HomeಮುಖಪುಟCOP29 | ಹವಾಮಾನ ಶೃಂಗಸಭೆಯ ಅಂತಿಮ ದಿನ : ನಿಧಿ ಸಂಗ್ರಹ ವಿಚಾರದಲ್ಲಿ ಮೂಡದ ಒಮ್ಮತ

COP29 | ಹವಾಮಾನ ಶೃಂಗಸಭೆಯ ಅಂತಿಮ ದಿನ : ನಿಧಿ ಸಂಗ್ರಹ ವಿಚಾರದಲ್ಲಿ ಮೂಡದ ಒಮ್ಮತ

- Advertisement -
- Advertisement -

ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ಇಂದು (ನ.22) ಅಂತ್ಯಗೊಳ್ಳಲಿದೆ.

ನವೆಂಬರ್ 11ರಂದು ಪ್ರಾರಂಭಗೊಂಡ ಶೃಂಗಸಭೆಯಲ್ಲಿ ಹಲವಾರು ಚರ್ಚೆಗಳು ನಡೆದರೂ, ಸಭೆಯ ಮೂಲ ಉದ್ದೇಶವನ್ನು ಈಡೇರಿಸುವಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಹಾಗಾಗಿ, ಬಾಕು ಶೃಂಗಸಭೆ ಒಂದು ‘ವ್ಯರ್ಥ ಸಭೆ’ಯಾಗಿ ಕೊನೆಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಈ ಬಾರಿಯ ಶೃಂಗಸಭೆಗೆ ‘Finance COP'(ಹಣಕಾಸಿನ ಶೃಂಗಸಭೆ) ಎಂದು ಸಹ ಹೆಸರಿಡಲಾಗಿತ್ತು. ಈ ಮೂಲಕ ಹವಾಮಾನ ನಿಧಿ ಸಂಗ್ರಹದ ಗುರಿಯನ್ನು ಹೊಂದಲಾಗಿತ್ತು. ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ಮತ್ತು ಹಿಂದುಳಿದ ರಾಷ್ಟ್ರಗಳಿಗೆ ಹವಾಮಾನ ಸಂಬಂಧಿತ ಸವಾಲುಗಳನ್ನು ಎದುರಿಸಲು ಹಣಕಾಸಿನ ನೆರವು ಒದಗಿಸುವುದು ಸಭೆಯ ಮೂಲ ಉದ್ದೇಶವಾಗಿತ್ತು.

ಆದರೆ, ಶೃಂಗಸಭೆ ಕೊನೆಗೊಳ್ಳುವ ಹೊತ್ತಿಗೆ ಈ ವಿಚಾರದಲ್ಲಿ ಒಮ್ಮತದ ಅಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ. ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಹಣಕಾಸಿನ ನೆರವು ನೀಡಬೇಕು ಎಂಬುವುದು ಒಂದು ಒಮ್ಮತದ ಒಪ್ಪಂದ. ಆದರೆ, ಇದು ಕಡ್ಡಾಯ ನಿಯಮವಲ್ಲ. ಹಾಗಾಗಿ, ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಉದ್ದೇಶಿತ ನೆರವು ನೀಡುವುದಿಲ್ಲ ಎಂದು ಹಿಂಜರಿದಿವೆ. ಈ ಮೂಲಕ ಶೃಂಗಸಭೆಯ ಮೂಲ ಉದ್ದೇಶ ತಲೆಕೆಳಗಾಗಿದೆ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಕೋಪನ್ ಹ್ಯಾಗನ್ ಒಪ್ಪಂದ ಮಾಡಿಕೊಳ್ಳಲಾಗಿತ್ತು.

2015 ಪ್ಯಾರಿಸ್ ಒಪ್ಪಂದವು 2009ರ ಒಪ್ಪಂದವನ್ನೇ ಮತ್ತೊಮ್ಮೆ ಪುನರುಚ್ಚರಿಸಿತ್ತು. ಆದರೆ, 2022ರ ಹೊತ್ತಿಗೆ ಕೇವಲ 83.3 ಬಿಲಿಯನ್ ಡಾಲರ್ ಮಾತ್ರ ಸಂಗ್ರಹಿಸಲು ಸಾಧ್ಯವಾಯಿತು. 100 ಬಿಲಿಯನ್ ಗುರಿಯನ್ನು ಅಂತಿಮವಾಗಿ 2023 ರಲ್ಲಿ ತಲುಪಲಾಯಿತು. ಯುಎಸ್ ಸೇರಿದಂತೆ ಎಲ್ಲಾ 196 ದೇಶಗಳು 2015ರ ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭೂಮಿಯ ತಾಪಮಾನ ಕಡಿಮೆ ಮಾಡುವಲ್ಲಿ ಬದ್ದವಾಗಿರುವುದಾಗಿ ಪ್ರತಿಜ್ಞೆ ಮಾಡಿದ್ದವು.

2023ರಲ್ಲಿ 100 ಬಿಲಿಯನ್ ಗುರಿ ತಲುಪಿದರೂ, ಈ ಬಾರಿಯ ಬಾಕು ಶೃಂಗಸಭೆಯಲ್ಲಿ ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಭಾರತ ಸೇರಿದಂತೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಬೇಡಿಕೆ ಇಟ್ಟಿತ್ತು. ಆದರೆ, ಮುಂದುವರಿದ ರಾಷ್ಟ್ರಗಳು ಈ ವಿಚಾರದಲ್ಲಿ ಬಿನ್ನಾಭಿಪ್ರಾಯ ವ್ಯಕ್ತಪಡಿಸಿವೆ. ನಿಧಿ ಸಂಗ್ರಹ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಈ ನಡುವೆ ದೊಡ್ಡ ಪಾಲುದಾರರಾಗಿರುವ ಯುಎಸ್‌ ಅಧ್ಯಕ್ಷ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದಲೇ ಹೊರ ನಡೆಯುವುದಾಗಿ ಹೇಳುತ್ತಿದ್ದಾರೆ.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಯೋಜನೆಗಳು ಒಂದು ‘ವಂಚನೆ’ ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬುವುದು ಟ್ರಂಪ್ ವಾದ. ಅವರು ತನ್ನದೇ ಆದ ಯೋಜನೆಗಳನ್ನು ರೂಪಿಸಬಹುದು ಎಂದು ವರದಿಗಳು ಹೇಳಿವೆ.

2016ರಲ್ಲಿ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಾಗ ಇತರ ರಾಷ್ಟ್ರಗಳೂ ಇದೇ ನಿಲುವನ್ನು ಹೊಂದಬಹುದು ಎಂದು ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿತ್ತು. ಆದರೆ, 2021ರಲ್ಲಿ ಜೋ ಬೈಡೆನ್ ಆಡಳಿತ ಅವಧಿಯಲ್ಲಿ ಯುಎಸ್‌ ಪ್ಯಾರಿಸ್ ಒಪ್ಪಂದಕ್ಕೆ ಮರು ಸೇರ್ಪಡೆ ಆಯಿತು. 2030ರ ವೇಳೆಗೆ, ತನ್ನ ಇಂಗಾಲ ಹೊರಸೂಸುವಿಕೆಯನ್ನು 2005ರ ಮಟ್ಟಕ್ಕಿಂತ ಅರ್ಧದಷ್ಟು ಕಡಿತಗೊಳಿಸುವುದಾಗಿ ಶಪಥ ಮಾಡಿತ್ತು. ಅದನ್ನು ಟ್ರಂಪ್ ಮುರಿಯುವ ಸಾಧ್ಯತೆ ಇದೆ.

ಭಾರತ ಸೇರಿದಂತೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಮತ್ತು ಪೆಟ್ರೋಲಿಯಂ ಆರ್ಥಿಕತೆಯನ್ನು ಅವಲಂಭಿಸಿರುವ ಕೊಲ್ಲಿ ರಾಷ್ಟ್ರಗಳು ಕೂಡ ಅಭಿವೃದ್ದಿ ಹೊಂದಿರುವ ರಾಷ್ಟ್ರಗಳು ಹವಾಮಾನ ನಿಧಿಗೆ ಹೆಚ್ಚಿನ ಕೊಡುಗೆ ನೀಡಬೇಕು ಎಂದು ಆಗ್ರಹಿಸಿವೆ. ಈ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಈ ಬಾರಿಯ ಶೃಂಗಸಭೆ ಗುರಿ ಹೊಂದಿತ್ತು.

ಆದರೆ, ಹವಾಮಾನ ಆರ್ಥಿಕತೆಯ ದೊಡ್ಡ ಪಾಲುದಾರ ಯುಎಸ್‌ ಶೃಂಗಸಭೆಯಲ್ಲಿ ಪಾಲ್ಗೊಂಡರೂ, ಅದರ ಬಗ್ಗೆ ಅಷ್ಟೊಂದು ಒಲವು ಹೊಂದಿಲ್ಲ. ಯುಎಸ್‌ನಲ್ಲಿ ಪ್ರಸ್ತುತ ಬೈಡೆನ್ ಸರ್ಕಾರ ಇರುವುದರಿಂದ ಶೃಂಗಸಭೆಗೆ ಪ್ರತಿನಿಧಿಗಳನ್ನು ಕಳುಹಿಸಿಕೊಟ್ಟಿದೆ. ಇನ್ನು ಮುಂದೆ ಟ್ರಂಪ್ ಸರ್ಕಾರ ಬಂದರೆ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಮತ್ತು ಆರ್ಥಿಕ ನೆರವು ನೀಡುವುದನ್ನು ಯುಎಸ್ ನಿಲ್ಲಿಸಬಹುದು. ಅರ್ಜೆಂಟೀನಾ ಈ ಬಾರಿಯ ಶೃಂಗಸಭೆಯಿಂದ ತನ್ನ ಪ್ರತಿನಿಧಿಗಳನ್ನು ಅರ್ಧದಲ್ಲೇ ವಾಪಸ್ ಕರೆಸಿಕೊಂಡಿದೆ. ಫ್ರಾನ್ಸ್ ಸಚಿವರು ಶೃಂಗಸಭೆಯಲ್ಲಿ ಬರುವುದಾಗಿ ಹೇಳಿ ಪ್ರವಾಸ ರದ್ದುಗೊಳಿಸಿದ್ದಾರೆ. ಹೀಗಿರುವಾಗ ಹವಾಮಾನ ನಿಧಿಯ ವಿಷಯದಲ್ಲಿ ಅಂತಿಮ ನಿರ್ಧಾರಕ್ಕೆ ಬರುವುದು ಸವಾಲಾಗಿ ಪರಿಣಮಿಸಿದೆ.

COP ಶೃಂಗಸಭೆ ಅರ್ಥಹೀನ

ಹವಾಮಾನ ನಿಧಿಯ ಸಂಗ್ರಹ ವಿಚಾರದಲ್ಲಿ ಅಂತಿಮ ನಿರ್ಧಾರಕ್ಕೆ ಬರುವುದು ಸವಾಲಾಗಿರುವಾಗ ಅರ್ಥಶಾಸ್ರಜ್ಞರು ಇಡೀ ಶೃಂಗಸಭೆಯೇ ಅರ್ಥಹೀನ ಎಂದಿದ್ದಾರೆ.

ವಿಶ್ವಸಂಸ್ಥೆಯು ವಾರ್ಷಿಕ ಹವಾಮಾನ ಬದಲಾವಣೆ ಸಮ್ಮೇಳನದ ವಿಷಯದಲ್ಲಿ ಸಂಪೂರ್ಣವಾಗಿ ಮರು-ಚಿಂತನೆ ಮಾಡುವ ಸಮಯ ಬಂದಿದೆ ಎಂದು ಅರ್ಥಶಾಸ್ತ್ರಜ್ಞೆ ಜಯತಿ ಘೋಷ್ ಹೇಳಿದ್ದಾರೆ.

“ಪ್ರತಿವರ್ಷ ಹವಾಮಾನ ಶೃಂಗಸಭೆ ನಡೆಯುತ್ತಲೇ ಇದೆ. ಆದರಿಂದ ಯಾವುದೇ ಪ್ರಯೋಜನಗಳು ಆಗುತ್ತಿಲ್ಲ. ನಮ್ಮ ಸಮಸ್ಯೆಗಳು ಗಂಭೀರವಾಗಿವೆ. ಅದಕ್ಕೆ ತುರ್ತು ಪರಿಹಾರ ಬೇಕಿದೆ. ಇಂತಹ ದೊಡ್ಡ ಸಭೆಗಳಿಂದ ಪರಿಹಾರ ದೊರೆಯುತ್ತಿಲ್ಲ. ನಾವು 2050, 2070 ಎಂದು ವರ್ಷಗಳನ್ನು ದೂಡುತ್ತಲೇ ಇದ್ದೇವೆ” ಎಂದು ಮ್ಯಾಸಚೂಸೆಟ್ಸ್ ಅಮ್ಹೆರ್ಸ್ಟ್ ವಿಶ್ವವಿದ್ಯಾಲಯದಲ್ಲಿ ಅಭಿವೃದ್ಧಿ ಅರ್ಥಶಾಸ್ತ್ರಜ್ಞೆಯಾಗಿರುವ ಜಯತಿ ಘೋಷ್ ಟೀಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : 5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...