Homeಮುಖಪುಟಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

ಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

- Advertisement -
- Advertisement -

ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಹಾಗೂ ಲಡಾಖ್‌ನ ಹಲವಾರು ಇತರ ಹೋರಾಟಗಾರರು ಬುಧವಾರ ಸಂಜೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ, ಅವರನ್ನು ಪೊಲೀಸ್ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಬಳಿಕ ಅವರು ತಮ್ಮ ಉಪವಾಸವನ್ನು ಕೊನೆಗೊಳಿಸಲಾಗಿದೆ ಎಂದು ಹೇಳಿದರು.

ಗುಂಪು ತಮ್ಮ ಬೇಡಿಕೆಗಳನ್ನು ಪಟ್ಟಿ ಮಾಡುವ ಜ್ಞಾಪಕ ಪತ್ರವನ್ನು ಸರ್ಕಾರಕ್ಕೆ ನೀಡಿದ್ದು, ಶೀಘ್ರದಲ್ಲೇ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಲಾಗಿದೆ ಎಂದು ವಾಂಗ್ಚುಕ್ ಹೇಳಿದರು.

“ಇಂತಹ ಸಾಂವಿಧಾನಿಕ ನಿಬಂಧನೆಗಳ ಅಡಿಯಲ್ಲಿ ಲಡಾಖ್ ಅನ್ನು ರಕ್ಷಿಸಲು ನಾವು ಸರ್ಕಾರಕ್ಕೆ ಜ್ಞಾಪಕ ಪತ್ರವನ್ನು ನೀಡಿದ್ದೇವೆ. ಇದರಿಂದ ಅಲ್ಲಿನ ಪರಿಸರವನ್ನು ಸಂರಕ್ಷಿಸಬಹುದು, ಸಂವಿಧಾನದ ಆರನೇ ಶೆಡ್ಯೂಲ್ ಸ್ಥಳೀಯರಿಗೆ ಸಂಪನ್ಮೂಲಗಳನ್ನು ನಿರ್ವಹಿಸುವ ಹಕ್ಕನ್ನು ನೀಡುತ್ತದೆ” ಎಂದು ವಾಂಗ್ಚುಕ್ ಮಾಧ್ಯಮಗಳಿಗೆ ತಿಳಿಸಿದರು.

“ಹಿಮಾಲಯದಲ್ಲಿ ಸ್ಥಳೀಯರು ಸಬಲೀಕರಣಗೊಳ್ಳಬೇಕು. ಏಕೆಂದರೆ, ಅವರು ಅದನ್ನು ಉತ್ತಮವಾಗಿ ಸಂರಕ್ಷಿಸಬಹುದು. ಮುಂದಿನ ದಿನಗಳಲ್ಲಿ ನಾವು ಪ್ರಧಾನಿ, ರಾಷ್ಟ್ರಪತಿ ಅಥವಾ ಗೃಹ ಸಚಿವರನ್ನು ಭೇಟಿ ಮಾಡಲಿದ್ದೇವೆ, ಇದು ಗೃಹ ಸಚಿವಾಲಯ ನಮಗೆ ನೀಡಿರುವ ಭರವಸೆಯಾಗಿದೆ” ಎಂದರು.

“ನಾವು ಲಡಾಖ್‌ಗೆ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದೇವೆ, ಆರನೇ ಶೆಡ್ಯೂಲ್ ಕೂಡ ಅದರ ಒಂದು ಭಾಗವಾಗಿದೆ. ನಮಗೆ ಉನ್ನತ ನಾಯಕತ್ವವನ್ನು ಭೇಟಿ ಮಾಡಿಸುವ ಭರವಸೆ ನೀಡಲಾಗಿದೆ ಮತ್ತು ಸಭೆಯ ದಿನಾಂಕವನ್ನು ಒಂದೆರಡು ದಿನಗಳಲ್ಲಿ ದೃಢೀಕರಿಸಲಾಗುವುದು” ಎಂದು ವಾಂಗ್ಚುಕ್ ಹೇಳಿದರು.

ವಾಂಗ್ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳನ್ನು ಸಂಜೆ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

“ರಾಷ್ಟ್ರೀಯ ರಾಜಧಾನಿಯ ಕೇಂದ್ರ ಭಾಗಗಳಲ್ಲಿ ಸೆಕ್ಷನ್ 163 ಅನ್ನು ವಿಧಿಸಲಾಗಿರುವುದರಿಂದ ಯಾವುದೇ ಯಾತ್ರೆಯನ್ನು ನಡೆಸುವಂತಿಲ್ಲ ಎಂಬ ಭರವಸೆಯ ನಂತರ ಅವರನ್ನು ಹೋಗಲು ಅನುಮತಿಸಲಾಗಿದೆ” ಎಂದು ಅಧಿಕಾರಿ ಹೇಳಿದರು.

ಸೋನಮ್ ವಾಂಗ್ಚುಕ್ ಅವರನ್ನು ಬವಾನಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು ಮತ್ತು ಇತರ ‘ಪಾದಯಾತ್ರಿಗಳು’ ದೆಹಲಿ-ಹರಿಯಾಣ ಗಡಿಯಲ್ಲಿ ಇತರ ಮೂರು ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿತ್ತು.

ರಾತ್ರಿ 9.30 ರ ಸುಮಾರಿಗೆ ರಾಜ್‌ಘಾಟ್‌ವರೆಗೆ ಎಲ್ಲರನ್ನು ಪೊಲೀಸ್ ಸಿಬ್ಬಂದಿ ಬಸ್‌ಗಳಲ್ಲಿ ಕರೆದೊಯ್ಯಲಾಯಿತು. ನಂತರ, ವಾಂಗ್‌ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳಿಗೆ ಮನೆಗೆ ಹೋಗಲು ಅನುಮತಿಸಲಾಯಿತು.

ಸರ್ಕಾರವನ್ನು ಭೇಟಿಯಾಗಲು ವಾಂಗ್ಚುಕ್ ಇನ್ನೂ ಕೆಲವು ದಿನಗಳ ಕಾಲ ದೆಹಲಿಯಲ್ಲಿ ಉಳಿಯಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್‌ನ ಪ್ರತಿನಿಧಿಗಳೊಂದಿಗೆ 15 ದಿನಗಳಲ್ಲಿ ಮಾತುಕತೆ ಪುನರಾರಂಭವಾಗಲಿದೆ ಎಂದು ಅವರಿಗೆ ಭರವಸೆ ನೀಡಲಾಗಿದೆ ಎಂದು ವಾಂಗ್‌ಚುಕ್ ಹೇಳಿದರು.

ವಾಂಗ್ಚುಕ್ ಅವರು ಒಂದು ತಿಂಗಳ ಹಿಂದೆ ಲೇಹ್‌ನಿಂದ ಪ್ರಾರಂಭವಾದ ‘ದೆಹಲಿ ಚಲೋ ಪಾದಯಾತ್ರೆ’ಯನ್ನು ಮುನ್ನಡೆಸುತ್ತಿದ್ದರು. ಕೇಂದ್ರಾಡಳಿತ ಪ್ರದೇಶಕ್ಕೆ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆ ನೀಡುವಂತೆ ಒತ್ತಾಯಿಸಿ ದೆಹಲಿಗೆ ಮೆರವಣಿಗೆ ನಡೆಸುತ್ತಿದ್ದ ಲಡಾಖ್‌ನಿಂದ ಸುಮಾರು 170 ಜನರನ್ನು ಸೋಮವಾರ ರಾತ್ರಿ ದೆಹಲಿಯ ಸಿಂಘು ಗಡಿಯಲ್ಲಿ ಬಂಧಿಸಲಾಯಿತು. ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ದ ನಂತರ ಅವರು ಉಪವಾಸ ಮುಷ್ಕರ ಆರಂಭಿಸಿದ್ದರು.

ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಜೊತೆಗೆ ಕಳೆದ ನಾಲ್ಕು ವರ್ಷಗಳಿಂದ ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸಿ, ಅದನ್ನು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಸೇರಿಸಲು ಆಂದೋಲನವನ್ನು ಮುನ್ನಡೆಸುತ್ತಿರುವ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಈ ಮೆರವಣಿಗೆಯನ್ನು ಆಯೋಜಿಸಿದೆ. ಲಡಾಖ್‌ಗೆ ಸಾರ್ವಜನಿಕ ಸೇವಾ ಆಯೋಗ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳ ಜೊತೆಗೆ ಆರಂಭಿಕ ನೇಮಕಾತಿ ಪ್ರಕ್ರಿಯೆಗೆ ಬೇಡಿಕೆ ಇಟ್ಟಿವೆ.

ಇದನ್ನೂ ಓದಿ; ಕುಕಿ ಬಂಡುಕೋರರಿಂದ ಅಪಹರಣಕ್ಕೊಳಗಾದ ಇಬ್ಬರು ಮೈತೆಯಿ ಯುವಕರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...