HomeಮುಖಪುಟCOP29 | ಅಭಿವೃದ್ದಿ ಹೊಂದಿದ ದೇಶಗಳು 'ಹೂಡಿಕೆಯ ಗುರಿ' ನೋಡಬಾರದು : ಭಾರತ ಅಭಿಪ್ರಾಯ

COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

- Advertisement -
- Advertisement -

ಅಭಿವೃದ್ಧಿ ಹೊಂದಿದ ದೇಶಗಳು ಹವಾಮಾನ ನಿಧಿಗೆ ಮಾಡುವ ‘ಹೂಡಿಕೆಯ ಗುರಿ’ ನೋಡಬಾರದು ಎಂದು ಅಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ಹವಾಮಾನ ಶೃಂಗಸಭೆಯ (COP29) ಲ್ಲಿ ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.

ಗುರುವಾರ (ನ.14) ಶೃಂಗಸಭೆಯಲ್ಲಿ ಮಾತನಾಡಿದ ಭಾರತದ ಪ್ರಮುಖ ಸಮಾಲೋಚಕ ನರೇಶ್ ಪಾಲ್ ಗಂಗ್ವಾರ್ “ಅಭಿವೃದ್ದಿ ಹೊಂದಿದ ದೇಶಗಳು ಅಭಿವೃದ್ದಿ ಹೊಂದುತ್ತಿರುವ ದೇಶಗಳ ಹವಾಮಾನ ಯೋಜನೆಗಳಿಗೆ ನೀಡುವ ಆರ್ಥಿಕ ಸಹಾಯ ಏಕಮುಖ ನಿಬಂಧನೆಯನ್ನು ಹೊಂದಿದೆ. ಅಂದರೆ, ಈ ನೆರವಿಗೆ ಪ್ರತಿಫಲಾಕ್ಷೆ ಇಲ್ಲ. ಆದ್ದರಿಂದ, ಇದನ್ನು ಒಂದು ವ್ಯಾವಹಾರಿಕ ಅಥವಾ ಲಾಭದ ಹೂಡಿಕೆಯಾಗಿ ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದವು, ಹವಾಮಾನ ನಿಧಿಗೆ ಯಾರು ಕೊಡುಗೆ ಕೊಡಬೇಕು. ಅದನ್ನು ಹೇಗೆ ಬಳಸಬೇಕು. ಈ ನಿಧಿಯ ಉದ್ದೇಶವೇನು? ಎಂಬುವುದನ್ನು ಸ್ಪಷ್ಟವಾಗಿ ಹೇಳಿದೆ ಎಂದು ಗಂಗ್ವಾರ್ ವಿವರಿಸಿದ್ದಾರೆ.

ಅಭಿವೃದ್ದಿ ಹೊಂದಿರುವ ರಾಷ್ಟ್ರಗಳು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ 1.3 ಟ್ರಿಲಿಯನ್ ಡಾಲರ್‌ನಂತೆ 2030ರವರೆಗೆ ಹವಾಮಾನ ಆರ್ಥಿಕ ನೆರವು ಒದಗಿಸಬೇಕು. ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಈ ರಿಯಾಯಿತಿಯ ಮತ್ತು ಋಣ ಭಾರವಿಲ್ಲದ ನೆರವು, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳನ್ನು ಜಾರಿಗೊಳಿಸಲು ಸಹಾಯ ಮಾಡುತ್ತದೆ. ಅದಲ್ಲದೆ, ಅಭಿವೃದ್ದಿ ಹೊಂದಿದ ರಾಷ್ಟ್ರಗಳ ನೆರವು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಅಭಿವೃದ್ದಿಗೆ ತಡೆಯಾಗಬಾರದು ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ನಿರ್ಣಾಯಕ ಘಟ್ಟದಲ್ಲಿದ್ದೇವೆ. ನಾವು ಇಲ್ಲಿ (COP29) ಏನು ನಿರ್ಧರಿಸುತ್ತೇವೆಯೋ ಅದು ನಮಗೆಲ್ಲರಿಗೂ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿರುವರಿಗೆ ಪರಿಣಾಮ ಬೀರುತ್ತದೆ. ಈ ಪ್ರದೇಶದಲ್ಲಿ ಮಹತ್ವಾಕಾಂಕ್ಷೆಯ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸಲು ಕ್ರಮ ತೆಗೆದುಕೊಳ್ಳಲು ಮಾತ್ರವಲ್ಲದೆ, ಅದಕ್ಕೆ ಹೊಂದಿಕೊಳ್ಳಲು ಕೂಡ ಸಾಧ್ಯವಾಗುತ್ತದೆ. ಆದ್ದರಿಂದ COP ಐತಿಹಾಸಿಕವಾಗಿದೆ ಎಂದು ಗಂಗ್ವಾರ್ ಹೇಳಿದ್ದಾರೆ.

ವಿವಿಧ ರಾಷ್ಟ್ರೀಯ ಸನ್ನಿವೇಶಗಳ ಸಂದರ್ಭ, ಸುಸ್ಥಿರ ಅಭಿವೃದ್ಧಿಯ ಗುರಿಗಳು ಮತ್ತು ಬಡತನ ನಿರ್ಮೂಲನೆಯಂತ ಕಾರ್ಯಗಳಲ್ಲಿ ದೇಶಗಳು, ವಿಶೇಷವಾಗಿ ಜಾಗತಿಕ ದಕ್ಷಿಣ ಹಿಂದುಳಿಯಬಾರದು ಎಂದು ಇದೇ ವೇಳೆ ಗಂಗ್ವಾರ್ ಸಲಹೆ ನೀಡಿದ್ದಾರೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಈ ಬಾರಿಯ ಶೃಂಗಸಭೆ (COP29) ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನವೆಂಬರ್ 11ರಂದು ಪ್ರಾರಂಭಗೊಂಡಿದ್ದು, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ | COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...