HomeಮುಖಪುಟCOP29 | ಅಭಿವೃದ್ದಿ ಹೊಂದಿದ ದೇಶಗಳು 'ಹೂಡಿಕೆಯ ಗುರಿ' ನೋಡಬಾರದು : ಭಾರತ ಅಭಿಪ್ರಾಯ

COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

- Advertisement -
- Advertisement -

ಅಭಿವೃದ್ಧಿ ಹೊಂದಿದ ದೇಶಗಳು ಹವಾಮಾನ ನಿಧಿಗೆ ಮಾಡುವ ‘ಹೂಡಿಕೆಯ ಗುರಿ’ ನೋಡಬಾರದು ಎಂದು ಅಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ಹವಾಮಾನ ಶೃಂಗಸಭೆಯ (COP29) ಲ್ಲಿ ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.

ಗುರುವಾರ (ನ.14) ಶೃಂಗಸಭೆಯಲ್ಲಿ ಮಾತನಾಡಿದ ಭಾರತದ ಪ್ರಮುಖ ಸಮಾಲೋಚಕ ನರೇಶ್ ಪಾಲ್ ಗಂಗ್ವಾರ್ “ಅಭಿವೃದ್ದಿ ಹೊಂದಿದ ದೇಶಗಳು ಅಭಿವೃದ್ದಿ ಹೊಂದುತ್ತಿರುವ ದೇಶಗಳ ಹವಾಮಾನ ಯೋಜನೆಗಳಿಗೆ ನೀಡುವ ಆರ್ಥಿಕ ಸಹಾಯ ಏಕಮುಖ ನಿಬಂಧನೆಯನ್ನು ಹೊಂದಿದೆ. ಅಂದರೆ, ಈ ನೆರವಿಗೆ ಪ್ರತಿಫಲಾಕ್ಷೆ ಇಲ್ಲ. ಆದ್ದರಿಂದ, ಇದನ್ನು ಒಂದು ವ್ಯಾವಹಾರಿಕ ಅಥವಾ ಲಾಭದ ಹೂಡಿಕೆಯಾಗಿ ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದವು, ಹವಾಮಾನ ನಿಧಿಗೆ ಯಾರು ಕೊಡುಗೆ ಕೊಡಬೇಕು. ಅದನ್ನು ಹೇಗೆ ಬಳಸಬೇಕು. ಈ ನಿಧಿಯ ಉದ್ದೇಶವೇನು? ಎಂಬುವುದನ್ನು ಸ್ಪಷ್ಟವಾಗಿ ಹೇಳಿದೆ ಎಂದು ಗಂಗ್ವಾರ್ ವಿವರಿಸಿದ್ದಾರೆ.

ಅಭಿವೃದ್ದಿ ಹೊಂದಿರುವ ರಾಷ್ಟ್ರಗಳು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ 1.3 ಟ್ರಿಲಿಯನ್ ಡಾಲರ್‌ನಂತೆ 2030ರವರೆಗೆ ಹವಾಮಾನ ಆರ್ಥಿಕ ನೆರವು ಒದಗಿಸಬೇಕು. ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಈ ರಿಯಾಯಿತಿಯ ಮತ್ತು ಋಣ ಭಾರವಿಲ್ಲದ ನೆರವು, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳನ್ನು ಜಾರಿಗೊಳಿಸಲು ಸಹಾಯ ಮಾಡುತ್ತದೆ. ಅದಲ್ಲದೆ, ಅಭಿವೃದ್ದಿ ಹೊಂದಿದ ರಾಷ್ಟ್ರಗಳ ನೆರವು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಅಭಿವೃದ್ದಿಗೆ ತಡೆಯಾಗಬಾರದು ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ನಿರ್ಣಾಯಕ ಘಟ್ಟದಲ್ಲಿದ್ದೇವೆ. ನಾವು ಇಲ್ಲಿ (COP29) ಏನು ನಿರ್ಧರಿಸುತ್ತೇವೆಯೋ ಅದು ನಮಗೆಲ್ಲರಿಗೂ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿರುವರಿಗೆ ಪರಿಣಾಮ ಬೀರುತ್ತದೆ. ಈ ಪ್ರದೇಶದಲ್ಲಿ ಮಹತ್ವಾಕಾಂಕ್ಷೆಯ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸಲು ಕ್ರಮ ತೆಗೆದುಕೊಳ್ಳಲು ಮಾತ್ರವಲ್ಲದೆ, ಅದಕ್ಕೆ ಹೊಂದಿಕೊಳ್ಳಲು ಕೂಡ ಸಾಧ್ಯವಾಗುತ್ತದೆ. ಆದ್ದರಿಂದ COP ಐತಿಹಾಸಿಕವಾಗಿದೆ ಎಂದು ಗಂಗ್ವಾರ್ ಹೇಳಿದ್ದಾರೆ.

ವಿವಿಧ ರಾಷ್ಟ್ರೀಯ ಸನ್ನಿವೇಶಗಳ ಸಂದರ್ಭ, ಸುಸ್ಥಿರ ಅಭಿವೃದ್ಧಿಯ ಗುರಿಗಳು ಮತ್ತು ಬಡತನ ನಿರ್ಮೂಲನೆಯಂತ ಕಾರ್ಯಗಳಲ್ಲಿ ದೇಶಗಳು, ವಿಶೇಷವಾಗಿ ಜಾಗತಿಕ ದಕ್ಷಿಣ ಹಿಂದುಳಿಯಬಾರದು ಎಂದು ಇದೇ ವೇಳೆ ಗಂಗ್ವಾರ್ ಸಲಹೆ ನೀಡಿದ್ದಾರೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಈ ಬಾರಿಯ ಶೃಂಗಸಭೆ (COP29) ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನವೆಂಬರ್ 11ರಂದು ಪ್ರಾರಂಭಗೊಂಡಿದ್ದು, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ | COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...