Homeಮುಖಪುಟಲಡಾಖ್‌ಗೆ ರಾಜ್ಯದ ಸ್ಥಾನಮಾನಕ್ಕಾಗಿ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ಲಡಾಖ್‌ಗೆ ರಾಜ್ಯದ ಸ್ಥಾನಮಾನಕ್ಕಾಗಿ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

- Advertisement -
- Advertisement -

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಅದನ್ನು ಸಂವಿಧಾನದ ಆರನೇ ಶೆಡ್ಯೂಲ್‌ ಅಡಿಯಲ್ಲಿ ಸೇರಿಸಬೇಕೆಂದು ಒತ್ತಾಯಿಸಿ ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ಲೇಹ್ ಅಪೆಕ್ಸ್ ಬಾಡಿ ಜೊತೆಗೂಡಿ ಬುಧವಾರ ಲೇಹ್‌ನಲ್ಲಿ 35 ದಿನಗಳ ಹೊಸ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಮುಖ್ಯ ಬೇಡಿಕೆಗಳ ಕುರಿತು ಚರ್ಚೆಗಳು ಪ್ರಾರಂಭವಾಗುವ ಹಂತಕ್ಕೆ ಮಾತುಕತೆಗಳು ತಲುಪಿದ್ದರೂ”, ಕಳೆದ ಎರಡು ತಿಂಗಳುಗಳಲ್ಲಿ ಕೇಂದ್ರ ಗೃಹ ಸಚಿವಾಲಯವು ಲಡಾಖ್‌ನ ಪ್ರತಿನಿಧಿಗಳೊಂದಿಗೆ ಯಾವುದೇ ಸಭೆಗಳನ್ನು ಕರೆದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ವಾಂಗ್‌ಚುಕ್ ಹೇಳಿದ್ದಾರೆ.

ಲೇಹ್‌ನಲ್ಲಿ ಹಿಲ್ ಕೌನ್ಸಿಲ್ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಚಳುವಳಿಯನ್ನು ತೀವ್ರಗೊಳಿಸುತ್ತೇವೆ ವಾಂಗ್‌ಚುಕ್ ತಿಳಿಸಿದ್ದಾರೆ.

2020ರ ಹಿಲ್ ಕೌನ್ಸಿಲ್ ಚುನಾವಣೆಯ ಸಮಯದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಲಡಾಖ್ ಅನ್ನು ಆರನೇ ಶೆಡ್ಯೂಲ್‌ ಅಡಿಯಲ್ಲಿ ಸೇರಿಸಲಾಗುವುದು ಎಂದು ಭರವಸೆ ನೀಡಿತ್ತು. ಗಡಿ ಪ್ರದೇಶಕ್ಕೆ ಸಂಬಂಧಿಸಿದ ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಪ್ರಮುಖ ಮೂರು ಕಾರ್ಯಸೂಚಿಗಳಲ್ಲಿ ಈ ಭರವಸೆಯೂ ಸೇರಿತ್ತು.

ಸಂವಿಧಾನದ 244ನೇ ವಿಧಿ (ಪರಿಶಿಷ್ಟ ಪ್ರದೇಶಗಳು ಮತ್ತು ಬುಡಕಟ್ಟು ಪ್ರದೇಶಗಳ ಆಡಳಿತ) ಅಡಿಯಲ್ಲಿ ಆರನೇ ಶೆಡ್ಯೂಲ್ ಭೂಮಿಗೆ ಕೆಲವು ರಕ್ಷಣೆಗಳನ್ನು ಮತ್ತು ಗೊತ್ತುಪಡಿಸಿದ ಬುಡಕಟ್ಟು ಪ್ರದೇಶಗಳಲ್ಲಿ ನಾಗರಿಕರಿಗೆ ನಾಮಮಾತ್ರ ಸ್ವಾಯತ್ತತೆಯನ್ನು ಖಾತರಿಪಡಿಸುತ್ತದೆ. ಲಡಾಖ್‌ನಲ್ಲಿ, ಜನಸಂಖ್ಯೆಯ 97% ಕ್ಕಿಂತ ಹೆಚ್ಚು ಜನರು ಪರಿಶಿಷ್ಟ ಪಂಗಡಗಳಿಗೆ ಸೇರಿದವರು.

ಆಗಸ್ಟ್ 5, 2019ರಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು ಮತ್ತು ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ನೀಡುವಂತೆ ಒತ್ತಾಯಿಸಿ 2024ರ ಲೋಕಸಭಾ ಚುನಾವಣೆಗೆ ಮುನ್ನ 21 ದಿನಗಳ ಉಪವಾಸ ಸತ್ಯಾಗ್ರಹ ಸೇರಿದಂತೆ ವಾಂಗ್‌ಚುಕ್ ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದರು.

ಆಗಸ್ಟ್‌ನಲ್ಲಿ, ವಾಂಗ್‌ಚುಕ್ ಮತ್ತು ಲಡಾಖ್ ಸಂಸದ ಮೊಹಮ್ಮದ್ ಹನೀಫಾ ಜಾನ್ ಅವರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮೂರು ದಿನಗಳ ಉಪವಾಸ ಸತ್ಯಾಗ್ರಹವನ್ನು ಮುಕ್ತಾಯಗೊಳಿಸುವ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಕೊನೆಯ ಸುತ್ತಿನ ಮಾತುಕತೆ 2025ರ ಮೇ 27ರಂದು ನಡೆದಿತ್ತು. ಅದರ ನಂತರ ಕೇಂದ್ರವು ಜೂನ್‌ನಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ನಿವಾಸ ಮತ್ತು ಉದ್ಯೋಗ ಮೀಸಲಾತಿ ನೀತಿಯನ್ನು ಘೋಷಿಸಿತು.

ಹೊಸ ನಿಯಮಗಳ ಪ್ರಕಾರ, ಅಕ್ಟೋಬರ್ 31, 2019ರಂದು ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ರಚನೆಯಾದಾಗಿನಿಂದ 15 ವರ್ಷಗಳ ಕಾಲ ಲಡಾಖ್‌ನಲ್ಲಿ ವಾಸಿಸುತ್ತಿರುವ ವ್ಯಕ್ತಿ ಮಾತ್ರ ಅಲ್ಲಿನ ನಿವಾಸಿವಾಗಲು ಅರ್ಹರಾಗಿರುತ್ತಾರೆ.

ಅಕ್ಟೋಬರ್ 31, 2019ರಿಂದ ಏಳು ವರ್ಷಗಳ ಕಾಲ ಅಧ್ಯಯನ ಮಾಡಿ ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ 10 ಅಥವಾ 12 ನೇ ತರಗತಿ ಪರೀಕ್ಷೆಗಳನ್ನು ಬರೆದ ವ್ಯಕ್ತಿಯೂ ಸಹ ನಿವಾಸಿಯಾಗಲು ಅರ್ಹತೆ ಪಡೆಯುತ್ತಾರೆ. ಆದಾಗ್ಯೂ, ನಿವಾಸ ನಿಯಮವು “ಲಡಾಖ್ ನಾಗರಿಕ ಸೇವೆಗಳ ವಿಕೇಂದ್ರೀಕರಣ ಮತ್ತು ನೇಮಕಾತಿಯಲ್ಲಿ ವ್ಯಾಖ್ಯಾನಿಸಲಾದ ಲಡಾಖ್ ಕೇಂದ್ರಾಡಳಿತ ಪ್ರದೇಶದ ಅಡಿಯಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡುವ ಉದ್ದೇಶಕ್ಕಾಗಿ ಮಾತ್ರ ಮಾನ್ಯವಾಗಿರುತ್ತದೆ”.

ಮೀಸಲಾತಿ ನೀತಿಯನ್ನು ತಿದ್ದುಪಡಿ ಮಾಡಲು ಕೇಂದ್ರವು ಒಂದು ಸುಗ್ರೀವಾಜ್ಞೆಯನ್ನು ಸಹ ತಂದಿತ್ತು. ಸುಗ್ರೀವಾಜ್ಞೆಯ ಪ್ರಕಾರ, ಲಡಾಖ್‌ನಲ್ಲಿರುವ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ 85% ಉದ್ಯೋಗಗಳು ಮತ್ತು ಪ್ರವೇಶಗಳನ್ನು ಕೇಂದ್ರಾಡಳಿತ ಪ್ರದೇಶದ ನಿವಾಸಿಗಳಿಗೆ ಮೀಸಲಿಡಬೇಕು. ಆದಾಗ್ಯೂ, ಲಡಾಖ್ ನಾಯಕತ್ವವು ಇದನ್ನು ‘ಮೊದಲ ಹೆಜ್ಜೆ’ ಮತ್ತು ನಿರ್ಣಯವನ್ನು ತಲುಪುವಲ್ಲಿ ‘ಪ್ರಗತಿ’ ಎಂದು ಮಾತ್ರ ಕರೆದಿತ್ತು.

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....