Homeಅಂಕಣಗಳುಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

ಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

- Advertisement -
- Advertisement -

| ಗೌರಿ ಲಂಕೇಶ್ |
30 ಸೆಪ್ಟೆಂಬರ್, 2009 (ಸಂಪಾದಕೀಯದಿಂದ) |

ಸುಪ್ರೀಂಕೋರ್ಟ್ ಮತ್ತು ಇತರೆ ಹೈಕೋರ್ಟುಗಳ ನ್ಯಾಯಾಧೀಶರೆಲ್ಲರೂ ಇನ್ನು ಮುಂದೆ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಒಪ್ಪಿಕೊಂಡ ಬೆನ್ನ ಹಿಂದೆಯೇ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಿ.ವಿ.ದಿನಕರನ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಈ ಆರೋಪಗಳು ನಿಜವೋ, ಸುಳ್ಳೋ ಎಂಬುದು ಸಾಬೀತಾಗಬೇಕಿದೆಯಾದರೂ ಅದರ ಸುತ್ತ ಈಗ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದು ನ್ಯಾಯಾಧೀಶರ ನೇಮಕಾತಿ ಪದ್ಧತಿಯಿಂದ ಹಿಡಿದು ಭ್ರಷ್ಟ ನ್ಯಾಯಮೂರ್ತಿಗಳ ವಿರುದ್ಧ ಕ್ರಮ ಜರುಗಿಸುವ ರೀತಿಯ ತನಕ ಹಬ್ಬಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ ಮತ್ತು ಆಡಳಿತಾಂಗ ಇವತ್ತು ಜನದ್ರೋಹಿಗಳಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಜನರೆಲ್ಲ ಭರವಸೆ ಇಟ್ಟಿರುವುದು ನ್ಯಾಯಾಂಗದ ಮೇಲೆ. ಆದರೆ ಇತ್ತೀಚೆಗೆ ಟ್ರಾನ್ಸ್‍ಪರೆನ್ಸಿ ಇಂಟರ್‍ನ್ಯಾಷನಲ್ ಎಂಬ ಸಂಘಟನೆ ನಡೆಸಿದ ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ನ್ಯಾಯಾಂಗ ಕೂಡ ಈಗ ಭ್ರಷ್ಟಗೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸುಪ್ರೀಕೋರ್ಟಿನ ಮಾಜಿ ಮುಖ್ಯನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಅವರು 2002ರಲ್ಲೇ ‘ಭಾರತದ ನ್ಯಾಯಾಂಗದ ಉನ್ನತ ವಲಯದಲ್ಲೂ ಪ್ರತಿ ಐವರು ನ್ಯಾಯಾಧೀಶರಲ್ಲಿ ಓರ್ವ ಭ್ರಷ್ಟಗೊಂಡಿದ್ದಾನೆ.’ ಎಂದೇ ಘೋಷಿಸಿದ್ದರು.

ಪರಿಸ್ಥಿತಿ ಆತಂಕ ಹುಟ್ಟಿಸುವಂತಿದ್ದರೂ ನಮ್ಮ ನ್ಯಾಯಮೂರ್ತಿಗಳು ಅದನ್ನೆಲ್ಲ ಸರಿಪಡಿಸಲು ಸ್ವಯಂಪ್ರೇರಿತರಾಗಿ ಮುಂದೆ ಬರಲಿಲ್ಲ. ನ್ಯಾಯಾಂಗದಲ್ಲಿ ಭ್ರಷ್ಟಚಾರ, ದುರಾಡಳಿತ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ನರ್ಮದಾ ಡ್ಯಾಂಅನ್ನು ನಿರ್ಮಿಸಲು ಸುಪ್ರೀಂಕೋರ್ಟ್ ನೀಡಿದ ಅನುಮತಿಯನ್ನು ವಿರೋಧಿಸಿ ಅದರ ಗೇಟ್ ಮುಂದೆ ಪ್ರತಿಭಟಿಸಿದ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರಿಗೆ ಒಂದು ದಿನದ ಜೈಲು ಶಿಕ್ಷೆಯನ್ನು, ಎರಡು ಸಾವಿರ ರೂಪಾಯಿಗಲ ದಂಡವನ್ನೂ ವಿಧಿಸಿದರು. ಅವರ ಪ್ರಕಾರ ಆಕೆ ಮಾಡಿದ ಘೋರ ತಪ್ಪು. ‘ನ್ಯಾಯಾಂಗದ ಘನತೆಯನ್ನು ಕುಂದಿಸಿದ್ದು!.’
ವಿಪರ್ಯಾಸ ಯಾವುದೆಂದರೆ ಸುಪ್ರೀಕೋರ್ಟಿನ ಘನತೆಗೆ ಸ್ವತಃ ಸುಪ್ರೀಂಕೋರ್ಟೆ ಇತ್ತೀಚೆಗೆ ಧಕ್ಕೆ ತಂದಿತು. ಅದಾದದ್ದು ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಸಂಬಂಧಿಸಿದ ವಾದ-ವಿವಾದದಲ್ಲಿ, ದೆಹಲಿ ನ್ಯಾಯಾಲಯವು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕೆಂದು ತೀರ್ಪು ನೀಡಿದಾಗ ಅದಕ್ಕೆ ಸುಪ್ರೀಕೋರ್ಟ್ ತಡೆಯಾಜ್ಞೆ ತಂದಿತು. ಅದನ್ನು ಕಂಡ ದೇಶದ ಬಹಳಷ್ಟು ಜನ ‘ನ್ಯಾಯಾಧೀಶರಿಗೆ ತಮ್ಮ ಆಸ್ತಿ ಘೋಷಿಸಲು ಯಾಕಿಷ್ಟು ಹಿಂಜರಿಕೆ’ ಎಂದು ಯೋಚಿಸುವಂತಾಯಿತ್ತಲ್ಲದೆ, ಸುಪ್ರೀಂ ಕೋರ್ಟಿನ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿತ್ತು.

ಅಂದಹಾಗೆ ಹಿಂದೊಮ್ಮೆ ಇದೇ ಸುಪ್ರೀಕೋರ್ಟ್ ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವವರೆಲ್ಲ ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಬೇಕು ಎಂದು ಆದೇಶಿಸಿತ್ತು. ಆ ಆದೇಶದ ಹಿಂದಿದ್ದ ಕಾಳಜಿ, ‘ಜನರಿಗೆ ತಮ್ಮನ್ನು ಪ್ರತಿನಿಧಿಸಲಿರುವ ವ್ಯಕ್ತಿಯ ಪೂರ್ಣ ವಿವರಗಳು ಲಭ್ಯವಿರಬೇಕು’ ಎಂಬುದಾಗಿತ್ತು. ಅದೇ ಮಾನದಂಡ ಇಟ್ಟುಕೊಂಡರೆ ಇವತ್ತು ಈ ದೇಶದ ಜನರ ಪ್ರತಿನಿತ್ಯದ ಬದುಕಿನ ಮೇಲೆ ಪ್ರಭಾವ ಬೀರುವಂತಹ ತೀರ್ಪುಗಳನ್ನು ನೀಡುವ ನ್ಯಾಯಾಧೀಶರ ಬಗೆಗೂ ಜನರಿಗೆ ಎಲ್ಲ ಮಾಹಿತಿ ಲಭ್ಯವಿರಬೇಕೆಂದು ಆಶಿಸುವುದು ಸರಿಯಲ್ಲವೇ?

ಅದೆಲ್ಲ ಬದಿಗಿರಲಿ, ಖ್ಯಾತ ವಕೀಲ ಫಾಲಿ ಎಸ್.ನಾರೀಮನ್ ಅವರು ಹೇಳುವಂತೆ ‘ದೇಶದ ಸಂವಿಧಾನಕ್ಕಿಂತ ನ್ಯಾಯಾಂಗ ಹಿರಿಯದಲ್ಲ’ ಆದರೆ ಇಲ್ಲಿಯ ಕಾನೂನುಗಳನ್ನು ಮೀರಿರುವವರು ಎಂಬಂತಹ ನಿಲುವುಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆದರೆ ಇಂತಹ ನಿಲುವು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ರಶಾಂತ್ ಭೂಷಣ್‍ರಂತಹ ಹಿರಿಯ ವಕೀಲರು ವಾದಿಸುತ್ತಾ ಬಂದಿದ್ದಾರಲ್ಲದೆ ನ್ಯಾಯಾಂಗದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಹಲವಾರು ವರ್ಷಗಳಿಂದ ಹೋರಾಡುತ್ತಿದ್ದಾರೆ.

ಪ್ರಶಾಂತ್ ಭೂಷಣ್ ಹೇಳುವಂತೆ ‘ಪ್ರಾಮಾಣಿಕ ನ್ಯಾಯಾಂಗಕ್ಕೆ ಆಶಿಸುವ ಸಾಮಾನ್ಯ ಜನರೆಲ್ಲ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪಾರದರ್ಶಕರೆ ಮತ್ತು ಭ್ರಷ್ಟ ನ್ಯಾಯಾಧೀಶರ ವಿಚಾರಣೆ ನಡೆಸುವಂತೆ ನೋಡಿಕೊಳ್ಳಲು ಸೂಕ್ತವಾದ ಸ್ವತಂತ್ರ ಸಂಸ್ಥೆಗಳನ್ನು ರಚಿಸಬೇಕೆಂದು ಆಗ್ರಹಿಸುವ ಸಮಯ ಈಗ ಕೂಡಿಬಂದಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...