Homeಅಂಕಣಗಳುಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

ಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

- Advertisement -
- Advertisement -

| ಗೌರಿ ಲಂಕೇಶ್ |
30 ಸೆಪ್ಟೆಂಬರ್, 2009 (ಸಂಪಾದಕೀಯದಿಂದ) |

ಸುಪ್ರೀಂಕೋರ್ಟ್ ಮತ್ತು ಇತರೆ ಹೈಕೋರ್ಟುಗಳ ನ್ಯಾಯಾಧೀಶರೆಲ್ಲರೂ ಇನ್ನು ಮುಂದೆ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಒಪ್ಪಿಕೊಂಡ ಬೆನ್ನ ಹಿಂದೆಯೇ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಿ.ವಿ.ದಿನಕರನ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಈ ಆರೋಪಗಳು ನಿಜವೋ, ಸುಳ್ಳೋ ಎಂಬುದು ಸಾಬೀತಾಗಬೇಕಿದೆಯಾದರೂ ಅದರ ಸುತ್ತ ಈಗ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದು ನ್ಯಾಯಾಧೀಶರ ನೇಮಕಾತಿ ಪದ್ಧತಿಯಿಂದ ಹಿಡಿದು ಭ್ರಷ್ಟ ನ್ಯಾಯಮೂರ್ತಿಗಳ ವಿರುದ್ಧ ಕ್ರಮ ಜರುಗಿಸುವ ರೀತಿಯ ತನಕ ಹಬ್ಬಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ ಮತ್ತು ಆಡಳಿತಾಂಗ ಇವತ್ತು ಜನದ್ರೋಹಿಗಳಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಜನರೆಲ್ಲ ಭರವಸೆ ಇಟ್ಟಿರುವುದು ನ್ಯಾಯಾಂಗದ ಮೇಲೆ. ಆದರೆ ಇತ್ತೀಚೆಗೆ ಟ್ರಾನ್ಸ್‍ಪರೆನ್ಸಿ ಇಂಟರ್‍ನ್ಯಾಷನಲ್ ಎಂಬ ಸಂಘಟನೆ ನಡೆಸಿದ ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ನ್ಯಾಯಾಂಗ ಕೂಡ ಈಗ ಭ್ರಷ್ಟಗೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸುಪ್ರೀಕೋರ್ಟಿನ ಮಾಜಿ ಮುಖ್ಯನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಅವರು 2002ರಲ್ಲೇ ‘ಭಾರತದ ನ್ಯಾಯಾಂಗದ ಉನ್ನತ ವಲಯದಲ್ಲೂ ಪ್ರತಿ ಐವರು ನ್ಯಾಯಾಧೀಶರಲ್ಲಿ ಓರ್ವ ಭ್ರಷ್ಟಗೊಂಡಿದ್ದಾನೆ.’ ಎಂದೇ ಘೋಷಿಸಿದ್ದರು.

ಪರಿಸ್ಥಿತಿ ಆತಂಕ ಹುಟ್ಟಿಸುವಂತಿದ್ದರೂ ನಮ್ಮ ನ್ಯಾಯಮೂರ್ತಿಗಳು ಅದನ್ನೆಲ್ಲ ಸರಿಪಡಿಸಲು ಸ್ವಯಂಪ್ರೇರಿತರಾಗಿ ಮುಂದೆ ಬರಲಿಲ್ಲ. ನ್ಯಾಯಾಂಗದಲ್ಲಿ ಭ್ರಷ್ಟಚಾರ, ದುರಾಡಳಿತ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ನರ್ಮದಾ ಡ್ಯಾಂಅನ್ನು ನಿರ್ಮಿಸಲು ಸುಪ್ರೀಂಕೋರ್ಟ್ ನೀಡಿದ ಅನುಮತಿಯನ್ನು ವಿರೋಧಿಸಿ ಅದರ ಗೇಟ್ ಮುಂದೆ ಪ್ರತಿಭಟಿಸಿದ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರಿಗೆ ಒಂದು ದಿನದ ಜೈಲು ಶಿಕ್ಷೆಯನ್ನು, ಎರಡು ಸಾವಿರ ರೂಪಾಯಿಗಲ ದಂಡವನ್ನೂ ವಿಧಿಸಿದರು. ಅವರ ಪ್ರಕಾರ ಆಕೆ ಮಾಡಿದ ಘೋರ ತಪ್ಪು. ‘ನ್ಯಾಯಾಂಗದ ಘನತೆಯನ್ನು ಕುಂದಿಸಿದ್ದು!.’
ವಿಪರ್ಯಾಸ ಯಾವುದೆಂದರೆ ಸುಪ್ರೀಕೋರ್ಟಿನ ಘನತೆಗೆ ಸ್ವತಃ ಸುಪ್ರೀಂಕೋರ್ಟೆ ಇತ್ತೀಚೆಗೆ ಧಕ್ಕೆ ತಂದಿತು. ಅದಾದದ್ದು ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಸಂಬಂಧಿಸಿದ ವಾದ-ವಿವಾದದಲ್ಲಿ, ದೆಹಲಿ ನ್ಯಾಯಾಲಯವು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕೆಂದು ತೀರ್ಪು ನೀಡಿದಾಗ ಅದಕ್ಕೆ ಸುಪ್ರೀಕೋರ್ಟ್ ತಡೆಯಾಜ್ಞೆ ತಂದಿತು. ಅದನ್ನು ಕಂಡ ದೇಶದ ಬಹಳಷ್ಟು ಜನ ‘ನ್ಯಾಯಾಧೀಶರಿಗೆ ತಮ್ಮ ಆಸ್ತಿ ಘೋಷಿಸಲು ಯಾಕಿಷ್ಟು ಹಿಂಜರಿಕೆ’ ಎಂದು ಯೋಚಿಸುವಂತಾಯಿತ್ತಲ್ಲದೆ, ಸುಪ್ರೀಂ ಕೋರ್ಟಿನ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿತ್ತು.

ಅಂದಹಾಗೆ ಹಿಂದೊಮ್ಮೆ ಇದೇ ಸುಪ್ರೀಕೋರ್ಟ್ ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವವರೆಲ್ಲ ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಬೇಕು ಎಂದು ಆದೇಶಿಸಿತ್ತು. ಆ ಆದೇಶದ ಹಿಂದಿದ್ದ ಕಾಳಜಿ, ‘ಜನರಿಗೆ ತಮ್ಮನ್ನು ಪ್ರತಿನಿಧಿಸಲಿರುವ ವ್ಯಕ್ತಿಯ ಪೂರ್ಣ ವಿವರಗಳು ಲಭ್ಯವಿರಬೇಕು’ ಎಂಬುದಾಗಿತ್ತು. ಅದೇ ಮಾನದಂಡ ಇಟ್ಟುಕೊಂಡರೆ ಇವತ್ತು ಈ ದೇಶದ ಜನರ ಪ್ರತಿನಿತ್ಯದ ಬದುಕಿನ ಮೇಲೆ ಪ್ರಭಾವ ಬೀರುವಂತಹ ತೀರ್ಪುಗಳನ್ನು ನೀಡುವ ನ್ಯಾಯಾಧೀಶರ ಬಗೆಗೂ ಜನರಿಗೆ ಎಲ್ಲ ಮಾಹಿತಿ ಲಭ್ಯವಿರಬೇಕೆಂದು ಆಶಿಸುವುದು ಸರಿಯಲ್ಲವೇ?

ಅದೆಲ್ಲ ಬದಿಗಿರಲಿ, ಖ್ಯಾತ ವಕೀಲ ಫಾಲಿ ಎಸ್.ನಾರೀಮನ್ ಅವರು ಹೇಳುವಂತೆ ‘ದೇಶದ ಸಂವಿಧಾನಕ್ಕಿಂತ ನ್ಯಾಯಾಂಗ ಹಿರಿಯದಲ್ಲ’ ಆದರೆ ಇಲ್ಲಿಯ ಕಾನೂನುಗಳನ್ನು ಮೀರಿರುವವರು ಎಂಬಂತಹ ನಿಲುವುಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆದರೆ ಇಂತಹ ನಿಲುವು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ರಶಾಂತ್ ಭೂಷಣ್‍ರಂತಹ ಹಿರಿಯ ವಕೀಲರು ವಾದಿಸುತ್ತಾ ಬಂದಿದ್ದಾರಲ್ಲದೆ ನ್ಯಾಯಾಂಗದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಹಲವಾರು ವರ್ಷಗಳಿಂದ ಹೋರಾಡುತ್ತಿದ್ದಾರೆ.

ಪ್ರಶಾಂತ್ ಭೂಷಣ್ ಹೇಳುವಂತೆ ‘ಪ್ರಾಮಾಣಿಕ ನ್ಯಾಯಾಂಗಕ್ಕೆ ಆಶಿಸುವ ಸಾಮಾನ್ಯ ಜನರೆಲ್ಲ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪಾರದರ್ಶಕರೆ ಮತ್ತು ಭ್ರಷ್ಟ ನ್ಯಾಯಾಧೀಶರ ವಿಚಾರಣೆ ನಡೆಸುವಂತೆ ನೋಡಿಕೊಳ್ಳಲು ಸೂಕ್ತವಾದ ಸ್ವತಂತ್ರ ಸಂಸ್ಥೆಗಳನ್ನು ರಚಿಸಬೇಕೆಂದು ಆಗ್ರಹಿಸುವ ಸಮಯ ಈಗ ಕೂಡಿಬಂದಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...