Homeಮುಖಪುಟಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

ಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

- Advertisement -
- Advertisement -

ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಹಾಗೂ ಲಡಾಖ್‌ನ ಹಲವಾರು ಇತರ ಹೋರಾಟಗಾರರು ಬುಧವಾರ ಸಂಜೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ, ಅವರನ್ನು ಪೊಲೀಸ್ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಬಳಿಕ ಅವರು ತಮ್ಮ ಉಪವಾಸವನ್ನು ಕೊನೆಗೊಳಿಸಲಾಗಿದೆ ಎಂದು ಹೇಳಿದರು.

ಗುಂಪು ತಮ್ಮ ಬೇಡಿಕೆಗಳನ್ನು ಪಟ್ಟಿ ಮಾಡುವ ಜ್ಞಾಪಕ ಪತ್ರವನ್ನು ಸರ್ಕಾರಕ್ಕೆ ನೀಡಿದ್ದು, ಶೀಘ್ರದಲ್ಲೇ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಲಾಗಿದೆ ಎಂದು ವಾಂಗ್ಚುಕ್ ಹೇಳಿದರು.

“ಇಂತಹ ಸಾಂವಿಧಾನಿಕ ನಿಬಂಧನೆಗಳ ಅಡಿಯಲ್ಲಿ ಲಡಾಖ್ ಅನ್ನು ರಕ್ಷಿಸಲು ನಾವು ಸರ್ಕಾರಕ್ಕೆ ಜ್ಞಾಪಕ ಪತ್ರವನ್ನು ನೀಡಿದ್ದೇವೆ. ಇದರಿಂದ ಅಲ್ಲಿನ ಪರಿಸರವನ್ನು ಸಂರಕ್ಷಿಸಬಹುದು, ಸಂವಿಧಾನದ ಆರನೇ ಶೆಡ್ಯೂಲ್ ಸ್ಥಳೀಯರಿಗೆ ಸಂಪನ್ಮೂಲಗಳನ್ನು ನಿರ್ವಹಿಸುವ ಹಕ್ಕನ್ನು ನೀಡುತ್ತದೆ” ಎಂದು ವಾಂಗ್ಚುಕ್ ಮಾಧ್ಯಮಗಳಿಗೆ ತಿಳಿಸಿದರು.

“ಹಿಮಾಲಯದಲ್ಲಿ ಸ್ಥಳೀಯರು ಸಬಲೀಕರಣಗೊಳ್ಳಬೇಕು. ಏಕೆಂದರೆ, ಅವರು ಅದನ್ನು ಉತ್ತಮವಾಗಿ ಸಂರಕ್ಷಿಸಬಹುದು. ಮುಂದಿನ ದಿನಗಳಲ್ಲಿ ನಾವು ಪ್ರಧಾನಿ, ರಾಷ್ಟ್ರಪತಿ ಅಥವಾ ಗೃಹ ಸಚಿವರನ್ನು ಭೇಟಿ ಮಾಡಲಿದ್ದೇವೆ, ಇದು ಗೃಹ ಸಚಿವಾಲಯ ನಮಗೆ ನೀಡಿರುವ ಭರವಸೆಯಾಗಿದೆ” ಎಂದರು.

“ನಾವು ಲಡಾಖ್‌ಗೆ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದೇವೆ, ಆರನೇ ಶೆಡ್ಯೂಲ್ ಕೂಡ ಅದರ ಒಂದು ಭಾಗವಾಗಿದೆ. ನಮಗೆ ಉನ್ನತ ನಾಯಕತ್ವವನ್ನು ಭೇಟಿ ಮಾಡಿಸುವ ಭರವಸೆ ನೀಡಲಾಗಿದೆ ಮತ್ತು ಸಭೆಯ ದಿನಾಂಕವನ್ನು ಒಂದೆರಡು ದಿನಗಳಲ್ಲಿ ದೃಢೀಕರಿಸಲಾಗುವುದು” ಎಂದು ವಾಂಗ್ಚುಕ್ ಹೇಳಿದರು.

ವಾಂಗ್ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳನ್ನು ಸಂಜೆ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

“ರಾಷ್ಟ್ರೀಯ ರಾಜಧಾನಿಯ ಕೇಂದ್ರ ಭಾಗಗಳಲ್ಲಿ ಸೆಕ್ಷನ್ 163 ಅನ್ನು ವಿಧಿಸಲಾಗಿರುವುದರಿಂದ ಯಾವುದೇ ಯಾತ್ರೆಯನ್ನು ನಡೆಸುವಂತಿಲ್ಲ ಎಂಬ ಭರವಸೆಯ ನಂತರ ಅವರನ್ನು ಹೋಗಲು ಅನುಮತಿಸಲಾಗಿದೆ” ಎಂದು ಅಧಿಕಾರಿ ಹೇಳಿದರು.

ಸೋನಮ್ ವಾಂಗ್ಚುಕ್ ಅವರನ್ನು ಬವಾನಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು ಮತ್ತು ಇತರ ‘ಪಾದಯಾತ್ರಿಗಳು’ ದೆಹಲಿ-ಹರಿಯಾಣ ಗಡಿಯಲ್ಲಿ ಇತರ ಮೂರು ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿತ್ತು.

ರಾತ್ರಿ 9.30 ರ ಸುಮಾರಿಗೆ ರಾಜ್‌ಘಾಟ್‌ವರೆಗೆ ಎಲ್ಲರನ್ನು ಪೊಲೀಸ್ ಸಿಬ್ಬಂದಿ ಬಸ್‌ಗಳಲ್ಲಿ ಕರೆದೊಯ್ಯಲಾಯಿತು. ನಂತರ, ವಾಂಗ್‌ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳಿಗೆ ಮನೆಗೆ ಹೋಗಲು ಅನುಮತಿಸಲಾಯಿತು.

ಸರ್ಕಾರವನ್ನು ಭೇಟಿಯಾಗಲು ವಾಂಗ್ಚುಕ್ ಇನ್ನೂ ಕೆಲವು ದಿನಗಳ ಕಾಲ ದೆಹಲಿಯಲ್ಲಿ ಉಳಿಯಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್‌ನ ಪ್ರತಿನಿಧಿಗಳೊಂದಿಗೆ 15 ದಿನಗಳಲ್ಲಿ ಮಾತುಕತೆ ಪುನರಾರಂಭವಾಗಲಿದೆ ಎಂದು ಅವರಿಗೆ ಭರವಸೆ ನೀಡಲಾಗಿದೆ ಎಂದು ವಾಂಗ್‌ಚುಕ್ ಹೇಳಿದರು.

ವಾಂಗ್ಚುಕ್ ಅವರು ಒಂದು ತಿಂಗಳ ಹಿಂದೆ ಲೇಹ್‌ನಿಂದ ಪ್ರಾರಂಭವಾದ ‘ದೆಹಲಿ ಚಲೋ ಪಾದಯಾತ್ರೆ’ಯನ್ನು ಮುನ್ನಡೆಸುತ್ತಿದ್ದರು. ಕೇಂದ್ರಾಡಳಿತ ಪ್ರದೇಶಕ್ಕೆ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆ ನೀಡುವಂತೆ ಒತ್ತಾಯಿಸಿ ದೆಹಲಿಗೆ ಮೆರವಣಿಗೆ ನಡೆಸುತ್ತಿದ್ದ ಲಡಾಖ್‌ನಿಂದ ಸುಮಾರು 170 ಜನರನ್ನು ಸೋಮವಾರ ರಾತ್ರಿ ದೆಹಲಿಯ ಸಿಂಘು ಗಡಿಯಲ್ಲಿ ಬಂಧಿಸಲಾಯಿತು. ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ದ ನಂತರ ಅವರು ಉಪವಾಸ ಮುಷ್ಕರ ಆರಂಭಿಸಿದ್ದರು.

ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಜೊತೆಗೆ ಕಳೆದ ನಾಲ್ಕು ವರ್ಷಗಳಿಂದ ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸಿ, ಅದನ್ನು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಸೇರಿಸಲು ಆಂದೋಲನವನ್ನು ಮುನ್ನಡೆಸುತ್ತಿರುವ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಈ ಮೆರವಣಿಗೆಯನ್ನು ಆಯೋಜಿಸಿದೆ. ಲಡಾಖ್‌ಗೆ ಸಾರ್ವಜನಿಕ ಸೇವಾ ಆಯೋಗ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳ ಜೊತೆಗೆ ಆರಂಭಿಕ ನೇಮಕಾತಿ ಪ್ರಕ್ರಿಯೆಗೆ ಬೇಡಿಕೆ ಇಟ್ಟಿವೆ.

ಇದನ್ನೂ ಓದಿ; ಕುಕಿ ಬಂಡುಕೋರರಿಂದ ಅಪಹರಣಕ್ಕೊಳಗಾದ ಇಬ್ಬರು ಮೈತೆಯಿ ಯುವಕರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...