂಪಾಯಿಗಲ ದಂಡವನ್ನೂ ವಿಧಿಸಿದರು. ಅವರ ಪ್ರಕಾರ ಆಕೆ ಮಾಡಿದ ಘೋರ ತಪ್ಪು. ‘ನ್ಯಾಯಾಂಗದ ಘನತೆಯನ್ನು ಕುಂದಿಸಿದ್ದು!.’
ವಿಪರ್ಯಾಸ ಯಾವುದೆಂದರೆ ಸುಪ್ರೀಕೋರ್ಟಿನ ಘನತೆಗೆ ಸ್ವತಃ ಸುಪ್ರೀಂಕೋರ್ಟೆ ಇತ್ತೀಚೆಗೆ ಧಕ್ಕೆ ತಂದಿತು. ಅದಾದದ್ದು ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಸಂಬಂಧಿಸಿದ ವಾದ-ವಿವಾದದಲ್ಲಿ, ದೆಹಲಿ ನ್ಯಾಯಾಲಯವು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕೆಂದು ತೀರ್ಪು ನೀಡಿದಾಗ ಅದಕ್ಕೆ ಸುಪ್ರೀಕೋರ್ಟ್ ತಡೆಯಾಜ್ಞೆ ತಂದಿತು. ಅದನ್ನು ಕಂಡ ದೇಶದ ಬಹಳಷ್ಟು ಜನ ‘ನ್ಯಾಯಾಧೀಶರಿಗೆ ತಮ್ಮ ಆಸ್ತಿ ಘೋಷಿಸಲು ಯಾಕಿಷ್ಟು ಹಿಂಜರಿಕೆ’ ಎಂದು ಯೋಚಿಸುವಂತಾಯಿತ್ತಲ್ಲದೆ, ಸುಪ್ರೀಂ ಕೋರ್ಟಿನ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿತ್ತು.

ಅಂದಹಾಗೆ ಹಿಂದೊಮ್ಮೆ ಇದೇ ಸುಪ್ರೀಕೋರ್ಟ್ ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವವರೆಲ್ಲ ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಬೇಕು ಎಂದು ಆದೇಶಿಸಿತ್ತು. ಆ ಆದೇಶದ ಹಿಂದಿದ್ದ ಕಾಳಜಿ, ‘ಜನರಿಗೆ ತಮ್ಮನ್ನು ಪ್ರತಿನಿಧಿಸಲಿರುವ ವ್ಯಕ್ತಿಯ ಪೂರ್ಣ ವಿವರಗಳು ಲಭ್ಯವಿರಬೇಕು’ ಎಂಬುದಾಗಿತ್ತು. ಅದೇ ಮಾನದಂಡ ಇಟ್ಟುಕೊಂಡರೆ ಇವತ್ತು ಈ ದೇಶದ ಜನರ ಪ್ರತಿನಿತ್ಯದ ಬದುಕಿನ ಮೇಲೆ ಪ್ರಭಾವ ಬೀರುವಂತಹ ತೀರ್ಪುಗಳನ್ನು ನೀಡುವ ನ್ಯಾಯಾಧೀಶರ ಬಗೆಗೂ ಜನರಿಗೆ ಎಲ್ಲ ಮಾಹಿತಿ ಲಭ್ಯವಿರಬೇಕೆಂದು ಆಶಿಸುವುದು ಸರಿಯಲ್ಲವೇ?

ಅದೆಲ್ಲ ಬದಿಗಿರಲಿ, ಖ್ಯಾತ ವಕೀಲ ಫಾಲಿ ಎಸ್.ನಾರೀಮನ್ ಅವರು ಹೇಳುವಂತೆ ‘ದೇಶದ ಸಂವಿಧಾನಕ್ಕಿಂತ ನ್ಯಾಯಾಂಗ ಹಿರಿಯದಲ್ಲ’ ಆದರೆ ಇಲ್ಲಿಯ ಕಾನೂನುಗಳನ್ನು ಮೀರಿರುವವರು ಎಂಬಂತಹ ನಿಲುವುಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆದರೆ ಇಂತಹ ನಿಲುವು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ರಶಾಂತ್ ಭೂಷಣ್‍ರಂತಹ ಹಿರಿಯ ವಕೀಲರು ವಾದಿಸುತ್ತಾ ಬಂದಿದ್ದಾರಲ್ಲದೆ ನ್ಯಾಯಾಂಗದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಹಲವಾರು ವರ್ಷಗಳಿಂದ ಹೋರಾಡುತ್ತಿದ್ದಾರೆ.

ಪ್ರಶಾಂತ್ ಭೂಷಣ್ ಹೇಳುವಂತೆ ‘ಪ್ರಾಮಾಣಿಕ ನ್ಯಾಯಾಂಗಕ್ಕೆ ಆಶಿಸುವ ಸಾಮಾನ್ಯ ಜನರೆಲ್ಲ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪಾರದರ್ಶಕರೆ ಮತ್ತು ಭ್ರಷ್ಟ ನ್ಯಾಯಾಧೀಶರ ವಿಚಾರಣೆ ನಡೆಸುವಂತೆ ನೋಡಿಕೊಳ್ಳಲು ಸೂಕ್ತವಾದ ಸ್ವತಂತ್ರ ಸಂಸ್ಥೆಗಳನ್ನು ರಚಿಸಬೇಕೆಂದು ಆಗ್ರಹಿಸುವ ಸಮಯ ಈಗ ಕೂಡಿಬಂದಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...