HomeಮುಖಪುಟCOP29 | ಅಭಿವೃದ್ದಿ ಹೊಂದಿದ ದೇಶಗಳು 'ಹೂಡಿಕೆಯ ಗುರಿ' ನೋಡಬಾರದು : ಭಾರತ ಅಭಿಪ್ರಾಯ

COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

- Advertisement -
- Advertisement -

ಅಭಿವೃದ್ಧಿ ಹೊಂದಿದ ದೇಶಗಳು ಹವಾಮಾನ ನಿಧಿಗೆ ಮಾಡುವ ‘ಹೂಡಿಕೆಯ ಗುರಿ’ ನೋಡಬಾರದು ಎಂದು ಅಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ಹವಾಮಾನ ಶೃಂಗಸಭೆಯ (COP29) ಲ್ಲಿ ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.

ಗುರುವಾರ (ನ.14) ಶೃಂಗಸಭೆಯಲ್ಲಿ ಮಾತನಾಡಿದ ಭಾರತದ ಪ್ರಮುಖ ಸಮಾಲೋಚಕ ನರೇಶ್ ಪಾಲ್ ಗಂಗ್ವಾರ್ “ಅಭಿವೃದ್ದಿ ಹೊಂದಿದ ದೇಶಗಳು ಅಭಿವೃದ್ದಿ ಹೊಂದುತ್ತಿರುವ ದೇಶಗಳ ಹವಾಮಾನ ಯೋಜನೆಗಳಿಗೆ ನೀಡುವ ಆರ್ಥಿಕ ಸಹಾಯ ಏಕಮುಖ ನಿಬಂಧನೆಯನ್ನು ಹೊಂದಿದೆ. ಅಂದರೆ, ಈ ನೆರವಿಗೆ ಪ್ರತಿಫಲಾಕ್ಷೆ ಇಲ್ಲ. ಆದ್ದರಿಂದ, ಇದನ್ನು ಒಂದು ವ್ಯಾವಹಾರಿಕ ಅಥವಾ ಲಾಭದ ಹೂಡಿಕೆಯಾಗಿ ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಪ್ಯಾರಿಸ್ ಒಪ್ಪಂದವು, ಹವಾಮಾನ ನಿಧಿಗೆ ಯಾರು ಕೊಡುಗೆ ಕೊಡಬೇಕು. ಅದನ್ನು ಹೇಗೆ ಬಳಸಬೇಕು. ಈ ನಿಧಿಯ ಉದ್ದೇಶವೇನು? ಎಂಬುವುದನ್ನು ಸ್ಪಷ್ಟವಾಗಿ ಹೇಳಿದೆ ಎಂದು ಗಂಗ್ವಾರ್ ವಿವರಿಸಿದ್ದಾರೆ.

ಅಭಿವೃದ್ದಿ ಹೊಂದಿರುವ ರಾಷ್ಟ್ರಗಳು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ವಾರ್ಷಿಕ 1.3 ಟ್ರಿಲಿಯನ್ ಡಾಲರ್‌ನಂತೆ 2030ರವರೆಗೆ ಹವಾಮಾನ ಆರ್ಥಿಕ ನೆರವು ಒದಗಿಸಬೇಕು. ಅಭಿವೃದ್ದಿ ಹೊಂದಿದ ರಾಷ್ಟ್ರಗಳ ಈ ರಿಯಾಯಿತಿಯ ಮತ್ತು ಋಣ ಭಾರವಿಲ್ಲದ ನೆರವು, ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಹವಾಮಾನ ಯೋಜನೆಗಳನ್ನು ಜಾರಿಗೊಳಿಸಲು ಸಹಾಯ ಮಾಡುತ್ತದೆ. ಅದಲ್ಲದೆ, ಅಭಿವೃದ್ದಿ ಹೊಂದಿದ ರಾಷ್ಟ್ರಗಳ ನೆರವು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳ ಅಭಿವೃದ್ದಿಗೆ ತಡೆಯಾಗಬಾರದು ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ನಿರ್ಣಾಯಕ ಘಟ್ಟದಲ್ಲಿದ್ದೇವೆ. ನಾವು ಇಲ್ಲಿ (COP29) ಏನು ನಿರ್ಧರಿಸುತ್ತೇವೆಯೋ ಅದು ನಮಗೆಲ್ಲರಿಗೂ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿರುವರಿಗೆ ಪರಿಣಾಮ ಬೀರುತ್ತದೆ. ಈ ಪ್ರದೇಶದಲ್ಲಿ ಮಹತ್ವಾಕಾಂಕ್ಷೆಯ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸಲು ಕ್ರಮ ತೆಗೆದುಕೊಳ್ಳಲು ಮಾತ್ರವಲ್ಲದೆ, ಅದಕ್ಕೆ ಹೊಂದಿಕೊಳ್ಳಲು ಕೂಡ ಸಾಧ್ಯವಾಗುತ್ತದೆ. ಆದ್ದರಿಂದ COP ಐತಿಹಾಸಿಕವಾಗಿದೆ ಎಂದು ಗಂಗ್ವಾರ್ ಹೇಳಿದ್ದಾರೆ.

ವಿವಿಧ ರಾಷ್ಟ್ರೀಯ ಸನ್ನಿವೇಶಗಳ ಸಂದರ್ಭ, ಸುಸ್ಥಿರ ಅಭಿವೃದ್ಧಿಯ ಗುರಿಗಳು ಮತ್ತು ಬಡತನ ನಿರ್ಮೂಲನೆಯಂತ ಕಾರ್ಯಗಳಲ್ಲಿ ದೇಶಗಳು, ವಿಶೇಷವಾಗಿ ಜಾಗತಿಕ ದಕ್ಷಿಣ ಹಿಂದುಳಿಯಬಾರದು ಎಂದು ಇದೇ ವೇಳೆ ಗಂಗ್ವಾರ್ ಸಲಹೆ ನೀಡಿದ್ದಾರೆ.

ವಿಶ್ವ ಸಂಸ್ಥೆಯ ಈ ಹವಾಮಾನ ಶೃಂಗಸಭೆ (COP) ಪ್ರತಿ ವರ್ಷವೂ ನಡೆಯುತ್ತದೆ. ಪ್ರಪಂಚದ ಬಹುತೇಕ ಎಲ್ಲಾ ದೇಶಗಳ ಸಂಪೂರ್ಣ ಸದಸ್ಯತ್ವದೊಂದಿಗೆ ಹವಾಮಾನ ಬದಲಾವಣೆಯ ಕುರಿತು ನಡೆಯುವ ವಿಶ್ವದ ಏಕೈಕ ಬಹುಪಕ್ಷೀಯ ನಿರ್ಧಾರ ವೇದಿಕೆ ಇದಾಗಿದೆ.

ಈ ಬಾರಿಯ ಶೃಂಗಸಭೆ (COP29) ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನವೆಂಬರ್ 11ರಂದು ಪ್ರಾರಂಭಗೊಂಡಿದ್ದು, 22ರವರೆಗೆ ಮುಂದುವರಿಯಲಿದೆ.

ಇದನ್ನೂ ಓದಿ | COP29 : ಶೃಂಗಸಭೆಯಿಂದ ಹೊರ ನಡೆದ ಅರ್ಜೆಂಟೀನಾ, ಬಾಕು ಪ್ರವಾಸ ರದ್ದುಪಡಿಸಿದ ಫ್ರಾನ್ಸ್ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...