Homeಮುಖಪುಟಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

ಪರಿಸರವಾದಿ ಸೋನಮ್ ವಾಂಗ್ಚುಕ್ ಬಿಡುಗಡೆ; ಉಪವಾಸ ಅಂತ್ಯ

- Advertisement -
- Advertisement -

ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಹಾಗೂ ಲಡಾಖ್‌ನ ಹಲವಾರು ಇತರ ಹೋರಾಟಗಾರರು ಬುಧವಾರ ಸಂಜೆ ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ, ಅವರನ್ನು ಪೊಲೀಸ್ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಬಳಿಕ ಅವರು ತಮ್ಮ ಉಪವಾಸವನ್ನು ಕೊನೆಗೊಳಿಸಲಾಗಿದೆ ಎಂದು ಹೇಳಿದರು.

ಗುಂಪು ತಮ್ಮ ಬೇಡಿಕೆಗಳನ್ನು ಪಟ್ಟಿ ಮಾಡುವ ಜ್ಞಾಪಕ ಪತ್ರವನ್ನು ಸರ್ಕಾರಕ್ಕೆ ನೀಡಿದ್ದು, ಶೀಘ್ರದಲ್ಲೇ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಲಾಗಿದೆ ಎಂದು ವಾಂಗ್ಚುಕ್ ಹೇಳಿದರು.

“ಇಂತಹ ಸಾಂವಿಧಾನಿಕ ನಿಬಂಧನೆಗಳ ಅಡಿಯಲ್ಲಿ ಲಡಾಖ್ ಅನ್ನು ರಕ್ಷಿಸಲು ನಾವು ಸರ್ಕಾರಕ್ಕೆ ಜ್ಞಾಪಕ ಪತ್ರವನ್ನು ನೀಡಿದ್ದೇವೆ. ಇದರಿಂದ ಅಲ್ಲಿನ ಪರಿಸರವನ್ನು ಸಂರಕ್ಷಿಸಬಹುದು, ಸಂವಿಧಾನದ ಆರನೇ ಶೆಡ್ಯೂಲ್ ಸ್ಥಳೀಯರಿಗೆ ಸಂಪನ್ಮೂಲಗಳನ್ನು ನಿರ್ವಹಿಸುವ ಹಕ್ಕನ್ನು ನೀಡುತ್ತದೆ” ಎಂದು ವಾಂಗ್ಚುಕ್ ಮಾಧ್ಯಮಗಳಿಗೆ ತಿಳಿಸಿದರು.

“ಹಿಮಾಲಯದಲ್ಲಿ ಸ್ಥಳೀಯರು ಸಬಲೀಕರಣಗೊಳ್ಳಬೇಕು. ಏಕೆಂದರೆ, ಅವರು ಅದನ್ನು ಉತ್ತಮವಾಗಿ ಸಂರಕ್ಷಿಸಬಹುದು. ಮುಂದಿನ ದಿನಗಳಲ್ಲಿ ನಾವು ಪ್ರಧಾನಿ, ರಾಷ್ಟ್ರಪತಿ ಅಥವಾ ಗೃಹ ಸಚಿವರನ್ನು ಭೇಟಿ ಮಾಡಲಿದ್ದೇವೆ, ಇದು ಗೃಹ ಸಚಿವಾಲಯ ನಮಗೆ ನೀಡಿರುವ ಭರವಸೆಯಾಗಿದೆ” ಎಂದರು.

“ನಾವು ಲಡಾಖ್‌ಗೆ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಬೇಡಿಕೆ ಇಟ್ಟಿದ್ದೇವೆ, ಆರನೇ ಶೆಡ್ಯೂಲ್ ಕೂಡ ಅದರ ಒಂದು ಭಾಗವಾಗಿದೆ. ನಮಗೆ ಉನ್ನತ ನಾಯಕತ್ವವನ್ನು ಭೇಟಿ ಮಾಡಿಸುವ ಭರವಸೆ ನೀಡಲಾಗಿದೆ ಮತ್ತು ಸಭೆಯ ದಿನಾಂಕವನ್ನು ಒಂದೆರಡು ದಿನಗಳಲ್ಲಿ ದೃಢೀಕರಿಸಲಾಗುವುದು” ಎಂದು ವಾಂಗ್ಚುಕ್ ಹೇಳಿದರು.

ವಾಂಗ್ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳನ್ನು ಸಂಜೆ ಬಿಡುಗಡೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

“ರಾಷ್ಟ್ರೀಯ ರಾಜಧಾನಿಯ ಕೇಂದ್ರ ಭಾಗಗಳಲ್ಲಿ ಸೆಕ್ಷನ್ 163 ಅನ್ನು ವಿಧಿಸಲಾಗಿರುವುದರಿಂದ ಯಾವುದೇ ಯಾತ್ರೆಯನ್ನು ನಡೆಸುವಂತಿಲ್ಲ ಎಂಬ ಭರವಸೆಯ ನಂತರ ಅವರನ್ನು ಹೋಗಲು ಅನುಮತಿಸಲಾಗಿದೆ” ಎಂದು ಅಧಿಕಾರಿ ಹೇಳಿದರು.

ಸೋನಮ್ ವಾಂಗ್ಚುಕ್ ಅವರನ್ನು ಬವಾನಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು ಮತ್ತು ಇತರ ‘ಪಾದಯಾತ್ರಿಗಳು’ ದೆಹಲಿ-ಹರಿಯಾಣ ಗಡಿಯಲ್ಲಿ ಇತರ ಮೂರು ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿತ್ತು.

ರಾತ್ರಿ 9.30 ರ ಸುಮಾರಿಗೆ ರಾಜ್‌ಘಾಟ್‌ವರೆಗೆ ಎಲ್ಲರನ್ನು ಪೊಲೀಸ್ ಸಿಬ್ಬಂದಿ ಬಸ್‌ಗಳಲ್ಲಿ ಕರೆದೊಯ್ಯಲಾಯಿತು. ನಂತರ, ವಾಂಗ್‌ಚುಕ್ ಮತ್ತು ಇತರ ಎಲ್ಲ ಪಾದಯಾತ್ರಿಗಳಿಗೆ ಮನೆಗೆ ಹೋಗಲು ಅನುಮತಿಸಲಾಯಿತು.

ಸರ್ಕಾರವನ್ನು ಭೇಟಿಯಾಗಲು ವಾಂಗ್ಚುಕ್ ಇನ್ನೂ ಕೆಲವು ದಿನಗಳ ಕಾಲ ದೆಹಲಿಯಲ್ಲಿ ಉಳಿಯಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್‌ನ ಪ್ರತಿನಿಧಿಗಳೊಂದಿಗೆ 15 ದಿನಗಳಲ್ಲಿ ಮಾತುಕತೆ ಪುನರಾರಂಭವಾಗಲಿದೆ ಎಂದು ಅವರಿಗೆ ಭರವಸೆ ನೀಡಲಾಗಿದೆ ಎಂದು ವಾಂಗ್‌ಚುಕ್ ಹೇಳಿದರು.

ವಾಂಗ್ಚುಕ್ ಅವರು ಒಂದು ತಿಂಗಳ ಹಿಂದೆ ಲೇಹ್‌ನಿಂದ ಪ್ರಾರಂಭವಾದ ‘ದೆಹಲಿ ಚಲೋ ಪಾದಯಾತ್ರೆ’ಯನ್ನು ಮುನ್ನಡೆಸುತ್ತಿದ್ದರು. ಕೇಂದ್ರಾಡಳಿತ ಪ್ರದೇಶಕ್ಕೆ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ರಕ್ಷಣೆ ನೀಡುವಂತೆ ಒತ್ತಾಯಿಸಿ ದೆಹಲಿಗೆ ಮೆರವಣಿಗೆ ನಡೆಸುತ್ತಿದ್ದ ಲಡಾಖ್‌ನಿಂದ ಸುಮಾರು 170 ಜನರನ್ನು ಸೋಮವಾರ ರಾತ್ರಿ ದೆಹಲಿಯ ಸಿಂಘು ಗಡಿಯಲ್ಲಿ ಬಂಧಿಸಲಾಯಿತು. ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ದ ನಂತರ ಅವರು ಉಪವಾಸ ಮುಷ್ಕರ ಆರಂಭಿಸಿದ್ದರು.

ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಜೊತೆಗೆ ಕಳೆದ ನಾಲ್ಕು ವರ್ಷಗಳಿಂದ ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸಿ, ಅದನ್ನು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಸೇರಿಸಲು ಆಂದೋಲನವನ್ನು ಮುನ್ನಡೆಸುತ್ತಿರುವ ಲೇಹ್ ಅಪೆಕ್ಸ್ ಬಾಡಿ (ಎಲ್‌ಎಬಿ) ಈ ಮೆರವಣಿಗೆಯನ್ನು ಆಯೋಜಿಸಿದೆ. ಲಡಾಖ್‌ಗೆ ಸಾರ್ವಜನಿಕ ಸೇವಾ ಆಯೋಗ ಮತ್ತು ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಿಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳ ಜೊತೆಗೆ ಆರಂಭಿಕ ನೇಮಕಾತಿ ಪ್ರಕ್ರಿಯೆಗೆ ಬೇಡಿಕೆ ಇಟ್ಟಿವೆ.

ಇದನ್ನೂ ಓದಿ; ಕುಕಿ ಬಂಡುಕೋರರಿಂದ ಅಪಹರಣಕ್ಕೊಳಗಾದ ಇಬ್ಬರು ಮೈತೆಯಿ ಯುವಕರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...