Homeಮುಖಪುಟಲಡಾಖ್‌ಗೆ ರಾಜ್ಯದ ಸ್ಥಾನಮಾನಕ್ಕಾಗಿ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ಲಡಾಖ್‌ಗೆ ರಾಜ್ಯದ ಸ್ಥಾನಮಾನಕ್ಕಾಗಿ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

- Advertisement -
- Advertisement -

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಅದನ್ನು ಸಂವಿಧಾನದ ಆರನೇ ಶೆಡ್ಯೂಲ್‌ ಅಡಿಯಲ್ಲಿ ಸೇರಿಸಬೇಕೆಂದು ಒತ್ತಾಯಿಸಿ ಹವಾಮಾನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ಲೇಹ್ ಅಪೆಕ್ಸ್ ಬಾಡಿ ಜೊತೆಗೂಡಿ ಬುಧವಾರ ಲೇಹ್‌ನಲ್ಲಿ 35 ದಿನಗಳ ಹೊಸ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಮುಖ್ಯ ಬೇಡಿಕೆಗಳ ಕುರಿತು ಚರ್ಚೆಗಳು ಪ್ರಾರಂಭವಾಗುವ ಹಂತಕ್ಕೆ ಮಾತುಕತೆಗಳು ತಲುಪಿದ್ದರೂ”, ಕಳೆದ ಎರಡು ತಿಂಗಳುಗಳಲ್ಲಿ ಕೇಂದ್ರ ಗೃಹ ಸಚಿವಾಲಯವು ಲಡಾಖ್‌ನ ಪ್ರತಿನಿಧಿಗಳೊಂದಿಗೆ ಯಾವುದೇ ಸಭೆಗಳನ್ನು ಕರೆದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ವಾಂಗ್‌ಚುಕ್ ಹೇಳಿದ್ದಾರೆ.

ಲೇಹ್‌ನಲ್ಲಿ ಹಿಲ್ ಕೌನ್ಸಿಲ್ ಚುನಾವಣೆಗಳು ಶೀಘ್ರದಲ್ಲೇ ನಡೆಯಲಿರುವುದರಿಂದ ಚಳುವಳಿಯನ್ನು ತೀವ್ರಗೊಳಿಸುತ್ತೇವೆ ವಾಂಗ್‌ಚುಕ್ ತಿಳಿಸಿದ್ದಾರೆ.

2020ರ ಹಿಲ್ ಕೌನ್ಸಿಲ್ ಚುನಾವಣೆಯ ಸಮಯದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಲಡಾಖ್ ಅನ್ನು ಆರನೇ ಶೆಡ್ಯೂಲ್‌ ಅಡಿಯಲ್ಲಿ ಸೇರಿಸಲಾಗುವುದು ಎಂದು ಭರವಸೆ ನೀಡಿತ್ತು. ಗಡಿ ಪ್ರದೇಶಕ್ಕೆ ಸಂಬಂಧಿಸಿದ ಬಿಜೆಪಿಯ ಚುನಾವಣಾ ಪ್ರಣಾಳಿಕೆಯ ಪ್ರಮುಖ ಮೂರು ಕಾರ್ಯಸೂಚಿಗಳಲ್ಲಿ ಈ ಭರವಸೆಯೂ ಸೇರಿತ್ತು.

ಸಂವಿಧಾನದ 244ನೇ ವಿಧಿ (ಪರಿಶಿಷ್ಟ ಪ್ರದೇಶಗಳು ಮತ್ತು ಬುಡಕಟ್ಟು ಪ್ರದೇಶಗಳ ಆಡಳಿತ) ಅಡಿಯಲ್ಲಿ ಆರನೇ ಶೆಡ್ಯೂಲ್ ಭೂಮಿಗೆ ಕೆಲವು ರಕ್ಷಣೆಗಳನ್ನು ಮತ್ತು ಗೊತ್ತುಪಡಿಸಿದ ಬುಡಕಟ್ಟು ಪ್ರದೇಶಗಳಲ್ಲಿ ನಾಗರಿಕರಿಗೆ ನಾಮಮಾತ್ರ ಸ್ವಾಯತ್ತತೆಯನ್ನು ಖಾತರಿಪಡಿಸುತ್ತದೆ. ಲಡಾಖ್‌ನಲ್ಲಿ, ಜನಸಂಖ್ಯೆಯ 97% ಕ್ಕಿಂತ ಹೆಚ್ಚು ಜನರು ಪರಿಶಿಷ್ಟ ಪಂಗಡಗಳಿಗೆ ಸೇರಿದವರು.

ಆಗಸ್ಟ್ 5, 2019ರಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು ಮತ್ತು ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದೆ.

ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ನೀಡುವಂತೆ ಒತ್ತಾಯಿಸಿ 2024ರ ಲೋಕಸಭಾ ಚುನಾವಣೆಗೆ ಮುನ್ನ 21 ದಿನಗಳ ಉಪವಾಸ ಸತ್ಯಾಗ್ರಹ ಸೇರಿದಂತೆ ವಾಂಗ್‌ಚುಕ್ ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದರು.

ಆಗಸ್ಟ್‌ನಲ್ಲಿ, ವಾಂಗ್‌ಚುಕ್ ಮತ್ತು ಲಡಾಖ್ ಸಂಸದ ಮೊಹಮ್ಮದ್ ಹನೀಫಾ ಜಾನ್ ಅವರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮೂರು ದಿನಗಳ ಉಪವಾಸ ಸತ್ಯಾಗ್ರಹವನ್ನು ಮುಕ್ತಾಯಗೊಳಿಸುವ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಕೊನೆಯ ಸುತ್ತಿನ ಮಾತುಕತೆ 2025ರ ಮೇ 27ರಂದು ನಡೆದಿತ್ತು. ಅದರ ನಂತರ ಕೇಂದ್ರವು ಜೂನ್‌ನಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ನಿವಾಸ ಮತ್ತು ಉದ್ಯೋಗ ಮೀಸಲಾತಿ ನೀತಿಯನ್ನು ಘೋಷಿಸಿತು.

ಹೊಸ ನಿಯಮಗಳ ಪ್ರಕಾರ, ಅಕ್ಟೋಬರ್ 31, 2019ರಂದು ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ರಚನೆಯಾದಾಗಿನಿಂದ 15 ವರ್ಷಗಳ ಕಾಲ ಲಡಾಖ್‌ನಲ್ಲಿ ವಾಸಿಸುತ್ತಿರುವ ವ್ಯಕ್ತಿ ಮಾತ್ರ ಅಲ್ಲಿನ ನಿವಾಸಿವಾಗಲು ಅರ್ಹರಾಗಿರುತ್ತಾರೆ.

ಅಕ್ಟೋಬರ್ 31, 2019ರಿಂದ ಏಳು ವರ್ಷಗಳ ಕಾಲ ಅಧ್ಯಯನ ಮಾಡಿ ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ 10 ಅಥವಾ 12 ನೇ ತರಗತಿ ಪರೀಕ್ಷೆಗಳನ್ನು ಬರೆದ ವ್ಯಕ್ತಿಯೂ ಸಹ ನಿವಾಸಿಯಾಗಲು ಅರ್ಹತೆ ಪಡೆಯುತ್ತಾರೆ. ಆದಾಗ್ಯೂ, ನಿವಾಸ ನಿಯಮವು “ಲಡಾಖ್ ನಾಗರಿಕ ಸೇವೆಗಳ ವಿಕೇಂದ್ರೀಕರಣ ಮತ್ತು ನೇಮಕಾತಿಯಲ್ಲಿ ವ್ಯಾಖ್ಯಾನಿಸಲಾದ ಲಡಾಖ್ ಕೇಂದ್ರಾಡಳಿತ ಪ್ರದೇಶದ ಅಡಿಯಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡುವ ಉದ್ದೇಶಕ್ಕಾಗಿ ಮಾತ್ರ ಮಾನ್ಯವಾಗಿರುತ್ತದೆ”.

ಮೀಸಲಾತಿ ನೀತಿಯನ್ನು ತಿದ್ದುಪಡಿ ಮಾಡಲು ಕೇಂದ್ರವು ಒಂದು ಸುಗ್ರೀವಾಜ್ಞೆಯನ್ನು ಸಹ ತಂದಿತ್ತು. ಸುಗ್ರೀವಾಜ್ಞೆಯ ಪ್ರಕಾರ, ಲಡಾಖ್‌ನಲ್ಲಿರುವ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ 85% ಉದ್ಯೋಗಗಳು ಮತ್ತು ಪ್ರವೇಶಗಳನ್ನು ಕೇಂದ್ರಾಡಳಿತ ಪ್ರದೇಶದ ನಿವಾಸಿಗಳಿಗೆ ಮೀಸಲಿಡಬೇಕು. ಆದಾಗ್ಯೂ, ಲಡಾಖ್ ನಾಯಕತ್ವವು ಇದನ್ನು ‘ಮೊದಲ ಹೆಜ್ಜೆ’ ಮತ್ತು ನಿರ್ಣಯವನ್ನು ತಲುಪುವಲ್ಲಿ ‘ಪ್ರಗತಿ’ ಎಂದು ಮಾತ್ರ ಕರೆದಿತ್ತು.

ಬಿಹಾರದಂತೆ ದೇಶದಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಗೆ ಮುಂದಾದ ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...