Homeಅಂಕಣಗಳುಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

ಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

- Advertisement -
- Advertisement -

| ಗೌರಿ ಲಂಕೇಶ್ |
30 ಸೆಪ್ಟೆಂಬರ್, 2009 (ಸಂಪಾದಕೀಯದಿಂದ) |

ಸುಪ್ರೀಂಕೋರ್ಟ್ ಮತ್ತು ಇತರೆ ಹೈಕೋರ್ಟುಗಳ ನ್ಯಾಯಾಧೀಶರೆಲ್ಲರೂ ಇನ್ನು ಮುಂದೆ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಒಪ್ಪಿಕೊಂಡ ಬೆನ್ನ ಹಿಂದೆಯೇ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಿ.ವಿ.ದಿನಕರನ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಈ ಆರೋಪಗಳು ನಿಜವೋ, ಸುಳ್ಳೋ ಎಂಬುದು ಸಾಬೀತಾಗಬೇಕಿದೆಯಾದರೂ ಅದರ ಸುತ್ತ ಈಗ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದು ನ್ಯಾಯಾಧೀಶರ ನೇಮಕಾತಿ ಪದ್ಧತಿಯಿಂದ ಹಿಡಿದು ಭ್ರಷ್ಟ ನ್ಯಾಯಮೂರ್ತಿಗಳ ವಿರುದ್ಧ ಕ್ರಮ ಜರುಗಿಸುವ ರೀತಿಯ ತನಕ ಹಬ್ಬಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ ಮತ್ತು ಆಡಳಿತಾಂಗ ಇವತ್ತು ಜನದ್ರೋಹಿಗಳಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಜನರೆಲ್ಲ ಭರವಸೆ ಇಟ್ಟಿರುವುದು ನ್ಯಾಯಾಂಗದ ಮೇಲೆ. ಆದರೆ ಇತ್ತೀಚೆಗೆ ಟ್ರಾನ್ಸ್‍ಪರೆನ್ಸಿ ಇಂಟರ್‍ನ್ಯಾಷನಲ್ ಎಂಬ ಸಂಘಟನೆ ನಡೆಸಿದ ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ನ್ಯಾಯಾಂಗ ಕೂಡ ಈಗ ಭ್ರಷ್ಟಗೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸುಪ್ರೀಕೋರ್ಟಿನ ಮಾಜಿ ಮುಖ್ಯನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಅವರು 2002ರಲ್ಲೇ ‘ಭಾರತದ ನ್ಯಾಯಾಂಗದ ಉನ್ನತ ವಲಯದಲ್ಲೂ ಪ್ರತಿ ಐವರು ನ್ಯಾಯಾಧೀಶರಲ್ಲಿ ಓರ್ವ ಭ್ರಷ್ಟಗೊಂಡಿದ್ದಾನೆ.’ ಎಂದೇ ಘೋಷಿಸಿದ್ದರು.

ಪರಿಸ್ಥಿತಿ ಆತಂಕ ಹುಟ್ಟಿಸುವಂತಿದ್ದರೂ ನಮ್ಮ ನ್ಯಾಯಮೂರ್ತಿಗಳು ಅದನ್ನೆಲ್ಲ ಸರಿಪಡಿಸಲು ಸ್ವಯಂಪ್ರೇರಿತರಾಗಿ ಮುಂದೆ ಬರಲಿಲ್ಲ. ನ್ಯಾಯಾಂಗದಲ್ಲಿ ಭ್ರಷ್ಟಚಾರ, ದುರಾಡಳಿತ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ನರ್ಮದಾ ಡ್ಯಾಂಅನ್ನು ನಿರ್ಮಿಸಲು ಸುಪ್ರೀಂಕೋರ್ಟ್ ನೀಡಿದ ಅನುಮತಿಯನ್ನು ವಿರೋಧಿಸಿ ಅದರ ಗೇಟ್ ಮುಂದೆ ಪ್ರತಿಭಟಿಸಿದ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರಿಗೆ ಒಂದು ದಿನದ ಜೈಲು ಶಿಕ್ಷೆಯನ್ನು, ಎರಡು ಸಾವಿರ ರೂಪಾಯಿಗಲ ದಂಡವನ್ನೂ ವಿಧಿಸಿದರು. ಅವರ ಪ್ರಕಾರ ಆಕೆ ಮಾಡಿದ ಘೋರ ತಪ್ಪು. ‘ನ್ಯಾಯಾಂಗದ ಘನತೆಯನ್ನು ಕುಂದಿಸಿದ್ದು!.’
ವಿಪರ್ಯಾಸ ಯಾವುದೆಂದರೆ ಸುಪ್ರೀಕೋರ್ಟಿನ ಘನತೆಗೆ ಸ್ವತಃ ಸುಪ್ರೀಂಕೋರ್ಟೆ ಇತ್ತೀಚೆಗೆ ಧಕ್ಕೆ ತಂದಿತು. ಅದಾದದ್ದು ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಸಂಬಂಧಿಸಿದ ವಾದ-ವಿವಾದದಲ್ಲಿ, ದೆಹಲಿ ನ್ಯಾಯಾಲಯವು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕೆಂದು ತೀರ್ಪು ನೀಡಿದಾಗ ಅದಕ್ಕೆ ಸುಪ್ರೀಕೋರ್ಟ್ ತಡೆಯಾಜ್ಞೆ ತಂದಿತು. ಅದನ್ನು ಕಂಡ ದೇಶದ ಬಹಳಷ್ಟು ಜನ ‘ನ್ಯಾಯಾಧೀಶರಿಗೆ ತಮ್ಮ ಆಸ್ತಿ ಘೋಷಿಸಲು ಯಾಕಿಷ್ಟು ಹಿಂಜರಿಕೆ’ ಎಂದು ಯೋಚಿಸುವಂತಾಯಿತ್ತಲ್ಲದೆ, ಸುಪ್ರೀಂ ಕೋರ್ಟಿನ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿತ್ತು.

ಅಂದಹಾಗೆ ಹಿಂದೊಮ್ಮೆ ಇದೇ ಸುಪ್ರೀಕೋರ್ಟ್ ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವವರೆಲ್ಲ ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಬೇಕು ಎಂದು ಆದೇಶಿಸಿತ್ತು. ಆ ಆದೇಶದ ಹಿಂದಿದ್ದ ಕಾಳಜಿ, ‘ಜನರಿಗೆ ತಮ್ಮನ್ನು ಪ್ರತಿನಿಧಿಸಲಿರುವ ವ್ಯಕ್ತಿಯ ಪೂರ್ಣ ವಿವರಗಳು ಲಭ್ಯವಿರಬೇಕು’ ಎಂಬುದಾಗಿತ್ತು. ಅದೇ ಮಾನದಂಡ ಇಟ್ಟುಕೊಂಡರೆ ಇವತ್ತು ಈ ದೇಶದ ಜನರ ಪ್ರತಿನಿತ್ಯದ ಬದುಕಿನ ಮೇಲೆ ಪ್ರಭಾವ ಬೀರುವಂತಹ ತೀರ್ಪುಗಳನ್ನು ನೀಡುವ ನ್ಯಾಯಾಧೀಶರ ಬಗೆಗೂ ಜನರಿಗೆ ಎಲ್ಲ ಮಾಹಿತಿ ಲಭ್ಯವಿರಬೇಕೆಂದು ಆಶಿಸುವುದು ಸರಿಯಲ್ಲವೇ?

ಅದೆಲ್ಲ ಬದಿಗಿರಲಿ, ಖ್ಯಾತ ವಕೀಲ ಫಾಲಿ ಎಸ್.ನಾರೀಮನ್ ಅವರು ಹೇಳುವಂತೆ ‘ದೇಶದ ಸಂವಿಧಾನಕ್ಕಿಂತ ನ್ಯಾಯಾಂಗ ಹಿರಿಯದಲ್ಲ’ ಆದರೆ ಇಲ್ಲಿಯ ಕಾನೂನುಗಳನ್ನು ಮೀರಿರುವವರು ಎಂಬಂತಹ ನಿಲುವುಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆದರೆ ಇಂತಹ ನಿಲುವು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ರಶಾಂತ್ ಭೂಷಣ್‍ರಂತಹ ಹಿರಿಯ ವಕೀಲರು ವಾದಿಸುತ್ತಾ ಬಂದಿದ್ದಾರಲ್ಲದೆ ನ್ಯಾಯಾಂಗದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಹಲವಾರು ವರ್ಷಗಳಿಂದ ಹೋರಾಡುತ್ತಿದ್ದಾರೆ.

ಪ್ರಶಾಂತ್ ಭೂಷಣ್ ಹೇಳುವಂತೆ ‘ಪ್ರಾಮಾಣಿಕ ನ್ಯಾಯಾಂಗಕ್ಕೆ ಆಶಿಸುವ ಸಾಮಾನ್ಯ ಜನರೆಲ್ಲ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪಾರದರ್ಶಕರೆ ಮತ್ತು ಭ್ರಷ್ಟ ನ್ಯಾಯಾಧೀಶರ ವಿಚಾರಣೆ ನಡೆಸುವಂತೆ ನೋಡಿಕೊಳ್ಳಲು ಸೂಕ್ತವಾದ ಸ್ವತಂತ್ರ ಸಂಸ್ಥೆಗಳನ್ನು ರಚಿಸಬೇಕೆಂದು ಆಗ್ರಹಿಸುವ ಸಮಯ ಈಗ ಕೂಡಿಬಂದಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...