Homeಅಂಕಣಗಳುಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

ಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

- Advertisement -
- Advertisement -

| ಗೌರಿ ಲಂಕೇಶ್ |
30 ಸೆಪ್ಟೆಂಬರ್, 2009 (ಸಂಪಾದಕೀಯದಿಂದ) |

ಸುಪ್ರೀಂಕೋರ್ಟ್ ಮತ್ತು ಇತರೆ ಹೈಕೋರ್ಟುಗಳ ನ್ಯಾಯಾಧೀಶರೆಲ್ಲರೂ ಇನ್ನು ಮುಂದೆ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಒಪ್ಪಿಕೊಂಡ ಬೆನ್ನ ಹಿಂದೆಯೇ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಿ.ವಿ.ದಿನಕರನ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಈ ಆರೋಪಗಳು ನಿಜವೋ, ಸುಳ್ಳೋ ಎಂಬುದು ಸಾಬೀತಾಗಬೇಕಿದೆಯಾದರೂ ಅದರ ಸುತ್ತ ಈಗ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದು ನ್ಯಾಯಾಧೀಶರ ನೇಮಕಾತಿ ಪದ್ಧತಿಯಿಂದ ಹಿಡಿದು ಭ್ರಷ್ಟ ನ್ಯಾಯಮೂರ್ತಿಗಳ ವಿರುದ್ಧ ಕ್ರಮ ಜರುಗಿಸುವ ರೀತಿಯ ತನಕ ಹಬ್ಬಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ ಮತ್ತು ಆಡಳಿತಾಂಗ ಇವತ್ತು ಜನದ್ರೋಹಿಗಳಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಜನರೆಲ್ಲ ಭರವಸೆ ಇಟ್ಟಿರುವುದು ನ್ಯಾಯಾಂಗದ ಮೇಲೆ. ಆದರೆ ಇತ್ತೀಚೆಗೆ ಟ್ರಾನ್ಸ್‍ಪರೆನ್ಸಿ ಇಂಟರ್‍ನ್ಯಾಷನಲ್ ಎಂಬ ಸಂಘಟನೆ ನಡೆಸಿದ ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ನ್ಯಾಯಾಂಗ ಕೂಡ ಈಗ ಭ್ರಷ್ಟಗೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸುಪ್ರೀಕೋರ್ಟಿನ ಮಾಜಿ ಮುಖ್ಯನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಅವರು 2002ರಲ್ಲೇ ‘ಭಾರತದ ನ್ಯಾಯಾಂಗದ ಉನ್ನತ ವಲಯದಲ್ಲೂ ಪ್ರತಿ ಐವರು ನ್ಯಾಯಾಧೀಶರಲ್ಲಿ ಓರ್ವ ಭ್ರಷ್ಟಗೊಂಡಿದ್ದಾನೆ.’ ಎಂದೇ ಘೋಷಿಸಿದ್ದರು.

ಪರಿಸ್ಥಿತಿ ಆತಂಕ ಹುಟ್ಟಿಸುವಂತಿದ್ದರೂ ನಮ್ಮ ನ್ಯಾಯಮೂರ್ತಿಗಳು ಅದನ್ನೆಲ್ಲ ಸರಿಪಡಿಸಲು ಸ್ವಯಂಪ್ರೇರಿತರಾಗಿ ಮುಂದೆ ಬರಲಿಲ್ಲ. ನ್ಯಾಯಾಂಗದಲ್ಲಿ ಭ್ರಷ್ಟಚಾರ, ದುರಾಡಳಿತ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ನರ್ಮದಾ ಡ್ಯಾಂಅನ್ನು ನಿರ್ಮಿಸಲು ಸುಪ್ರೀಂಕೋರ್ಟ್ ನೀಡಿದ ಅನುಮತಿಯನ್ನು ವಿರೋಧಿಸಿ ಅದರ ಗೇಟ್ ಮುಂದೆ ಪ್ರತಿಭಟಿಸಿದ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರಿಗೆ ಒಂದು ದಿನದ ಜೈಲು ಶಿಕ್ಷೆಯನ್ನು, ಎರಡು ಸಾವಿರ ರೂಪಾಯಿಗಲ ದಂಡವನ್ನೂ ವಿಧಿಸಿದರು. ಅವರ ಪ್ರಕಾರ ಆಕೆ ಮಾಡಿದ ಘೋರ ತಪ್ಪು. ‘ನ್ಯಾಯಾಂಗದ ಘನತೆಯನ್ನು ಕುಂದಿಸಿದ್ದು!.’
ವಿಪರ್ಯಾಸ ಯಾವುದೆಂದರೆ ಸುಪ್ರೀಕೋರ್ಟಿನ ಘನತೆಗೆ ಸ್ವತಃ ಸುಪ್ರೀಂಕೋರ್ಟೆ ಇತ್ತೀಚೆಗೆ ಧಕ್ಕೆ ತಂದಿತು. ಅದಾದದ್ದು ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಸಂಬಂಧಿಸಿದ ವಾದ-ವಿವಾದದಲ್ಲಿ, ದೆಹಲಿ ನ್ಯಾಯಾಲಯವು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕೆಂದು ತೀರ್ಪು ನೀಡಿದಾಗ ಅದಕ್ಕೆ ಸುಪ್ರೀಕೋರ್ಟ್ ತಡೆಯಾಜ್ಞೆ ತಂದಿತು. ಅದನ್ನು ಕಂಡ ದೇಶದ ಬಹಳಷ್ಟು ಜನ ‘ನ್ಯಾಯಾಧೀಶರಿಗೆ ತಮ್ಮ ಆಸ್ತಿ ಘೋಷಿಸಲು ಯಾಕಿಷ್ಟು ಹಿಂಜರಿಕೆ’ ಎಂದು ಯೋಚಿಸುವಂತಾಯಿತ್ತಲ್ಲದೆ, ಸುಪ್ರೀಂ ಕೋರ್ಟಿನ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿತ್ತು.

ಅಂದಹಾಗೆ ಹಿಂದೊಮ್ಮೆ ಇದೇ ಸುಪ್ರೀಕೋರ್ಟ್ ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವವರೆಲ್ಲ ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಬೇಕು ಎಂದು ಆದೇಶಿಸಿತ್ತು. ಆ ಆದೇಶದ ಹಿಂದಿದ್ದ ಕಾಳಜಿ, ‘ಜನರಿಗೆ ತಮ್ಮನ್ನು ಪ್ರತಿನಿಧಿಸಲಿರುವ ವ್ಯಕ್ತಿಯ ಪೂರ್ಣ ವಿವರಗಳು ಲಭ್ಯವಿರಬೇಕು’ ಎಂಬುದಾಗಿತ್ತು. ಅದೇ ಮಾನದಂಡ ಇಟ್ಟುಕೊಂಡರೆ ಇವತ್ತು ಈ ದೇಶದ ಜನರ ಪ್ರತಿನಿತ್ಯದ ಬದುಕಿನ ಮೇಲೆ ಪ್ರಭಾವ ಬೀರುವಂತಹ ತೀರ್ಪುಗಳನ್ನು ನೀಡುವ ನ್ಯಾಯಾಧೀಶರ ಬಗೆಗೂ ಜನರಿಗೆ ಎಲ್ಲ ಮಾಹಿತಿ ಲಭ್ಯವಿರಬೇಕೆಂದು ಆಶಿಸುವುದು ಸರಿಯಲ್ಲವೇ?

ಅದೆಲ್ಲ ಬದಿಗಿರಲಿ, ಖ್ಯಾತ ವಕೀಲ ಫಾಲಿ ಎಸ್.ನಾರೀಮನ್ ಅವರು ಹೇಳುವಂತೆ ‘ದೇಶದ ಸಂವಿಧಾನಕ್ಕಿಂತ ನ್ಯಾಯಾಂಗ ಹಿರಿಯದಲ್ಲ’ ಆದರೆ ಇಲ್ಲಿಯ ಕಾನೂನುಗಳನ್ನು ಮೀರಿರುವವರು ಎಂಬಂತಹ ನಿಲುವುಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆದರೆ ಇಂತಹ ನಿಲುವು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ರಶಾಂತ್ ಭೂಷಣ್‍ರಂತಹ ಹಿರಿಯ ವಕೀಲರು ವಾದಿಸುತ್ತಾ ಬಂದಿದ್ದಾರಲ್ಲದೆ ನ್ಯಾಯಾಂಗದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಹಲವಾರು ವರ್ಷಗಳಿಂದ ಹೋರಾಡುತ್ತಿದ್ದಾರೆ.

ಪ್ರಶಾಂತ್ ಭೂಷಣ್ ಹೇಳುವಂತೆ ‘ಪ್ರಾಮಾಣಿಕ ನ್ಯಾಯಾಂಗಕ್ಕೆ ಆಶಿಸುವ ಸಾಮಾನ್ಯ ಜನರೆಲ್ಲ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪಾರದರ್ಶಕರೆ ಮತ್ತು ಭ್ರಷ್ಟ ನ್ಯಾಯಾಧೀಶರ ವಿಚಾರಣೆ ನಡೆಸುವಂತೆ ನೋಡಿಕೊಳ್ಳಲು ಸೂಕ್ತವಾದ ಸ್ವತಂತ್ರ ಸಂಸ್ಥೆಗಳನ್ನು ರಚಿಸಬೇಕೆಂದು ಆಗ್ರಹಿಸುವ ಸಮಯ ಈಗ ಕೂಡಿಬಂದಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...