Homeಅಂಕಣಗಳುಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

ಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

- Advertisement -
- Advertisement -

| ಗೌರಿ ಲಂಕೇಶ್ |
30 ಸೆಪ್ಟೆಂಬರ್, 2009 (ಸಂಪಾದಕೀಯದಿಂದ) |

ಸುಪ್ರೀಂಕೋರ್ಟ್ ಮತ್ತು ಇತರೆ ಹೈಕೋರ್ಟುಗಳ ನ್ಯಾಯಾಧೀಶರೆಲ್ಲರೂ ಇನ್ನು ಮುಂದೆ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಒಪ್ಪಿಕೊಂಡ ಬೆನ್ನ ಹಿಂದೆಯೇ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಿ.ವಿ.ದಿನಕರನ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಈ ಆರೋಪಗಳು ನಿಜವೋ, ಸುಳ್ಳೋ ಎಂಬುದು ಸಾಬೀತಾಗಬೇಕಿದೆಯಾದರೂ ಅದರ ಸುತ್ತ ಈಗ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದು ನ್ಯಾಯಾಧೀಶರ ನೇಮಕಾತಿ ಪದ್ಧತಿಯಿಂದ ಹಿಡಿದು ಭ್ರಷ್ಟ ನ್ಯಾಯಮೂರ್ತಿಗಳ ವಿರುದ್ಧ ಕ್ರಮ ಜರುಗಿಸುವ ರೀತಿಯ ತನಕ ಹಬ್ಬಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ ಮತ್ತು ಆಡಳಿತಾಂಗ ಇವತ್ತು ಜನದ್ರೋಹಿಗಳಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಜನರೆಲ್ಲ ಭರವಸೆ ಇಟ್ಟಿರುವುದು ನ್ಯಾಯಾಂಗದ ಮೇಲೆ. ಆದರೆ ಇತ್ತೀಚೆಗೆ ಟ್ರಾನ್ಸ್‍ಪರೆನ್ಸಿ ಇಂಟರ್‍ನ್ಯಾಷನಲ್ ಎಂಬ ಸಂಘಟನೆ ನಡೆಸಿದ ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ನ್ಯಾಯಾಂಗ ಕೂಡ ಈಗ ಭ್ರಷ್ಟಗೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸುಪ್ರೀಕೋರ್ಟಿನ ಮಾಜಿ ಮುಖ್ಯನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಅವರು 2002ರಲ್ಲೇ ‘ಭಾರತದ ನ್ಯಾಯಾಂಗದ ಉನ್ನತ ವಲಯದಲ್ಲೂ ಪ್ರತಿ ಐವರು ನ್ಯಾಯಾಧೀಶರಲ್ಲಿ ಓರ್ವ ಭ್ರಷ್ಟಗೊಂಡಿದ್ದಾನೆ.’ ಎಂದೇ ಘೋಷಿಸಿದ್ದರು.

ಪರಿಸ್ಥಿತಿ ಆತಂಕ ಹುಟ್ಟಿಸುವಂತಿದ್ದರೂ ನಮ್ಮ ನ್ಯಾಯಮೂರ್ತಿಗಳು ಅದನ್ನೆಲ್ಲ ಸರಿಪಡಿಸಲು ಸ್ವಯಂಪ್ರೇರಿತರಾಗಿ ಮುಂದೆ ಬರಲಿಲ್ಲ. ನ್ಯಾಯಾಂಗದಲ್ಲಿ ಭ್ರಷ್ಟಚಾರ, ದುರಾಡಳಿತ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ನರ್ಮದಾ ಡ್ಯಾಂಅನ್ನು ನಿರ್ಮಿಸಲು ಸುಪ್ರೀಂಕೋರ್ಟ್ ನೀಡಿದ ಅನುಮತಿಯನ್ನು ವಿರೋಧಿಸಿ ಅದರ ಗೇಟ್ ಮುಂದೆ ಪ್ರತಿಭಟಿಸಿದ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರಿಗೆ ಒಂದು ದಿನದ ಜೈಲು ಶಿಕ್ಷೆಯನ್ನು, ಎರಡು ಸಾವಿರ ರೂಪಾಯಿಗಲ ದಂಡವನ್ನೂ ವಿಧಿಸಿದರು. ಅವರ ಪ್ರಕಾರ ಆಕೆ ಮಾಡಿದ ಘೋರ ತಪ್ಪು. ‘ನ್ಯಾಯಾಂಗದ ಘನತೆಯನ್ನು ಕುಂದಿಸಿದ್ದು!.’
ವಿಪರ್ಯಾಸ ಯಾವುದೆಂದರೆ ಸುಪ್ರೀಕೋರ್ಟಿನ ಘನತೆಗೆ ಸ್ವತಃ ಸುಪ್ರೀಂಕೋರ್ಟೆ ಇತ್ತೀಚೆಗೆ ಧಕ್ಕೆ ತಂದಿತು. ಅದಾದದ್ದು ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಸಂಬಂಧಿಸಿದ ವಾದ-ವಿವಾದದಲ್ಲಿ, ದೆಹಲಿ ನ್ಯಾಯಾಲಯವು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕೆಂದು ತೀರ್ಪು ನೀಡಿದಾಗ ಅದಕ್ಕೆ ಸುಪ್ರೀಕೋರ್ಟ್ ತಡೆಯಾಜ್ಞೆ ತಂದಿತು. ಅದನ್ನು ಕಂಡ ದೇಶದ ಬಹಳಷ್ಟು ಜನ ‘ನ್ಯಾಯಾಧೀಶರಿಗೆ ತಮ್ಮ ಆಸ್ತಿ ಘೋಷಿಸಲು ಯಾಕಿಷ್ಟು ಹಿಂಜರಿಕೆ’ ಎಂದು ಯೋಚಿಸುವಂತಾಯಿತ್ತಲ್ಲದೆ, ಸುಪ್ರೀಂ ಕೋರ್ಟಿನ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿತ್ತು.

ಅಂದಹಾಗೆ ಹಿಂದೊಮ್ಮೆ ಇದೇ ಸುಪ್ರೀಕೋರ್ಟ್ ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವವರೆಲ್ಲ ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಬೇಕು ಎಂದು ಆದೇಶಿಸಿತ್ತು. ಆ ಆದೇಶದ ಹಿಂದಿದ್ದ ಕಾಳಜಿ, ‘ಜನರಿಗೆ ತಮ್ಮನ್ನು ಪ್ರತಿನಿಧಿಸಲಿರುವ ವ್ಯಕ್ತಿಯ ಪೂರ್ಣ ವಿವರಗಳು ಲಭ್ಯವಿರಬೇಕು’ ಎಂಬುದಾಗಿತ್ತು. ಅದೇ ಮಾನದಂಡ ಇಟ್ಟುಕೊಂಡರೆ ಇವತ್ತು ಈ ದೇಶದ ಜನರ ಪ್ರತಿನಿತ್ಯದ ಬದುಕಿನ ಮೇಲೆ ಪ್ರಭಾವ ಬೀರುವಂತಹ ತೀರ್ಪುಗಳನ್ನು ನೀಡುವ ನ್ಯಾಯಾಧೀಶರ ಬಗೆಗೂ ಜನರಿಗೆ ಎಲ್ಲ ಮಾಹಿತಿ ಲಭ್ಯವಿರಬೇಕೆಂದು ಆಶಿಸುವುದು ಸರಿಯಲ್ಲವೇ?

ಅದೆಲ್ಲ ಬದಿಗಿರಲಿ, ಖ್ಯಾತ ವಕೀಲ ಫಾಲಿ ಎಸ್.ನಾರೀಮನ್ ಅವರು ಹೇಳುವಂತೆ ‘ದೇಶದ ಸಂವಿಧಾನಕ್ಕಿಂತ ನ್ಯಾಯಾಂಗ ಹಿರಿಯದಲ್ಲ’ ಆದರೆ ಇಲ್ಲಿಯ ಕಾನೂನುಗಳನ್ನು ಮೀರಿರುವವರು ಎಂಬಂತಹ ನಿಲುವುಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆದರೆ ಇಂತಹ ನಿಲುವು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ರಶಾಂತ್ ಭೂಷಣ್‍ರಂತಹ ಹಿರಿಯ ವಕೀಲರು ವಾದಿಸುತ್ತಾ ಬಂದಿದ್ದಾರಲ್ಲದೆ ನ್ಯಾಯಾಂಗದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಹಲವಾರು ವರ್ಷಗಳಿಂದ ಹೋರಾಡುತ್ತಿದ್ದಾರೆ.

ಪ್ರಶಾಂತ್ ಭೂಷಣ್ ಹೇಳುವಂತೆ ‘ಪ್ರಾಮಾಣಿಕ ನ್ಯಾಯಾಂಗಕ್ಕೆ ಆಶಿಸುವ ಸಾಮಾನ್ಯ ಜನರೆಲ್ಲ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪಾರದರ್ಶಕರೆ ಮತ್ತು ಭ್ರಷ್ಟ ನ್ಯಾಯಾಧೀಶರ ವಿಚಾರಣೆ ನಡೆಸುವಂತೆ ನೋಡಿಕೊಳ್ಳಲು ಸೂಕ್ತವಾದ ಸ್ವತಂತ್ರ ಸಂಸ್ಥೆಗಳನ್ನು ರಚಿಸಬೇಕೆಂದು ಆಗ್ರಹಿಸುವ ಸಮಯ ಈಗ ಕೂಡಿಬಂದಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...