HomeಮುಖಪುಟCOP29 | ಹವಾಮಾನ ಶೃಂಗಸಭೆಯ ಅಂತಿಮ ದಿನ : ನಿಧಿ ಸಂಗ್ರಹ ವಿಚಾರದಲ್ಲಿ ಮೂಡದ ಒಮ್ಮತ

COP29 | ಹವಾಮಾನ ಶೃಂಗಸಭೆಯ ಅಂತಿಮ ದಿನ : ನಿಧಿ ಸಂಗ್ರಹ ವಿಚಾರದಲ್ಲಿ ಮೂಡದ ಒಮ್ಮತ

- Advertisement -
- Advertisement -

ಆಝರ್‌ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ಇಂದು (ನ.22) ಅಂತ್ಯಗೊಳ್ಳಲಿದೆ.

ನವೆಂಬರ್ 11ರಂದು ಪ್ರಾರಂಭಗೊಂಡ ಶೃಂಗಸಭೆಯಲ್ಲಿ ಹಲವಾರು ಚರ್ಚೆಗಳು ನಡೆದರೂ, ಸಭೆಯ ಮೂಲ ಉದ್ದೇಶವನ್ನು ಈಡೇರಿಸುವಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಹಾಗಾಗಿ, ಬಾಕು ಶೃಂಗಸಭೆ ಒಂದು ‘ವ್ಯರ್ಥ ಸಭೆ’ಯಾಗಿ ಕೊನೆಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಈ ಬಾರಿಯ ಶೃಂಗಸಭೆಗೆ ‘Finance COP'(ಹಣಕಾಸಿನ ಶೃಂಗಸಭೆ) ಎಂದು ಸಹ ಹೆಸರಿಡಲಾಗಿತ್ತು. ಈ ಮೂಲಕ ಹವಾಮಾನ ನಿಧಿ ಸಂಗ್ರಹದ ಗುರಿಯನ್ನು ಹೊಂದಲಾಗಿತ್ತು. ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ಮತ್ತು ಹಿಂದುಳಿದ ರಾಷ್ಟ್ರಗಳಿಗೆ ಹವಾಮಾನ ಸಂಬಂಧಿತ ಸವಾಲುಗಳನ್ನು ಎದುರಿಸಲು ಹಣಕಾಸಿನ ನೆರವು ಒದಗಿಸುವುದು ಸಭೆಯ ಮೂಲ ಉದ್ದೇಶವಾಗಿತ್ತು.

ಆದರೆ, ಶೃಂಗಸಭೆ ಕೊನೆಗೊಳ್ಳುವ ಹೊತ್ತಿಗೆ ಈ ವಿಚಾರದಲ್ಲಿ ಒಮ್ಮತದ ಅಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ. ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳಿಗೆ ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಹಣಕಾಸಿನ ನೆರವು ನೀಡಬೇಕು ಎಂಬುವುದು ಒಂದು ಒಮ್ಮತದ ಒಪ್ಪಂದ. ಆದರೆ, ಇದು ಕಡ್ಡಾಯ ನಿಯಮವಲ್ಲ. ಹಾಗಾಗಿ, ಅಭಿವೃದ್ದಿ ಹೊಂದಿದ ರಾಷ್ಟ್ರಗಳು ಉದ್ದೇಶಿತ ನೆರವು ನೀಡುವುದಿಲ್ಲ ಎಂದು ಹಿಂಜರಿದಿವೆ. ಈ ಮೂಲಕ ಶೃಂಗಸಭೆಯ ಮೂಲ ಉದ್ದೇಶ ತಲೆಕೆಳಗಾಗಿದೆ.

ಸಂಪದ್ಭರಿತ ಅಥವಾ ಮುಂದುವರಿದ ರಾಷ್ಟ್ರಗಳು ವಾರ್ಷಿಕ 100 ಬಿಲಿಯನ್ ಡಾಲರ್ ನೆರವನ್ನು ಹವಾಮಾನ ಯೋಜನೆಗಳ ನಿಧಿಗೆ ನೀಡಬೇಕು ಎಂದು 2009ರಲ್ಲಿ ಕೋಪನ್ ಹ್ಯಾಗನ್ ಒಪ್ಪಂದ ಮಾಡಿಕೊಳ್ಳಲಾಗಿತ್ತು.

2015 ಪ್ಯಾರಿಸ್ ಒಪ್ಪಂದವು 2009ರ ಒಪ್ಪಂದವನ್ನೇ ಮತ್ತೊಮ್ಮೆ ಪುನರುಚ್ಚರಿಸಿತ್ತು. ಆದರೆ, 2022ರ ಹೊತ್ತಿಗೆ ಕೇವಲ 83.3 ಬಿಲಿಯನ್ ಡಾಲರ್ ಮಾತ್ರ ಸಂಗ್ರಹಿಸಲು ಸಾಧ್ಯವಾಯಿತು. 100 ಬಿಲಿಯನ್ ಗುರಿಯನ್ನು ಅಂತಿಮವಾಗಿ 2023 ರಲ್ಲಿ ತಲುಪಲಾಯಿತು. ಯುಎಸ್ ಸೇರಿದಂತೆ ಎಲ್ಲಾ 196 ದೇಶಗಳು 2015ರ ಪ್ಯಾರಿಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭೂಮಿಯ ತಾಪಮಾನ ಕಡಿಮೆ ಮಾಡುವಲ್ಲಿ ಬದ್ದವಾಗಿರುವುದಾಗಿ ಪ್ರತಿಜ್ಞೆ ಮಾಡಿದ್ದವು.

2023ರಲ್ಲಿ 100 ಬಿಲಿಯನ್ ಗುರಿ ತಲುಪಿದರೂ, ಈ ಬಾರಿಯ ಬಾಕು ಶೃಂಗಸಭೆಯಲ್ಲಿ ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಭಾರತ ಸೇರಿದಂತೆ ಹಿಂದುಳಿದ ಮತ್ತು ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಬೇಡಿಕೆ ಇಟ್ಟಿತ್ತು. ಆದರೆ, ಮುಂದುವರಿದ ರಾಷ್ಟ್ರಗಳು ಈ ವಿಚಾರದಲ್ಲಿ ಬಿನ್ನಾಭಿಪ್ರಾಯ ವ್ಯಕ್ತಪಡಿಸಿವೆ. ನಿಧಿ ಸಂಗ್ರಹ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಈ ನಡುವೆ ದೊಡ್ಡ ಪಾಲುದಾರರಾಗಿರುವ ಯುಎಸ್‌ ಅಧ್ಯಕ್ಷ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದಲೇ ಹೊರ ನಡೆಯುವುದಾಗಿ ಹೇಳುತ್ತಿದ್ದಾರೆ.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಯೋಜನೆಗಳು ಒಂದು ‘ವಂಚನೆ’ ಅದರಿಂದ ಯಾವುದೇ ಪರಿಣಾಮಗಳು ಆಗುತ್ತಿಲ್ಲ ಎಂಬುವುದು ಟ್ರಂಪ್ ವಾದ. ಅವರು ತನ್ನದೇ ಆದ ಯೋಜನೆಗಳನ್ನು ರೂಪಿಸಬಹುದು ಎಂದು ವರದಿಗಳು ಹೇಳಿವೆ.

2016ರಲ್ಲಿ ಟ್ರಂಪ್ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆದಾಗ ಇತರ ರಾಷ್ಟ್ರಗಳೂ ಇದೇ ನಿಲುವನ್ನು ಹೊಂದಬಹುದು ಎಂದು ಜಾಗತಿಕ ಮಟ್ಟದಲ್ಲಿ ಆತಂಕ ಶುರುವಾಗಿತ್ತು. ಆದರೆ, 2021ರಲ್ಲಿ ಜೋ ಬೈಡೆನ್ ಆಡಳಿತ ಅವಧಿಯಲ್ಲಿ ಯುಎಸ್‌ ಪ್ಯಾರಿಸ್ ಒಪ್ಪಂದಕ್ಕೆ ಮರು ಸೇರ್ಪಡೆ ಆಯಿತು. 2030ರ ವೇಳೆಗೆ, ತನ್ನ ಇಂಗಾಲ ಹೊರಸೂಸುವಿಕೆಯನ್ನು 2005ರ ಮಟ್ಟಕ್ಕಿಂತ ಅರ್ಧದಷ್ಟು ಕಡಿತಗೊಳಿಸುವುದಾಗಿ ಶಪಥ ಮಾಡಿತ್ತು. ಅದನ್ನು ಟ್ರಂಪ್ ಮುರಿಯುವ ಸಾಧ್ಯತೆ ಇದೆ.

ಭಾರತ ಸೇರಿದಂತೆ ಅಭಿವೃದ್ದಿ ಹೊಂದುತ್ತಿರುವ ರಾಷ್ಟ್ರಗಳು ಮತ್ತು ಪೆಟ್ರೋಲಿಯಂ ಆರ್ಥಿಕತೆಯನ್ನು ಅವಲಂಭಿಸಿರುವ ಕೊಲ್ಲಿ ರಾಷ್ಟ್ರಗಳು ಕೂಡ ಅಭಿವೃದ್ದಿ ಹೊಂದಿರುವ ರಾಷ್ಟ್ರಗಳು ಹವಾಮಾನ ನಿಧಿಗೆ ಹೆಚ್ಚಿನ ಕೊಡುಗೆ ನೀಡಬೇಕು ಎಂದು ಆಗ್ರಹಿಸಿವೆ. ಈ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಈ ಬಾರಿಯ ಶೃಂಗಸಭೆ ಗುರಿ ಹೊಂದಿತ್ತು.

ಆದರೆ, ಹವಾಮಾನ ಆರ್ಥಿಕತೆಯ ದೊಡ್ಡ ಪಾಲುದಾರ ಯುಎಸ್‌ ಶೃಂಗಸಭೆಯಲ್ಲಿ ಪಾಲ್ಗೊಂಡರೂ, ಅದರ ಬಗ್ಗೆ ಅಷ್ಟೊಂದು ಒಲವು ಹೊಂದಿಲ್ಲ. ಯುಎಸ್‌ನಲ್ಲಿ ಪ್ರಸ್ತುತ ಬೈಡೆನ್ ಸರ್ಕಾರ ಇರುವುದರಿಂದ ಶೃಂಗಸಭೆಗೆ ಪ್ರತಿನಿಧಿಗಳನ್ನು ಕಳುಹಿಸಿಕೊಟ್ಟಿದೆ. ಇನ್ನು ಮುಂದೆ ಟ್ರಂಪ್ ಸರ್ಕಾರ ಬಂದರೆ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಮತ್ತು ಆರ್ಥಿಕ ನೆರವು ನೀಡುವುದನ್ನು ಯುಎಸ್ ನಿಲ್ಲಿಸಬಹುದು. ಅರ್ಜೆಂಟೀನಾ ಈ ಬಾರಿಯ ಶೃಂಗಸಭೆಯಿಂದ ತನ್ನ ಪ್ರತಿನಿಧಿಗಳನ್ನು ಅರ್ಧದಲ್ಲೇ ವಾಪಸ್ ಕರೆಸಿಕೊಂಡಿದೆ. ಫ್ರಾನ್ಸ್ ಸಚಿವರು ಶೃಂಗಸಭೆಯಲ್ಲಿ ಬರುವುದಾಗಿ ಹೇಳಿ ಪ್ರವಾಸ ರದ್ದುಗೊಳಿಸಿದ್ದಾರೆ. ಹೀಗಿರುವಾಗ ಹವಾಮಾನ ನಿಧಿಯ ವಿಷಯದಲ್ಲಿ ಅಂತಿಮ ನಿರ್ಧಾರಕ್ಕೆ ಬರುವುದು ಸವಾಲಾಗಿ ಪರಿಣಮಿಸಿದೆ.

COP ಶೃಂಗಸಭೆ ಅರ್ಥಹೀನ

ಹವಾಮಾನ ನಿಧಿಯ ಸಂಗ್ರಹ ವಿಚಾರದಲ್ಲಿ ಅಂತಿಮ ನಿರ್ಧಾರಕ್ಕೆ ಬರುವುದು ಸವಾಲಾಗಿರುವಾಗ ಅರ್ಥಶಾಸ್ರಜ್ಞರು ಇಡೀ ಶೃಂಗಸಭೆಯೇ ಅರ್ಥಹೀನ ಎಂದಿದ್ದಾರೆ.

ವಿಶ್ವಸಂಸ್ಥೆಯು ವಾರ್ಷಿಕ ಹವಾಮಾನ ಬದಲಾವಣೆ ಸಮ್ಮೇಳನದ ವಿಷಯದಲ್ಲಿ ಸಂಪೂರ್ಣವಾಗಿ ಮರು-ಚಿಂತನೆ ಮಾಡುವ ಸಮಯ ಬಂದಿದೆ ಎಂದು ಅರ್ಥಶಾಸ್ತ್ರಜ್ಞೆ ಜಯತಿ ಘೋಷ್ ಹೇಳಿದ್ದಾರೆ.

“ಪ್ರತಿವರ್ಷ ಹವಾಮಾನ ಶೃಂಗಸಭೆ ನಡೆಯುತ್ತಲೇ ಇದೆ. ಆದರಿಂದ ಯಾವುದೇ ಪ್ರಯೋಜನಗಳು ಆಗುತ್ತಿಲ್ಲ. ನಮ್ಮ ಸಮಸ್ಯೆಗಳು ಗಂಭೀರವಾಗಿವೆ. ಅದಕ್ಕೆ ತುರ್ತು ಪರಿಹಾರ ಬೇಕಿದೆ. ಇಂತಹ ದೊಡ್ಡ ಸಭೆಗಳಿಂದ ಪರಿಹಾರ ದೊರೆಯುತ್ತಿಲ್ಲ. ನಾವು 2050, 2070 ಎಂದು ವರ್ಷಗಳನ್ನು ದೂಡುತ್ತಲೇ ಇದ್ದೇವೆ” ಎಂದು ಮ್ಯಾಸಚೂಸೆಟ್ಸ್ ಅಮ್ಹೆರ್ಸ್ಟ್ ವಿಶ್ವವಿದ್ಯಾಲಯದಲ್ಲಿ ಅಭಿವೃದ್ಧಿ ಅರ್ಥಶಾಸ್ತ್ರಜ್ಞೆಯಾಗಿರುವ ಜಯತಿ ಘೋಷ್ ಟೀಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : 5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...