Homeಅಂಕಣಗಳುಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

ಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

- Advertisement -
- Advertisement -

| ಗೌರಿ ಲಂಕೇಶ್ |
30 ಸೆಪ್ಟೆಂಬರ್, 2009 (ಸಂಪಾದಕೀಯದಿಂದ) |

ಸುಪ್ರೀಂಕೋರ್ಟ್ ಮತ್ತು ಇತರೆ ಹೈಕೋರ್ಟುಗಳ ನ್ಯಾಯಾಧೀಶರೆಲ್ಲರೂ ಇನ್ನು ಮುಂದೆ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಒಪ್ಪಿಕೊಂಡ ಬೆನ್ನ ಹಿಂದೆಯೇ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಿ.ವಿ.ದಿನಕರನ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಈ ಆರೋಪಗಳು ನಿಜವೋ, ಸುಳ್ಳೋ ಎಂಬುದು ಸಾಬೀತಾಗಬೇಕಿದೆಯಾದರೂ ಅದರ ಸುತ್ತ ಈಗ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದು ನ್ಯಾಯಾಧೀಶರ ನೇಮಕಾತಿ ಪದ್ಧತಿಯಿಂದ ಹಿಡಿದು ಭ್ರಷ್ಟ ನ್ಯಾಯಮೂರ್ತಿಗಳ ವಿರುದ್ಧ ಕ್ರಮ ಜರುಗಿಸುವ ರೀತಿಯ ತನಕ ಹಬ್ಬಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ ಮತ್ತು ಆಡಳಿತಾಂಗ ಇವತ್ತು ಜನದ್ರೋಹಿಗಳಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಜನರೆಲ್ಲ ಭರವಸೆ ಇಟ್ಟಿರುವುದು ನ್ಯಾಯಾಂಗದ ಮೇಲೆ. ಆದರೆ ಇತ್ತೀಚೆಗೆ ಟ್ರಾನ್ಸ್‍ಪರೆನ್ಸಿ ಇಂಟರ್‍ನ್ಯಾಷನಲ್ ಎಂಬ ಸಂಘಟನೆ ನಡೆಸಿದ ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ನ್ಯಾಯಾಂಗ ಕೂಡ ಈಗ ಭ್ರಷ್ಟಗೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸುಪ್ರೀಕೋರ್ಟಿನ ಮಾಜಿ ಮುಖ್ಯನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಅವರು 2002ರಲ್ಲೇ ‘ಭಾರತದ ನ್ಯಾಯಾಂಗದ ಉನ್ನತ ವಲಯದಲ್ಲೂ ಪ್ರತಿ ಐವರು ನ್ಯಾಯಾಧೀಶರಲ್ಲಿ ಓರ್ವ ಭ್ರಷ್ಟಗೊಂಡಿದ್ದಾನೆ.’ ಎಂದೇ ಘೋಷಿಸಿದ್ದರು.

ಪರಿಸ್ಥಿತಿ ಆತಂಕ ಹುಟ್ಟಿಸುವಂತಿದ್ದರೂ ನಮ್ಮ ನ್ಯಾಯಮೂರ್ತಿಗಳು ಅದನ್ನೆಲ್ಲ ಸರಿಪಡಿಸಲು ಸ್ವಯಂಪ್ರೇರಿತರಾಗಿ ಮುಂದೆ ಬರಲಿಲ್ಲ. ನ್ಯಾಯಾಂಗದಲ್ಲಿ ಭ್ರಷ್ಟಚಾರ, ದುರಾಡಳಿತ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ನರ್ಮದಾ ಡ್ಯಾಂಅನ್ನು ನಿರ್ಮಿಸಲು ಸುಪ್ರೀಂಕೋರ್ಟ್ ನೀಡಿದ ಅನುಮತಿಯನ್ನು ವಿರೋಧಿಸಿ ಅದರ ಗೇಟ್ ಮುಂದೆ ಪ್ರತಿಭಟಿಸಿದ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರಿಗೆ ಒಂದು ದಿನದ ಜೈಲು ಶಿಕ್ಷೆಯನ್ನು, ಎರಡು ಸಾವಿರ ರೂಪಾಯಿಗಲ ದಂಡವನ್ನೂ ವಿಧಿಸಿದರು. ಅವರ ಪ್ರಕಾರ ಆಕೆ ಮಾಡಿದ ಘೋರ ತಪ್ಪು. ‘ನ್ಯಾಯಾಂಗದ ಘನತೆಯನ್ನು ಕುಂದಿಸಿದ್ದು!.’
ವಿಪರ್ಯಾಸ ಯಾವುದೆಂದರೆ ಸುಪ್ರೀಕೋರ್ಟಿನ ಘನತೆಗೆ ಸ್ವತಃ ಸುಪ್ರೀಂಕೋರ್ಟೆ ಇತ್ತೀಚೆಗೆ ಧಕ್ಕೆ ತಂದಿತು. ಅದಾದದ್ದು ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಸಂಬಂಧಿಸಿದ ವಾದ-ವಿವಾದದಲ್ಲಿ, ದೆಹಲಿ ನ್ಯಾಯಾಲಯವು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕೆಂದು ತೀರ್ಪು ನೀಡಿದಾಗ ಅದಕ್ಕೆ ಸುಪ್ರೀಕೋರ್ಟ್ ತಡೆಯಾಜ್ಞೆ ತಂದಿತು. ಅದನ್ನು ಕಂಡ ದೇಶದ ಬಹಳಷ್ಟು ಜನ ‘ನ್ಯಾಯಾಧೀಶರಿಗೆ ತಮ್ಮ ಆಸ್ತಿ ಘೋಷಿಸಲು ಯಾಕಿಷ್ಟು ಹಿಂಜರಿಕೆ’ ಎಂದು ಯೋಚಿಸುವಂತಾಯಿತ್ತಲ್ಲದೆ, ಸುಪ್ರೀಂ ಕೋರ್ಟಿನ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿತ್ತು.

ಅಂದಹಾಗೆ ಹಿಂದೊಮ್ಮೆ ಇದೇ ಸುಪ್ರೀಕೋರ್ಟ್ ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವವರೆಲ್ಲ ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಬೇಕು ಎಂದು ಆದೇಶಿಸಿತ್ತು. ಆ ಆದೇಶದ ಹಿಂದಿದ್ದ ಕಾಳಜಿ, ‘ಜನರಿಗೆ ತಮ್ಮನ್ನು ಪ್ರತಿನಿಧಿಸಲಿರುವ ವ್ಯಕ್ತಿಯ ಪೂರ್ಣ ವಿವರಗಳು ಲಭ್ಯವಿರಬೇಕು’ ಎಂಬುದಾಗಿತ್ತು. ಅದೇ ಮಾನದಂಡ ಇಟ್ಟುಕೊಂಡರೆ ಇವತ್ತು ಈ ದೇಶದ ಜನರ ಪ್ರತಿನಿತ್ಯದ ಬದುಕಿನ ಮೇಲೆ ಪ್ರಭಾವ ಬೀರುವಂತಹ ತೀರ್ಪುಗಳನ್ನು ನೀಡುವ ನ್ಯಾಯಾಧೀಶರ ಬಗೆಗೂ ಜನರಿಗೆ ಎಲ್ಲ ಮಾಹಿತಿ ಲಭ್ಯವಿರಬೇಕೆಂದು ಆಶಿಸುವುದು ಸರಿಯಲ್ಲವೇ?

ಅದೆಲ್ಲ ಬದಿಗಿರಲಿ, ಖ್ಯಾತ ವಕೀಲ ಫಾಲಿ ಎಸ್.ನಾರೀಮನ್ ಅವರು ಹೇಳುವಂತೆ ‘ದೇಶದ ಸಂವಿಧಾನಕ್ಕಿಂತ ನ್ಯಾಯಾಂಗ ಹಿರಿಯದಲ್ಲ’ ಆದರೆ ಇಲ್ಲಿಯ ಕಾನೂನುಗಳನ್ನು ಮೀರಿರುವವರು ಎಂಬಂತಹ ನಿಲುವುಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆದರೆ ಇಂತಹ ನಿಲುವು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ರಶಾಂತ್ ಭೂಷಣ್‍ರಂತಹ ಹಿರಿಯ ವಕೀಲರು ವಾದಿಸುತ್ತಾ ಬಂದಿದ್ದಾರಲ್ಲದೆ ನ್ಯಾಯಾಂಗದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಹಲವಾರು ವರ್ಷಗಳಿಂದ ಹೋರಾಡುತ್ತಿದ್ದಾರೆ.

ಪ್ರಶಾಂತ್ ಭೂಷಣ್ ಹೇಳುವಂತೆ ‘ಪ್ರಾಮಾಣಿಕ ನ್ಯಾಯಾಂಗಕ್ಕೆ ಆಶಿಸುವ ಸಾಮಾನ್ಯ ಜನರೆಲ್ಲ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪಾರದರ್ಶಕರೆ ಮತ್ತು ಭ್ರಷ್ಟ ನ್ಯಾಯಾಧೀಶರ ವಿಚಾರಣೆ ನಡೆಸುವಂತೆ ನೋಡಿಕೊಳ್ಳಲು ಸೂಕ್ತವಾದ ಸ್ವತಂತ್ರ ಸಂಸ್ಥೆಗಳನ್ನು ರಚಿಸಬೇಕೆಂದು ಆಗ್ರಹಿಸುವ ಸಮಯ ಈಗ ಕೂಡಿಬಂದಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...