Homeಮುಖಪುಟಲಡಾಖ್‌ಗೆ ರಾಜ್ಯದ ಸ್ಥಾನಮಾನಕ್ಕಾಗಿ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ಲಡಾಖ್‌ಗೆ ರಾಜ್ಯದ ಸ್ಥಾನಮಾನಕ್ಕಾಗಿ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

- Advertisement -
- Advertisement -

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಅದನ್ನು ಸಂವಿಧಾನದ ಆರನೇ ಶೆಡ್ಯೂಲ್‌ ಅಡಿಯಲ್ಲಿ ಸೇರಿಸಬೇಕೆಂದು ಒತ್ತಾಯಿಸಿ ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ಲೇಹ್ ಅಪೆಕ್ಸ್ ಬಾಡಿ ಜೊತೆಗೂಡಿ ಬುಧವಾರ ಲೇಹ್‌ನಲ್ಲಿ 35 ದಿನಗಳ ಹೊಸ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಮುಖ್ಯ ಬೇಡಿಕೆಗಳ ಕುರಿತು ಚರ್ಚೆಗಳು ಪ್ರಾರಂಭವಾಗುವ ಹಂತಕ್ಕೆ ಮಾತುಕತೆಗಳು ತಲುಪಿದ್ದರೂ”, ಕಳೆದ ಎರಡು ತಿಂಗಳುಗಳಲ್ಲಿ ಕೇಂದ್ರ ಗೃಹ ಸಚಿವಾಲಯವು ಲಡಾಖ್‌ನ ಪ್ರತಿನಿಧಿಗಳೊಂದಿಗೆ ಯಾವುದೇ ಸಭೆಗಳನ್ನು ಕರೆದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ವಾಂಗ್‌ಚುಕ್ ಹೇಳಿದ್ದಾರೆ.

ಲೇಹ್‌ನಲ್ಲಿ ಹಿಲ್ ಕೌನ್ಸಿಲ್ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಚಳುವಳಿಯನ್ನು ತೀವ್ರಗೊಳಿಸುತ್ತೇವೆ ವಾಂಗ್‌ಚುಕ್ ತಿಳಿಸಿದ್ದಾರೆ.

2020ರ ಹಿಲ್ ಕೌನ್ಸಿಲ್ ಚುನಾವಣೆಯ ಸಮಯದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಲಡಾಖ್ ಅನ್ನು ಆರನೇ ಶೆಡ್ಯೂಲ್‌ ಅಡಿಯಲ್ಲಿ ಸೇರಿಸಲಾಗುವುದು ಎಂದು ಭರವಸೆ ನೀಡಿತ್ತು. ಗಡಿ ಪ್ರದೇಶಕ್ಕೆ ಸಂಬಂಧಿಸಿದ ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಪ್ರಮುಖ ಮೂರು ಕಾರ್ಯಸೂಚಿಗಳಲ್ಲಿ ಈ ಭರವಸೆಯೂ ಸೇರಿತ್ತು.

ಸಂವಿಧಾನದ 244ನೇ ವಿಧಿ (ಪರಿಶಿಷ್ಟ ಪ್ರದೇಶಗಳು ಮತ್ತು ಬುಡಕಟ್ಟು ಪ್ರದೇಶಗಳ ಆಡಳಿತ) ಅಡಿಯಲ್ಲಿ ಆರನೇ ಶೆಡ್ಯೂಲ್ ಭೂಮಿಗೆ ಕೆಲವು ರಕ್ಷಣೆಗಳನ್ನು ಮತ್ತು ಗೊತ್ತುಪಡಿಸಿದ ಬುಡಕಟ್ಟು ಪ್ರದೇಶಗಳಲ್ಲಿ ನಾಗರಿಕರಿಗೆ ನಾಮಮಾತ್ರ ಸ್ವಾಯತ್ತತೆಯನ್ನು ಖಾತರಿಪಡಿಸುತ್ತದೆ. ಲಡಾಖ್‌ನಲ್ಲಿ, ಜನಸಂಖ್ಯೆಯ 97% ಕ್ಕಿಂತ ಹೆಚ್ಚು ಜನರು ಪರಿಶಿಷ್ಟ ಪಂಗಡಗಳಿಗೆ ಸೇರಿದವರು.

ಆಗಸ್ಟ್ 5, 2019ರಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು ಮತ್ತು ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ನೀಡುವಂತೆ ಒತ್ತಾಯಿಸಿ 2024ರ ಲೋಕಸಭಾ ಚುನಾವಣೆಗೆ ಮುನ್ನ 21 ದಿನಗಳ ಉಪವಾಸ ಸತ್ಯಾಗ್ರಹ ಸೇರಿದಂತೆ ವಾಂಗ್‌ಚುಕ್ ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದರು.

ಆಗಸ್ಟ್‌ನಲ್ಲಿ, ವಾಂಗ್‌ಚುಕ್ ಮತ್ತು ಲಡಾಖ್ ಸಂಸದ ಮೊಹಮ್ಮದ್ ಹನೀಫಾ ಜಾನ್ ಅವರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮೂರು ದಿನಗಳ ಉಪವಾಸ ಸತ್ಯಾಗ್ರಹವನ್ನು ಮುಕ್ತಾಯಗೊಳಿಸುವ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಕೊನೆಯ ಸುತ್ತಿನ ಮಾತುಕತೆ 2025ರ ಮೇ 27ರಂದು ನಡೆದಿತ್ತು. ಅದರ ನಂತರ ಕೇಂದ್ರವು ಜೂನ್‌ನಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ನಿವಾಸ ಮತ್ತು ಉದ್ಯೋಗ ಮೀಸಲಾತಿ ನೀತಿಯನ್ನು ಘೋಷಿಸಿತು.

ಹೊಸ ನಿಯಮಗಳ ಪ್ರಕಾರ, ಅಕ್ಟೋಬರ್ 31, 2019ರಂದು ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ರಚನೆಯಾದಾಗಿನಿಂದ 15 ವರ್ಷಗಳ ಕಾಲ ಲಡಾಖ್‌ನಲ್ಲಿ ವಾಸಿಸುತ್ತಿರುವ ವ್ಯಕ್ತಿ ಮಾತ್ರ ಅಲ್ಲಿನ ನಿವಾಸಿವಾಗಲು ಅರ್ಹರಾಗಿರುತ್ತಾರೆ.

ಅಕ್ಟೋಬರ್ 31, 2019ರಿಂದ ಏಳು ವರ್ಷಗಳ ಕಾಲ ಅಧ್ಯಯನ ಮಾಡಿ ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ 10 ಅಥವಾ 12 ನೇ ತರಗತಿ ಪರೀಕ್ಷೆಗಳನ್ನು ಬರೆದ ವ್ಯಕ್ತಿಯೂ ಸಹ ನಿವಾಸಿಯಾಗಲು ಅರ್ಹತೆ ಪಡೆಯುತ್ತಾರೆ. ಆದಾಗ್ಯೂ, ನಿವಾಸ ನಿಯಮವು “ಲಡಾಖ್ ನಾಗರಿಕ ಸೇವೆಗಳ ವಿಕೇಂದ್ರೀಕರಣ ಮತ್ತು ನೇಮಕಾತಿಯಲ್ಲಿ ವ್ಯಾಖ್ಯಾನಿಸಲಾದ ಲಡಾಖ್ ಕೇಂದ್ರಾಡಳಿತ ಪ್ರದೇಶದ ಅಡಿಯಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡುವ ಉದ್ದೇಶಕ್ಕಾಗಿ ಮಾತ್ರ ಮಾನ್ಯವಾಗಿರುತ್ತದೆ”.

ಮೀಸಲಾತಿ ನೀತಿಯನ್ನು ತಿದ್ದುಪಡಿ ಮಾಡಲು ಕೇಂದ್ರವು ಒಂದು ಸುಗ್ರೀವಾಜ್ಞೆಯನ್ನು ಸಹ ತಂದಿತ್ತು. ಸುಗ್ರೀವಾಜ್ಞೆಯ ಪ್ರಕಾರ, ಲಡಾಖ್‌ನಲ್ಲಿರುವ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ 85% ಉದ್ಯೋಗಗಳು ಮತ್ತು ಪ್ರವೇಶಗಳನ್ನು ಕೇಂದ್ರಾಡಳಿತ ಪ್ರದೇಶದ ನಿವಾಸಿಗಳಿಗೆ ಮೀಸಲಿಡಬೇಕು. ಆದಾಗ್ಯೂ, ಲಡಾಖ್ ನಾಯಕತ್ವವು ಇದನ್ನು ‘ಮೊದಲ ಹೆಜ್ಜೆ’ ಮತ್ತು ನಿರ್ಣಯವನ್ನು ತಲುಪುವಲ್ಲಿ ‘ಪ್ರಗತಿ’ ಎಂದು ಮಾತ್ರ ಕರೆದಿತ್ತು.

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...