Homeಅಂಕಣಗಳುಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

ಬೇಕಿದೆ ನ್ಯಾಯಾಂಗದ ಸ್ವಚ್ಛೀಕರಣ

- Advertisement -
- Advertisement -

| ಗೌರಿ ಲಂಕೇಶ್ |
30 ಸೆಪ್ಟೆಂಬರ್, 2009 (ಸಂಪಾದಕೀಯದಿಂದ) |

ಸುಪ್ರೀಂಕೋರ್ಟ್ ಮತ್ತು ಇತರೆ ಹೈಕೋರ್ಟುಗಳ ನ್ಯಾಯಾಧೀಶರೆಲ್ಲರೂ ಇನ್ನು ಮುಂದೆ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಲು ಒಪ್ಪಿಕೊಂಡ ಬೆನ್ನ ಹಿಂದೆಯೇ ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾದ ಪಿ.ವಿ.ದಿನಕರನ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಈ ಆರೋಪಗಳು ನಿಜವೋ, ಸುಳ್ಳೋ ಎಂಬುದು ಸಾಬೀತಾಗಬೇಕಿದೆಯಾದರೂ ಅದರ ಸುತ್ತ ಈಗ ಹಲವಾರು ಆಯಾಮಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದು ನ್ಯಾಯಾಧೀಶರ ನೇಮಕಾತಿ ಪದ್ಧತಿಯಿಂದ ಹಿಡಿದು ಭ್ರಷ್ಟ ನ್ಯಾಯಮೂರ್ತಿಗಳ ವಿರುದ್ಧ ಕ್ರಮ ಜರುಗಿಸುವ ರೀತಿಯ ತನಕ ಹಬ್ಬಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ ಮತ್ತು ಆಡಳಿತಾಂಗ ಇವತ್ತು ಜನದ್ರೋಹಿಗಳಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಜನರೆಲ್ಲ ಭರವಸೆ ಇಟ್ಟಿರುವುದು ನ್ಯಾಯಾಂಗದ ಮೇಲೆ. ಆದರೆ ಇತ್ತೀಚೆಗೆ ಟ್ರಾನ್ಸ್‍ಪರೆನ್ಸಿ ಇಂಟರ್‍ನ್ಯಾಷನಲ್ ಎಂಬ ಸಂಘಟನೆ ನಡೆಸಿದ ಸಮೀಕ್ಷೆಯಲ್ಲಿ ಶೇ.77ರಷ್ಟು ಭಾರತೀಯರು ನ್ಯಾಯಾಂಗ ಕೂಡ ಈಗ ಭ್ರಷ್ಟಗೊಂಡಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸುಪ್ರೀಕೋರ್ಟಿನ ಮಾಜಿ ಮುಖ್ಯನ್ಯಾಯಮೂರ್ತಿಗಳಾದ ಎಸ್.ಪಿ.ಬರೂಚ ಅವರು 2002ರಲ್ಲೇ ‘ಭಾರತದ ನ್ಯಾಯಾಂಗದ ಉನ್ನತ ವಲಯದಲ್ಲೂ ಪ್ರತಿ ಐವರು ನ್ಯಾಯಾಧೀಶರಲ್ಲಿ ಓರ್ವ ಭ್ರಷ್ಟಗೊಂಡಿದ್ದಾನೆ.’ ಎಂದೇ ಘೋಷಿಸಿದ್ದರು.

ಪರಿಸ್ಥಿತಿ ಆತಂಕ ಹುಟ್ಟಿಸುವಂತಿದ್ದರೂ ನಮ್ಮ ನ್ಯಾಯಮೂರ್ತಿಗಳು ಅದನ್ನೆಲ್ಲ ಸರಿಪಡಿಸಲು ಸ್ವಯಂಪ್ರೇರಿತರಾಗಿ ಮುಂದೆ ಬರಲಿಲ್ಲ. ನ್ಯಾಯಾಂಗದಲ್ಲಿ ಭ್ರಷ್ಟಚಾರ, ದುರಾಡಳಿತ ತಾಂಡವವಾಡುತ್ತಿದ್ದರೂ ಅದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ನರ್ಮದಾ ಡ್ಯಾಂಅನ್ನು ನಿರ್ಮಿಸಲು ಸುಪ್ರೀಂಕೋರ್ಟ್ ನೀಡಿದ ಅನುಮತಿಯನ್ನು ವಿರೋಧಿಸಿ ಅದರ ಗೇಟ್ ಮುಂದೆ ಪ್ರತಿಭಟಿಸಿದ ಖ್ಯಾತ ಲೇಖಕಿ ಅರುಂಧತಿ ರಾಯ್ ಅವರಿಗೆ ಒಂದು ದಿನದ ಜೈಲು ಶಿಕ್ಷೆಯನ್ನು, ಎರಡು ಸಾವಿರ ರೂಪಾಯಿಗಲ ದಂಡವನ್ನೂ ವಿಧಿಸಿದರು. ಅವರ ಪ್ರಕಾರ ಆಕೆ ಮಾಡಿದ ಘೋರ ತಪ್ಪು. ‘ನ್ಯಾಯಾಂಗದ ಘನತೆಯನ್ನು ಕುಂದಿಸಿದ್ದು!.’
ವಿಪರ್ಯಾಸ ಯಾವುದೆಂದರೆ ಸುಪ್ರೀಕೋರ್ಟಿನ ಘನತೆಗೆ ಸ್ವತಃ ಸುಪ್ರೀಂಕೋರ್ಟೆ ಇತ್ತೀಚೆಗೆ ಧಕ್ಕೆ ತಂದಿತು. ಅದಾದದ್ದು ನ್ಯಾಯಮೂರ್ತಿಗಳ ಆಸ್ತಿ ಘೋಷಣೆಗೆ ಸಂಬಂಧಿಸಿದ ವಾದ-ವಿವಾದದಲ್ಲಿ, ದೆಹಲಿ ನ್ಯಾಯಾಲಯವು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಬೇಕೆಂದು ತೀರ್ಪು ನೀಡಿದಾಗ ಅದಕ್ಕೆ ಸುಪ್ರೀಕೋರ್ಟ್ ತಡೆಯಾಜ್ಞೆ ತಂದಿತು. ಅದನ್ನು ಕಂಡ ದೇಶದ ಬಹಳಷ್ಟು ಜನ ‘ನ್ಯಾಯಾಧೀಶರಿಗೆ ತಮ್ಮ ಆಸ್ತಿ ಘೋಷಿಸಲು ಯಾಕಿಷ್ಟು ಹಿಂಜರಿಕೆ’ ಎಂದು ಯೋಚಿಸುವಂತಾಯಿತ್ತಲ್ಲದೆ, ಸುಪ್ರೀಂ ಕೋರ್ಟಿನ ಬಗ್ಗೆಯೇ ಸಂಶಯ ಮೂಡುವಂತೆ ಮಾಡಿತ್ತು.

ಅಂದಹಾಗೆ ಹಿಂದೊಮ್ಮೆ ಇದೇ ಸುಪ್ರೀಕೋರ್ಟ್ ವಿಧಾನಸಭೆ ಮತ್ತು ಸಂಸತ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸುವವರೆಲ್ಲ ತಮ್ಮ ಆಸ್ತಿ ವಿವರಗಳನ್ನು ಬಹಿರಂಗ ಪಡಿಸಬೇಕು ಎಂದು ಆದೇಶಿಸಿತ್ತು. ಆ ಆದೇಶದ ಹಿಂದಿದ್ದ ಕಾಳಜಿ, ‘ಜನರಿಗೆ ತಮ್ಮನ್ನು ಪ್ರತಿನಿಧಿಸಲಿರುವ ವ್ಯಕ್ತಿಯ ಪೂರ್ಣ ವಿವರಗಳು ಲಭ್ಯವಿರಬೇಕು’ ಎಂಬುದಾಗಿತ್ತು. ಅದೇ ಮಾನದಂಡ ಇಟ್ಟುಕೊಂಡರೆ ಇವತ್ತು ಈ ದೇಶದ ಜನರ ಪ್ರತಿನಿತ್ಯದ ಬದುಕಿನ ಮೇಲೆ ಪ್ರಭಾವ ಬೀರುವಂತಹ ತೀರ್ಪುಗಳನ್ನು ನೀಡುವ ನ್ಯಾಯಾಧೀಶರ ಬಗೆಗೂ ಜನರಿಗೆ ಎಲ್ಲ ಮಾಹಿತಿ ಲಭ್ಯವಿರಬೇಕೆಂದು ಆಶಿಸುವುದು ಸರಿಯಲ್ಲವೇ?

ಅದೆಲ್ಲ ಬದಿಗಿರಲಿ, ಖ್ಯಾತ ವಕೀಲ ಫಾಲಿ ಎಸ್.ನಾರೀಮನ್ ಅವರು ಹೇಳುವಂತೆ ‘ದೇಶದ ಸಂವಿಧಾನಕ್ಕಿಂತ ನ್ಯಾಯಾಂಗ ಹಿರಿಯದಲ್ಲ’ ಆದರೆ ಇಲ್ಲಿಯ ಕಾನೂನುಗಳನ್ನು ಮೀರಿರುವವರು ಎಂಬಂತಹ ನಿಲುವುಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಆದರೆ ಇಂತಹ ನಿಲುವು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕ ಎಂದು ಪ್ರಶಾಂತ್ ಭೂಷಣ್‍ರಂತಹ ಹಿರಿಯ ವಕೀಲರು ವಾದಿಸುತ್ತಾ ಬಂದಿದ್ದಾರಲ್ಲದೆ ನ್ಯಾಯಾಂಗದಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಹಲವಾರು ವರ್ಷಗಳಿಂದ ಹೋರಾಡುತ್ತಿದ್ದಾರೆ.

ಪ್ರಶಾಂತ್ ಭೂಷಣ್ ಹೇಳುವಂತೆ ‘ಪ್ರಾಮಾಣಿಕ ನ್ಯಾಯಾಂಗಕ್ಕೆ ಆಶಿಸುವ ಸಾಮಾನ್ಯ ಜನರೆಲ್ಲ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಪಾರದರ್ಶಕರೆ ಮತ್ತು ಭ್ರಷ್ಟ ನ್ಯಾಯಾಧೀಶರ ವಿಚಾರಣೆ ನಡೆಸುವಂತೆ ನೋಡಿಕೊಳ್ಳಲು ಸೂಕ್ತವಾದ ಸ್ವತಂತ್ರ ಸಂಸ್ಥೆಗಳನ್ನು ರಚಿಸಬೇಕೆಂದು ಆಗ್ರಹಿಸುವ ಸಮಯ ಈಗ ಕೂಡಿಬಂದಿದೆ’.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...